Homeಮುಖಪುಟಲೋಕಸಭೆ ಚುನಾವಣೆ: ಕಾಂಗ್ರೆಸ್‌ನ ಪಂಚ ಗ್ಯಾರೆಂಟಿ

ಲೋಕಸಭೆ ಚುನಾವಣೆ: ಕಾಂಗ್ರೆಸ್‌ನ ಪಂಚ ಗ್ಯಾರೆಂಟಿ

- Advertisement -
- Advertisement -

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ದೇಶದ ಜನತೆಗೆ ಪಂಚ ಗ್ಯಾರೆಂಟಿಯನ್ನು ಘೋಷಿಸಿದ್ದು, ಅದರಡಿಯಲ್ಲಿ ಒಟ್ಟು 15 ಭರವಸೆಗಳನ್ನು ನೀಡಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಈ ಗ್ಯಾರೆಂಟಿ ಸೌಲಭ್ಯಗಳು ಜನರಿಗೆ ಲಭ್ಯವಾಗಲಿದೆ ಎಂದು ಕಾಂಗ್ರೆಸ್‌ ಹೇಳುತ್ತಿದೆ. ಈ ಪಂಚ ಗ್ಯಾರೆಂಟಿಗಳು ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟದ ನಿದ್ದೆಗೆಡಿಸಿದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿನ್ನೆ ‘ಶ್ರಮಿಕ ನ್ಯಾಯ’ ‘ಹಿಸ್ಸೇದಾರಿ‘(ಭಾಗೀದಾರರ)ನ್ಯಾಯ ಗ್ಯಾರೆಂಟಿ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಈಗಾಗಲೇ ಕಿಸಾನ್ ನ್ಯಾಯ, ಯುವ ನ್ಯಾಯ ಹಾಗೂ ನಾರಿ ನ್ಯಾಯ ಗ್ಯಾರಂಟಿಗಳನ್ನು ಘೋಷಿಸಿದೆ. ಈ ಮೂರು ಗ್ಯಾರೆಂಟಿಗಳು ತಲಾ 5 ಅಂಶಗಳಂತೆ 15 ಗ್ಯಾರೆಂಟಿಗಳನ್ನು ಹೊಂದಿದೆ. ಈಗ ನಾಲ್ಕು ಮತ್ತು ಐದನೇ ಗ್ಯಾರಂಟಿಗಳಾಗಿ ಶ್ರಮಿಕ ನ್ಯಾಯ ಹಾಗೂ ಹಿಸ್ಸೇದಾರಿ ನ್ಯಾಯ ಗ್ಯಾರಂಟಿ ಘೋಷಣೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಶ್ರಮಿಕ ನ್ಯಾಯದಡಿಯಲ್ಲಿನ 5 ಭರವಸೆಗಳು

-ನರೇಗಾ ಯೋಜನೆ ಅಡಿಯಲ್ಲಿ ದಿನಗೂಲಿ ಮೊತ್ತ 400ಕ್ಕೆ ಏರಿಕೆ

-ಕಾರ್ಮಿಕರಿಗೆ ಆರೋಗ್ಯ ಹಕ್ಕು ಜಾರಿಗೆ ತಂದು ಉಚಿತ ಔಷಧಿ, ಚಿಕಿತ್ಸೆ, ರೋಗಪತ್ತೆ, ಶಸ್ತ್ರಚಿಕಿತ್ಸೆ ಸೌಲಭ್ಯ

-ನಗರ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದು, ಸಾರ್ವಜನಿಕ ಮೂಲಸೌಕರ್ಯ ನಿರ್ಮಾಣ ಹಾಗೂ ನಗರಗಳಲ್ಲಿ ಹವಾಮಾನ ವೈಪರೀತ್ಯ ನಿಯಂತ್ರಣ, ಸಾಮಾಜಿಕ ಸೇವೆಗಳ ಅಂತರ ಕಡಿಮೆ ಮಾಡುವುದು.

-ಅಸಂಘಟಿತ ವಲಯದ ಕಾರ್ಮಿಕರಿಗೆ ಜೀವ ವಿಮೆ, ಅಪಘಾತ ವಿಮೆ ಸೇರಿದಂತೆ ಸಾಮಾಜಿಕ ಭದ್ರತೆ

– ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆದು ಕಾರ್ಮಿಕರ ಹಕ್ಕುಗಳ ಮರುಸ್ಥಾಪನೆ

ಹಿಸ್ಸೇದಾರಿ ನ್ಯಾಯದಡಿಯಲ್ಲಿನ 5 ಭರವಸೆಗಳು

-ರಾಷ್ಟ್ರ ಮಟ್ಟದಲ್ಲಿ ಜಾತಿ ಗಣತಿ ನಡೆಸಿ ದೇಶದ ಸಂಪತ್ತಿನ ಸಮಾನ ಹಂಚಿಕೆ ಮಾಡುವುದು, ಆಡಳಿತದಲ್ಲಿ ಎಲ್ಲ ವರ್ಗದವರ ಪ್ರಾತಿನಿಧ್ಯಕ್ಕೆ ಅವಕಾಶ ನೀಡುವುದು

-ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಳಕ್ಕೆ ಅಡ್ಡಿಯಾಗಿರುವ ಶೇ‌ 50 ಮಿಸಲಾತಿ ಮಿತಿಯನ್ನು ತಿದ್ದುಪಡಿ ಮೂಲಕ ಏರಿಕೆ

-ಆದಿವಾಸಿಗಳಿಗೆ ಅರಣ್ಯ ಹಕ್ಕು ರಕ್ಷಣೆ, ಬಾಕಿ ಇರುವ ಅರಣ್ಯ ಹಕ್ಕು ಕಾಯ್ದೆಯ ಬೇಡಿಕೆ ಒಂದು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು.

-ಅರಣ್ಯದ ಕಿರು ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ವಿಸ್ತರಣೆ. ಅರಣ್ಯ ಸಂರಕ್ಷಣೆ ಕಾಯ್ದೆ ಹೆಸರಿನಲ್ಲಿ ಮಾಡಲಾಗಿರುವ ಬುಡಕಟ್ಟು ವಿರೋಧಿ ತಿದ್ದುಪಡಿಗಳ ರದ್ಧತಿ

-ಆದಿವಾಸಿಗಳಿಗೆ ಸ್ವಯಂ ಆಡಳಿತ ಹಾಗೂ ಸಂಸ್ಕೃತಿ ರಕ್ಷಣೆ ಹಕ್ಕು, ಮಧ್ಯಪ್ರದೇಶ ಛತ್ತೀಸ್ ಗಡ, ಪಶ್ಚಿಮ ಬಂಗಾಳ, ಒಡಿಶಾ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡದ ಜನ ಅರಣ್ಯ ಪ್ರದೇಶಗಳಿಂದ ವಲಸೆ ಹೋಗುತ್ತಿದ್ದು, ಇವರಿಗಾಗಿ ಜಲ, ಅರಣ್ಯ ಹಾಗೂ ಭೂಮಿಯನ್ನು ನಾವು ರಕ್ಷಣೆ ಮಾಡುತ್ತೇವೆ. ದೊಡ್ಡ ಉದ್ಯಮಿಗಳು ಅರಣ್ಯ ಪ್ರದೇಶಕ್ಕೆ ಕಾಲಿಡುತ್ತಿದ್ದು, ಅವರಿಂದ ಅರಣ್ಯ ರಕ್ಷಣೆ ಮಾಡಲಾಗುವುದು. ಸರಕಾರದಲ್ಲಿರುವ ಮೀಸಲಾತಿ ಹುದ್ದೆಗಳನ್ನು ನೇಮಕ ಮಾಡಲಾಗುವುದು ಎಂದು ಕಾಂಗ್ರೆಸ್‌ನ ಹೊಸ ಗ್ಯಾರೆಂಟಿಯಲ್ಲಿ ಉಲ್ಲೇಖಿಸಲಾಗಿದೆ.

ಮೋದಿಯ  10 ವರ್ಷಗಳ ಆಡಳಿತದಲ್ಲಿ ಕಾರ್ಮಿಕರ ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ. ಮೋದಿ ಸರಕಾರ ನರೇಗಾ ಯೋಜನೆ ಕಾರ್ಮಿಕರ ವೇತನದ ಹಣವನ್ನು ರಾಜ್ಯಗಳಿಗೆ ಈವರೆಗೂ ನೀಡಿಲ್ಲ. ಈ ವಿಚಾರವಾಗಿ ನಮ್ಮ ಸಿಎಂ ಹಾಗೂ ಸಚಿವರುಗಳು ಎಷ್ಟೇ ಮನವಿ ನೀಡಿ ಗೋಗರೆದರೂ ಮೋದಿ ಸರಕಾರ ಸಹಕಾರ ನೀಡಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ಹೇಳಿದ್ದಾರೆ.

ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ನಮ್ಮ ಸರಕಾರ ಜಾರಿಗೊಳಿಸಲಿದೆ. ನಾವು ಕೊಟ್ಟಿರುವ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ. ಅದಕ್ಕೆ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳೇ ಸಾಕ್ಷಿ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಈ ಮೊದಲು ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ನವದೆಹಲಿಯಿಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ಯಾರೆಂಟಿಯನ್ನು ಘೋಷಣೆ ಮಾಡಿದ್ದರು. ‘ನಾರಿ ನ್ಯಾಯ್ ಗ್ಯಾರಂಟಿ’ ಅಡಿಯಲ್ಲಿ-ಮಹಾಲಕ್ಷ್ಮಿ, ಆದಿ ಅಬಾದಿ-ಪುರ ಹಕ್, ಶಕ್ತಿ ಕಾ ಸಮ್ಮಾನ್, ಅಧಿಕಾರ ಮೈತ್ರಿ ಮತ್ತು ಸಾವತ್ರಿಬಾಯಿ ಫುಲೆ ಹಾಸ್ಟೆಲ್‌ ನಿರ್ಮಾಣ ಮಾಡುವುದಾಗಿ ಹೇಳಿದ್ದರು.

‘ನಾರಿ ನ್ಯಾಯ್ ಗ್ಯಾರಂಟಿ’ ಅಡಿಯಲ್ಲಿನ ಭರವಸೆಗಳು

-‘ಮಹಾಲಕ್ಷ್ಮಿ’ ಯೋಜನೆಯು ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಸಹಾಯವನ್ನು ಒಳಗೊಂಡಿರುತ್ತದೆ.

-ಆದಿ ಆಬಾದಿ-ಪುರ ಹಕ್‌ ಕೇಂದ್ರ ಸರ್ಕಾರದ ಹೊಸ ನೇಮಕಾತಿಗಳಲ್ಲಿ ಮಹಿಳೆಯರು 50 ಪ್ರತಿಶತದಷ್ಟು ಮೀಸಲಾತಿಯನ್ನು ನೀಡಲಾಗುತ್ತದೆ.

-‘ಶಕ್ತಿ ಕಾ ಸಮ್ಮಾನ್’ ಅಡಿಯಲ್ಲಿ ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನ ದ್ವಿಗುಣ

-‘ಅಧಿಕಾರ ಮೈತ್ರಿ’ ಅಡಿಯಲ್ಲಿ, ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅಗತ್ಯ ಸಹಾಯವನ್ನು ಒದಗಿಸಲು ಪ್ರತಿ ಪಂಚಾಯತ್‌ನಲ್ಲಿ ಒಬ್ಬ ಕಾನೂನು ಸಹಾಯಕರನ್ನು ಅಧಿಕಾರ ಮೈತ್ರಿ ರೂಪದಲ್ಲಿ ನೇಮಿಸುವುದು

-ಕೇಂದ್ರವು ದೇಶಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕನಿಷ್ಠ ಒಂದು  ಮಹಿಳಾ ಹಾಸ್ಟೆಲ್‌ನ್ನು ನಿರ್ಮಿಸಲಿದ್ದು ಮತ್ತು ಈ ಹಾಸ್ಟೆಲ್‌ಗಳ ಸಂಖ್ಯೆಯನ್ನು ದೇಶಾದ್ಯಂತ ದ್ವಿಗುಣಗೊಳಿಸಲಿದೆ.

ಯುವ ನ್ಯಾಯದಡಿ ಭರವಸೆಗಳು

-ಶಿಕ್ಷಣ ಪಡೆದ ಪದವಿಧರರು, ಡಿಪ್ಲೋಮಾ ಹೊಂದಿದವರಿಗೆ ಒಂದು ವರ್ಷ ತರಬೇತಿ ಕೊಟ್ಟು, ಒಂದು ಲಕ್ಷ ರೂ.ಗಳ  ಶಿಷ್ಯವೇತನ

-30 ಲಕ್ಷ ಖಾಲಿ ಹುದ್ದೆಗಳ ಭರ್ತಿ

-ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಾನೂನು

-ಗಿಗ್ ಕೆಲಸಗಾರರಿಗೆ ಸಾಮಾಜಿಕ ಭದ್ರತೆ ಖಾತರಿ

-ಸ್ಟಾರ್ಟ್​ ಅಪ್​​ ಉದ್ಯಮಿಗಳಿಗೆ ಸಹಾಯ ಮಾಡಲು  5,000 ಕೋಟಿ ರೂ. ಸ್ಟಾರ್ಟಪ್ ಕಾರ್ಪಸ್

ರೈತ ನ್ಯಾಯದಡಿ ಭರವಸೆಗಳು

-ಸ್ವಾಮಿನಾಥನ್ ಆಯೋಗದ ಸೂತ್ರದ ಅಡಿಯಲ್ಲಿ MSPಗೆ ಕಾನೂನು ಸ್ಥಾನಮಾನ.

-ರೈತರ ಸಾಲ ಮನ್ನಾ ಮಾಡಲು ಮತ್ತು ಸಾಲ ಮನ್ನಾ ಪ್ರಮಾಣವನ್ನು ನಿರ್ಧರಿಸಲು ಶಾಶ್ವತ ‘ಕೃಷಿ ಸಾಲ ಮನ್ನಾ ಆಯೋಗ’ ರಚನೆ.

-ವಿಮಾ ಯೋಜನೆಯನ್ನು ಬದಲಾಯಿಸುವ ಮೂಲಕ ಬೆಳೆ ನಷ್ಟವಾದಲ್ಲಿ 30 ದಿನಗಳೊಳಗೆ ನೇರವಾಗಿ ಬ್ಯಾಂಕ್ ಖಾತೆಗೆ ಪರಿಹಾರ ಪಾವತಿ.

-ರೈತರ ಹಿತಾಸಕ್ತಿಯನ್ನು ಮುಂದಿಟ್ಟುಕೊಂಡು ಹೊಸ ಆಮದು-ರಫ್ತು ನೀತಿ ರಚನೆ.

-ಕೃಷಿ ಉತ್ಪನ್ನಗಳಿಂದ ಜಿಎಸ್‌ಟಿಯನ್ನು ತೆಗೆದುಹಾಕುವ ಮೂಲಕ ರೈತರನ್ನು ಜಿಎಸ್‌ಟಿ ಮುಕ್ತವನ್ನಾಗಿ ಮಾಡುವುದು.

ಇದನ್ನು ಓದಿ: ಲೋಕಸಭೆ ಚುನಾವಣೆ-2024: ‘ಪ್ರಜಾಪ್ರಭುತ್ವ ಉಳಿಸಲು ಕೊನೆಯ ಅವಕಾಶ..’ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...