Homeಮುಖಪುಟಲೋಕಸಭೆ ಚುನಾವಣೆ: ಕಾಂಗ್ರೆಸ್‌ನ ಪಂಚ ಗ್ಯಾರೆಂಟಿ

ಲೋಕಸಭೆ ಚುನಾವಣೆ: ಕಾಂಗ್ರೆಸ್‌ನ ಪಂಚ ಗ್ಯಾರೆಂಟಿ

- Advertisement -
- Advertisement -

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ದೇಶದ ಜನತೆಗೆ ಪಂಚ ಗ್ಯಾರೆಂಟಿಯನ್ನು ಘೋಷಿಸಿದ್ದು, ಅದರಡಿಯಲ್ಲಿ ಒಟ್ಟು 15 ಭರವಸೆಗಳನ್ನು ನೀಡಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಈ ಗ್ಯಾರೆಂಟಿ ಸೌಲಭ್ಯಗಳು ಜನರಿಗೆ ಲಭ್ಯವಾಗಲಿದೆ ಎಂದು ಕಾಂಗ್ರೆಸ್‌ ಹೇಳುತ್ತಿದೆ. ಈ ಪಂಚ ಗ್ಯಾರೆಂಟಿಗಳು ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟದ ನಿದ್ದೆಗೆಡಿಸಿದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿನ್ನೆ ‘ಶ್ರಮಿಕ ನ್ಯಾಯ’ ‘ಹಿಸ್ಸೇದಾರಿ‘(ಭಾಗೀದಾರರ)ನ್ಯಾಯ ಗ್ಯಾರೆಂಟಿ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಈಗಾಗಲೇ ಕಿಸಾನ್ ನ್ಯಾಯ, ಯುವ ನ್ಯಾಯ ಹಾಗೂ ನಾರಿ ನ್ಯಾಯ ಗ್ಯಾರಂಟಿಗಳನ್ನು ಘೋಷಿಸಿದೆ. ಈ ಮೂರು ಗ್ಯಾರೆಂಟಿಗಳು ತಲಾ 5 ಅಂಶಗಳಂತೆ 15 ಗ್ಯಾರೆಂಟಿಗಳನ್ನು ಹೊಂದಿದೆ. ಈಗ ನಾಲ್ಕು ಮತ್ತು ಐದನೇ ಗ್ಯಾರಂಟಿಗಳಾಗಿ ಶ್ರಮಿಕ ನ್ಯಾಯ ಹಾಗೂ ಹಿಸ್ಸೇದಾರಿ ನ್ಯಾಯ ಗ್ಯಾರಂಟಿ ಘೋಷಣೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಶ್ರಮಿಕ ನ್ಯಾಯದಡಿಯಲ್ಲಿನ 5 ಭರವಸೆಗಳು

-ನರೇಗಾ ಯೋಜನೆ ಅಡಿಯಲ್ಲಿ ದಿನಗೂಲಿ ಮೊತ್ತ 400ಕ್ಕೆ ಏರಿಕೆ

-ಕಾರ್ಮಿಕರಿಗೆ ಆರೋಗ್ಯ ಹಕ್ಕು ಜಾರಿಗೆ ತಂದು ಉಚಿತ ಔಷಧಿ, ಚಿಕಿತ್ಸೆ, ರೋಗಪತ್ತೆ, ಶಸ್ತ್ರಚಿಕಿತ್ಸೆ ಸೌಲಭ್ಯ

-ನಗರ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದು, ಸಾರ್ವಜನಿಕ ಮೂಲಸೌಕರ್ಯ ನಿರ್ಮಾಣ ಹಾಗೂ ನಗರಗಳಲ್ಲಿ ಹವಾಮಾನ ವೈಪರೀತ್ಯ ನಿಯಂತ್ರಣ, ಸಾಮಾಜಿಕ ಸೇವೆಗಳ ಅಂತರ ಕಡಿಮೆ ಮಾಡುವುದು.

-ಅಸಂಘಟಿತ ವಲಯದ ಕಾರ್ಮಿಕರಿಗೆ ಜೀವ ವಿಮೆ, ಅಪಘಾತ ವಿಮೆ ಸೇರಿದಂತೆ ಸಾಮಾಜಿಕ ಭದ್ರತೆ

– ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆದು ಕಾರ್ಮಿಕರ ಹಕ್ಕುಗಳ ಮರುಸ್ಥಾಪನೆ

ಹಿಸ್ಸೇದಾರಿ ನ್ಯಾಯದಡಿಯಲ್ಲಿನ 5 ಭರವಸೆಗಳು

-ರಾಷ್ಟ್ರ ಮಟ್ಟದಲ್ಲಿ ಜಾತಿ ಗಣತಿ ನಡೆಸಿ ದೇಶದ ಸಂಪತ್ತಿನ ಸಮಾನ ಹಂಚಿಕೆ ಮಾಡುವುದು, ಆಡಳಿತದಲ್ಲಿ ಎಲ್ಲ ವರ್ಗದವರ ಪ್ರಾತಿನಿಧ್ಯಕ್ಕೆ ಅವಕಾಶ ನೀಡುವುದು

-ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಳಕ್ಕೆ ಅಡ್ಡಿಯಾಗಿರುವ ಶೇ‌ 50 ಮಿಸಲಾತಿ ಮಿತಿಯನ್ನು ತಿದ್ದುಪಡಿ ಮೂಲಕ ಏರಿಕೆ

-ಆದಿವಾಸಿಗಳಿಗೆ ಅರಣ್ಯ ಹಕ್ಕು ರಕ್ಷಣೆ, ಬಾಕಿ ಇರುವ ಅರಣ್ಯ ಹಕ್ಕು ಕಾಯ್ದೆಯ ಬೇಡಿಕೆ ಒಂದು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು.

-ಅರಣ್ಯದ ಕಿರು ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ವಿಸ್ತರಣೆ. ಅರಣ್ಯ ಸಂರಕ್ಷಣೆ ಕಾಯ್ದೆ ಹೆಸರಿನಲ್ಲಿ ಮಾಡಲಾಗಿರುವ ಬುಡಕಟ್ಟು ವಿರೋಧಿ ತಿದ್ದುಪಡಿಗಳ ರದ್ಧತಿ

-ಆದಿವಾಸಿಗಳಿಗೆ ಸ್ವಯಂ ಆಡಳಿತ ಹಾಗೂ ಸಂಸ್ಕೃತಿ ರಕ್ಷಣೆ ಹಕ್ಕು, ಮಧ್ಯಪ್ರದೇಶ ಛತ್ತೀಸ್ ಗಡ, ಪಶ್ಚಿಮ ಬಂಗಾಳ, ಒಡಿಶಾ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡದ ಜನ ಅರಣ್ಯ ಪ್ರದೇಶಗಳಿಂದ ವಲಸೆ ಹೋಗುತ್ತಿದ್ದು, ಇವರಿಗಾಗಿ ಜಲ, ಅರಣ್ಯ ಹಾಗೂ ಭೂಮಿಯನ್ನು ನಾವು ರಕ್ಷಣೆ ಮಾಡುತ್ತೇವೆ. ದೊಡ್ಡ ಉದ್ಯಮಿಗಳು ಅರಣ್ಯ ಪ್ರದೇಶಕ್ಕೆ ಕಾಲಿಡುತ್ತಿದ್ದು, ಅವರಿಂದ ಅರಣ್ಯ ರಕ್ಷಣೆ ಮಾಡಲಾಗುವುದು. ಸರಕಾರದಲ್ಲಿರುವ ಮೀಸಲಾತಿ ಹುದ್ದೆಗಳನ್ನು ನೇಮಕ ಮಾಡಲಾಗುವುದು ಎಂದು ಕಾಂಗ್ರೆಸ್‌ನ ಹೊಸ ಗ್ಯಾರೆಂಟಿಯಲ್ಲಿ ಉಲ್ಲೇಖಿಸಲಾಗಿದೆ.

ಮೋದಿಯ  10 ವರ್ಷಗಳ ಆಡಳಿತದಲ್ಲಿ ಕಾರ್ಮಿಕರ ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ. ಮೋದಿ ಸರಕಾರ ನರೇಗಾ ಯೋಜನೆ ಕಾರ್ಮಿಕರ ವೇತನದ ಹಣವನ್ನು ರಾಜ್ಯಗಳಿಗೆ ಈವರೆಗೂ ನೀಡಿಲ್ಲ. ಈ ವಿಚಾರವಾಗಿ ನಮ್ಮ ಸಿಎಂ ಹಾಗೂ ಸಚಿವರುಗಳು ಎಷ್ಟೇ ಮನವಿ ನೀಡಿ ಗೋಗರೆದರೂ ಮೋದಿ ಸರಕಾರ ಸಹಕಾರ ನೀಡಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಇದೇ ವೇಳೆ ಹೇಳಿದ್ದಾರೆ.

ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ನಮ್ಮ ಸರಕಾರ ಜಾರಿಗೊಳಿಸಲಿದೆ. ನಾವು ಕೊಟ್ಟಿರುವ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ. ಅದಕ್ಕೆ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳೇ ಸಾಕ್ಷಿ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಈ ಮೊದಲು ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ನವದೆಹಲಿಯಿಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ಯಾರೆಂಟಿಯನ್ನು ಘೋಷಣೆ ಮಾಡಿದ್ದರು. ‘ನಾರಿ ನ್ಯಾಯ್ ಗ್ಯಾರಂಟಿ’ ಅಡಿಯಲ್ಲಿ-ಮಹಾಲಕ್ಷ್ಮಿ, ಆದಿ ಅಬಾದಿ-ಪುರ ಹಕ್, ಶಕ್ತಿ ಕಾ ಸಮ್ಮಾನ್, ಅಧಿಕಾರ ಮೈತ್ರಿ ಮತ್ತು ಸಾವತ್ರಿಬಾಯಿ ಫುಲೆ ಹಾಸ್ಟೆಲ್‌ ನಿರ್ಮಾಣ ಮಾಡುವುದಾಗಿ ಹೇಳಿದ್ದರು.

‘ನಾರಿ ನ್ಯಾಯ್ ಗ್ಯಾರಂಟಿ’ ಅಡಿಯಲ್ಲಿನ ಭರವಸೆಗಳು

-‘ಮಹಾಲಕ್ಷ್ಮಿ’ ಯೋಜನೆಯು ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಸಹಾಯವನ್ನು ಒಳಗೊಂಡಿರುತ್ತದೆ.

-ಆದಿ ಆಬಾದಿ-ಪುರ ಹಕ್‌ ಕೇಂದ್ರ ಸರ್ಕಾರದ ಹೊಸ ನೇಮಕಾತಿಗಳಲ್ಲಿ ಮಹಿಳೆಯರು 50 ಪ್ರತಿಶತದಷ್ಟು ಮೀಸಲಾತಿಯನ್ನು ನೀಡಲಾಗುತ್ತದೆ.

-‘ಶಕ್ತಿ ಕಾ ಸಮ್ಮಾನ್’ ಅಡಿಯಲ್ಲಿ ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನ ದ್ವಿಗುಣ

-‘ಅಧಿಕಾರ ಮೈತ್ರಿ’ ಅಡಿಯಲ್ಲಿ, ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅಗತ್ಯ ಸಹಾಯವನ್ನು ಒದಗಿಸಲು ಪ್ರತಿ ಪಂಚಾಯತ್‌ನಲ್ಲಿ ಒಬ್ಬ ಕಾನೂನು ಸಹಾಯಕರನ್ನು ಅಧಿಕಾರ ಮೈತ್ರಿ ರೂಪದಲ್ಲಿ ನೇಮಿಸುವುದು

-ಕೇಂದ್ರವು ದೇಶಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕನಿಷ್ಠ ಒಂದು  ಮಹಿಳಾ ಹಾಸ್ಟೆಲ್‌ನ್ನು ನಿರ್ಮಿಸಲಿದ್ದು ಮತ್ತು ಈ ಹಾಸ್ಟೆಲ್‌ಗಳ ಸಂಖ್ಯೆಯನ್ನು ದೇಶಾದ್ಯಂತ ದ್ವಿಗುಣಗೊಳಿಸಲಿದೆ.

ಯುವ ನ್ಯಾಯದಡಿ ಭರವಸೆಗಳು

-ಶಿಕ್ಷಣ ಪಡೆದ ಪದವಿಧರರು, ಡಿಪ್ಲೋಮಾ ಹೊಂದಿದವರಿಗೆ ಒಂದು ವರ್ಷ ತರಬೇತಿ ಕೊಟ್ಟು, ಒಂದು ಲಕ್ಷ ರೂ.ಗಳ  ಶಿಷ್ಯವೇತನ

-30 ಲಕ್ಷ ಖಾಲಿ ಹುದ್ದೆಗಳ ಭರ್ತಿ

-ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಾನೂನು

-ಗಿಗ್ ಕೆಲಸಗಾರರಿಗೆ ಸಾಮಾಜಿಕ ಭದ್ರತೆ ಖಾತರಿ

-ಸ್ಟಾರ್ಟ್​ ಅಪ್​​ ಉದ್ಯಮಿಗಳಿಗೆ ಸಹಾಯ ಮಾಡಲು  5,000 ಕೋಟಿ ರೂ. ಸ್ಟಾರ್ಟಪ್ ಕಾರ್ಪಸ್

ರೈತ ನ್ಯಾಯದಡಿ ಭರವಸೆಗಳು

-ಸ್ವಾಮಿನಾಥನ್ ಆಯೋಗದ ಸೂತ್ರದ ಅಡಿಯಲ್ಲಿ MSPಗೆ ಕಾನೂನು ಸ್ಥಾನಮಾನ.

-ರೈತರ ಸಾಲ ಮನ್ನಾ ಮಾಡಲು ಮತ್ತು ಸಾಲ ಮನ್ನಾ ಪ್ರಮಾಣವನ್ನು ನಿರ್ಧರಿಸಲು ಶಾಶ್ವತ ‘ಕೃಷಿ ಸಾಲ ಮನ್ನಾ ಆಯೋಗ’ ರಚನೆ.

-ವಿಮಾ ಯೋಜನೆಯನ್ನು ಬದಲಾಯಿಸುವ ಮೂಲಕ ಬೆಳೆ ನಷ್ಟವಾದಲ್ಲಿ 30 ದಿನಗಳೊಳಗೆ ನೇರವಾಗಿ ಬ್ಯಾಂಕ್ ಖಾತೆಗೆ ಪರಿಹಾರ ಪಾವತಿ.

-ರೈತರ ಹಿತಾಸಕ್ತಿಯನ್ನು ಮುಂದಿಟ್ಟುಕೊಂಡು ಹೊಸ ಆಮದು-ರಫ್ತು ನೀತಿ ರಚನೆ.

-ಕೃಷಿ ಉತ್ಪನ್ನಗಳಿಂದ ಜಿಎಸ್‌ಟಿಯನ್ನು ತೆಗೆದುಹಾಕುವ ಮೂಲಕ ರೈತರನ್ನು ಜಿಎಸ್‌ಟಿ ಮುಕ್ತವನ್ನಾಗಿ ಮಾಡುವುದು.

ಇದನ್ನು ಓದಿ: ಲೋಕಸಭೆ ಚುನಾವಣೆ-2024: ‘ಪ್ರಜಾಪ್ರಭುತ್ವ ಉಳಿಸಲು ಕೊನೆಯ ಅವಕಾಶ..’ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...