Homeಮುಖಪುಟಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಲೋಕಾಯುಕ್ತ ಬೇಕಿಲ್ಲ: ಎಸ್.ಆರ್ ಹಿರೇಮಠ

ಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಲೋಕಾಯುಕ್ತ ಬೇಕಿಲ್ಲ: ಎಸ್.ಆರ್ ಹಿರೇಮಠ

ಬಿಜೆಪಿಯವರು ಎಸಿಬಿಯನ್ನು ತೆಗೆದಿಲ್ಲ, ಅದನ್ನು ತೆಗೆದಿದ್ದು ಹೈಕೋರ್ಟ್. ಹಾಗಾಗಿ ಅದರ ಕ್ರೆಡಿಟ್ ಬಿಜೆಪಿಗೆ ಸಿಗುವುದಿಲ್ಲ - ಸಂತೋಷ್ ಹೆಗ್ಡೆ

- Advertisement -
- Advertisement -

ಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಆ ಸ್ವತಂತ್ರ ಸಂಸ್ಥೆ ಲೋಕಾಯುಕ್ತ ಬೇಕಿಲ್ಲ ಎಂದು ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅಭಿಪ್ರಾಯಪಟ್ಟಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಆತನ ಪುತ್ರ ಪ್ರಶಾಂತ್ ಮಾಡಾಳ್ ರವರ ಭಾರೀ ಭ್ರಷ್ಟಾಚಾರವನ್ನು ಬಯಲಿಗೆಳೆದ ನಂತರ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಲೋಕಾಯುಕ್ತ ಪುನರ್‌ ಸ್ಥಾಪಿಸಿದ್ದು ನಾವು ಎಂದು ಹೇಳಿಕೆ ನೀಡುತ್ತಿದ್ದಾರೆ. ಆ ಮೂಲಕ ತಮ್ಮ ಪಕ್ಷದ ಶಾಸಕರ ಕಮಿಷನ್ ದಂಧೆಯನ್ನು ಮರೆಮಾಚುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಎಸಿಬಿ ರದ್ದುಗೊಳಿಸಿ, ಲೋಕಾಯುಕ್ತ ಮರುಸ್ಥಾಪನೆಯಾಗಿದ್ದು ಹೇಗೆ ಎಂಬ ಚರ್ಚೆಗಳು ನಡೆಯುತ್ತಿವೆ.

2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಎಸಿಬಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ದಾಖಲಾಗಿದ್ದವು. ಮುಖ್ಯವಾಗಿ  ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ, ವಕೀಲರ ಸಂಘ ಮತ್ತು ವಕೀಲ ಚಿದಾನಂದ ಅರಸ್‌ರವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆದಿತ್ತು.

ಕರ್ನಾಟಕ ಹೈಕೋರ್ಟ್‌ನ ಜಸ್ಟೀಸ್‌ ಬಿ ವೀರಪ್ಪ ಹಾಗೂ ಜಸ್ಟೀಸ್‌‌ ಕೆ.ಎಸ್. ಹೇಮಲೇಖ ಅವರಿದ್ದ ಪೀಠವು ಸುಧೀರ್ಘ ವಿಚಾರಣೆಯ ನಂತರ ಆಗಸ್ಟ್ 12, 2022 ರಂದು ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಪಡಿಸಿಬೇಕು, ಲೋಕಾಯುಕ್ತವನ್ನು ಬಲಪಡಸಿಬೇಕು ಎಂದು ತೀರ್ಪು ನೀಡಿತ್ತು. ಅಲ್ಲದೆ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಕೋರ್ಟ್ ಆದೇಶಿಸಿತ್ತು.

ಹೈಕೋರ್ಟ್ ಆದೇಶ ನೀಡಿದ ನಂತರವಷ್ಟೇ ಲೋಕಾಯುಕ್ತ ಮರುಸ್ಥಾಪನೆಯಾಗಿದೆ: ಎಸ್.ಆರ್ ಹಿರೇಮಠ

ಎಸಿಬಿ ರದ್ದಾಗಬೇಕು ಮತ್ತು ಲೋಕಾಯುಕ್ತ ಮರು ಸ್ಥಾಪಿಸಬೇಕು ಎಂದು ಪಿಐಎಲ್ ಹೂಡಿ ಹೋರಾಡಿದ್ದ ಸಮಾಜ ಪರಿವರ್ತನಾ ಸಮುದಾಯದ ಮುಖಂಡರಾದ ಎಸ್‌.ಆರ್ ಹೀರೇಮಠರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ನಾವು ಇಷ್ಟೆಲ್ಲಾ ಹೋರಾಟ ಮಾಡುತ್ತಿರುವುದು ನಮ್ಮ ಆತ್ಮತೃಪ್ತಿಗೆ ಹೊರತು ಕ್ಲೈಮ್ ಮಾಡಿಕೊಳ್ಳುವುದಕ್ಕಲ್ಲ. ನಾವು 12ನೇ ಶತಮಾನದ ಶರಣದ ಹೋರಾಟದಿಂದ ಪ್ರೇರಿತರಾಗಿದ್ದೇವೆ. ಲೋಕಾಯುಕ್ತ ವಿಚಾರಕ್ಕೆ ಹೇಳುವುದಾದರೆ ‘ಯಶಸ್ಸಿಗೆ ಹಲವಾರು ತಂದೆಗಳು, ಸೋಲು ತಬ್ಬಲಿ’ ಎಂಬ ಗಾದೆ ಮಾತಿನಂತೆ ಬಿಜೆಪಿ ಈಗ ತಾವು ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ 2018ರ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಲೋಕಾಯುಕ್ತ ಪುನರ್‌ ಸ್ಥಾಪಿಸುತ್ತೇವೆಂದು ತಮ್ಮ ಪ್ರಣಾಳಿಕೆಯಲ್ಲಿ ಅವರು ಹೇಳಿದ್ದರು. ಆ ಕುರಿತು ಹಲವರು ಅವರಿಗೆ ಪದೇ ಪದೇ ನೆನಪು ಮಾಡಿದರೂ ಸಹ ಲೋಕಾಯುಕ್ತ ಮರುಸ್ಥಾಪಿಸಿರಲಿಲ್ಲ. ಕೊನೆಗೆ ಹೈಕೋರ್ಟ್ ಆದೇಶ ನೀಡಿದ ನಂತರವಷ್ಟೇ ಲೋಕಾಯುಕ್ತ ಮರುಸ್ಥಾಪನೆಯಾಗಿದ್ದು ಎಲ್ಲರಿಗೂ ತಿಳಿದಿದೆ” ಎಂದರು.

“ಅಧಿಕಾರದಲ್ಲಿರುವ ಯಾರಿಗೂ, ಯಾವುದೇ ಪಕ್ಷಗಳಿಗೂ ಲೋಕಾಯುಕ್ತ ಬೇಕಾಗಿಲ್ಲ. ಸಿದ್ದರಾಮಯ್ಯನವರು ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿ ಸಂತೋಷ್ ಹೆಗ್ಡೆಯವರು ನೀಡಿದ್ದ ವರದಿಯನ್ನು ಜಾರಿ ಮಾಡಿ ಎಂದು ಆಗ್ರಹಿಸಿದ್ದರು. ಬಿಜೆಪಿಯವರನ್ನು ಟೀಕಿಸಿ ಮಾತನಾಡಿದ್ದರು. ಆದರೆ ಅವರು ಅಧಿಕಾರಕ್ಕೆ ಬಂದ ನಂತರ ಆ ವರದಿಯನ್ನು ಜಾರಿ ಮಾಡಲಿಲ್ಲ ಮಾತ್ರವಲ್ಲ, ಲೋಕಾಯುಕ್ತದ ರೆಕ್ಕೆಗಳನ್ನೆ ಕಿತ್ತು ಹಾಕಿದರು” ಎಂದು ಹಿರೇಮಠರವರು ಅಸಮಾಧಾನ ವ್ಯಕ್ತಪಡಿಸಿದರು.

ಎಷ್ಟು ರಾಜ್ಯಗಳಲ್ಲಿ ಎಸಿಬಿ ಇದೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಆದರೆ ಲೋಕಾಯುಕ್ತ ಸರಿಯಾದ ದಾರಿಯಲ್ಲಿ ನಡೆಯುತ್ತಿರುವಾಗ ಅದನ್ನು ಬಲಹೀನಗೊಳಿಸಿದ್ದು ಏಕೆ? ಅವು ಸ್ಥಾಪನೆಯಾದ ಹಿನ್ನೆಲೆ ಅವರಿಗೆ ಗೊತ್ತಿಲ್ಲವೇ? ಎಷ್ಟು ನಾಚಿಕೆಗೇಡುತನದಿಂದ ತಾವು ಮಾಡಿದ ಆ ಕೆಲಸವನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ ಎಂದು ಕಿಡಿಕಾರಿದರು.

ಇನ್ನು ಜೆಡಿಎಸ್‌ನ ಎಚ್.ಡಿ ಕುಮಾರಸ್ವಾಮಿಯವರು ನಿರ್ಗತಿಕ ಎಂದು ಹೇಳಿ ಗೋಮಾಳ ಸೇರಿ 20 ಎಕರೆ ಭೂಮಿ ಕಬಳಿಸಿದ್ದರು. ಅವರ ತಂದೆ ಎಚ್.ಡಿ ದೇವೇಗೌಡರು ತಮ್ಮ ಹೆಂಡತಿಯ ತಂಗಿಯ ಹೆಸರಿನಲ್ಲಿ 20 ಎಕರೆ ಜಮೀನು ಮಾಡಿದ್ದರು. ಈ ಕುರಿತು ನಾವು ದೂರು ನೀಡಿದ್ದೆವು. 2014ರಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಅವೆಲ್ಲವೂ ಹೊರ ಬರುತ್ತವೆ ಎಂದು ಲೋಕಾಯುಕ್ತ ಮುಚ್ಚಿದ್ದನ್ನು ಪ್ರಶ್ನಿಸದೇ ಸುಮ್ಮನಿದ್ದರು. ಒಟ್ಟಿನಲ್ಲಿ ಮೂರು ಪಕ್ಷಗಳ ಭ್ರಷ್ಟರು ಲೋಕಾಯುಕ್ತವನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡುವುದಿಲ್ಲ. ಇದನ್ನು ಈ ಪೀಳಿಗೆಯ ಯುವಜನರು ಪ್ರಶ್ನಿಸಬೇಕು ಎಂದರು.

ಇದೇ ರೀತಿಯ ಮಾತುಗಳನ್ನು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಸಹ ಹೇಳಿದ್ಧಾರೆ. ಖಾಸಗಿ ಸುದ್ದಿವಾಹಿನಿ ಜೊತೆ ಮಾತನಾಡಿರುವ ಅವರು, “ಬಿಜೆಪಿಯವರು ಎಸಿಬಿಯನ್ನು ತೆಗೆದಿಲ್ಲ, ಅದನ್ನು ತೆಗೆದಿದ್ದು ಹೈಕೋರ್ಟ್. ಹಾಗಾಗಿ ಅದರ ಕ್ರೆಡಿಟ್ ಬಿಜೆಪಿಗೆ ಸಿಗುವುದಿಲ್ಲ ಎಂದಿದ್ದಾರೆ. ಬಿಜೆಪಿಯವರು ಅಧಿಕಾರಕ್ಕೆ ಬಂದರೆ 24 ಗಂಟೆಗಳಲ್ಲಿ ಎಸಿಬಿ ತೆಗೆದು ಲೋಕಾಯುಕ್ತ ತರುತ್ತೇವೆ ಎಂದು ಹೇಳಿದ್ದರು. ಆದರೆ ಅಧಿಕಾರಕ್ಕೆ ಬಂದು 24 ತಿಂಗಳು ಆದರೂ ಆ ಕೆಲಸ ಮಾಡಲಿಲ್ಲ. ಕೊನೆಗೆ ಹೈಕೋರ್ಟ್ ಆ ಕೆಲಸ ಮಾಡಿತು” ಎಂದಿದ್ದಾರೆ.

“ಯಾವ ಸರ್ಕಾರಗಳಿಗೂ ಲೋಕಾಯುಕ್ತ ಬೇಕಾಗಿಲ್ಲ. ಏಕೆಂದರೆ ಅದರ ಕೆಲಸವೇ ಅಧಿಕಾರದಲ್ಲಿರುವವರ ಭ್ರಷ್ಟಾಚಾರವನ್ನು ಬಯಲಿಗೆಳೆಯುವುದು. ಆದ್ದರಿಂದ ಯಾರಿಗೂ ತಮ್ಮ ಮೇಲೆಯೇ ದಾಳಿ ಮಾಡುವ ಸ್ವತಂತ್ರ ಮತ್ತು ಬಲಿಷ್ಟ ಸಂಸ್ಥೆ ಬೇಕಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್‌ರವರು ಈ ವಿಚಾರಕ್ಕೆ ಪ್ರತಿಕ್ರಿಯಿಸಿ “ಸುಳ್ಳು ಹೇಳುವದರಲ್ಲಿ ನಿಸ್ಸೀಮರು ಯಾರಾದರು ಇದ್ದರೆ ಅದು ಭಾರತೀಯ ಜನತ ಪಕ್ಷ. #BhrashtaBJP” ಎಂದು ಸಂತೋಷ್ ಹೆಗ್ಡೆಯವರ ಮಾತುಗಳನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಭ್ರಷ್ಟಾಚಾರ ಬಯಲಿಗೆ: 40% ಕಮಿಷನ್ ಆರೋಪಕ್ಕೆ ಇಷ್ಟು ಸಾಕ್ಷಿ ಸಾಕಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...