Homeಮುಖಪುಟಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಲೋಕಾಯುಕ್ತ ಬೇಕಿಲ್ಲ: ಎಸ್.ಆರ್ ಹಿರೇಮಠ

ಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಲೋಕಾಯುಕ್ತ ಬೇಕಿಲ್ಲ: ಎಸ್.ಆರ್ ಹಿರೇಮಠ

ಬಿಜೆಪಿಯವರು ಎಸಿಬಿಯನ್ನು ತೆಗೆದಿಲ್ಲ, ಅದನ್ನು ತೆಗೆದಿದ್ದು ಹೈಕೋರ್ಟ್. ಹಾಗಾಗಿ ಅದರ ಕ್ರೆಡಿಟ್ ಬಿಜೆಪಿಗೆ ಸಿಗುವುದಿಲ್ಲ - ಸಂತೋಷ್ ಹೆಗ್ಡೆ

- Advertisement -
- Advertisement -

ಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಆ ಸ್ವತಂತ್ರ ಸಂಸ್ಥೆ ಲೋಕಾಯುಕ್ತ ಬೇಕಿಲ್ಲ ಎಂದು ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅಭಿಪ್ರಾಯಪಟ್ಟಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಆತನ ಪುತ್ರ ಪ್ರಶಾಂತ್ ಮಾಡಾಳ್ ರವರ ಭಾರೀ ಭ್ರಷ್ಟಾಚಾರವನ್ನು ಬಯಲಿಗೆಳೆದ ನಂತರ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಲೋಕಾಯುಕ್ತ ಪುನರ್‌ ಸ್ಥಾಪಿಸಿದ್ದು ನಾವು ಎಂದು ಹೇಳಿಕೆ ನೀಡುತ್ತಿದ್ದಾರೆ. ಆ ಮೂಲಕ ತಮ್ಮ ಪಕ್ಷದ ಶಾಸಕರ ಕಮಿಷನ್ ದಂಧೆಯನ್ನು ಮರೆಮಾಚುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಎಸಿಬಿ ರದ್ದುಗೊಳಿಸಿ, ಲೋಕಾಯುಕ್ತ ಮರುಸ್ಥಾಪನೆಯಾಗಿದ್ದು ಹೇಗೆ ಎಂಬ ಚರ್ಚೆಗಳು ನಡೆಯುತ್ತಿವೆ.

2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಎಸಿಬಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ದಾಖಲಾಗಿದ್ದವು. ಮುಖ್ಯವಾಗಿ  ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ, ವಕೀಲರ ಸಂಘ ಮತ್ತು ವಕೀಲ ಚಿದಾನಂದ ಅರಸ್‌ರವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆದಿತ್ತು.

ಕರ್ನಾಟಕ ಹೈಕೋರ್ಟ್‌ನ ಜಸ್ಟೀಸ್‌ ಬಿ ವೀರಪ್ಪ ಹಾಗೂ ಜಸ್ಟೀಸ್‌‌ ಕೆ.ಎಸ್. ಹೇಮಲೇಖ ಅವರಿದ್ದ ಪೀಠವು ಸುಧೀರ್ಘ ವಿಚಾರಣೆಯ ನಂತರ ಆಗಸ್ಟ್ 12, 2022 ರಂದು ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಪಡಿಸಿಬೇಕು, ಲೋಕಾಯುಕ್ತವನ್ನು ಬಲಪಡಸಿಬೇಕು ಎಂದು ತೀರ್ಪು ನೀಡಿತ್ತು. ಅಲ್ಲದೆ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಕೋರ್ಟ್ ಆದೇಶಿಸಿತ್ತು.

ಹೈಕೋರ್ಟ್ ಆದೇಶ ನೀಡಿದ ನಂತರವಷ್ಟೇ ಲೋಕಾಯುಕ್ತ ಮರುಸ್ಥಾಪನೆಯಾಗಿದೆ: ಎಸ್.ಆರ್ ಹಿರೇಮಠ

ಎಸಿಬಿ ರದ್ದಾಗಬೇಕು ಮತ್ತು ಲೋಕಾಯುಕ್ತ ಮರು ಸ್ಥಾಪಿಸಬೇಕು ಎಂದು ಪಿಐಎಲ್ ಹೂಡಿ ಹೋರಾಡಿದ್ದ ಸಮಾಜ ಪರಿವರ್ತನಾ ಸಮುದಾಯದ ಮುಖಂಡರಾದ ಎಸ್‌.ಆರ್ ಹೀರೇಮಠರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ನಾವು ಇಷ್ಟೆಲ್ಲಾ ಹೋರಾಟ ಮಾಡುತ್ತಿರುವುದು ನಮ್ಮ ಆತ್ಮತೃಪ್ತಿಗೆ ಹೊರತು ಕ್ಲೈಮ್ ಮಾಡಿಕೊಳ್ಳುವುದಕ್ಕಲ್ಲ. ನಾವು 12ನೇ ಶತಮಾನದ ಶರಣದ ಹೋರಾಟದಿಂದ ಪ್ರೇರಿತರಾಗಿದ್ದೇವೆ. ಲೋಕಾಯುಕ್ತ ವಿಚಾರಕ್ಕೆ ಹೇಳುವುದಾದರೆ ‘ಯಶಸ್ಸಿಗೆ ಹಲವಾರು ತಂದೆಗಳು, ಸೋಲು ತಬ್ಬಲಿ’ ಎಂಬ ಗಾದೆ ಮಾತಿನಂತೆ ಬಿಜೆಪಿ ಈಗ ತಾವು ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ 2018ರ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಲೋಕಾಯುಕ್ತ ಪುನರ್‌ ಸ್ಥಾಪಿಸುತ್ತೇವೆಂದು ತಮ್ಮ ಪ್ರಣಾಳಿಕೆಯಲ್ಲಿ ಅವರು ಹೇಳಿದ್ದರು. ಆ ಕುರಿತು ಹಲವರು ಅವರಿಗೆ ಪದೇ ಪದೇ ನೆನಪು ಮಾಡಿದರೂ ಸಹ ಲೋಕಾಯುಕ್ತ ಮರುಸ್ಥಾಪಿಸಿರಲಿಲ್ಲ. ಕೊನೆಗೆ ಹೈಕೋರ್ಟ್ ಆದೇಶ ನೀಡಿದ ನಂತರವಷ್ಟೇ ಲೋಕಾಯುಕ್ತ ಮರುಸ್ಥಾಪನೆಯಾಗಿದ್ದು ಎಲ್ಲರಿಗೂ ತಿಳಿದಿದೆ” ಎಂದರು.

“ಅಧಿಕಾರದಲ್ಲಿರುವ ಯಾರಿಗೂ, ಯಾವುದೇ ಪಕ್ಷಗಳಿಗೂ ಲೋಕಾಯುಕ್ತ ಬೇಕಾಗಿಲ್ಲ. ಸಿದ್ದರಾಮಯ್ಯನವರು ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿ ಸಂತೋಷ್ ಹೆಗ್ಡೆಯವರು ನೀಡಿದ್ದ ವರದಿಯನ್ನು ಜಾರಿ ಮಾಡಿ ಎಂದು ಆಗ್ರಹಿಸಿದ್ದರು. ಬಿಜೆಪಿಯವರನ್ನು ಟೀಕಿಸಿ ಮಾತನಾಡಿದ್ದರು. ಆದರೆ ಅವರು ಅಧಿಕಾರಕ್ಕೆ ಬಂದ ನಂತರ ಆ ವರದಿಯನ್ನು ಜಾರಿ ಮಾಡಲಿಲ್ಲ ಮಾತ್ರವಲ್ಲ, ಲೋಕಾಯುಕ್ತದ ರೆಕ್ಕೆಗಳನ್ನೆ ಕಿತ್ತು ಹಾಕಿದರು” ಎಂದು ಹಿರೇಮಠರವರು ಅಸಮಾಧಾನ ವ್ಯಕ್ತಪಡಿಸಿದರು.

ಎಷ್ಟು ರಾಜ್ಯಗಳಲ್ಲಿ ಎಸಿಬಿ ಇದೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಆದರೆ ಲೋಕಾಯುಕ್ತ ಸರಿಯಾದ ದಾರಿಯಲ್ಲಿ ನಡೆಯುತ್ತಿರುವಾಗ ಅದನ್ನು ಬಲಹೀನಗೊಳಿಸಿದ್ದು ಏಕೆ? ಅವು ಸ್ಥಾಪನೆಯಾದ ಹಿನ್ನೆಲೆ ಅವರಿಗೆ ಗೊತ್ತಿಲ್ಲವೇ? ಎಷ್ಟು ನಾಚಿಕೆಗೇಡುತನದಿಂದ ತಾವು ಮಾಡಿದ ಆ ಕೆಲಸವನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ ಎಂದು ಕಿಡಿಕಾರಿದರು.

ಇನ್ನು ಜೆಡಿಎಸ್‌ನ ಎಚ್.ಡಿ ಕುಮಾರಸ್ವಾಮಿಯವರು ನಿರ್ಗತಿಕ ಎಂದು ಹೇಳಿ ಗೋಮಾಳ ಸೇರಿ 20 ಎಕರೆ ಭೂಮಿ ಕಬಳಿಸಿದ್ದರು. ಅವರ ತಂದೆ ಎಚ್.ಡಿ ದೇವೇಗೌಡರು ತಮ್ಮ ಹೆಂಡತಿಯ ತಂಗಿಯ ಹೆಸರಿನಲ್ಲಿ 20 ಎಕರೆ ಜಮೀನು ಮಾಡಿದ್ದರು. ಈ ಕುರಿತು ನಾವು ದೂರು ನೀಡಿದ್ದೆವು. 2014ರಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಅವೆಲ್ಲವೂ ಹೊರ ಬರುತ್ತವೆ ಎಂದು ಲೋಕಾಯುಕ್ತ ಮುಚ್ಚಿದ್ದನ್ನು ಪ್ರಶ್ನಿಸದೇ ಸುಮ್ಮನಿದ್ದರು. ಒಟ್ಟಿನಲ್ಲಿ ಮೂರು ಪಕ್ಷಗಳ ಭ್ರಷ್ಟರು ಲೋಕಾಯುಕ್ತವನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡುವುದಿಲ್ಲ. ಇದನ್ನು ಈ ಪೀಳಿಗೆಯ ಯುವಜನರು ಪ್ರಶ್ನಿಸಬೇಕು ಎಂದರು.

ಇದೇ ರೀತಿಯ ಮಾತುಗಳನ್ನು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಸಹ ಹೇಳಿದ್ಧಾರೆ. ಖಾಸಗಿ ಸುದ್ದಿವಾಹಿನಿ ಜೊತೆ ಮಾತನಾಡಿರುವ ಅವರು, “ಬಿಜೆಪಿಯವರು ಎಸಿಬಿಯನ್ನು ತೆಗೆದಿಲ್ಲ, ಅದನ್ನು ತೆಗೆದಿದ್ದು ಹೈಕೋರ್ಟ್. ಹಾಗಾಗಿ ಅದರ ಕ್ರೆಡಿಟ್ ಬಿಜೆಪಿಗೆ ಸಿಗುವುದಿಲ್ಲ ಎಂದಿದ್ದಾರೆ. ಬಿಜೆಪಿಯವರು ಅಧಿಕಾರಕ್ಕೆ ಬಂದರೆ 24 ಗಂಟೆಗಳಲ್ಲಿ ಎಸಿಬಿ ತೆಗೆದು ಲೋಕಾಯುಕ್ತ ತರುತ್ತೇವೆ ಎಂದು ಹೇಳಿದ್ದರು. ಆದರೆ ಅಧಿಕಾರಕ್ಕೆ ಬಂದು 24 ತಿಂಗಳು ಆದರೂ ಆ ಕೆಲಸ ಮಾಡಲಿಲ್ಲ. ಕೊನೆಗೆ ಹೈಕೋರ್ಟ್ ಆ ಕೆಲಸ ಮಾಡಿತು” ಎಂದಿದ್ದಾರೆ.

“ಯಾವ ಸರ್ಕಾರಗಳಿಗೂ ಲೋಕಾಯುಕ್ತ ಬೇಕಾಗಿಲ್ಲ. ಏಕೆಂದರೆ ಅದರ ಕೆಲಸವೇ ಅಧಿಕಾರದಲ್ಲಿರುವವರ ಭ್ರಷ್ಟಾಚಾರವನ್ನು ಬಯಲಿಗೆಳೆಯುವುದು. ಆದ್ದರಿಂದ ಯಾರಿಗೂ ತಮ್ಮ ಮೇಲೆಯೇ ದಾಳಿ ಮಾಡುವ ಸ್ವತಂತ್ರ ಮತ್ತು ಬಲಿಷ್ಟ ಸಂಸ್ಥೆ ಬೇಕಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್‌ರವರು ಈ ವಿಚಾರಕ್ಕೆ ಪ್ರತಿಕ್ರಿಯಿಸಿ “ಸುಳ್ಳು ಹೇಳುವದರಲ್ಲಿ ನಿಸ್ಸೀಮರು ಯಾರಾದರು ಇದ್ದರೆ ಅದು ಭಾರತೀಯ ಜನತ ಪಕ್ಷ. #BhrashtaBJP” ಎಂದು ಸಂತೋಷ್ ಹೆಗ್ಡೆಯವರ ಮಾತುಗಳನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಭ್ರಷ್ಟಾಚಾರ ಬಯಲಿಗೆ: 40% ಕಮಿಷನ್ ಆರೋಪಕ್ಕೆ ಇಷ್ಟು ಸಾಕ್ಷಿ ಸಾಕಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...