Homeಮುಖಪುಟಲೋಕಸಭೆಯಲ್ಲಿ ವಕ್ಫ್ ಮಸೂದೆ ಇಂದು ಮಂಡನೆ | ತೀವ್ರ ವಿರೋಧಕ್ಕೆ ಇಂಡಿಯಾ ಮೈತ್ರಿಕೂಟ ಸಿದ್ದತೆ

ಲೋಕಸಭೆಯಲ್ಲಿ ವಕ್ಫ್ ಮಸೂದೆ ಇಂದು ಮಂಡನೆ | ತೀವ್ರ ವಿರೋಧಕ್ಕೆ ಇಂಡಿಯಾ ಮೈತ್ರಿಕೂಟ ಸಿದ್ದತೆ

- Advertisement -
- Advertisement -

ವಿರೋಧ ಪಕ್ಷವಾದ ಇಂಡಿಯಾ ಮೈತ್ರಿ ವಕ್ಫ್ ತಿದ್ದುಪಡಿ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಲು ಮತ್ತು ಮಸೂದೆ ಅಂಗೀಕಾರದ ಸಮಯದಲ್ಲಿ ಮತಕ್ಕೆ ಹಾಕುವಂತೆ ಕೋರಲು ಸರ್ವಾನುಮತದಿಂದ ನಿರ್ಧರಿಸಿದೆ. ಮಂಗಳವಾರ ಸಂಜೆ ನಡೆದ ಈ ಸಭೆಯಲ್ಲಿ ಎಲ್ಲಾ ವಿರೋಧ ಪಕ್ಷಗಳು ಭಾಗವಹಿಸಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ವರದಿ ಉಲ್ಲೇಖಿಸಿದೆ. ಲೋಕಸಭೆಯಲ್ಲಿ

ಈ ಬಗ್ಗೆ ಮಾತನಾಡಿದ ಸಿಪಿಐ(ಎಂ) ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್, ಎಲ್ಲಾ ವಿರೋಧ ಪಕ್ಷಗಳು ಮಸೂದೆಯ ವಿರುದ್ಧ ಮತ ಚಲಾಯಿಸುತ್ತವೆ, ಜೊತೆಗೆ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ಸಿಪಿ ಮತ್ತು ನವೀನ್ ಪಟ್ನಾಯಕ್ ಅವರ ಬಿಜು ಜನತಾದಳ (ಬಿಜೆಡಿ) ನಂತಹ ಪಕ್ಷಗಳೊಂದಿಗೆ ಸಮನ್ವಯ ಸಾಧಿಸಲಿದ್ದೇವೆ ಎಂದು ಹೇಳಿದ್ದಾರೆ. ಚರ್ಚೆಯ ಸಮಯದಲ್ಲಿ ವಿರೋಧಿಸಬೇಕಾದ ಮಸೂದೆಯ ಕೆಲವು ಷರತ್ತುಗಳ ಕುರಿತು ಪಕ್ಷಗಳ ಸದನದ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅವರು ತಿಳಿಸಿದ್ದಾರೆ.

“ಈ ಸಾಂವಿಧಾನಿಕ ವಿರೋಧಿ ಮಸೂದೆಯನ್ನು ವಿರೋಧಿಸುವಲ್ಲಿ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿವೆ. ನಾವು ಇದನ್ನು ‘ಮುಸ್ಲಿಂ’ ವಿಷಯವೆಂದು ಪರಿಗಣಿಸುತ್ತಿಲ್ಲ. ಇದು ಜಾತ್ಯತೀತ ತತ್ವಗಳನ್ನು ದುರ್ಬಲಗೊಳಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಸಿಪಿಎಂ ತನ್ನ ಸದಸ್ಯರಿಗೆ ಸದನದಲ್ಲಿ ಹಾಜರಿರುವಂತೆ ವಿಪ್ ಜಾರಿ ಮಾಡಿದೆ. ಸಿಪಿಐ ಸಂಸದ ಸಂದೋಷ್ ಕುಮಾರ್ ಮಾತನಾಡಿ, ಸಭೆಯಲ್ಲಿ 36 ಸಂಸದರು ಭಾಗವಹಿಸಿದ್ದರು ಮತ್ತು ಎಲ್ಲರೂ ಒಂದೇ ಧ್ವನಿಯಲ್ಲಿ ಮಾತನಾಡಿದರು ಎಂದು ಹೇಳಿದ್ದಾರೆ.

“ಸಂಖ್ಯೆಗಳು ಆಡಳಿತ ಪಕ್ಷದ ಪರವಾಗಿವೆ ಎಂದು ನಮಗೆ ತಿಳಿದಿದೆ. ಆದರೆ ನಾವು ಹೋರಾಡಲು ನಿರ್ಧರಿಸಿದ್ದೇವೆ ಮತ್ತು ಚರ್ಚೆಯಲ್ಲಿ ಭಾಗವಹಿಸುತ್ತೇವೆ, ಜೊತೆಗೆ ನಮ್ಮ ಆಕ್ಷೇಪಣೆಗಳನ್ನು ಇಡುತ್ತೇವೆ. ಯಾವುದೇ ವಾಕ್ಔಟ್ ಅಥವಾ ಅಡಚಣೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜವಾದಿ ಪಕ್ಷದ ಸಂಸದ ರಾಮ್ ಗೋಪಾಲ್ ಯಾದವ್, “ನಾವು ನಾಳೆ ಒಗ್ಗಟ್ಟಿನಿಂದ ನಿಂತು ಚರ್ಚೆಗಳಲ್ಲಿ ಭಾಗವಹಿಸುತ್ತೇವೆ. ವಿರೋಧ ಪಕ್ಷಗಳಿಂದ ಬರುವ ತಿದ್ದುಪಡಿಗಳನ್ನು ನಾವು ಬೆಂಬಲಿಸುತ್ತೇವೆ ಮತ್ತು ಮತದಾನಕ್ಕೆ ಕರೆ ನೀಡುತ್ತೇವೆ.” ಎಂದು ಹೇಳಿದ್ದಾರೆ.

ಅದೇ ಅಭಿಪ್ರಾಯವನ್ನು ಪ್ರತಿಧ್ವನಿಸಿದ ಐಯುಎಂಎಲ್ ಸಂಸದ ಇಟಿ ಮುಹಮ್ಮದ್ ಬಶೀರ್ ಅವರು ಎಲ್ಲಾ ಪಕ್ಷಗಳು ಸಂಪೂರ್ಣ ಹೋರಾಟ ನಡೆಸುತ್ತವೆ ಎಂದು ಹೇಳಿದ್ದಾರೆ. “ಇಂಡಿಯಾ ಮೈತ್ರಿ ಪಕ್ಷಗಳು ಈ ಬಗ್ಗೆ ಚರ್ಚೆ ನಡೆಸಿದ್ದು, ಅದು ಚೆನ್ನಾಗಿ ನಡೆಯಿತು. ನಾವು ಒಂದೇ ದೇಹ ಮತ್ತು ಒಂದೇ ಆತ್ಮವಾಗಿ ಹೋರಾಡಲು ಸ್ಪಷ್ಟವಾಗಿ ನಿರ್ಧರಿಸಿದ್ದೇವೆ. ನಾವು ಎಲ್ಲಾ ರೀತಿಯಿಂದಲೂ ಒಗ್ಗಟ್ಟಾಗಿದ್ದೇವೆ ಮತ್ತು ಬಹಳಷ್ಟು ಅನ್ಯಾಯ ನಡೆದಿರುವುದರಿಂದ ನಾವು ಇದರ ವಿರುದ್ಧ ತೀವ್ರವಾಗಿ ಹೋರಾಡುತ್ತೇವೆ ಮತ್ತು ಚರ್ಚೆಯಲ್ಲಿ ಭಾಗವಹಿಸುತ್ತೇವೆ.” ಎಂದು ಹೇಳಿದ್ದಾರೆ.

ಬಿಜೆಪಿ ವಿಭಜಕ ರಾಜಕೀಯವನ್ನು ಆಡುತ್ತಿದೆ ಎಂದು ಡಿಎಂಕೆ ಸಂಸದೆ ಕನಿಮೋಳಿ ಹೇಳಿದ್ದು, “ಆದ್ದರಿಂದ ಅವರು ಯಾರ ವಿರುದ್ಧ ಇದ್ದಾರೆಂದು ನಮಗೆ ತಿಳಿದಿದೆ. ನಾವು ತಿದ್ದುಪಡಿ ಮಸೂದೆಯನ್ನು ವಿರೋಧಿಸುತ್ತಿದ್ದೇವೆ ಎಂದು ನಾವು ಸ್ಪಷ್ಟಪಡಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಈ ಮಸೂದೆಗಾಗಿ ಜೆಪಿಸಿ ರಚಿಸಲಾಯಿತು; ಆಗ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಇದ್ದವು ಮತ್ತು ಈಗಲೂ ಅದು ಒಗ್ಗಟ್ಟಿನಿಂದ ಇದೆ. ಮಸೂದೆಯ ನಿಬಂಧನೆಗಳು ದೇಶವನ್ನು ವಿಭಜಿಸುತ್ತವೆ. ಅವರು ಮಸೂದೆಯನ್ನು ಮಂಡಿಸಲಿ. ಅವರು ನಮ್ಮ ಸಲಹೆಗಳನ್ನು ಸೇರಿಸಿಕೊಂಡಿದ್ದಾರೆಯೇ ಅಥವಾ ಇಲ್ಲವೇ ಎಂದು ನಾವು ನೋಡುತ್ತೇವೆ. ನಾವು ನಾಳೆ ಚರ್ಚೆಗಳನ್ನು ನಡೆಸುತ್ತೇವೆ” ಎಂದು ಶಿವಸೇನೆ (ಯುಬಿಟಿ) ಸಂಸದ ಅರವಿಂದ್ ಸಾವಂತ್ ಹೇಳಿದ್ದಾರೆ.

ಲೋಕಸಭೆಯು ಬುಧವಾರ ವಿವಾದಾತ್ಮಕ ವಕ್ಫ್ ಮಸೂದೆಯನ್ನು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಕೈಗೆತ್ತಿಕೊಳ್ಳಲಿದೆ. ರಾಜ್ಯಸಭೆಯು ಗುರುವಾರ ಅದನ್ನು ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ. ಪ್ರಸ್ತಾವಿತ ಕಾನೂನಿನ ಚರ್ಚೆಗೆ ಎರಡೂ ಸದನಗಳಿಗೆ ತಲಾ ಎಂಟು ಗಂಟೆಗಳ ಸಮಯವನ್ನು ನಿಗದಿಪಡಿಸಲಾಗಿದೆ. ಲೋಕಸಭೆಯಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಪಿಆರ್ ನಾಟಕ ಮಿತಿಯಲ್ಲಿರಲಿ’ | ಕೋಳಿಗಳನ್ನು ರಕ್ಷಿಸಿದ ಅನಂತ್ ಅಂಬಾನಿಗೆ ನೆಟ್ಟಿಗರಿಂದ ಪಾಠ!

‘ಪಿಆರ್ ನಾಟಕ ಮಿತಿಯಲ್ಲಿರಲಿ’ | ಕೋಳಿಗಳನ್ನು ರಕ್ಷಿಸಿದ ಅನಂತ್ ಅಂಬಾನಿಗೆ ನೆಟ್ಟಿಗರಿಂದ ಪಾಠ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...