Homeಕರ್ನಾಟಕಲೋಕಸಭಾ ಚುನಾವಣೆ: ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ 13 ರಾಜ್ಯಗಳ 88 ಕ್ಷೇತ್ರಗಳಲ್ಲಿ ಇಂದು ಮತದಾನ

ಲೋಕಸಭಾ ಚುನಾವಣೆ: ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ 13 ರಾಜ್ಯಗಳ 88 ಕ್ಷೇತ್ರಗಳಲ್ಲಿ ಇಂದು ಮತದಾನ

- Advertisement -
- Advertisement -

ಲೋಕಸಭಾ ಚುನಾವಣೆಯ ಹಿನ್ನೆಲೆ ಎರಡನೇ ಹಂತದಲ್ಲಿ ಕರ್ನಾಟಕ ಸೇರಿದಂತೆ ಒಟ್ಟು 13 ರಾಜ್ಯಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಎರಡನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಬೆಳಿಗ್ಗೆ 7ರಿಂದ  ಮತದಾನ ನಡೆಯುತ್ತಿದೆ. ವಯನಾಡು ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‍ಗಾಂಧಿ, ತಿರುವನಂತಪುರಂನಲ್ಲಿ  ಶಶಿತರೂರ್‌ ಸೇರಿದಂತೆ 88 ಕೇತ್ರಗಳಲ್ಲಿ 1200 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕೇರಳದ ಎಲ್ಲ 20 ಕ್ಷೇತ್ರಗಳಲ್ಲಿ ಮತದಾನ ಬಿರುಸಿನಿಂದ ಆರಂಭವಾಗಿದ್ದು, ಮತಗಟ್ಟೆಗಳ ಹೊರಗೆ ದೊಡ್ಡ ಸರತಿ ಸಾಲುಗಳು ಬೆಳಿಗ್ಗೆಯಿಂದಲೇ ಕಾಣಿಸುತ್ತಿವೆ. ಪಶ್ಚಿಮ ಬಂಗಾಳದ ಬಲೂರ್ ಘಾಟ್‍ನಲ್ಲಿ ಕೂಡಾ ಮತದಾನ ಆರಂಭವಾಗಿದೆ. ರಾಜ್ಯದ 42 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಹನ್ನೆರಡು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಲ್ಲಿ ನಡೆಯುವ ಚುನಾವಣೆಗೆ 2,633 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 1,428 ಸಿಂಧುವಾಗಿತ್ತು.

ಕರ್ನಾಟಕದ 14 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗೆ 7ರಿಂದಲೇ ಜನರು ಮತಗಟ್ಟೆಗಳ ಬಳಿ ಸಾಗಿ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ.

ಚಿಕ್ಕಮಗಳೂರಿನ ಆರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53 ರಲ್ಲಿ ಇವಿಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಕೆಲವೇ ನಿಮಿಷಗಳಲ್ಲಿ ಮತದಾನ ಸ್ಥಗಿತಗೊಂಡಿದೆ. ಆರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53ರಲ್ಲಿ ಮತದಾನ ಸ್ಥಗಿತಗೊಂಡಿದ್ದು, ಮತದಾನಕ್ಕಾಗಿ ಮತದಾರರು ಸರದಿಯಲ್ಲಿ ಕಾದು ನಿಂತಿದ್ದಾರೆ. ಮತದಾನ ವೇಳೆ ಮೊಬೈಲ್ ಕೊಂಡೊಯ್ಯುವುದಕ್ಕೆ ನಿರ್ಬಂಧ ಹೇರಲಾಗಿದೆ. ಮತದಾನದ ವಿಡಿಯೋ ಮಾಡಿಕೊಳ್ಳುವ ಸಾಧ್ಯತೆ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಮತಗಟ್ಟೆ ಹೊರಗೆ ಮೊಬೈಲ್​​ ಇಟ್ಟು ಹೋಗಲು ಸೂಚನೆ ನೀಡಲಾಗುತ್ತಿದೆ.

ಎರಡನೇ ಹಂತದ ಚುನಾವಣೆಯಲ್ಲಿ ಅಸ್ಸಾಂನ 5, ಬಿಹಾರದ 5, ಛತ್ತೀಸ್‌ಗಢದ 3, ಕರ್ನಾಟಕದ 14, ಕೇರಳದ 20, ಮಧ್ಯಪ್ರದೇಶದ 7, ಮಹಾರಾಷ್ಟ್ರದ 8, ಮಣಿಪುರದ 1, ರಾಜಸ್ಥಾನದ 13, ತ್ರಿಪುರಾದ 1, ಉತ್ತರ ಪ್ರದೇಶದ 8, ಪಶ್ಚಿಮ ಬಂಗಾಳದ 3 ಮತ್ತು ಜಮ್ಮು ಮತ್ತು ಕಾಶ್ಮೀರದ 1 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಇದನ್ನು ಓದಿ: ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...