Homeಮುಖಪುಟಲಂಡನ್ ಭಾಷಣದ ವಿಚಾರ: ರಾಹುಲ್‌ ಲೋಕಸಭೆ ಸದಸ್ಯತ್ವ ಅಮಾನತ್ತಿಗೆ ಆಗ್ರಹಿಸಿದ ಬಿಜೆಪಿ

ಲಂಡನ್ ಭಾಷಣದ ವಿಚಾರ: ರಾಹುಲ್‌ ಲೋಕಸಭೆ ಸದಸ್ಯತ್ವ ಅಮಾನತ್ತಿಗೆ ಆಗ್ರಹಿಸಿದ ಬಿಜೆಪಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬ್ರಿಟನ್‌ನಲ್ಲಿ ಭಾರತೀಯ ಪ್ರಜಾಪ್ರಭುತ್ವದ ಕುರಿತು ಟೀಕೆ ಮಾಡಿರುವುದ್ದಕ್ಕೆ ಅವರು ಸದನದಲ್ಲಿ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಅವರನ್ನು ಲೋಕಸಭೆಯಿಂದ ಅಮಾನತುಗೊಳಿಸಬೇಕು ಎಂದು ಆಡಳಿತಾರೂಢ ಬಿಜೆಪಿ ಆಗ್ರಹಿಸಿದೆ.

ಈಗಾಗಲೇ ಬಿಜೆಪಿ, ರಾಹುಲ್ ಗಾಂಧಿ ಅವರನ್ನು ಸದನದಿಂದ ಅಮಾನತುಗೊಳಿಸುವ ಸಾಧ್ಯತೆಯನ್ನು ಪರಿಶೋಧಿಸುವ ವಿಶೇಷ ಸಮಿತಿಯನ್ನು ರಚಿಸುವಂತೆ ಕೋರಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಸಂಪರ್ಕಿಸಿದೆ.

ಒಂದುವೇಳೆ ವಿಶೇಷ ಸಮಿತಿ ರಚನೆಯಾದರೆ ಲೋಕಸಭೆಯಲ್ಲಿ ಬಿಜೆಪಿಯು ಸಂಖ್ಯಾಬಲದಲ್ಲಿ ಬಹುಮತ ಪಡೆಯಲಿದೆ. ವಿಶೇಷ ಸಮಿತಿಯು ಸಾಮಾನ್ಯವಾಗಿ ಒಂದು ತಿಂಗಳಲ್ಲಿ ತನ್ನ ವರದಿಯನ್ನು ಸಲ್ಲಿಸುತ್ತದೆ.

ಈ ಬಗ್ಗೆ ಪಕ್ಷದ ಹಿರಿಯ ನಾಯಕರೊಬ್ಬರು ಮಾತನಾಡಿ, ”ಬಿಜೆಪಿಯು ರಾಹುಲ್ ಗಾಂಧಿ ವಿಚಾರವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಇದು ಅಭಿಪ್ರಾಯ ಹಂಚಿಕೊಳ್ಳುವ ವಿಚಾರವಲ್ಲ, ಅದಕ್ಕೂ ಮೀರಿದ ಸಮಸ್ಯೆ ಆಗಿದೆ. ಹಾಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಕಿರಣ್ ರಿಜಿಜು, ಅನುರಾಗ್ ಠಾಕೂರ್, ಗಿರಿರಾಜ್ ಸಿಂಗ್ ಮತ್ತು ರಾಜೀವ್ ಚಂದ್ರಶೇಖರ್ ಮತ್ತು ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್ ಅವರು ಲಂಡನ್‌ನಲ್ಲಿ ಗಾಂಧಿ ಭಾರತದ ಬಗ್ಗೆ “ಸುಳ್ಳು” ಹೇಳಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ನಾಯಕ ಈ ವರೆಗೂ ತಮ್ಮ ಟೀಕೆಯ ಬಗ್ಗೆ  ಯಾವುದೇ ಪಶ್ಚಾತ್ತಾಪ ತೋರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಹಿತಿ ಮತ್ತು ಪ್ರಸಾರ ಸಚಿವ ಠಾಕೂರ್ ಮಾತನಾಡಿ, ”ಸಂಸತ್ತಿಗೆ ಸ್ವಾಗತ, ಒಂದು ವಾರದಿಂದ ಕಾಯುತ್ತಿದ್ದೇವೆ. ರಾಹುಲ್ ಗಾಂಧಿ ಅವರು ವಿದೇಶಿ ನೆಲದಿಂದ ಭಾರತದ ವಿರುದ್ಧ ಸುಳ್ಳುಗಳನ್ನು ಹರಡಿದ್ದಾರೆ ಮತ್ತು ಸಂಸತ್ತಿಗೆ ಅವಮಾನ ಮಾಡಿದ್ದಾರೆ. ಅವರು ಸದನಕ್ಕೆ ಬಂದು ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರೇ ದೇಶ ವಿರೋಧಿಗಳು: ನಡ್ಡಾಗೆ ಖರ್ಗೆ ತಿರುಗೇಟು

ಗುರುವಾರ  ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ”ಗಾಂಧಿ ಅವರು ಸಂಸತ್ತಿನ ಇತರ ಸದಸ್ಯರಿಗಿಂತ ಮೇಲಲ್ಲ ಮತ್ತು ಭಾರತೀಯ ಸಂಸತ್ತನ್ನು ಅವರ ವೈಯಕ್ತಿಕ ಅಧಿಕಾರದ ಕ್ಷೇತ್ರ ಎಂದು ಪರಿಗಣಿಸಬಾರದು” ಎಂದು ಹೇಳಿದರು.

”ರಾಷ್ಟ್ರಕ್ಕೆ ಸಂಬಂಧಿಸಿದಂತೆ ಯಾವುದೇ ಘಟನೆಯು ಅದು ಎಲ್ಲರಿಗೂ ಕಾಳಜಿಯ ವಿಷಯವಾಗಿದೆ. ಇದರಿಂದ ಕಾಂಗ್ರೆಸ್ ಅಥವಾ ಅದರ ನಾಯಕತ್ವ ಪರಿಣಾಮಗಳ ಬಗ್ಗೆ ನಾವು ತಲೆ ಕೆಡಸಿಕೊಳ್ಳುವುದಿಲ್ಲ. ಅವರು ರಾಷ್ಟ್ರವನ್ನು ಅವಮಾನಿಸಿದರೆ ನಾವು ಸುಮ್ಮನಿರಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

”ರಾಹುಲ್ ಗಾಂಧಿ ಅವರು ಭಾರತ ವಿರೋಧಿ ಶಕ್ತಿಗಳು ಮಾತನಾಡುವಂತೆ ಮಾತನಾಡುತ್ತಾರೆ. ಅದೇ ಭಾಷೆಯನ್ನೇ ರಾಹುಲ್ ಗಾಂಧಿ ಬಳಸಿದ್ದಾರೆ. ಇದು ಭಾರತದ ವಿರುದ್ಧ ಕೆಲಸ ಮಾಡುವ ಎಲ್ಲರ ಭಾಷೆಯಾಗಿದೆ” ಎಂದು ರಿಜಿಜು ಹೇಳಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಯಿಂದ ದೇಶಕ್ಕೆ ಮತ್ತು ಅವರು ಸದಸ್ಯರಾಗಿರುವ ಸಂಸತ್ತಿಗೆ ಹಾನಿಯಾಗಿದೆ. ಕೆಲವು ಜನರು ದೇಶದ ಗೌರವದ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈಗ ಕಾಂಗ್ರೆಸ್‌ ಲಂಡನ್‌ನಲ್ಲಿ ಪೊರಕೆಯಿಂದ ಗುಡಿಸಿ ಸ್ವಚ್ಚಗೊಳಿಸುವುದು ಎಂದು ಕೇಳಿದ್ದಾರೆ.

“ರಾಹುಲ್ ಗಾಂಧಿ ಅವರು ತಮ್ಮ 50 ವರ್ಷಗಳ ಕಾಲ ರಾಜವಂಶಸ್ತರಂತೆ ಬದುಕಿರಬಹುದು. 2014ರ ಮೊದಲು, ಅವರು ಸುಗ್ರೀವಾಜ್ಞೆಗಳನ್ನು ಹರಿದು ಹಾಕುವುದು ಸೇರಿದಂತೆ ಯಾವುದೇ ಹೊಣೆಗಾರಿಕೆಯಿಲ್ಲದೆ ತನಗೆ ಬೇಕಾದುದನ್ನು ಮಾಡಲು ಮತ್ತು ಹೇಳಲು ಅವಕಾಶ ಇತ್ತು. ಆದರೆ ಅದು ಈಗ ನಡೆಯಲ್ಲ. ಅವರ ಸುಳ್ಳಿಗೆ ಅವರೇ ಜವಾಬ್ದಾರನಾಗಿರಬೇಕು” ಎಂದು ರಾಜೀವ್ ಚಂದ್ರಶೇಖರ್ ಹೇಳಿದರು.

ಸಂಸತ್ತಿನಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ. ಇದಕ್ಕೆ ಪ್ರತಿಕ್ರಿಸಿರುವ ಅವರು, ತಾನು ಯಾವುದೇ “ಭಾರತ ವಿರೋಧಿ” ಟೀಕೆ ನೀಡಿಲ್ಲ ಮತ್ತು ಅವಕಾಶ ನೀಡಿದರೆ ಸಂಸತ್ತಿನಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಗುರುವಾರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...