Homeಮುಖಪುಟಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಲೋಕಾಯುಕ್ತ ಬೇಕಿಲ್ಲ: ಎಸ್.ಆರ್ ಹಿರೇಮಠ

ಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಲೋಕಾಯುಕ್ತ ಬೇಕಿಲ್ಲ: ಎಸ್.ಆರ್ ಹಿರೇಮಠ

ಬಿಜೆಪಿಯವರು ಎಸಿಬಿಯನ್ನು ತೆಗೆದಿಲ್ಲ, ಅದನ್ನು ತೆಗೆದಿದ್ದು ಹೈಕೋರ್ಟ್. ಹಾಗಾಗಿ ಅದರ ಕ್ರೆಡಿಟ್ ಬಿಜೆಪಿಗೆ ಸಿಗುವುದಿಲ್ಲ - ಸಂತೋಷ್ ಹೆಗ್ಡೆ

- Advertisement -
- Advertisement -

ಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಆ ಸ್ವತಂತ್ರ ಸಂಸ್ಥೆ ಲೋಕಾಯುಕ್ತ ಬೇಕಿಲ್ಲ ಎಂದು ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅಭಿಪ್ರಾಯಪಟ್ಟಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಆತನ ಪುತ್ರ ಪ್ರಶಾಂತ್ ಮಾಡಾಳ್ ರವರ ಭಾರೀ ಭ್ರಷ್ಟಾಚಾರವನ್ನು ಬಯಲಿಗೆಳೆದ ನಂತರ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಲೋಕಾಯುಕ್ತ ಪುನರ್‌ ಸ್ಥಾಪಿಸಿದ್ದು ನಾವು ಎಂದು ಹೇಳಿಕೆ ನೀಡುತ್ತಿದ್ದಾರೆ. ಆ ಮೂಲಕ ತಮ್ಮ ಪಕ್ಷದ ಶಾಸಕರ ಕಮಿಷನ್ ದಂಧೆಯನ್ನು ಮರೆಮಾಚುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಎಸಿಬಿ ರದ್ದುಗೊಳಿಸಿ, ಲೋಕಾಯುಕ್ತ ಮರುಸ್ಥಾಪನೆಯಾಗಿದ್ದು ಹೇಗೆ ಎಂಬ ಚರ್ಚೆಗಳು ನಡೆಯುತ್ತಿವೆ.

2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಎಸಿಬಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ದಾಖಲಾಗಿದ್ದವು. ಮುಖ್ಯವಾಗಿ  ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ, ವಕೀಲರ ಸಂಘ ಮತ್ತು ವಕೀಲ ಚಿದಾನಂದ ಅರಸ್‌ರವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆದಿತ್ತು.

ಕರ್ನಾಟಕ ಹೈಕೋರ್ಟ್‌ನ ಜಸ್ಟೀಸ್‌ ಬಿ ವೀರಪ್ಪ ಹಾಗೂ ಜಸ್ಟೀಸ್‌‌ ಕೆ.ಎಸ್. ಹೇಮಲೇಖ ಅವರಿದ್ದ ಪೀಠವು ಸುಧೀರ್ಘ ವಿಚಾರಣೆಯ ನಂತರ ಆಗಸ್ಟ್ 12, 2022 ರಂದು ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಪಡಿಸಿಬೇಕು, ಲೋಕಾಯುಕ್ತವನ್ನು ಬಲಪಡಸಿಬೇಕು ಎಂದು ತೀರ್ಪು ನೀಡಿತ್ತು. ಅಲ್ಲದೆ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಕೋರ್ಟ್ ಆದೇಶಿಸಿತ್ತು.

ಹೈಕೋರ್ಟ್ ಆದೇಶ ನೀಡಿದ ನಂತರವಷ್ಟೇ ಲೋಕಾಯುಕ್ತ ಮರುಸ್ಥಾಪನೆಯಾಗಿದೆ: ಎಸ್.ಆರ್ ಹಿರೇಮಠ

ಎಸಿಬಿ ರದ್ದಾಗಬೇಕು ಮತ್ತು ಲೋಕಾಯುಕ್ತ ಮರು ಸ್ಥಾಪಿಸಬೇಕು ಎಂದು ಪಿಐಎಲ್ ಹೂಡಿ ಹೋರಾಡಿದ್ದ ಸಮಾಜ ಪರಿವರ್ತನಾ ಸಮುದಾಯದ ಮುಖಂಡರಾದ ಎಸ್‌.ಆರ್ ಹೀರೇಮಠರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ನಾವು ಇಷ್ಟೆಲ್ಲಾ ಹೋರಾಟ ಮಾಡುತ್ತಿರುವುದು ನಮ್ಮ ಆತ್ಮತೃಪ್ತಿಗೆ ಹೊರತು ಕ್ಲೈಮ್ ಮಾಡಿಕೊಳ್ಳುವುದಕ್ಕಲ್ಲ. ನಾವು 12ನೇ ಶತಮಾನದ ಶರಣದ ಹೋರಾಟದಿಂದ ಪ್ರೇರಿತರಾಗಿದ್ದೇವೆ. ಲೋಕಾಯುಕ್ತ ವಿಚಾರಕ್ಕೆ ಹೇಳುವುದಾದರೆ ‘ಯಶಸ್ಸಿಗೆ ಹಲವಾರು ತಂದೆಗಳು, ಸೋಲು ತಬ್ಬಲಿ’ ಎಂಬ ಗಾದೆ ಮಾತಿನಂತೆ ಬಿಜೆಪಿ ಈಗ ತಾವು ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ 2018ರ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಲೋಕಾಯುಕ್ತ ಪುನರ್‌ ಸ್ಥಾಪಿಸುತ್ತೇವೆಂದು ತಮ್ಮ ಪ್ರಣಾಳಿಕೆಯಲ್ಲಿ ಅವರು ಹೇಳಿದ್ದರು. ಆ ಕುರಿತು ಹಲವರು ಅವರಿಗೆ ಪದೇ ಪದೇ ನೆನಪು ಮಾಡಿದರೂ ಸಹ ಲೋಕಾಯುಕ್ತ ಮರುಸ್ಥಾಪಿಸಿರಲಿಲ್ಲ. ಕೊನೆಗೆ ಹೈಕೋರ್ಟ್ ಆದೇಶ ನೀಡಿದ ನಂತರವಷ್ಟೇ ಲೋಕಾಯುಕ್ತ ಮರುಸ್ಥಾಪನೆಯಾಗಿದ್ದು ಎಲ್ಲರಿಗೂ ತಿಳಿದಿದೆ” ಎಂದರು.

“ಅಧಿಕಾರದಲ್ಲಿರುವ ಯಾರಿಗೂ, ಯಾವುದೇ ಪಕ್ಷಗಳಿಗೂ ಲೋಕಾಯುಕ್ತ ಬೇಕಾಗಿಲ್ಲ. ಸಿದ್ದರಾಮಯ್ಯನವರು ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿ ಸಂತೋಷ್ ಹೆಗ್ಡೆಯವರು ನೀಡಿದ್ದ ವರದಿಯನ್ನು ಜಾರಿ ಮಾಡಿ ಎಂದು ಆಗ್ರಹಿಸಿದ್ದರು. ಬಿಜೆಪಿಯವರನ್ನು ಟೀಕಿಸಿ ಮಾತನಾಡಿದ್ದರು. ಆದರೆ ಅವರು ಅಧಿಕಾರಕ್ಕೆ ಬಂದ ನಂತರ ಆ ವರದಿಯನ್ನು ಜಾರಿ ಮಾಡಲಿಲ್ಲ ಮಾತ್ರವಲ್ಲ, ಲೋಕಾಯುಕ್ತದ ರೆಕ್ಕೆಗಳನ್ನೆ ಕಿತ್ತು ಹಾಕಿದರು” ಎಂದು ಹಿರೇಮಠರವರು ಅಸಮಾಧಾನ ವ್ಯಕ್ತಪಡಿಸಿದರು.

ಎಷ್ಟು ರಾಜ್ಯಗಳಲ್ಲಿ ಎಸಿಬಿ ಇದೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಆದರೆ ಲೋಕಾಯುಕ್ತ ಸರಿಯಾದ ದಾರಿಯಲ್ಲಿ ನಡೆಯುತ್ತಿರುವಾಗ ಅದನ್ನು ಬಲಹೀನಗೊಳಿಸಿದ್ದು ಏಕೆ? ಅವು ಸ್ಥಾಪನೆಯಾದ ಹಿನ್ನೆಲೆ ಅವರಿಗೆ ಗೊತ್ತಿಲ್ಲವೇ? ಎಷ್ಟು ನಾಚಿಕೆಗೇಡುತನದಿಂದ ತಾವು ಮಾಡಿದ ಆ ಕೆಲಸವನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ ಎಂದು ಕಿಡಿಕಾರಿದರು.

ಇನ್ನು ಜೆಡಿಎಸ್‌ನ ಎಚ್.ಡಿ ಕುಮಾರಸ್ವಾಮಿಯವರು ನಿರ್ಗತಿಕ ಎಂದು ಹೇಳಿ ಗೋಮಾಳ ಸೇರಿ 20 ಎಕರೆ ಭೂಮಿ ಕಬಳಿಸಿದ್ದರು. ಅವರ ತಂದೆ ಎಚ್.ಡಿ ದೇವೇಗೌಡರು ತಮ್ಮ ಹೆಂಡತಿಯ ತಂಗಿಯ ಹೆಸರಿನಲ್ಲಿ 20 ಎಕರೆ ಜಮೀನು ಮಾಡಿದ್ದರು. ಈ ಕುರಿತು ನಾವು ದೂರು ನೀಡಿದ್ದೆವು. 2014ರಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಅವೆಲ್ಲವೂ ಹೊರ ಬರುತ್ತವೆ ಎಂದು ಲೋಕಾಯುಕ್ತ ಮುಚ್ಚಿದ್ದನ್ನು ಪ್ರಶ್ನಿಸದೇ ಸುಮ್ಮನಿದ್ದರು. ಒಟ್ಟಿನಲ್ಲಿ ಮೂರು ಪಕ್ಷಗಳ ಭ್ರಷ್ಟರು ಲೋಕಾಯುಕ್ತವನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡುವುದಿಲ್ಲ. ಇದನ್ನು ಈ ಪೀಳಿಗೆಯ ಯುವಜನರು ಪ್ರಶ್ನಿಸಬೇಕು ಎಂದರು.

ಇದೇ ರೀತಿಯ ಮಾತುಗಳನ್ನು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಸಹ ಹೇಳಿದ್ಧಾರೆ. ಖಾಸಗಿ ಸುದ್ದಿವಾಹಿನಿ ಜೊತೆ ಮಾತನಾಡಿರುವ ಅವರು, “ಬಿಜೆಪಿಯವರು ಎಸಿಬಿಯನ್ನು ತೆಗೆದಿಲ್ಲ, ಅದನ್ನು ತೆಗೆದಿದ್ದು ಹೈಕೋರ್ಟ್. ಹಾಗಾಗಿ ಅದರ ಕ್ರೆಡಿಟ್ ಬಿಜೆಪಿಗೆ ಸಿಗುವುದಿಲ್ಲ ಎಂದಿದ್ದಾರೆ. ಬಿಜೆಪಿಯವರು ಅಧಿಕಾರಕ್ಕೆ ಬಂದರೆ 24 ಗಂಟೆಗಳಲ್ಲಿ ಎಸಿಬಿ ತೆಗೆದು ಲೋಕಾಯುಕ್ತ ತರುತ್ತೇವೆ ಎಂದು ಹೇಳಿದ್ದರು. ಆದರೆ ಅಧಿಕಾರಕ್ಕೆ ಬಂದು 24 ತಿಂಗಳು ಆದರೂ ಆ ಕೆಲಸ ಮಾಡಲಿಲ್ಲ. ಕೊನೆಗೆ ಹೈಕೋರ್ಟ್ ಆ ಕೆಲಸ ಮಾಡಿತು” ಎಂದಿದ್ದಾರೆ.

“ಯಾವ ಸರ್ಕಾರಗಳಿಗೂ ಲೋಕಾಯುಕ್ತ ಬೇಕಾಗಿಲ್ಲ. ಏಕೆಂದರೆ ಅದರ ಕೆಲಸವೇ ಅಧಿಕಾರದಲ್ಲಿರುವವರ ಭ್ರಷ್ಟಾಚಾರವನ್ನು ಬಯಲಿಗೆಳೆಯುವುದು. ಆದ್ದರಿಂದ ಯಾರಿಗೂ ತಮ್ಮ ಮೇಲೆಯೇ ದಾಳಿ ಮಾಡುವ ಸ್ವತಂತ್ರ ಮತ್ತು ಬಲಿಷ್ಟ ಸಂಸ್ಥೆ ಬೇಕಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್‌ರವರು ಈ ವಿಚಾರಕ್ಕೆ ಪ್ರತಿಕ್ರಿಯಿಸಿ “ಸುಳ್ಳು ಹೇಳುವದರಲ್ಲಿ ನಿಸ್ಸೀಮರು ಯಾರಾದರು ಇದ್ದರೆ ಅದು ಭಾರತೀಯ ಜನತ ಪಕ್ಷ. #BhrashtaBJP” ಎಂದು ಸಂತೋಷ್ ಹೆಗ್ಡೆಯವರ ಮಾತುಗಳನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಭ್ರಷ್ಟಾಚಾರ ಬಯಲಿಗೆ: 40% ಕಮಿಷನ್ ಆರೋಪಕ್ಕೆ ಇಷ್ಟು ಸಾಕ್ಷಿ ಸಾಕಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...