Homeಮುಖಪುಟಲೋಕಸಭೆ ಚುನಾವಣೆ: ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಕ್ಕಿದೆ? ಶೇಕಡಾವಾರು ಮತಗಳೆಷ್ಟು? ಇಲ್ಲಿದೆ ಮಾಹಿತಿ

ಲೋಕಸಭೆ ಚುನಾವಣೆ: ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಕ್ಕಿದೆ? ಶೇಕಡಾವಾರು ಮತಗಳೆಷ್ಟು? ಇಲ್ಲಿದೆ ಮಾಹಿತಿ

- Advertisement -
- Advertisement -

ಲೋಕಸಭೆಯ 543 ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ 240 ಸ್ಥಾನಗಳನ್ನು ಪಡೆದುಕೊಂಡು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆ ಬಳಿಕ 99 ಕ್ಷೇತ್ರಗಳಲ್ಲಿ ಗೆಲುವಿನೊಂದಿಗೆ ಕಾಂಗ್ರೆಸ್‌ ಎರಡನೇ ಅತಿದೊಡ್ಡ ಪಕ್ಷವಾಗಿದೆ. ಈ ಬಾರಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಆದರೆ ಎನ್‌ಡಿಎ ಮೈತ್ರಿಕೂಟವು ಬಹುಮತವನ್ನು ಪಡೆದುಕೊಂಡಿದೆ.

2019ರಲ್ಲಿ ಬಿಜೆಪಿ 303 ಮತ್ತು 2014ರಲ್ಲಿ 282 ಸ್ಥಾನಗಳಲ್ಲಿ ಗೆಲುವು ಗಳಿಸಿದ್ದ ಬಿಜೆಪಿಗೆ 2024 ದೊಡ್ಡ ಹೊಡೆತವನ್ನು ನೀಡಿದೆ. 2019ರಲ್ಲಿ 52 ಸ್ಥಾನಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 99 ಸ್ಥಾನಗಳನ್ನು ಗೆದ್ದು ಉತ್ತಮ ಸಾಧನೆ ಮಾಡಿದೆ. ‘ಇಂಡಿಯಾ’ ಮೈತ್ರಿಕೂಟದ ಪೈಕಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 37 ಸ್ಥಾನಗಳಲ್ಲಿ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ 29 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ಲೋಕಸಭೆ ಚುನಾವಣೆ 2024: ಪಕ್ಷಾವಾರು ಗಳಿಸಿದ ಸ್ಥಾನಗಳು

ಬಿಜೆಪಿ-240 ಸ್ಥಾನಗಳು, ಕಾಂಗ್ರೆಸ್- 99 ಸ್ಥಾನಗಳು, ಸಮಾಜವಾದಿ ಪಕ್ಷ (ಎಸ್‌ಪಿ)- 37 ಸ್ಥಾನಗಳು,  ಟಿಎಂಸಿ: 29 ಸ್ಥಾನಗಳು, ಡಿಎಂಕೆ: 22 ಸ್ಥಾನಗಳು, ತೆಲುಗು ದೇಶಂ: 16 ಸ್ಥಾನಗಳು, ಜೆಡಿಯು: 12 ಸ್ಥಾನಗಳು, ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ): 9 ಸ್ಥಾನಗಳು, ಎನ್‌ಸಿಪಿ (ಶರದ್ ಪವಾರ್): 8 ಸ್ಥಾನಗಳು, ಶಿವಸೇನಾ (ಎಸ್‌ಎಚ್‌ಎಸ್): 7 ಸ್ಥಾನಗಳು, ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್): 5 ಸ್ಥಾನಗಳು, ವೈಎಸ್‌ಆರ್‌ಸಿಪಿ: 4 ಸ್ಥಾನಗಳು, ಆರ್‌ಜೆಡಿ: 4 ಸ್ಥಾನಗಳು, ಸಿಪಿಐ(ಎಂ): 4 ಸ್ಥಾನಗಳು, ಐಯುಎಂಎಲ್: 3 ಸ್ಥಾನಗಳು, ಎಎಪಿ: 3 ಸ್ಥಾನಗಳು, ಜೆಎಂಎಂ: 3 ಸ್ಥಾನಗಳು, ಜನಸೇನಾ ಪಕ್ಷ-2 ಸ್ಥಾನಗಳು, ಸಿಪಿಐ(ಎಂಎಲ್)(ಎಲ್) -2 ಸ್ಥಾನಗಳು, ಜೆಡಿಎಸ್‌-2ಸ್ಥಾನಗಳು, ವಿಸಿಕೆ-2ಸ್ಥಾನಗಳು, ಸಿಪಿಐ-2 ಸ್ಥಾನಗಳು, ಆರ್‌ಎಲ್‌ಡಿ-2 ಸ್ಥಾನಗಳು, ಜಮ್ಮು-ಕಾಶ್ಮೀರ ನ್ಯಾಷನಲ್‌ ಕಾನ್ಪರೆನ್ಸ್‌-2 ಸ್ಥಾನಗಳನ್ನು ಪಡೆದುಕೊಂಡಿದೆ.

Dravida Munnetra Kazhagam – DMK 22 0 22
Telugu Desam – TDP 16 0 16
Janata Dal (United) – JD(U) 12 0 12
Shiv Sena (Uddhav Balasaheb Thackrey) – SHSUBT 9 0 9
Nationalist Congress Party – Sharadchandra Pawar – NCPSP 8 0 8
Shiv Sena – SHS 7 0 7
Lok Janshakti Party(Ram Vilas) – LJPRV 5 0 5
Yuvajana Sramika Rythu Congress Party – YSRCP 4 0 4
Rashtriya Janata Dal – RJD 4 0 4
Communist Party of India (Marxist) – CPI(M) 4 0 4
Indian Union Muslim League – IUML 3 0 3
Aam Aadmi Party – AAAP 3 0 3
Jharkhand Mukti Morcha – JMM 3 0 3
Janasena Party – JnP 2 0 2
Communist Party of India (Marxist-Leninist) (Liberation) – CPI(ML)(L) 2 0 2
Janata Dal (Secular) – JD(S) 2 0 2
Viduthalai Chiruthaigal Katchi – VCK 2 0 2
Communist Party of India – CPI 2 0 2
Rashtriya Lok Dal – RLD 2 0 2
Jammu & Kashmir National Conference – JKN 2 0 2
United People’s Party, Liberal – UPPL 1 0 1
Asom Gana Parishad – AGP 1 0 1
Hindustani Awam Morcha (Secular) – HAMS 1 0 1
Kerala Congress – KEC 1 0 1
Revolutionary Socialist Party – RSP 1 0 1
Nationalist Congress Party – NCP 1 0 1
Voice of the People Party – VOTPP 1 0 1
Zoram People’s Movement – ZPM 1 0 1
Shiromani Akali Dal – SAD 1 0 1
Rashtriya Loktantrik Party – RLTP 1 0 1
Bharat Adivasi Party – BHRTADVSIP 1 0 1
Sikkim Krantikari Morcha – SKM 1 0 1
Marumalarchi Dravida Munnetra Kazhagam – MDMK 1 0 1
Aazad Samaj Party (Kanshi Ram) – ASPKR 1 0 1
Apna Dal (Soneylal) – ADAL 1 0 1
AJSU Party – AJSUP 1 0 1
All India Majlis-E-Ittehadul Muslimeen – AIMIM 1 0 1
Independent – IND 7 0 7
ಪಕ್ಷಗಳ ಮತ ಹಂಚಿಕೆ ಪ್ರಮಾಣ
ಲೋಕಸಭೆ ಚುನಾವಣೆ ಫಲಿತಾಂಶಗಳಲ್ಲಿ ಒಟ್ಟಾರೆ ಮತ ಹಂಚಿಕೆಯನ್ನು ನೋಡಿದಾಗ ಬಿಜೆಪಿ ಅತಿ ಹೆಚ್ಚು ಎಂದರೆ 36.56% ಮತವನ್ನು ಪಡೆದುಕೊಂಡಿದೆ. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್‌ ಇದ್ದು 21.19% ಮತವನ್ನು ಪಡೆದುಕೊಂಡಿದೆ. ಸಮಾಜವಾದಿ ಪಕ್ಷ 4.58% ಮತವನ್ನು ಮತ್ತು ತೃಣಮೂಲ ಕಾಂಗ್ರೆಸ್‌ 4.37% ಮತವನ್ನು ಪಡೆದುಕೊಂಡಿದೆ.
ಚುನಾವಣಾ ಆಯೋಗ ಪ್ರಕಟಿಸಿದ ಮತ ಹಂಚಿಕೆ ಚಾರ್ಟ್‌ ಈ ಕೆಳಗಿನಂತಿದೆ..
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...