Homeಮುಖಪುಟಲಂಡನ್ ಭಾಷಣದ ವಿಚಾರ: ರಾಹುಲ್‌ ಲೋಕಸಭೆ ಸದಸ್ಯತ್ವ ಅಮಾನತ್ತಿಗೆ ಆಗ್ರಹಿಸಿದ ಬಿಜೆಪಿ

ಲಂಡನ್ ಭಾಷಣದ ವಿಚಾರ: ರಾಹುಲ್‌ ಲೋಕಸಭೆ ಸದಸ್ಯತ್ವ ಅಮಾನತ್ತಿಗೆ ಆಗ್ರಹಿಸಿದ ಬಿಜೆಪಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬ್ರಿಟನ್‌ನಲ್ಲಿ ಭಾರತೀಯ ಪ್ರಜಾಪ್ರಭುತ್ವದ ಕುರಿತು ಟೀಕೆ ಮಾಡಿರುವುದ್ದಕ್ಕೆ ಅವರು ಸದನದಲ್ಲಿ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಅವರನ್ನು ಲೋಕಸಭೆಯಿಂದ ಅಮಾನತುಗೊಳಿಸಬೇಕು ಎಂದು ಆಡಳಿತಾರೂಢ ಬಿಜೆಪಿ ಆಗ್ರಹಿಸಿದೆ.

ಈಗಾಗಲೇ ಬಿಜೆಪಿ, ರಾಹುಲ್ ಗಾಂಧಿ ಅವರನ್ನು ಸದನದಿಂದ ಅಮಾನತುಗೊಳಿಸುವ ಸಾಧ್ಯತೆಯನ್ನು ಪರಿಶೋಧಿಸುವ ವಿಶೇಷ ಸಮಿತಿಯನ್ನು ರಚಿಸುವಂತೆ ಕೋರಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಸಂಪರ್ಕಿಸಿದೆ.

ಒಂದುವೇಳೆ ವಿಶೇಷ ಸಮಿತಿ ರಚನೆಯಾದರೆ ಲೋಕಸಭೆಯಲ್ಲಿ ಬಿಜೆಪಿಯು ಸಂಖ್ಯಾಬಲದಲ್ಲಿ ಬಹುಮತ ಪಡೆಯಲಿದೆ. ವಿಶೇಷ ಸಮಿತಿಯು ಸಾಮಾನ್ಯವಾಗಿ ಒಂದು ತಿಂಗಳಲ್ಲಿ ತನ್ನ ವರದಿಯನ್ನು ಸಲ್ಲಿಸುತ್ತದೆ.

ಈ ಬಗ್ಗೆ ಪಕ್ಷದ ಹಿರಿಯ ನಾಯಕರೊಬ್ಬರು ಮಾತನಾಡಿ, ”ಬಿಜೆಪಿಯು ರಾಹುಲ್ ಗಾಂಧಿ ವಿಚಾರವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಇದು ಅಭಿಪ್ರಾಯ ಹಂಚಿಕೊಳ್ಳುವ ವಿಚಾರವಲ್ಲ, ಅದಕ್ಕೂ ಮೀರಿದ ಸಮಸ್ಯೆ ಆಗಿದೆ. ಹಾಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಕಿರಣ್ ರಿಜಿಜು, ಅನುರಾಗ್ ಠಾಕೂರ್, ಗಿರಿರಾಜ್ ಸಿಂಗ್ ಮತ್ತು ರಾಜೀವ್ ಚಂದ್ರಶೇಖರ್ ಮತ್ತು ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್ ಅವರು ಲಂಡನ್‌ನಲ್ಲಿ ಗಾಂಧಿ ಭಾರತದ ಬಗ್ಗೆ “ಸುಳ್ಳು” ಹೇಳಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ನಾಯಕ ಈ ವರೆಗೂ ತಮ್ಮ ಟೀಕೆಯ ಬಗ್ಗೆ  ಯಾವುದೇ ಪಶ್ಚಾತ್ತಾಪ ತೋರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಹಿತಿ ಮತ್ತು ಪ್ರಸಾರ ಸಚಿವ ಠಾಕೂರ್ ಮಾತನಾಡಿ, ”ಸಂಸತ್ತಿಗೆ ಸ್ವಾಗತ, ಒಂದು ವಾರದಿಂದ ಕಾಯುತ್ತಿದ್ದೇವೆ. ರಾಹುಲ್ ಗಾಂಧಿ ಅವರು ವಿದೇಶಿ ನೆಲದಿಂದ ಭಾರತದ ವಿರುದ್ಧ ಸುಳ್ಳುಗಳನ್ನು ಹರಡಿದ್ದಾರೆ ಮತ್ತು ಸಂಸತ್ತಿಗೆ ಅವಮಾನ ಮಾಡಿದ್ದಾರೆ. ಅವರು ಸದನಕ್ಕೆ ಬಂದು ಕ್ಷಮೆಯಾಚಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರೇ ದೇಶ ವಿರೋಧಿಗಳು: ನಡ್ಡಾಗೆ ಖರ್ಗೆ ತಿರುಗೇಟು

ಗುರುವಾರ  ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ”ಗಾಂಧಿ ಅವರು ಸಂಸತ್ತಿನ ಇತರ ಸದಸ್ಯರಿಗಿಂತ ಮೇಲಲ್ಲ ಮತ್ತು ಭಾರತೀಯ ಸಂಸತ್ತನ್ನು ಅವರ ವೈಯಕ್ತಿಕ ಅಧಿಕಾರದ ಕ್ಷೇತ್ರ ಎಂದು ಪರಿಗಣಿಸಬಾರದು” ಎಂದು ಹೇಳಿದರು.

”ರಾಷ್ಟ್ರಕ್ಕೆ ಸಂಬಂಧಿಸಿದಂತೆ ಯಾವುದೇ ಘಟನೆಯು ಅದು ಎಲ್ಲರಿಗೂ ಕಾಳಜಿಯ ವಿಷಯವಾಗಿದೆ. ಇದರಿಂದ ಕಾಂಗ್ರೆಸ್ ಅಥವಾ ಅದರ ನಾಯಕತ್ವ ಪರಿಣಾಮಗಳ ಬಗ್ಗೆ ನಾವು ತಲೆ ಕೆಡಸಿಕೊಳ್ಳುವುದಿಲ್ಲ. ಅವರು ರಾಷ್ಟ್ರವನ್ನು ಅವಮಾನಿಸಿದರೆ ನಾವು ಸುಮ್ಮನಿರಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

”ರಾಹುಲ್ ಗಾಂಧಿ ಅವರು ಭಾರತ ವಿರೋಧಿ ಶಕ್ತಿಗಳು ಮಾತನಾಡುವಂತೆ ಮಾತನಾಡುತ್ತಾರೆ. ಅದೇ ಭಾಷೆಯನ್ನೇ ರಾಹುಲ್ ಗಾಂಧಿ ಬಳಸಿದ್ದಾರೆ. ಇದು ಭಾರತದ ವಿರುದ್ಧ ಕೆಲಸ ಮಾಡುವ ಎಲ್ಲರ ಭಾಷೆಯಾಗಿದೆ” ಎಂದು ರಿಜಿಜು ಹೇಳಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಯಿಂದ ದೇಶಕ್ಕೆ ಮತ್ತು ಅವರು ಸದಸ್ಯರಾಗಿರುವ ಸಂಸತ್ತಿಗೆ ಹಾನಿಯಾಗಿದೆ. ಕೆಲವು ಜನರು ದೇಶದ ಗೌರವದ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈಗ ಕಾಂಗ್ರೆಸ್‌ ಲಂಡನ್‌ನಲ್ಲಿ ಪೊರಕೆಯಿಂದ ಗುಡಿಸಿ ಸ್ವಚ್ಚಗೊಳಿಸುವುದು ಎಂದು ಕೇಳಿದ್ದಾರೆ.

“ರಾಹುಲ್ ಗಾಂಧಿ ಅವರು ತಮ್ಮ 50 ವರ್ಷಗಳ ಕಾಲ ರಾಜವಂಶಸ್ತರಂತೆ ಬದುಕಿರಬಹುದು. 2014ರ ಮೊದಲು, ಅವರು ಸುಗ್ರೀವಾಜ್ಞೆಗಳನ್ನು ಹರಿದು ಹಾಕುವುದು ಸೇರಿದಂತೆ ಯಾವುದೇ ಹೊಣೆಗಾರಿಕೆಯಿಲ್ಲದೆ ತನಗೆ ಬೇಕಾದುದನ್ನು ಮಾಡಲು ಮತ್ತು ಹೇಳಲು ಅವಕಾಶ ಇತ್ತು. ಆದರೆ ಅದು ಈಗ ನಡೆಯಲ್ಲ. ಅವರ ಸುಳ್ಳಿಗೆ ಅವರೇ ಜವಾಬ್ದಾರನಾಗಿರಬೇಕು” ಎಂದು ರಾಜೀವ್ ಚಂದ್ರಶೇಖರ್ ಹೇಳಿದರು.

ಸಂಸತ್ತಿನಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ. ಇದಕ್ಕೆ ಪ್ರತಿಕ್ರಿಸಿರುವ ಅವರು, ತಾನು ಯಾವುದೇ “ಭಾರತ ವಿರೋಧಿ” ಟೀಕೆ ನೀಡಿಲ್ಲ ಮತ್ತು ಅವಕಾಶ ನೀಡಿದರೆ ಸಂಸತ್ತಿನಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಗುರುವಾರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...