Homeಮುಖಪುಟಐದು ಶತಮಾನಗಳಲ್ಲೇ ಅತ್ಯಂತ ದೀರ್ಘವಾದ ಭಾಗಶಃ ಚಂದ್ರ ಗ್ರಹಣ

ಐದು ಶತಮಾನಗಳಲ್ಲೇ ಅತ್ಯಂತ ದೀರ್ಘವಾದ ಭಾಗಶಃ ಚಂದ್ರ ಗ್ರಹಣ

- Advertisement -
- Advertisement -

ಆಗಸದ ಅಲೆಮಾರಿಗಳ ನೆರಳು ಬೆಳಕಿನಾಟವೇ ಗ್ರಹಣ. ಗ್ರಹಣದ ಸಮಯದಲ್ಲಿ ತಾರ್ಕಿಕ ನಿಲುವುಗಳಿಲ್ಲದ, ಅಸಂಬದ್ಧವಾದ ಮೂಡ ನಂಬಿಕೆಗಳನ್ನು ಮೂಟೆಗಟ್ಟಲೆ ಜನರ ಮನಸ್ಸಿನಲ್ಲಿ ತುರುಕುವ ಕೆಲಸವನ್ನು ಇಂದಿಗೂ ಹಲವು ಮಾಧ್ಯಮಗಳೂ ಮತ್ತು ಕೆಲವು ಸಂಸ್ಥೆಗಳು ನಡೆಸುತ್ತಲೇ ಬಂದಿದ್ದಾರೆ. ಜನಗಳು ಭಯಭೀತರಾಗಿ ಕುರುಡು ಭಕ್ತಿಯಿಂದ ತಮ್ಮ ಹತ್ತಿರ ಬಂದು ಒಂದಷ್ಟು ದುಡ್ಡು ಚೆಲ್ಲಬೇಕೆಂಬ ಬಯಕೆ ಅವರದ್ದು ಎಂಬುದು ಎಷ್ಟೋ ಜನರ ತಿಳಿವಳಿಕೆಯ ಭಾಗವಾಗದಿರುವುದು ದುಃಖದ ಸಂಗತಿಯಾಗಿದೆ. ಈ ತಿಂಗಳ ಭಾಗಶಃ ಚಂದ್ರಗ್ರಹಣ, ಮುಂದಿನ ಐದು ಶತಮಾನಗಳಲ್ಲಿಯೇ ದೀರ್ಘವಾದ ಚಂದ್ರ ಗ್ರಹಣ ಎಂಬ ಲೆಕ್ಕಚಾರವನ್ನು ಖಗೋಳ ವಿಜ್ಞಾನದಿಂದ ತಿಳಿಯಲಾಗಿದೆ. ಶತಮಾನಗಳಷ್ಟು ಭಯಪಡಿಸುವ ಮೂಢನಂಬಿಕೆಗಳನ್ನು ಇದರ ಸುತ್ತ ಈಗ ಹುಟ್ಟು ಹಾಕುತ್ತಾರೋ ಏನೋ?

ಭೂಮಿ ಸೂರ್ಯನ ಸುತ್ತ, ಚಂದ್ರ ಭೂಮಿಯ ಸುತ್ತ ಸುತ್ತುತ್ತಿರಬೇಕಾದರೆ, ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಹಾದುಹೋಗುವಾಗ, ಈ ಮೂರೂ ಆಕಾಶಕಾಯಗಳು ಒಂದೇ ಸರಳ ರೇಖೆಯಲ್ಲಿ ಬರುತ್ತವೆ. ಇಂತಹ ಸಂದರ್ಭದಲ್ಲಿ ಚಂದ್ರ ಸೂರ್ಯನನ್ನು ಮರೆಮಾಚುತ್ತದೆ, ಆಗ ಸೂರ್ಯನ ಬೆಳಕು ಭೂಮಿಯ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಬೀಳುವುದಿಲ್ಲ. ಇದು ಸೂರ್ಯ ಗ್ರಹಣ. ಸೂರ್ಯ ಗ್ರಹಣ ಅಮಾವಾಸ್ಯೆಯ ದಿನದಂದೇ ನಡೆಯುತ್ತದೆ. ಆದರೆ, ಇದೇ ರೀತಿ ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಹಾದುಹೋಗುವಾಗ, ಆ ಸಮಯದಲ್ಲೂ ಮೂರು ಆಕಾಶಕಾಯಗಳು ಸರಳ ರೇಖೆಯಲ್ಲಿ ಬರುತ್ತವೆ. ಆದರೆ ಇಲ್ಲಿ, ಭೂಮಿಯ ನೆರಳು ಚಂದ್ರನ ಮೇಲೆ ಬೀಳುತ್ತದೆ. ಹುಣ್ಣಿಮೆಯ ಚಂದ್ರನನ್ನು ಭೂಮಿಯ ನೆರಳು ಆವರಿಸುತ್ತಾ ಹೋಗುತ್ತದೆ. ಇದು ಚಂದ್ರ ಗ್ರಹಣ. ಚಂದ್ರ ಗ್ರಹಣ ಹುಣ್ಣಿಮೆಯಂದೇ ನಡೆಯುತ್ತದೆ.

ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ (ಸರಳ ರೇಖೆಯಲ್ಲಿ), ಸೂರ್ಯಗ್ರಹಣ ಮತ್ತು ಅಮಾವಾಸ್ಯೆ. ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ (ಸರಳ ರೇಖೆಯಲ್ಲಿ), ಚಂದ್ರಗ್ರಹಣ ಮತ್ತು ಹುಣ್ಣಿಮೆ. ಹಾಗಾದರೆ, ಪ್ರತಿ ಅಮಾವಾಸ್ಯೆ ಮತ್ತು ಹುಣ್ಣಿಮೆಯಂದು ಗ್ರಹಣಗಳು ನಡೆಯುತ್ತವೆಯಾ? ಇಲ್ಲಾ, ಇದಕ್ಕೆ ಕಾರಣ ಚಂದ್ರ ಭೂಮಿಯ ಸುತ್ತ ಸುತ್ತುತ್ತಿರುವ ಕಕ್ಷೆ (Orbit).

ಭೂಮಿ ಸೂರ್ಯನ ಸುತ್ತು ಸುತ್ತುತ್ತಿರುವ ಕಕ್ಷೆಯು ಮತ್ತು ಚಂದ್ರ ಭೂಮಿಯ ಸುತ್ತು ಸುತ್ತುತ್ತಿರುವ ಕಕ್ಷೆಯು ಒಂದೆ ಸಮತಲದಲ್ಲಿ ಇಲ್ಲ. ಈ ಎರಡೂ ಕಕ್ಷೆಗಳು ಸುಮಾರು ಐದು ಡಿಗ್ರಿಯಷ್ಟು ಓರೆಯಾಗಿದ್ದು, ಎರಡು ಬಿಂದುಗಳಲ್ಲಿ ಮಾತ್ರ ಸಂಧಿಸುತ್ತವೆ (Intercepts). ಗ್ರಹಣಗಳು ನಡೆಯಬೇಕಾದರೆ ಅದಕ್ಕಿರುವ ಮೂಲ ನಿಯಮ: ಸೂರ್ಯ, ಭೂಮಿ ಮತ್ತು ಚಂದ್ರ ಒಂದೇ ಸರಳ ರೇಖೆಯಲ್ಲಿ ಇರುವ ಸಂದರ್ಭ ಬರಬೇಕಿರುವುದು. ಇಂತಹ ಸಂದರ್ಭ ಉಂಟಾಗಬೇಕೆಂದರೆ, ಚಂದ್ರನು ತನ್ನ ಕಕ್ಷೆಯಲ್ಲಿ ಸುತ್ತುವಾಗ, ಭೂಮಿಯ ಕಕ್ಷೆಯ ಸಮತಲದಲ್ಲಿ (Ecliptic Plane) ಸಂಧಿಸುವ ಬಿಂದುಗಳಲ್ಲಿ ಅದು ಬಂದಾಗ ಹಾಗೂ ಆಗ ಅಮಾವಾಸ್ಯೆ ಅಥವಾ ಹುಣ್ಣಿಮೆ ಇದ್ದರೆ ಮಾತ್ರ ಗ್ರಹಣಗಳು ನಡೆಯಲು ಸಾಧ್ಯ. ಈ ಕಾರಣದಿಂದ ಪ್ರತಿ ಅಮಾವಾಸ್ಯೆ ಮತ್ತು ಹುಣ್ಣಿಮೆಯಂದು ಗ್ರಹಣಗಳು ನಡೆಯುವುದಿಲ್ಲ ಹಾಗೂ ಗ್ರಹಣಗಳು ವಿರಳವಾಗಿರುವುದು. ಆದರೆ, ಭೂಮಿ ಮತ್ತು ಚಂದ್ರನ ಚಲನೆಗಳನ್ನು ನಾವು ಅತ್ಯಂತ ಸೂಕ್ಷ್ಮವಾಗಿ ಗಮನಿಸಿ ಗ್ರಹಿಸಲು ಸಾಧ್ಯವಾಗಿರುವುದರಿಂದ ನಿಖರವಾಗಿ ಯಾವಾಗ ಗ್ರಹಣಗಳು ನಡೆಯುತ್ತವೆ ಎಂಬುದನ್ನು ಲೆಕ್ಕ ಹಾಕಬಹುದಾಗಿದೆ.

ಸೂರ್ಯ ಗ್ರಹಣವನ್ನು ವೀಕ್ಷಿಸುವಾಗ ಕೆಲವು ಸುರಕ್ಷತಾ ಮೆನ್ನೆಚ್ಚರಿಕೆಯನ್ನು ವಹಿಸಲೇಬೇಕಾಗಿರುತ್ತದೆ. ಸಾಮಾನ್ಯವಾಗಿ ಸೂರ್ಯನನ್ನು ಎಂದೂ ಬರಿಗಣ್ಣಿನಲ್ಲಿ ನೋಡುವುದು ತಪ್ಪು. ಮನುಷ್ಯನ ಅಂಗಗಳಲ್ಲಿ ಕಣ್ಣು ಅತೀ ಸೂಕ್ಷ್ಮವಾದದ್ದು. ಸೂರ್ಯನ ತೀಕ್ಷ್ಣವಾದ ಕಿರಣಗಳು ಕಣ್ಣಿನ ರೆಟಿನಾವನ್ನು ಹಾಳು ಮಾಡುವ ಸಂಭವವಿರುತ್ತದೆ. ಯಾವುದೇ ಸಮಯದಲ್ಲೂ ಕೂಡ ಸೂರ್ಯನನ್ನು ಬರಿಗಣ್ಣಿನಿಂದ ನೋಡಬಾರದು. ಗ್ರಹಣದ ಸಮಯದಲ್ಲೂ ಕೂಡು ಭೂಮಿಯ ಜೀವರಾಶಿಗೆ ತೊಂದರೆ ಮಾಡವ ಯಾವ ಹಾನಿಕಾರಕ
ಕಿರಣಗಳೂ ಸುರ್ಯನಿಂದ ಬರುವುದಿಲ್ಲ. ಇವೆಲ್ಲವೂ ಕೇವಲ ಕಪೋಲಕಲ್ಪಿತವಾದವು. ಗ್ರಹಣಗಳು ಕೇವಲ ಸಾಪೇಕ್ಷವಾದ (relative) ಘಟನೆಗಳು. ಗ್ರಹಣದ ಸಮಯದಲ್ಲಿ ಭೂಮಿ, ಸೂರ್ಯ ಮತ್ತು ಚಂದ್ರನಲ್ಲಿ ಯಾವುದೇ ಭೌತಿಕವಾದ ಬದಲಾವಣೆಗಳೂ ನಡೆಯುವುದಿಲ್ಲ. ಇದು ಕೇವಲ ನೆರಳು ಬೆಳಕಿನ ಆಟ. ಸೂರ್ಯನನ್ನು ನಾವು ಎಂದಿಗೂ ನೇರ ಕಣ್ಣುಗಳಿಂದ ನೋಡಬಾರದು, ಅದು ಗ್ರಹಣದ ಸಮಯಕ್ಕೂ ಅನ್ವಯವಾಗುತ್ತದೆ. ಸೂರ್ಯನನ್ನು ನೋಡಬೇಕಾದರೆ, ಪ್ರಮಾಣೀಕರಿಸಲಾದ ಸೌರ ಕನ್ನಡಕವನ್ನು ಬಳಸಿ ನೋಡುವುದು ಸುರಕ್ಷಿತ. ಗ್ರಹಣದ ಸಮಯದಲ್ಲೂ ಕೂಡ ಸೌರ ಕನ್ನಡಕದ ಮೂಲಕವೇ ಸೂರ್ಯ ಗ್ರಹಣವನ್ನು ನೋಡಬೇಕು. ಬೈನಾಕ್ಯುಲರ್ ಅಥವಾ ಟೆಲಿಸ್ಕೋಪ್ ಬಳಸಿದರೆ, ಅವುಗಳಿಗೂ ಸೂಕ್ತವಾದ ಸೌರ ಶೋಧಕ (Sun Filters) ಅಳವಡಿಸಿಯೇ ನೋಡಬೇಕು. ಆದರೆ, ಚಂದ್ರಗ್ರಹಣ ಇದಕ್ಕೆ ವ್ಯತಿರಿಕ್ತವಾದದ್ದು. ಎಲ್ಲಾ ವಿಧದ ಚಂದ್ರ ಗ್ರಹಣಗಳನ್ನು ಬರಿಗಣ್ಣಿನಿಂದಲೇ ನೋಡಬಹುದು. ಕೆಲವು ಸಮಯಗಳಲ್ಲಿ ಹುಣ್ಣಿಮೆಯ ಚಂದ್ರ ಪ್ರಕಾಶಮಾನವಾಗಿ ಇರುವುದರಿಂದ ಬೈನಾಕ್ಯುಲರ್ ಮತ್ತು ಟೆಲಿಸ್ಕೋಪ್‌ಗಳಲ್ಲಿ ನೋಡಬೇಕಾದರೆ ಚಂದ್ರ ಶೋಧಕಗಳನ್ನು (Moon Filters) ಬಳಸುತ್ತಾರೆ.

ಈ ತಿಂಗಳ ನವೆಂಬರ್ 19ರಂದು ಹುಣ್ಣಿಮೆ. ಅಂದು ಆಗಸದಲ್ಲಿ ಭಾಗಶಃ ಚಂದ್ರ ಗ್ರಹಣ (Partial Lunar Eclipse) ಗೋಚರಿಸಲಿದೆ. ಈ ಗ್ರಹಣವನ್ನು ಅಮೆರಿಕಾ, ಯುರೋಪ್, ಪೂರ್ವ ಎಷ್ಯಾ ಹಾಗೂ ಆಸ್ಟ್ರೇಲಿಯಾ ಖಂಡಗಳಲ್ಲಿ ನೋಡಬಹುದಾಗಿದೆ. ಈಶಾನ್ಯ ಭಾರತದ ರಾಜ್ಯಗಳಲ್ಲಿ ಚಂದ್ರ ಹುಟ್ಟುವಾಗ ಈ ಗ್ರಹಣವನ್ನು ನೋಡಬಹುದಾಗಿರುತ್ತದೆ. ದಕ್ಷಿಣ ಭಾರತದಿಂದ ಈ ಗ್ರಹಣ ಗೋಚರಿಸುವುದಿಲ್ಲ. ಈ ಗ್ರಹಣದ ವಿಶೇಷ ಎಂದರೆ ಇದು ಮುಂದಿನ ಸುಮಾರು ಐದು ಶತಮಾನಗಳಲ್ಲಿ ನಡೆಯಬಹುದಾದ ಭಾಗಶಃ ಚಂದ್ರಗ್ರಹಣಗಳಲ್ಲಿಯೇ ಅತ್ಯಂತ ದೀರ್ಘವಾದದ್ದು. ಈ ಕಾರಣದಿಂದು ಈ ಭಾಗಶಃ ಚಂದ್ರ ಗ್ರಹಣ ಹೆಚ್ಚು ಸುದ್ದಿಯಲ್ಲಿದೆ. ಭಾಗಶಃ ಏಕೆಂದರೆ, ಚಂದ್ರ ಗ್ರಹಣದ ಸಮಯದಲ್ಲಿ ಭೂಮಿಯ ನೆರಳು ಚಂದ್ರನ ಶೇ.97 ಭಾಗದಲ್ಲಿ ಬೀಳುತ್ತಿರುತ್ತದೆ. ಶೇ. 100 ಭಾಗದಲ್ಲಿ ಬಿದ್ದಿದ್ದರೆ ಅದು ಪೂರ್ಣಚಂದ್ರ ಗ್ರಹಣವಾಗುತ್ತಿತ್ತು.

1451ರಿಂದ 2650ರವರೆಗೆ ಗೋಚರಿಸಿರುವ/ಗೋಚರಿಸಲಿರುವ ದೀರ್ಘವಾದ ಭಾಗಶಃ ಚಂದ್ರ ಗ್ರಹಣಗಳನ್ನು, ಅವುಗಳ ಅವಧಿಗೆ ಅನುಸಾರವಾಗಿ ಇಲ್ಲಿ ಪಟ್ಟಿ ಮಾಡಲಾಗಿದೆ.

1. 19.11.2021- 6 ಗಂಟೆ 2 ನಿಮಿಷ
2. 30.11.2039- 6 ಗಂಟೆ 0 ನಿಮಿಷ
3. 11.12.2057- 5 ಗಂಟೆ 59 ನಿಮಿಷ
4. 22.12.2075- 5 ಗಂಟೆ 58 ನಿಮಿಷ
5. 9.10.2489- 6 ಗಂಟೆ 0 ನಿಮಿಷ

ಮೇಲಿನ ಪಟ್ಟಿಗಳಲ್ಲಿ ನವೆಂಬರ್ 2021ರ ಭಾಗಶಃ ಚಂದ್ರ ಗ್ರಹಣ ಐದು ಶತಮಾನಗಳಲ್ಲಿಯೇ ದೀರ್ಘವಾದದ್ದು ಎಂಬುವುದು ತಿಳಿಯುತ್ತದೆ. ಈ ಹಿಂದೆ ಅಂದರೆ 2003ರ ನವೆಂಬರ್ ೯ರಂದು ನಡೆದ ಚಂದ್ರ ಗ್ರಹಣದ ಅವಧಿ 6 ಗಂಟೆ 3 ನಿಮಿಷಗಳಷ್ಟಿತ್ತು. ಆದರೆ, ಅದು ಭಾಗಶಃ ಚಂದ್ರ ಗ್ರಹಣವಾಗಿರದೆ, ಪೂರ್ಣ ಚಂದ್ರ ಗ್ರಹಣವಾಗಿತ್ತು.
ಈ ಕಾರಣಗಳಿಂದ ನವೆಂಬರ್ 19, 2021ರ ಭಾಗಶಃ ಚಂದ್ರ ಗ್ರಹಣ 15ನೇ ಶತಮಾನದಿಂದಲೂ ನಡೆದಿರುವ ಬಾಗಶಃ ಚಂದ್ರ ಗ್ರಹಣದಲ್ಲಿಯೇ ಅತ್ಯಂತ ದೀರ್ಘವಾದದ್ದು. ಇಂತಹದೇ ದೀರ್ಘವಾದ ಭಾಗಶಃ ಚಂದ್ರ ಗ್ರಹಣ ಮತ್ತೊಮ್ಮೆ ನಡೆಯವುದು ಫೆಬ್ರವರಿ 8, 2669ರಲ್ಲಿ!


ಇದನ್ನೂ ಓದಿ: ಬೆಳ್ಳಿಚುಕ್ಕಿ; ವಿಶ್ವದ ಪ್ರಥಮ ಬೆಳಕು – CMBR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...