Homeಮುಖಪುಟಲಂಡನ್ ಭಾಷಣದ ವಿಚಾರ: ರಾಹುಲ್‌ ಲೋಕಸಭೆ ಸದಸ್ಯತ್ವ ಅಮಾನತ್ತಿಗೆ ಆಗ್ರಹಿಸಿದ ಬಿಜೆಪಿ

ಲಂಡನ್ ಭಾಷಣದ ವಿಚಾರ: ರಾಹುಲ್‌ ಲೋಕಸಭೆ ಸದಸ್ಯತ್ವ ಅಮಾನತ್ತಿಗೆ ಆಗ್ರಹಿಸಿದ ಬಿಜೆಪಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬ್ರಿಟನ್‌ನಲ್ಲಿ ಭಾರತೀಯ ಪ್ರಜಾಪ್ರಭುತ್ವದ ಕುರಿತು ಟೀಕೆ ಮಾಡಿರುವುದ್ದಕ್ಕೆ ಅವರು ಸದನದಲ್ಲಿ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಅವರನ್ನು ಲೋಕಸಭೆಯಿಂದ ಅಮಾನತುಗೊಳಿಸಬೇಕು ಎಂದು ಆಡಳಿತಾರೂಢ ಬಿಜೆಪಿ ಆಗ್ರಹಿಸಿದೆ.

ಈಗಾಗಲೇ ಬಿಜೆಪಿ, ರಾಹುಲ್ ಗಾಂಧಿ ಅವರನ್ನು ಸದನದಿಂದ ಅಮಾನತುಗೊಳಿಸುವ ಸಾಧ್ಯತೆಯನ್ನು ಪರಿಶೋಧಿಸುವ ವಿಶೇಷ ಸಮಿತಿಯನ್ನು ರಚಿಸುವಂತೆ ಕೋರಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಸಂಪರ್ಕಿಸಿದೆ.

ಒಂದುವೇಳೆ ವಿಶೇಷ ಸಮಿತಿ ರಚನೆಯಾದರೆ ಲೋಕಸಭೆಯಲ್ಲಿ ಬಿಜೆಪಿಯು ಸಂಖ್ಯಾಬಲದಲ್ಲಿ ಬಹುಮತ ಪಡೆಯಲಿದೆ. ವಿಶೇಷ ಸಮಿತಿಯು ಸಾಮಾನ್ಯವಾಗಿ ಒಂದು ತಿಂಗಳಲ್ಲಿ ತನ್ನ ವರದಿಯನ್ನು ಸಲ್ಲಿಸುತ್ತದೆ.

ಈ ಬಗ್ಗೆ ಪಕ್ಷದ ಹಿರಿಯ ನಾಯಕರೊಬ್ಬರು ಮಾತನಾಡಿ, ”ಬಿಜೆಪಿಯು ರಾಹುಲ್ ಗಾಂಧಿ ವಿಚಾರವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಇದು ಅಭಿಪ್ರಾಯ ಹಂಚಿಕೊಳ್ಳುವ ವಿಚಾರವಲ್ಲ, ಅದಕ್ಕೂ ಮೀರಿದ ಸಮಸ್ಯೆ ಆಗಿದೆ. ಹಾಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಕಿರಣ್ ರಿಜಿಜು, ಅನುರಾಗ್ ಠಾಕೂರ್, ಗಿರಿರಾಜ್ ಸಿಂಗ್ ಮತ್ತು ರಾಜೀವ್ ಚಂದ್ರಶೇಖರ್ ಮತ್ತು ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್ ಅವರು ಲಂಡನ್‌ನಲ್ಲಿ ಗಾಂಧಿ ಭಾರತದ ಬಗ್ಗೆ “ಸುಳ್ಳು” ಹೇಳಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ನಾಯಕ ಈ ವರೆಗೂ ತಮ್ಮ ಟೀಕೆಯ ಬಗ್ಗೆ  ಯಾವುದೇ ಪಶ್ಚಾತ್ತಾಪ ತೋರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಹಿತಿ ಮತ್ತು ಪ್ರಸಾರ ಸಚಿವ ಠಾಕೂರ್ ಮಾತನಾಡಿ, ”ಸಂಸತ್ತಿಗೆ ಸ್ವಾಗತ, ಒಂದು ವಾರದಿಂದ ಕಾಯುತ್ತಿದ್ದೇವೆ. ರಾಹುಲ್ ಗಾಂಧಿ ಅವರು ವಿದೇಶಿ ನೆಲದಿಂದ ಭಾರತದ ವಿರುದ್ಧ ಸುಳ್ಳುಗಳನ್ನು ಹರಡಿದ್ದಾರೆ ಮತ್ತು ಸಂಸತ್ತಿಗೆ ಅವಮಾನ ಮಾಡಿದ್ದಾರೆ. ಅವರು ಸದನಕ್ಕೆ ಬಂದು ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರೇ ದೇಶ ವಿರೋಧಿಗಳು: ನಡ್ಡಾಗೆ ಖರ್ಗೆ ತಿರುಗೇಟು

ಗುರುವಾರ  ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ”ಗಾಂಧಿ ಅವರು ಸಂಸತ್ತಿನ ಇತರ ಸದಸ್ಯರಿಗಿಂತ ಮೇಲಲ್ಲ ಮತ್ತು ಭಾರತೀಯ ಸಂಸತ್ತನ್ನು ಅವರ ವೈಯಕ್ತಿಕ ಅಧಿಕಾರದ ಕ್ಷೇತ್ರ ಎಂದು ಪರಿಗಣಿಸಬಾರದು” ಎಂದು ಹೇಳಿದರು.

”ರಾಷ್ಟ್ರಕ್ಕೆ ಸಂಬಂಧಿಸಿದಂತೆ ಯಾವುದೇ ಘಟನೆಯು ಅದು ಎಲ್ಲರಿಗೂ ಕಾಳಜಿಯ ವಿಷಯವಾಗಿದೆ. ಇದರಿಂದ ಕಾಂಗ್ರೆಸ್ ಅಥವಾ ಅದರ ನಾಯಕತ್ವ ಪರಿಣಾಮಗಳ ಬಗ್ಗೆ ನಾವು ತಲೆ ಕೆಡಸಿಕೊಳ್ಳುವುದಿಲ್ಲ. ಅವರು ರಾಷ್ಟ್ರವನ್ನು ಅವಮಾನಿಸಿದರೆ ನಾವು ಸುಮ್ಮನಿರಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

”ರಾಹುಲ್ ಗಾಂಧಿ ಅವರು ಭಾರತ ವಿರೋಧಿ ಶಕ್ತಿಗಳು ಮಾತನಾಡುವಂತೆ ಮಾತನಾಡುತ್ತಾರೆ. ಅದೇ ಭಾಷೆಯನ್ನೇ ರಾಹುಲ್ ಗಾಂಧಿ ಬಳಸಿದ್ದಾರೆ. ಇದು ಭಾರತದ ವಿರುದ್ಧ ಕೆಲಸ ಮಾಡುವ ಎಲ್ಲರ ಭಾಷೆಯಾಗಿದೆ” ಎಂದು ರಿಜಿಜು ಹೇಳಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಯಿಂದ ದೇಶಕ್ಕೆ ಮತ್ತು ಅವರು ಸದಸ್ಯರಾಗಿರುವ ಸಂಸತ್ತಿಗೆ ಹಾನಿಯಾಗಿದೆ. ಕೆಲವು ಜನರು ದೇಶದ ಗೌರವದ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈಗ ಕಾಂಗ್ರೆಸ್‌ ಲಂಡನ್‌ನಲ್ಲಿ ಪೊರಕೆಯಿಂದ ಗುಡಿಸಿ ಸ್ವಚ್ಚಗೊಳಿಸುವುದು ಎಂದು ಕೇಳಿದ್ದಾರೆ.

“ರಾಹುಲ್ ಗಾಂಧಿ ಅವರು ತಮ್ಮ 50 ವರ್ಷಗಳ ಕಾಲ ರಾಜವಂಶಸ್ತರಂತೆ ಬದುಕಿರಬಹುದು. 2014ರ ಮೊದಲು, ಅವರು ಸುಗ್ರೀವಾಜ್ಞೆಗಳನ್ನು ಹರಿದು ಹಾಕುವುದು ಸೇರಿದಂತೆ ಯಾವುದೇ ಹೊಣೆಗಾರಿಕೆಯಿಲ್ಲದೆ ತನಗೆ ಬೇಕಾದುದನ್ನು ಮಾಡಲು ಮತ್ತು ಹೇಳಲು ಅವಕಾಶ ಇತ್ತು. ಆದರೆ ಅದು ಈಗ ನಡೆಯಲ್ಲ. ಅವರ ಸುಳ್ಳಿಗೆ ಅವರೇ ಜವಾಬ್ದಾರನಾಗಿರಬೇಕು” ಎಂದು ರಾಜೀವ್ ಚಂದ್ರಶೇಖರ್ ಹೇಳಿದರು.

ಸಂಸತ್ತಿನಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ. ಇದಕ್ಕೆ ಪ್ರತಿಕ್ರಿಸಿರುವ ಅವರು, ತಾನು ಯಾವುದೇ “ಭಾರತ ವಿರೋಧಿ” ಟೀಕೆ ನೀಡಿಲ್ಲ ಮತ್ತು ಅವಕಾಶ ನೀಡಿದರೆ ಸಂಸತ್ತಿನಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಗುರುವಾರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...