Homeಮುಖಪುಟಲೋಕಸಭೆ ಚುನಾವಣೆ: ಕಾಂಗ್ರೆಸ್‌ನ ಪಂಚ ಗ್ಯಾರೆಂಟಿ

ಲೋಕಸಭೆ ಚುನಾವಣೆ: ಕಾಂಗ್ರೆಸ್‌ನ ಪಂಚ ಗ್ಯಾರೆಂಟಿ

- Advertisement -
- Advertisement -

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ದೇಶದ ಜನತೆಗೆ ಪಂಚ ಗ್ಯಾರೆಂಟಿಯನ್ನು ಘೋಷಿಸಿದ್ದು, ಅದರಡಿಯಲ್ಲಿ ಒಟ್ಟು 15 ಭರವಸೆಗಳನ್ನು ನೀಡಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಈ ಗ್ಯಾರೆಂಟಿ ಸೌಲಭ್ಯಗಳು ಜನರಿಗೆ ಲಭ್ಯವಾಗಲಿದೆ ಎಂದು ಕಾಂಗ್ರೆಸ್‌ ಹೇಳುತ್ತಿದೆ. ಈ ಪಂಚ ಗ್ಯಾರೆಂಟಿಗಳು ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟದ ನಿದ್ದೆಗೆಡಿಸಿದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿನ್ನೆ ‘ಶ್ರಮಿಕ ನ್ಯಾಯ’ ‘ಹಿಸ್ಸೇದಾರಿ‘(ಭಾಗೀದಾರರ)ನ್ಯಾಯ ಗ್ಯಾರೆಂಟಿ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಈಗಾಗಲೇ ಕಿಸಾನ್ ನ್ಯಾಯ, ಯುವ ನ್ಯಾಯ ಹಾಗೂ ನಾರಿ ನ್ಯಾಯ ಗ್ಯಾರಂಟಿಗಳನ್ನು ಘೋಷಿಸಿದೆ. ಈ ಮೂರು ಗ್ಯಾರೆಂಟಿಗಳು ತಲಾ 5 ಅಂಶಗಳಂತೆ 15 ಗ್ಯಾರೆಂಟಿಗಳನ್ನು ಹೊಂದಿದೆ. ಈಗ ನಾಲ್ಕು ಮತ್ತು ಐದನೇ ಗ್ಯಾರಂಟಿಗಳಾಗಿ ಶ್ರಮಿಕ ನ್ಯಾಯ ಹಾಗೂ ಹಿಸ್ಸೇದಾರಿ ನ್ಯಾಯ ಗ್ಯಾರಂಟಿ ಘೋಷಣೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಶ್ರಮಿಕ ನ್ಯಾಯದಡಿಯಲ್ಲಿನ 5 ಭರವಸೆಗಳು

-ನರೇಗಾ ಯೋಜನೆ ಅಡಿಯಲ್ಲಿ ದಿನಗೂಲಿ ಮೊತ್ತ 400ಕ್ಕೆ ಏರಿಕೆ

-ಕಾರ್ಮಿಕರಿಗೆ ಆರೋಗ್ಯ ಹಕ್ಕು ಜಾರಿಗೆ ತಂದು ಉಚಿತ ಔಷಧಿ, ಚಿಕಿತ್ಸೆ, ರೋಗಪತ್ತೆ, ಶಸ್ತ್ರಚಿಕಿತ್ಸೆ ಸೌಲಭ್ಯ

-ನಗರ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದು, ಸಾರ್ವಜನಿಕ ಮೂಲಸೌಕರ್ಯ ನಿರ್ಮಾಣ ಹಾಗೂ ನಗರಗಳಲ್ಲಿ ಹವಾಮಾನ ವೈಪರೀತ್ಯ ನಿಯಂತ್ರಣ, ಸಾಮಾಜಿಕ ಸೇವೆಗಳ ಅಂತರ ಕಡಿಮೆ ಮಾಡುವುದು.

-ಅಸಂಘಟಿತ ವಲಯದ ಕಾರ್ಮಿಕರಿಗೆ ಜೀವ ವಿಮೆ, ಅಪಘಾತ ವಿಮೆ ಸೇರಿದಂತೆ ಸಾಮಾಜಿಕ ಭದ್ರತೆ

– ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆದು ಕಾರ್ಮಿಕರ ಹಕ್ಕುಗಳ ಮರುಸ್ಥಾಪನೆ

ಹಿಸ್ಸೇದಾರಿ ನ್ಯಾಯದಡಿಯಲ್ಲಿನ 5 ಭರವಸೆಗಳು

-ರಾಷ್ಟ್ರ ಮಟ್ಟದಲ್ಲಿ ಜಾತಿ ಗಣತಿ ನಡೆಸಿ ದೇಶದ ಸಂಪತ್ತಿನ ಸಮಾನ ಹಂಚಿಕೆ ಮಾಡುವುದು, ಆಡಳಿತದಲ್ಲಿ ಎಲ್ಲ ವರ್ಗದವರ ಪ್ರಾತಿನಿಧ್ಯಕ್ಕೆ ಅವಕಾಶ ನೀಡುವುದು

-ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಳಕ್ಕೆ ಅಡ್ಡಿಯಾಗಿರುವ ಶೇ‌ 50 ಮಿಸಲಾತಿ ಮಿತಿಯನ್ನು ತಿದ್ದುಪಡಿ ಮೂಲಕ ಏರಿಕೆ

-ಆದಿವಾಸಿಗಳಿಗೆ ಅರಣ್ಯ ಹಕ್ಕು ರಕ್ಷಣೆ, ಬಾಕಿ ಇರುವ ಅರಣ್ಯ ಹಕ್ಕು ಕಾಯ್ದೆಯ ಬೇಡಿಕೆ ಒಂದು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು.

-ಅರಣ್ಯದ ಕಿರು ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ವಿಸ್ತರಣೆ. ಅರಣ್ಯ ಸಂರಕ್ಷಣೆ ಕಾಯ್ದೆ ಹೆಸರಿನಲ್ಲಿ ಮಾಡಲಾಗಿರುವ ಬುಡಕಟ್ಟು ವಿರೋಧಿ ತಿದ್ದುಪಡಿಗಳ ರದ್ಧತಿ

-ಆದಿವಾಸಿಗಳಿಗೆ ಸ್ವಯಂ ಆಡಳಿತ ಹಾಗೂ ಸಂಸ್ಕೃತಿ ರಕ್ಷಣೆ ಹಕ್ಕು, ಮಧ್ಯಪ್ರದೇಶ ಛತ್ತೀಸ್ ಗಡ, ಪಶ್ಚಿಮ ಬಂಗಾಳ, ಒಡಿಶಾ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡದ ಜನ ಅರಣ್ಯ ಪ್ರದೇಶಗಳಿಂದ ವಲಸೆ ಹೋಗುತ್ತಿದ್ದು, ಇವರಿಗಾಗಿ ಜಲ, ಅರಣ್ಯ ಹಾಗೂ ಭೂಮಿಯನ್ನು ನಾವು ರಕ್ಷಣೆ ಮಾಡುತ್ತೇವೆ. ದೊಡ್ಡ ಉದ್ಯಮಿಗಳು ಅರಣ್ಯ ಪ್ರದೇಶಕ್ಕೆ ಕಾಲಿಡುತ್ತಿದ್ದು, ಅವರಿಂದ ಅರಣ್ಯ ರಕ್ಷಣೆ ಮಾಡಲಾಗುವುದು. ಸರಕಾರದಲ್ಲಿರುವ ಮೀಸಲಾತಿ ಹುದ್ದೆಗಳನ್ನು ನೇಮಕ ಮಾಡಲಾಗುವುದು ಎಂದು ಕಾಂಗ್ರೆಸ್‌ನ ಹೊಸ ಗ್ಯಾರೆಂಟಿಯಲ್ಲಿ ಉಲ್ಲೇಖಿಸಲಾಗಿದೆ.

ಮೋದಿಯ  10 ವರ್ಷಗಳ ಆಡಳಿತದಲ್ಲಿ ಕಾರ್ಮಿಕರ ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ. ಮೋದಿ ಸರಕಾರ ನರೇಗಾ ಯೋಜನೆ ಕಾರ್ಮಿಕರ ವೇತನದ ಹಣವನ್ನು ರಾಜ್ಯಗಳಿಗೆ ಈವರೆಗೂ ನೀಡಿಲ್ಲ. ಈ ವಿಚಾರವಾಗಿ ನಮ್ಮ ಸಿಎಂ ಹಾಗೂ ಸಚಿವರುಗಳು ಎಷ್ಟೇ ಮನವಿ ನೀಡಿ ಗೋಗರೆದರೂ ಮೋದಿ ಸರಕಾರ ಸಹಕಾರ ನೀಡಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ಹೇಳಿದ್ದಾರೆ.

ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ನಮ್ಮ ಸರಕಾರ ಜಾರಿಗೊಳಿಸಲಿದೆ. ನಾವು ಕೊಟ್ಟಿರುವ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ. ಅದಕ್ಕೆ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳೇ ಸಾಕ್ಷಿ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಈ ಮೊದಲು ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ನವದೆಹಲಿಯಿಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ಯಾರೆಂಟಿಯನ್ನು ಘೋಷಣೆ ಮಾಡಿದ್ದರು. ‘ನಾರಿ ನ್ಯಾಯ್ ಗ್ಯಾರಂಟಿ’ ಅಡಿಯಲ್ಲಿ-ಮಹಾಲಕ್ಷ್ಮಿ, ಆದಿ ಅಬಾದಿ-ಪುರ ಹಕ್, ಶಕ್ತಿ ಕಾ ಸಮ್ಮಾನ್, ಅಧಿಕಾರ ಮೈತ್ರಿ ಮತ್ತು ಸಾವತ್ರಿಬಾಯಿ ಫುಲೆ ಹಾಸ್ಟೆಲ್‌ ನಿರ್ಮಾಣ ಮಾಡುವುದಾಗಿ ಹೇಳಿದ್ದರು.

‘ನಾರಿ ನ್ಯಾಯ್ ಗ್ಯಾರಂಟಿ’ ಅಡಿಯಲ್ಲಿನ ಭರವಸೆಗಳು

-‘ಮಹಾಲಕ್ಷ್ಮಿ’ ಯೋಜನೆಯು ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಸಹಾಯವನ್ನು ಒಳಗೊಂಡಿರುತ್ತದೆ.

-ಆದಿ ಆಬಾದಿ-ಪುರ ಹಕ್‌ ಕೇಂದ್ರ ಸರ್ಕಾರದ ಹೊಸ ನೇಮಕಾತಿಗಳಲ್ಲಿ ಮಹಿಳೆಯರು 50 ಪ್ರತಿಶತದಷ್ಟು ಮೀಸಲಾತಿಯನ್ನು ನೀಡಲಾಗುತ್ತದೆ.

-‘ಶಕ್ತಿ ಕಾ ಸಮ್ಮಾನ್’ ಅಡಿಯಲ್ಲಿ ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನ ದ್ವಿಗುಣ

-‘ಅಧಿಕಾರ ಮೈತ್ರಿ’ ಅಡಿಯಲ್ಲಿ, ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅಗತ್ಯ ಸಹಾಯವನ್ನು ಒದಗಿಸಲು ಪ್ರತಿ ಪಂಚಾಯತ್‌ನಲ್ಲಿ ಒಬ್ಬ ಕಾನೂನು ಸಹಾಯಕರನ್ನು ಅಧಿಕಾರ ಮೈತ್ರಿ ರೂಪದಲ್ಲಿ ನೇಮಿಸುವುದು

-ಕೇಂದ್ರವು ದೇಶಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕನಿಷ್ಠ ಒಂದು  ಮಹಿಳಾ ಹಾಸ್ಟೆಲ್‌ನ್ನು ನಿರ್ಮಿಸಲಿದ್ದು ಮತ್ತು ಈ ಹಾಸ್ಟೆಲ್‌ಗಳ ಸಂಖ್ಯೆಯನ್ನು ದೇಶಾದ್ಯಂತ ದ್ವಿಗುಣಗೊಳಿಸಲಿದೆ.

ಯುವ ನ್ಯಾಯದಡಿ ಭರವಸೆಗಳು

-ಶಿಕ್ಷಣ ಪಡೆದ ಪದವಿಧರರು, ಡಿಪ್ಲೋಮಾ ಹೊಂದಿದವರಿಗೆ ಒಂದು ವರ್ಷ ತರಬೇತಿ ಕೊಟ್ಟು, ಒಂದು ಲಕ್ಷ ರೂ.ಗಳ  ಶಿಷ್ಯವೇತನ

-30 ಲಕ್ಷ ಖಾಲಿ ಹುದ್ದೆಗಳ ಭರ್ತಿ

-ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಾನೂನು

-ಗಿಗ್ ಕೆಲಸಗಾರರಿಗೆ ಸಾಮಾಜಿಕ ಭದ್ರತೆ ಖಾತರಿ

-ಸ್ಟಾರ್ಟ್​ ಅಪ್​​ ಉದ್ಯಮಿಗಳಿಗೆ ಸಹಾಯ ಮಾಡಲು  5,000 ಕೋಟಿ ರೂ. ಸ್ಟಾರ್ಟಪ್ ಕಾರ್ಪಸ್

ರೈತ ನ್ಯಾಯದಡಿ ಭರವಸೆಗಳು

-ಸ್ವಾಮಿನಾಥನ್ ಆಯೋಗದ ಸೂತ್ರದ ಅಡಿಯಲ್ಲಿ MSPಗೆ ಕಾನೂನು ಸ್ಥಾನಮಾನ.

-ರೈತರ ಸಾಲ ಮನ್ನಾ ಮಾಡಲು ಮತ್ತು ಸಾಲ ಮನ್ನಾ ಪ್ರಮಾಣವನ್ನು ನಿರ್ಧರಿಸಲು ಶಾಶ್ವತ ‘ಕೃಷಿ ಸಾಲ ಮನ್ನಾ ಆಯೋಗ’ ರಚನೆ.

-ವಿಮಾ ಯೋಜನೆಯನ್ನು ಬದಲಾಯಿಸುವ ಮೂಲಕ ಬೆಳೆ ನಷ್ಟವಾದಲ್ಲಿ 30 ದಿನಗಳೊಳಗೆ ನೇರವಾಗಿ ಬ್ಯಾಂಕ್ ಖಾತೆಗೆ ಪರಿಹಾರ ಪಾವತಿ.

-ರೈತರ ಹಿತಾಸಕ್ತಿಯನ್ನು ಮುಂದಿಟ್ಟುಕೊಂಡು ಹೊಸ ಆಮದು-ರಫ್ತು ನೀತಿ ರಚನೆ.

-ಕೃಷಿ ಉತ್ಪನ್ನಗಳಿಂದ ಜಿಎಸ್‌ಟಿಯನ್ನು ತೆಗೆದುಹಾಕುವ ಮೂಲಕ ರೈತರನ್ನು ಜಿಎಸ್‌ಟಿ ಮುಕ್ತವನ್ನಾಗಿ ಮಾಡುವುದು.

ಇದನ್ನು ಓದಿ: ಲೋಕಸಭೆ ಚುನಾವಣೆ-2024: ‘ಪ್ರಜಾಪ್ರಭುತ್ವ ಉಳಿಸಲು ಕೊನೆಯ ಅವಕಾಶ..’ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...