Homeಮುಖಪುಟಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟ: ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ಮತದಾನ, ಜೂ.4ರಂದು ಫಲಿತಾಂಶ ಪ್ರಕಟ

ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟ: ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ಮತದಾನ, ಜೂ.4ರಂದು ಫಲಿತಾಂಶ ಪ್ರಕಟ

- Advertisement -
- Advertisement -

ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ, 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್‌ 4ರಂದು ಒಟ್ಟಾಗಿ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದಲ್ಲಿ  ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತ್ತು ಇನ್ನುಳಿದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ.

ಗುಜರಾತ್‌, ಹರಿಯಾಣ,, ಝಾರ್ಖಾಂಡ್, ಮಹರಾಷ್ಟ್ರ, ಕರ್ನಾಟಕ, ತಮಿಳುನಾಡು, ಪ.ಬಂಗಾಳ ರಾಜ್ಯಗಳ 26 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಸಿಕ್ಕಿಂ, ಒಡಿಸ್ಸಾ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ ನಾಲ್ಕು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ವೇಳೆ ಚುನಾವಣೆ ನಡೆಯಲಿದೆ.

ಲೋಕಸಭೆ ಚುನಾವಣೆ: 543 ಕ್ಷೇತ್ರಗಳ ಚುನಾವಣೆ, 84 ಎಸ್ಸಿ ಮೀಸಲಾತಿ ಕ್ಷೇತ್ರಗಳಿದೆ. 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಮೊದಲ ಹಂತ:

ಏಪ್ರೀಲ್‌19ರಂದು ಮೊದಲ ಹಂತದ ಚುನಾವಣೆ

ತಮಿಳುನಾಡು, ರಾಜಸ್ಥಾನ, ಛತ್ತೀಸ್‌ಗಢ, ಜಮ್ಮು-ಕಾಶ್ಮೀರ,

ಫಲಿತಾಂಶ:4

ಎರಡನೇ ಹಂತ:

ಮತದಾನ ಏಪ್ರೀಲ್‌:26

ಮತಎಣಿಕೆ: ಜೂನ್‌-  4

ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ

ಮೂರನೇ ಹಂತ:

ಮತದಾನ: ಮೇ-7

ಮತ ಎಣಿಕೆ: ಜೂನ್‌-4

4ನೇ ಹಂತ:

ಮತದಾನ: ಮೇ -13

ಮತ ಎಣಿಕೆ: ಜೂನ್‌- 4

5ನೇ ಹಂತ;

ಮತದಾನ: ಮೇ-20

6ನೇ ಹಂತ

ಮತದಾನ: ಮೇ-25

7ನೇ ಹಂತ

ಮತದಾನ: ಜೂನ್-1

ಮತ ಎಣಿಕೆ: ಜೂನ್‌-4

ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ಅವರು ಪತ್ರಿಕಾಗೋಷ್ಟಿಯನ್ನು ನಡೆಸಿದ್ದು, ಪತ್ರಿಕಾಗೋಷ್ಟಿಯಲ್ಲಿ ಚುನಾವಣಾ ಆಯುಕ್ತರಾದ ಜ್ಞಾನೇಶ್‌ ಕುಮಾರ್‌ ಮತ್ತು ಸುಖಬೀರ್‌ ಸಂಧು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್‌, ಪ್ರತಿಯೊಂದು ಚುನಾವಣೆ ನಮಗೆ ಪರೀಕ್ಷೆ ಇದ್ದಂತೆ, ನ್ಯಾಯ ಸಮ್ಮತ, ಮುಕ್ತ ಪಾರದರ್ರಶಕ ಚುನಾವಣೆ ನಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ನಾವು ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ಬದ್ಧರಾಗಿದ್ದೇವೆ. 17ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರ ಪ್ರದೇಶ, ಒಡಿಶಾ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಯ ಅವಧಿ ಕೂಡ ಜೂನ್ 2024 ರಲ್ಲಿ ಅವಧಿ ಮುಗಿಯಲಿದೆ. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದು ಹೇಳಿದ್ದಾರೆ.

10 ಲಕ್ಷದ 5 ಸಾವಿರ ಮತಗಟ್ಟೆಗಳ ರ್ಸತಾಪನೆ ಮಾಡಲಾಗಿದೆ. ದೇಶದಲ್ಲಿ 97 ಕೋಟಿ ಮತದಾರರಿದ್ದಾರೆ. ಮತದಾನಕ್ಕೆ 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗಿದೆ. 1.5ಕೋಟಿ ಅಧಿಕಾರಿಗಳು ಭದ್ರತಾ ಸಿಬ್ಬಂದಿಗಳ ನಿಯೋಜನೆ ಮಾಡಲಾಗುವುದು. 49.7ಕೋಟಿ ಪುರುಷ ಮತದಾರರಿದ್ದಾರೆ. 1.8 ಕೋಟಿ ಮತದಾರರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 47.1ಕೋಟಿ ಮಹಿಳಾ ಮತದಾರರಿದ್ದಾರೆ.  85 ವರ್ಷಕ್ಕಿಂತ ಮೇಲ್ಪಟ್ಟ 82 ಲಕ್ಷ  ಮತದಾರರಿದ್ದಾರೆ. 19.74 ಯುವ ಮತದಾರರಿದ್ದಾರೆ. 12 ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. 2.18 ಲಕ್ಷ ಶತಾಯುಷಿಗಳು ಮತ ಚಲಾಯಿಸಲಿದ್ದಾರೆ. 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪುರುಷ ಮತದಾರರಿಗಿಂತ ಹೆಚ್ಚಿನ ಮಹಿಳೆಯರನ್ನು ಹೊಂದಿವೆ ಎಂದು ಹೇಳಿದ್ದಾರೆ.

ಮತಗಟ್ಟೆಗಳಲ್ಲಿ ವ್ಜೀಲ್ ಚೇರ್‌, ಹೆಲ್ಪ್‌ ಡೆಸ್ಕ್‌ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು,  40%ಕ್ಕೂ ಅಧಿಕ ವಿಕಲಚೇತನ ಮತದಾರರು ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ ಮಾಡಲಾಗುವುದು. ಅಭ್ಯರ್ಥಿಗಳ ಕ್ರಿಮಿನಲ್ ಕೇಸ್‌ಗಳ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಅಕ್ರಮವಾಗಿ ಹಣ ಸಾಗಿಸಿದರೆ, ಮತದಾರರಿಗೆ ಹಣ ಹಂಚಿಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ಪೊಲೀಸರಿಂದ ಚೆಕ್‌ ಪೋಸ್ಟ್‌ಗಳಲ್ಲಿ ಪರಿಶೀಲನೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಸಿ-ವಿಜಿಲ್ ಆ್ಯಪ್‌ನಲ್ಲಿ ನಾಗರಿಕರು ಯಾವುದೇ ಮತದಾನ ಸಂಬಂಧಿತ ದೂರುಗಳನ್ನು ನೋಂದಾಯಿಸಿಕೊಳ್ಳಬಹುದು. ಪರಿಸ್ಥಿತಿಯನ್ನು ಅವಲೋಕಿಸಲು 100 ನಿಮಿಷಗಳಲ್ಲಿ ಚುನಾವಣಾ ಆಯೋಗ ತಂಡವನ್ನು ಕಳುಹಿಸಲಿದೆ. ಚುನಾವಣಾ ಸಮಯದಲ್ಲಿ ಯಾವುದೇ ಹಿಂಸಾಚಾರ ಸಂಭವಿಸದಂತೆ ಚುನಾವಣಾ ಆಯೋಗವು ಕಾರ್ಯನಿರ್ವಹಿಸುತ್ತಿದೆ, ಪಕ್ಷಗಳು ನೀತಿ ಸಂಹಿತೆಯನ್ನು ಪಾಲಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಸೂರ್ಯಾಸ್ತದ ಬಳಿಕ ಎಟಿಎಂ ವಾಹನ ಸಂಚಾರಕ್ಕೆ ಅನುಮತಿ ಇಲ್ಲ,  ಸುಳ್ಳು ಮಾಹಿತಿಯನ್ನು ರವಾನೆ ಮಾಡುವಂತಿಲ್ಲ, 24 ಗಂಟೆ ಪೊಲೀಸ್‌ ಕಂಟ್ರೋಲ್‌ ರೂಂ ಕಾರ್ಯಾಚರಣೆ ಇರಲಿದೆ, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲಿದ್ದೇವೆ, ಜನರನ್ನು ಪ್ರಚೋದನೆ, ಇಬ್ಬಾಗ ಮಾಡುವಂತಿಲ್ಲ, ದ್ವೇಷ ಭಾಷಣ ಮಾಡುವಂತಿಲ್ಲ, ಸುಳ್ಳು ಜಾಹೀರಾತನ್ನು ಪ್ರಸಾರ ಮಾಡುವಂತಿಲ್ಲ, ವೈಯಕ್ತಿಕ ಟೀಕೆ ಮಾಡುವಂತಿಲ್ಲ ಎಂದು ಹೇಳಿದ್ದಾರೆ.

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...