Homeಮುಖಪುಟಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಲೋಕಾಯುಕ್ತ ಬೇಕಿಲ್ಲ: ಎಸ್.ಆರ್ ಹಿರೇಮಠ

ಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಲೋಕಾಯುಕ್ತ ಬೇಕಿಲ್ಲ: ಎಸ್.ಆರ್ ಹಿರೇಮಠ

ಬಿಜೆಪಿಯವರು ಎಸಿಬಿಯನ್ನು ತೆಗೆದಿಲ್ಲ, ಅದನ್ನು ತೆಗೆದಿದ್ದು ಹೈಕೋರ್ಟ್. ಹಾಗಾಗಿ ಅದರ ಕ್ರೆಡಿಟ್ ಬಿಜೆಪಿಗೆ ಸಿಗುವುದಿಲ್ಲ - ಸಂತೋಷ್ ಹೆಗ್ಡೆ

- Advertisement -
- Advertisement -

ಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಆ ಸ್ವತಂತ್ರ ಸಂಸ್ಥೆ ಲೋಕಾಯುಕ್ತ ಬೇಕಿಲ್ಲ ಎಂದು ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅಭಿಪ್ರಾಯಪಟ್ಟಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಆತನ ಪುತ್ರ ಪ್ರಶಾಂತ್ ಮಾಡಾಳ್ ರವರ ಭಾರೀ ಭ್ರಷ್ಟಾಚಾರವನ್ನು ಬಯಲಿಗೆಳೆದ ನಂತರ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಲೋಕಾಯುಕ್ತ ಪುನರ್‌ ಸ್ಥಾಪಿಸಿದ್ದು ನಾವು ಎಂದು ಹೇಳಿಕೆ ನೀಡುತ್ತಿದ್ದಾರೆ. ಆ ಮೂಲಕ ತಮ್ಮ ಪಕ್ಷದ ಶಾಸಕರ ಕಮಿಷನ್ ದಂಧೆಯನ್ನು ಮರೆಮಾಚುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಎಸಿಬಿ ರದ್ದುಗೊಳಿಸಿ, ಲೋಕಾಯುಕ್ತ ಮರುಸ್ಥಾಪನೆಯಾಗಿದ್ದು ಹೇಗೆ ಎಂಬ ಚರ್ಚೆಗಳು ನಡೆಯುತ್ತಿವೆ.

2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಎಸಿಬಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ದಾಖಲಾಗಿದ್ದವು. ಮುಖ್ಯವಾಗಿ  ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ, ವಕೀಲರ ಸಂಘ ಮತ್ತು ವಕೀಲ ಚಿದಾನಂದ ಅರಸ್‌ರವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆದಿತ್ತು.

ಕರ್ನಾಟಕ ಹೈಕೋರ್ಟ್‌ನ ಜಸ್ಟೀಸ್‌ ಬಿ ವೀರಪ್ಪ ಹಾಗೂ ಜಸ್ಟೀಸ್‌‌ ಕೆ.ಎಸ್. ಹೇಮಲೇಖ ಅವರಿದ್ದ ಪೀಠವು ಸುಧೀರ್ಘ ವಿಚಾರಣೆಯ ನಂತರ ಆಗಸ್ಟ್ 12, 2022 ರಂದು ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಪಡಿಸಿಬೇಕು, ಲೋಕಾಯುಕ್ತವನ್ನು ಬಲಪಡಸಿಬೇಕು ಎಂದು ತೀರ್ಪು ನೀಡಿತ್ತು. ಅಲ್ಲದೆ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಕೋರ್ಟ್ ಆದೇಶಿಸಿತ್ತು.

ಹೈಕೋರ್ಟ್ ಆದೇಶ ನೀಡಿದ ನಂತರವಷ್ಟೇ ಲೋಕಾಯುಕ್ತ ಮರುಸ್ಥಾಪನೆಯಾಗಿದೆ: ಎಸ್.ಆರ್ ಹಿರೇಮಠ

ಎಸಿಬಿ ರದ್ದಾಗಬೇಕು ಮತ್ತು ಲೋಕಾಯುಕ್ತ ಮರು ಸ್ಥಾಪಿಸಬೇಕು ಎಂದು ಪಿಐಎಲ್ ಹೂಡಿ ಹೋರಾಡಿದ್ದ ಸಮಾಜ ಪರಿವರ್ತನಾ ಸಮುದಾಯದ ಮುಖಂಡರಾದ ಎಸ್‌.ಆರ್ ಹೀರೇಮಠರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ನಾವು ಇಷ್ಟೆಲ್ಲಾ ಹೋರಾಟ ಮಾಡುತ್ತಿರುವುದು ನಮ್ಮ ಆತ್ಮತೃಪ್ತಿಗೆ ಹೊರತು ಕ್ಲೈಮ್ ಮಾಡಿಕೊಳ್ಳುವುದಕ್ಕಲ್ಲ. ನಾವು 12ನೇ ಶತಮಾನದ ಶರಣದ ಹೋರಾಟದಿಂದ ಪ್ರೇರಿತರಾಗಿದ್ದೇವೆ. ಲೋಕಾಯುಕ್ತ ವಿಚಾರಕ್ಕೆ ಹೇಳುವುದಾದರೆ ‘ಯಶಸ್ಸಿಗೆ ಹಲವಾರು ತಂದೆಗಳು, ಸೋಲು ತಬ್ಬಲಿ’ ಎಂಬ ಗಾದೆ ಮಾತಿನಂತೆ ಬಿಜೆಪಿ ಈಗ ತಾವು ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ 2018ರ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಲೋಕಾಯುಕ್ತ ಪುನರ್‌ ಸ್ಥಾಪಿಸುತ್ತೇವೆಂದು ತಮ್ಮ ಪ್ರಣಾಳಿಕೆಯಲ್ಲಿ ಅವರು ಹೇಳಿದ್ದರು. ಆ ಕುರಿತು ಹಲವರು ಅವರಿಗೆ ಪದೇ ಪದೇ ನೆನಪು ಮಾಡಿದರೂ ಸಹ ಲೋಕಾಯುಕ್ತ ಮರುಸ್ಥಾಪಿಸಿರಲಿಲ್ಲ. ಕೊನೆಗೆ ಹೈಕೋರ್ಟ್ ಆದೇಶ ನೀಡಿದ ನಂತರವಷ್ಟೇ ಲೋಕಾಯುಕ್ತ ಮರುಸ್ಥಾಪನೆಯಾಗಿದ್ದು ಎಲ್ಲರಿಗೂ ತಿಳಿದಿದೆ” ಎಂದರು.

“ಅಧಿಕಾರದಲ್ಲಿರುವ ಯಾರಿಗೂ, ಯಾವುದೇ ಪಕ್ಷಗಳಿಗೂ ಲೋಕಾಯುಕ್ತ ಬೇಕಾಗಿಲ್ಲ. ಸಿದ್ದರಾಮಯ್ಯನವರು ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿ ಸಂತೋಷ್ ಹೆಗ್ಡೆಯವರು ನೀಡಿದ್ದ ವರದಿಯನ್ನು ಜಾರಿ ಮಾಡಿ ಎಂದು ಆಗ್ರಹಿಸಿದ್ದರು. ಬಿಜೆಪಿಯವರನ್ನು ಟೀಕಿಸಿ ಮಾತನಾಡಿದ್ದರು. ಆದರೆ ಅವರು ಅಧಿಕಾರಕ್ಕೆ ಬಂದ ನಂತರ ಆ ವರದಿಯನ್ನು ಜಾರಿ ಮಾಡಲಿಲ್ಲ ಮಾತ್ರವಲ್ಲ, ಲೋಕಾಯುಕ್ತದ ರೆಕ್ಕೆಗಳನ್ನೆ ಕಿತ್ತು ಹಾಕಿದರು” ಎಂದು ಹಿರೇಮಠರವರು ಅಸಮಾಧಾನ ವ್ಯಕ್ತಪಡಿಸಿದರು.

ಎಷ್ಟು ರಾಜ್ಯಗಳಲ್ಲಿ ಎಸಿಬಿ ಇದೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಆದರೆ ಲೋಕಾಯುಕ್ತ ಸರಿಯಾದ ದಾರಿಯಲ್ಲಿ ನಡೆಯುತ್ತಿರುವಾಗ ಅದನ್ನು ಬಲಹೀನಗೊಳಿಸಿದ್ದು ಏಕೆ? ಅವು ಸ್ಥಾಪನೆಯಾದ ಹಿನ್ನೆಲೆ ಅವರಿಗೆ ಗೊತ್ತಿಲ್ಲವೇ? ಎಷ್ಟು ನಾಚಿಕೆಗೇಡುತನದಿಂದ ತಾವು ಮಾಡಿದ ಆ ಕೆಲಸವನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ ಎಂದು ಕಿಡಿಕಾರಿದರು.

ಇನ್ನು ಜೆಡಿಎಸ್‌ನ ಎಚ್.ಡಿ ಕುಮಾರಸ್ವಾಮಿಯವರು ನಿರ್ಗತಿಕ ಎಂದು ಹೇಳಿ ಗೋಮಾಳ ಸೇರಿ 20 ಎಕರೆ ಭೂಮಿ ಕಬಳಿಸಿದ್ದರು. ಅವರ ತಂದೆ ಎಚ್.ಡಿ ದೇವೇಗೌಡರು ತಮ್ಮ ಹೆಂಡತಿಯ ತಂಗಿಯ ಹೆಸರಿನಲ್ಲಿ 20 ಎಕರೆ ಜಮೀನು ಮಾಡಿದ್ದರು. ಈ ಕುರಿತು ನಾವು ದೂರು ನೀಡಿದ್ದೆವು. 2014ರಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಅವೆಲ್ಲವೂ ಹೊರ ಬರುತ್ತವೆ ಎಂದು ಲೋಕಾಯುಕ್ತ ಮುಚ್ಚಿದ್ದನ್ನು ಪ್ರಶ್ನಿಸದೇ ಸುಮ್ಮನಿದ್ದರು. ಒಟ್ಟಿನಲ್ಲಿ ಮೂರು ಪಕ್ಷಗಳ ಭ್ರಷ್ಟರು ಲೋಕಾಯುಕ್ತವನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡುವುದಿಲ್ಲ. ಇದನ್ನು ಈ ಪೀಳಿಗೆಯ ಯುವಜನರು ಪ್ರಶ್ನಿಸಬೇಕು ಎಂದರು.

ಇದೇ ರೀತಿಯ ಮಾತುಗಳನ್ನು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಸಹ ಹೇಳಿದ್ಧಾರೆ. ಖಾಸಗಿ ಸುದ್ದಿವಾಹಿನಿ ಜೊತೆ ಮಾತನಾಡಿರುವ ಅವರು, “ಬಿಜೆಪಿಯವರು ಎಸಿಬಿಯನ್ನು ತೆಗೆದಿಲ್ಲ, ಅದನ್ನು ತೆಗೆದಿದ್ದು ಹೈಕೋರ್ಟ್. ಹಾಗಾಗಿ ಅದರ ಕ್ರೆಡಿಟ್ ಬಿಜೆಪಿಗೆ ಸಿಗುವುದಿಲ್ಲ ಎಂದಿದ್ದಾರೆ. ಬಿಜೆಪಿಯವರು ಅಧಿಕಾರಕ್ಕೆ ಬಂದರೆ 24 ಗಂಟೆಗಳಲ್ಲಿ ಎಸಿಬಿ ತೆಗೆದು ಲೋಕಾಯುಕ್ತ ತರುತ್ತೇವೆ ಎಂದು ಹೇಳಿದ್ದರು. ಆದರೆ ಅಧಿಕಾರಕ್ಕೆ ಬಂದು 24 ತಿಂಗಳು ಆದರೂ ಆ ಕೆಲಸ ಮಾಡಲಿಲ್ಲ. ಕೊನೆಗೆ ಹೈಕೋರ್ಟ್ ಆ ಕೆಲಸ ಮಾಡಿತು” ಎಂದಿದ್ದಾರೆ.

“ಯಾವ ಸರ್ಕಾರಗಳಿಗೂ ಲೋಕಾಯುಕ್ತ ಬೇಕಾಗಿಲ್ಲ. ಏಕೆಂದರೆ ಅದರ ಕೆಲಸವೇ ಅಧಿಕಾರದಲ್ಲಿರುವವರ ಭ್ರಷ್ಟಾಚಾರವನ್ನು ಬಯಲಿಗೆಳೆಯುವುದು. ಆದ್ದರಿಂದ ಯಾರಿಗೂ ತಮ್ಮ ಮೇಲೆಯೇ ದಾಳಿ ಮಾಡುವ ಸ್ವತಂತ್ರ ಮತ್ತು ಬಲಿಷ್ಟ ಸಂಸ್ಥೆ ಬೇಕಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್‌ರವರು ಈ ವಿಚಾರಕ್ಕೆ ಪ್ರತಿಕ್ರಿಯಿಸಿ “ಸುಳ್ಳು ಹೇಳುವದರಲ್ಲಿ ನಿಸ್ಸೀಮರು ಯಾರಾದರು ಇದ್ದರೆ ಅದು ಭಾರತೀಯ ಜನತ ಪಕ್ಷ. #BhrashtaBJP” ಎಂದು ಸಂತೋಷ್ ಹೆಗ್ಡೆಯವರ ಮಾತುಗಳನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಭ್ರಷ್ಟಾಚಾರ ಬಯಲಿಗೆ: 40% ಕಮಿಷನ್ ಆರೋಪಕ್ಕೆ ಇಷ್ಟು ಸಾಕ್ಷಿ ಸಾಕಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...