Homeಮುಖಪುಟಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟ: ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ಮತದಾನ, ಜೂ.4ರಂದು ಫಲಿತಾಂಶ ಪ್ರಕಟ

ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟ: ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ಮತದಾನ, ಜೂ.4ರಂದು ಫಲಿತಾಂಶ ಪ್ರಕಟ

- Advertisement -
- Advertisement -

ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ, 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್‌ 4ರಂದು ಒಟ್ಟಾಗಿ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದಲ್ಲಿ  ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತ್ತು ಇನ್ನುಳಿದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ.

ಗುಜರಾತ್‌, ಹರಿಯಾಣ,, ಝಾರ್ಖಾಂಡ್, ಮಹರಾಷ್ಟ್ರ, ಕರ್ನಾಟಕ, ತಮಿಳುನಾಡು, ಪ.ಬಂಗಾಳ ರಾಜ್ಯಗಳ 26 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಸಿಕ್ಕಿಂ, ಒಡಿಸ್ಸಾ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ ನಾಲ್ಕು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ವೇಳೆ ಚುನಾವಣೆ ನಡೆಯಲಿದೆ.

ಲೋಕಸಭೆ ಚುನಾವಣೆ: 543 ಕ್ಷೇತ್ರಗಳ ಚುನಾವಣೆ, 84 ಎಸ್ಸಿ ಮೀಸಲಾತಿ ಕ್ಷೇತ್ರಗಳಿದೆ. 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಮೊದಲ ಹಂತ:

ಏಪ್ರೀಲ್‌19ರಂದು ಮೊದಲ ಹಂತದ ಚುನಾವಣೆ

ತಮಿಳುನಾಡು, ರಾಜಸ್ಥಾನ, ಛತ್ತೀಸ್‌ಗಢ, ಜಮ್ಮು-ಕಾಶ್ಮೀರ,

ಫಲಿತಾಂಶ:4

ಎರಡನೇ ಹಂತ:

ಮತದಾನ ಏಪ್ರೀಲ್‌:26

ಮತಎಣಿಕೆ: ಜೂನ್‌-  4

ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ

ಮೂರನೇ ಹಂತ:

ಮತದಾನ: ಮೇ-7

ಮತ ಎಣಿಕೆ: ಜೂನ್‌-4

4ನೇ ಹಂತ:

ಮತದಾನ: ಮೇ -13

ಮತ ಎಣಿಕೆ: ಜೂನ್‌- 4

5ನೇ ಹಂತ;

ಮತದಾನ: ಮೇ-20

6ನೇ ಹಂತ

ಮತದಾನ: ಮೇ-25

7ನೇ ಹಂತ

ಮತದಾನ: ಜೂನ್-1

ಮತ ಎಣಿಕೆ: ಜೂನ್‌-4

ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ಅವರು ಪತ್ರಿಕಾಗೋಷ್ಟಿಯನ್ನು ನಡೆಸಿದ್ದು, ಪತ್ರಿಕಾಗೋಷ್ಟಿಯಲ್ಲಿ ಚುನಾವಣಾ ಆಯುಕ್ತರಾದ ಜ್ಞಾನೇಶ್‌ ಕುಮಾರ್‌ ಮತ್ತು ಸುಖಬೀರ್‌ ಸಂಧು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್‌, ಪ್ರತಿಯೊಂದು ಚುನಾವಣೆ ನಮಗೆ ಪರೀಕ್ಷೆ ಇದ್ದಂತೆ, ನ್ಯಾಯ ಸಮ್ಮತ, ಮುಕ್ತ ಪಾರದರ್ರಶಕ ಚುನಾವಣೆ ನಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ನಾವು ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ಬದ್ಧರಾಗಿದ್ದೇವೆ. 17ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರ ಪ್ರದೇಶ, ಒಡಿಶಾ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಯ ಅವಧಿ ಕೂಡ ಜೂನ್ 2024 ರಲ್ಲಿ ಅವಧಿ ಮುಗಿಯಲಿದೆ. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದು ಹೇಳಿದ್ದಾರೆ.

10 ಲಕ್ಷದ 5 ಸಾವಿರ ಮತಗಟ್ಟೆಗಳ ರ್ಸತಾಪನೆ ಮಾಡಲಾಗಿದೆ. ದೇಶದಲ್ಲಿ 97 ಕೋಟಿ ಮತದಾರರಿದ್ದಾರೆ. ಮತದಾನಕ್ಕೆ 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗಿದೆ. 1.5ಕೋಟಿ ಅಧಿಕಾರಿಗಳು ಭದ್ರತಾ ಸಿಬ್ಬಂದಿಗಳ ನಿಯೋಜನೆ ಮಾಡಲಾಗುವುದು. 49.7ಕೋಟಿ ಪುರುಷ ಮತದಾರರಿದ್ದಾರೆ. 1.8 ಕೋಟಿ ಮತದಾರರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 47.1ಕೋಟಿ ಮಹಿಳಾ ಮತದಾರರಿದ್ದಾರೆ.  85 ವರ್ಷಕ್ಕಿಂತ ಮೇಲ್ಪಟ್ಟ 82 ಲಕ್ಷ  ಮತದಾರರಿದ್ದಾರೆ. 19.74 ಯುವ ಮತದಾರರಿದ್ದಾರೆ. 12 ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. 2.18 ಲಕ್ಷ ಶತಾಯುಷಿಗಳು ಮತ ಚಲಾಯಿಸಲಿದ್ದಾರೆ. 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪುರುಷ ಮತದಾರರಿಗಿಂತ ಹೆಚ್ಚಿನ ಮಹಿಳೆಯರನ್ನು ಹೊಂದಿವೆ ಎಂದು ಹೇಳಿದ್ದಾರೆ.

ಮತಗಟ್ಟೆಗಳಲ್ಲಿ ವ್ಜೀಲ್ ಚೇರ್‌, ಹೆಲ್ಪ್‌ ಡೆಸ್ಕ್‌ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು,  40%ಕ್ಕೂ ಅಧಿಕ ವಿಕಲಚೇತನ ಮತದಾರರು ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ ಮಾಡಲಾಗುವುದು. ಅಭ್ಯರ್ಥಿಗಳ ಕ್ರಿಮಿನಲ್ ಕೇಸ್‌ಗಳ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಅಕ್ರಮವಾಗಿ ಹಣ ಸಾಗಿಸಿದರೆ, ಮತದಾರರಿಗೆ ಹಣ ಹಂಚಿಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ಪೊಲೀಸರಿಂದ ಚೆಕ್‌ ಪೋಸ್ಟ್‌ಗಳಲ್ಲಿ ಪರಿಶೀಲನೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಸಿ-ವಿಜಿಲ್ ಆ್ಯಪ್‌ನಲ್ಲಿ ನಾಗರಿಕರು ಯಾವುದೇ ಮತದಾನ ಸಂಬಂಧಿತ ದೂರುಗಳನ್ನು ನೋಂದಾಯಿಸಿಕೊಳ್ಳಬಹುದು. ಪರಿಸ್ಥಿತಿಯನ್ನು ಅವಲೋಕಿಸಲು 100 ನಿಮಿಷಗಳಲ್ಲಿ ಚುನಾವಣಾ ಆಯೋಗ ತಂಡವನ್ನು ಕಳುಹಿಸಲಿದೆ. ಚುನಾವಣಾ ಸಮಯದಲ್ಲಿ ಯಾವುದೇ ಹಿಂಸಾಚಾರ ಸಂಭವಿಸದಂತೆ ಚುನಾವಣಾ ಆಯೋಗವು ಕಾರ್ಯನಿರ್ವಹಿಸುತ್ತಿದೆ, ಪಕ್ಷಗಳು ನೀತಿ ಸಂಹಿತೆಯನ್ನು ಪಾಲಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಸೂರ್ಯಾಸ್ತದ ಬಳಿಕ ಎಟಿಎಂ ವಾಹನ ಸಂಚಾರಕ್ಕೆ ಅನುಮತಿ ಇಲ್ಲ,  ಸುಳ್ಳು ಮಾಹಿತಿಯನ್ನು ರವಾನೆ ಮಾಡುವಂತಿಲ್ಲ, 24 ಗಂಟೆ ಪೊಲೀಸ್‌ ಕಂಟ್ರೋಲ್‌ ರೂಂ ಕಾರ್ಯಾಚರಣೆ ಇರಲಿದೆ, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲಿದ್ದೇವೆ, ಜನರನ್ನು ಪ್ರಚೋದನೆ, ಇಬ್ಬಾಗ ಮಾಡುವಂತಿಲ್ಲ, ದ್ವೇಷ ಭಾಷಣ ಮಾಡುವಂತಿಲ್ಲ, ಸುಳ್ಳು ಜಾಹೀರಾತನ್ನು ಪ್ರಸಾರ ಮಾಡುವಂತಿಲ್ಲ, ವೈಯಕ್ತಿಕ ಟೀಕೆ ಮಾಡುವಂತಿಲ್ಲ ಎಂದು ಹೇಳಿದ್ದಾರೆ.

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...