Homeಮುಖಪುಟಐದು ಶತಮಾನಗಳಲ್ಲೇ ಅತ್ಯಂತ ದೀರ್ಘವಾದ ಭಾಗಶಃ ಚಂದ್ರ ಗ್ರಹಣ

ಐದು ಶತಮಾನಗಳಲ್ಲೇ ಅತ್ಯಂತ ದೀರ್ಘವಾದ ಭಾಗಶಃ ಚಂದ್ರ ಗ್ರಹಣ

- Advertisement -
- Advertisement -

ಆಗಸದ ಅಲೆಮಾರಿಗಳ ನೆರಳು ಬೆಳಕಿನಾಟವೇ ಗ್ರಹಣ. ಗ್ರಹಣದ ಸಮಯದಲ್ಲಿ ತಾರ್ಕಿಕ ನಿಲುವುಗಳಿಲ್ಲದ, ಅಸಂಬದ್ಧವಾದ ಮೂಡ ನಂಬಿಕೆಗಳನ್ನು ಮೂಟೆಗಟ್ಟಲೆ ಜನರ ಮನಸ್ಸಿನಲ್ಲಿ ತುರುಕುವ ಕೆಲಸವನ್ನು ಇಂದಿಗೂ ಹಲವು ಮಾಧ್ಯಮಗಳೂ ಮತ್ತು ಕೆಲವು ಸಂಸ್ಥೆಗಳು ನಡೆಸುತ್ತಲೇ ಬಂದಿದ್ದಾರೆ. ಜನಗಳು ಭಯಭೀತರಾಗಿ ಕುರುಡು ಭಕ್ತಿಯಿಂದ ತಮ್ಮ ಹತ್ತಿರ ಬಂದು ಒಂದಷ್ಟು ದುಡ್ಡು ಚೆಲ್ಲಬೇಕೆಂಬ ಬಯಕೆ ಅವರದ್ದು ಎಂಬುದು ಎಷ್ಟೋ ಜನರ ತಿಳಿವಳಿಕೆಯ ಭಾಗವಾಗದಿರುವುದು ದುಃಖದ ಸಂಗತಿಯಾಗಿದೆ. ಈ ತಿಂಗಳ ಭಾಗಶಃ ಚಂದ್ರಗ್ರಹಣ, ಮುಂದಿನ ಐದು ಶತಮಾನಗಳಲ್ಲಿಯೇ ದೀರ್ಘವಾದ ಚಂದ್ರ ಗ್ರಹಣ ಎಂಬ ಲೆಕ್ಕಚಾರವನ್ನು ಖಗೋಳ ವಿಜ್ಞಾನದಿಂದ ತಿಳಿಯಲಾಗಿದೆ. ಶತಮಾನಗಳಷ್ಟು ಭಯಪಡಿಸುವ ಮೂಢನಂಬಿಕೆಗಳನ್ನು ಇದರ ಸುತ್ತ ಈಗ ಹುಟ್ಟು ಹಾಕುತ್ತಾರೋ ಏನೋ?

ಭೂಮಿ ಸೂರ್ಯನ ಸುತ್ತ, ಚಂದ್ರ ಭೂಮಿಯ ಸುತ್ತ ಸುತ್ತುತ್ತಿರಬೇಕಾದರೆ, ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಹಾದುಹೋಗುವಾಗ, ಈ ಮೂರೂ ಆಕಾಶಕಾಯಗಳು ಒಂದೇ ಸರಳ ರೇಖೆಯಲ್ಲಿ ಬರುತ್ತವೆ. ಇಂತಹ ಸಂದರ್ಭದಲ್ಲಿ ಚಂದ್ರ ಸೂರ್ಯನನ್ನು ಮರೆಮಾಚುತ್ತದೆ, ಆಗ ಸೂರ್ಯನ ಬೆಳಕು ಭೂಮಿಯ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಬೀಳುವುದಿಲ್ಲ. ಇದು ಸೂರ್ಯ ಗ್ರಹಣ. ಸೂರ್ಯ ಗ್ರಹಣ ಅಮಾವಾಸ್ಯೆಯ ದಿನದಂದೇ ನಡೆಯುತ್ತದೆ. ಆದರೆ, ಇದೇ ರೀತಿ ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಹಾದುಹೋಗುವಾಗ, ಆ ಸಮಯದಲ್ಲೂ ಮೂರು ಆಕಾಶಕಾಯಗಳು ಸರಳ ರೇಖೆಯಲ್ಲಿ ಬರುತ್ತವೆ. ಆದರೆ ಇಲ್ಲಿ, ಭೂಮಿಯ ನೆರಳು ಚಂದ್ರನ ಮೇಲೆ ಬೀಳುತ್ತದೆ. ಹುಣ್ಣಿಮೆಯ ಚಂದ್ರನನ್ನು ಭೂಮಿಯ ನೆರಳು ಆವರಿಸುತ್ತಾ ಹೋಗುತ್ತದೆ. ಇದು ಚಂದ್ರ ಗ್ರಹಣ. ಚಂದ್ರ ಗ್ರಹಣ ಹುಣ್ಣಿಮೆಯಂದೇ ನಡೆಯುತ್ತದೆ.

ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ (ಸರಳ ರೇಖೆಯಲ್ಲಿ), ಸೂರ್ಯಗ್ರಹಣ ಮತ್ತು ಅಮಾವಾಸ್ಯೆ. ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ (ಸರಳ ರೇಖೆಯಲ್ಲಿ), ಚಂದ್ರಗ್ರಹಣ ಮತ್ತು ಹುಣ್ಣಿಮೆ. ಹಾಗಾದರೆ, ಪ್ರತಿ ಅಮಾವಾಸ್ಯೆ ಮತ್ತು ಹುಣ್ಣಿಮೆಯಂದು ಗ್ರಹಣಗಳು ನಡೆಯುತ್ತವೆಯಾ? ಇಲ್ಲಾ, ಇದಕ್ಕೆ ಕಾರಣ ಚಂದ್ರ ಭೂಮಿಯ ಸುತ್ತ ಸುತ್ತುತ್ತಿರುವ ಕಕ್ಷೆ (Orbit).

ಭೂಮಿ ಸೂರ್ಯನ ಸುತ್ತು ಸುತ್ತುತ್ತಿರುವ ಕಕ್ಷೆಯು ಮತ್ತು ಚಂದ್ರ ಭೂಮಿಯ ಸುತ್ತು ಸುತ್ತುತ್ತಿರುವ ಕಕ್ಷೆಯು ಒಂದೆ ಸಮತಲದಲ್ಲಿ ಇಲ್ಲ. ಈ ಎರಡೂ ಕಕ್ಷೆಗಳು ಸುಮಾರು ಐದು ಡಿಗ್ರಿಯಷ್ಟು ಓರೆಯಾಗಿದ್ದು, ಎರಡು ಬಿಂದುಗಳಲ್ಲಿ ಮಾತ್ರ ಸಂಧಿಸುತ್ತವೆ (Intercepts). ಗ್ರಹಣಗಳು ನಡೆಯಬೇಕಾದರೆ ಅದಕ್ಕಿರುವ ಮೂಲ ನಿಯಮ: ಸೂರ್ಯ, ಭೂಮಿ ಮತ್ತು ಚಂದ್ರ ಒಂದೇ ಸರಳ ರೇಖೆಯಲ್ಲಿ ಇರುವ ಸಂದರ್ಭ ಬರಬೇಕಿರುವುದು. ಇಂತಹ ಸಂದರ್ಭ ಉಂಟಾಗಬೇಕೆಂದರೆ, ಚಂದ್ರನು ತನ್ನ ಕಕ್ಷೆಯಲ್ಲಿ ಸುತ್ತುವಾಗ, ಭೂಮಿಯ ಕಕ್ಷೆಯ ಸಮತಲದಲ್ಲಿ (Ecliptic Plane) ಸಂಧಿಸುವ ಬಿಂದುಗಳಲ್ಲಿ ಅದು ಬಂದಾಗ ಹಾಗೂ ಆಗ ಅಮಾವಾಸ್ಯೆ ಅಥವಾ ಹುಣ್ಣಿಮೆ ಇದ್ದರೆ ಮಾತ್ರ ಗ್ರಹಣಗಳು ನಡೆಯಲು ಸಾಧ್ಯ. ಈ ಕಾರಣದಿಂದ ಪ್ರತಿ ಅಮಾವಾಸ್ಯೆ ಮತ್ತು ಹುಣ್ಣಿಮೆಯಂದು ಗ್ರಹಣಗಳು ನಡೆಯುವುದಿಲ್ಲ ಹಾಗೂ ಗ್ರಹಣಗಳು ವಿರಳವಾಗಿರುವುದು. ಆದರೆ, ಭೂಮಿ ಮತ್ತು ಚಂದ್ರನ ಚಲನೆಗಳನ್ನು ನಾವು ಅತ್ಯಂತ ಸೂಕ್ಷ್ಮವಾಗಿ ಗಮನಿಸಿ ಗ್ರಹಿಸಲು ಸಾಧ್ಯವಾಗಿರುವುದರಿಂದ ನಿಖರವಾಗಿ ಯಾವಾಗ ಗ್ರಹಣಗಳು ನಡೆಯುತ್ತವೆ ಎಂಬುದನ್ನು ಲೆಕ್ಕ ಹಾಕಬಹುದಾಗಿದೆ.

ಸೂರ್ಯ ಗ್ರಹಣವನ್ನು ವೀಕ್ಷಿಸುವಾಗ ಕೆಲವು ಸುರಕ್ಷತಾ ಮೆನ್ನೆಚ್ಚರಿಕೆಯನ್ನು ವಹಿಸಲೇಬೇಕಾಗಿರುತ್ತದೆ. ಸಾಮಾನ್ಯವಾಗಿ ಸೂರ್ಯನನ್ನು ಎಂದೂ ಬರಿಗಣ್ಣಿನಲ್ಲಿ ನೋಡುವುದು ತಪ್ಪು. ಮನುಷ್ಯನ ಅಂಗಗಳಲ್ಲಿ ಕಣ್ಣು ಅತೀ ಸೂಕ್ಷ್ಮವಾದದ್ದು. ಸೂರ್ಯನ ತೀಕ್ಷ್ಣವಾದ ಕಿರಣಗಳು ಕಣ್ಣಿನ ರೆಟಿನಾವನ್ನು ಹಾಳು ಮಾಡುವ ಸಂಭವವಿರುತ್ತದೆ. ಯಾವುದೇ ಸಮಯದಲ್ಲೂ ಕೂಡ ಸೂರ್ಯನನ್ನು ಬರಿಗಣ್ಣಿನಿಂದ ನೋಡಬಾರದು. ಗ್ರಹಣದ ಸಮಯದಲ್ಲೂ ಕೂಡು ಭೂಮಿಯ ಜೀವರಾಶಿಗೆ ತೊಂದರೆ ಮಾಡವ ಯಾವ ಹಾನಿಕಾರಕ
ಕಿರಣಗಳೂ ಸುರ್ಯನಿಂದ ಬರುವುದಿಲ್ಲ. ಇವೆಲ್ಲವೂ ಕೇವಲ ಕಪೋಲಕಲ್ಪಿತವಾದವು. ಗ್ರಹಣಗಳು ಕೇವಲ ಸಾಪೇಕ್ಷವಾದ (relative) ಘಟನೆಗಳು. ಗ್ರಹಣದ ಸಮಯದಲ್ಲಿ ಭೂಮಿ, ಸೂರ್ಯ ಮತ್ತು ಚಂದ್ರನಲ್ಲಿ ಯಾವುದೇ ಭೌತಿಕವಾದ ಬದಲಾವಣೆಗಳೂ ನಡೆಯುವುದಿಲ್ಲ. ಇದು ಕೇವಲ ನೆರಳು ಬೆಳಕಿನ ಆಟ. ಸೂರ್ಯನನ್ನು ನಾವು ಎಂದಿಗೂ ನೇರ ಕಣ್ಣುಗಳಿಂದ ನೋಡಬಾರದು, ಅದು ಗ್ರಹಣದ ಸಮಯಕ್ಕೂ ಅನ್ವಯವಾಗುತ್ತದೆ. ಸೂರ್ಯನನ್ನು ನೋಡಬೇಕಾದರೆ, ಪ್ರಮಾಣೀಕರಿಸಲಾದ ಸೌರ ಕನ್ನಡಕವನ್ನು ಬಳಸಿ ನೋಡುವುದು ಸುರಕ್ಷಿತ. ಗ್ರಹಣದ ಸಮಯದಲ್ಲೂ ಕೂಡ ಸೌರ ಕನ್ನಡಕದ ಮೂಲಕವೇ ಸೂರ್ಯ ಗ್ರಹಣವನ್ನು ನೋಡಬೇಕು. ಬೈನಾಕ್ಯುಲರ್ ಅಥವಾ ಟೆಲಿಸ್ಕೋಪ್ ಬಳಸಿದರೆ, ಅವುಗಳಿಗೂ ಸೂಕ್ತವಾದ ಸೌರ ಶೋಧಕ (Sun Filters) ಅಳವಡಿಸಿಯೇ ನೋಡಬೇಕು. ಆದರೆ, ಚಂದ್ರಗ್ರಹಣ ಇದಕ್ಕೆ ವ್ಯತಿರಿಕ್ತವಾದದ್ದು. ಎಲ್ಲಾ ವಿಧದ ಚಂದ್ರ ಗ್ರಹಣಗಳನ್ನು ಬರಿಗಣ್ಣಿನಿಂದಲೇ ನೋಡಬಹುದು. ಕೆಲವು ಸಮಯಗಳಲ್ಲಿ ಹುಣ್ಣಿಮೆಯ ಚಂದ್ರ ಪ್ರಕಾಶಮಾನವಾಗಿ ಇರುವುದರಿಂದ ಬೈನಾಕ್ಯುಲರ್ ಮತ್ತು ಟೆಲಿಸ್ಕೋಪ್‌ಗಳಲ್ಲಿ ನೋಡಬೇಕಾದರೆ ಚಂದ್ರ ಶೋಧಕಗಳನ್ನು (Moon Filters) ಬಳಸುತ್ತಾರೆ.

ಈ ತಿಂಗಳ ನವೆಂಬರ್ 19ರಂದು ಹುಣ್ಣಿಮೆ. ಅಂದು ಆಗಸದಲ್ಲಿ ಭಾಗಶಃ ಚಂದ್ರ ಗ್ರಹಣ (Partial Lunar Eclipse) ಗೋಚರಿಸಲಿದೆ. ಈ ಗ್ರಹಣವನ್ನು ಅಮೆರಿಕಾ, ಯುರೋಪ್, ಪೂರ್ವ ಎಷ್ಯಾ ಹಾಗೂ ಆಸ್ಟ್ರೇಲಿಯಾ ಖಂಡಗಳಲ್ಲಿ ನೋಡಬಹುದಾಗಿದೆ. ಈಶಾನ್ಯ ಭಾರತದ ರಾಜ್ಯಗಳಲ್ಲಿ ಚಂದ್ರ ಹುಟ್ಟುವಾಗ ಈ ಗ್ರಹಣವನ್ನು ನೋಡಬಹುದಾಗಿರುತ್ತದೆ. ದಕ್ಷಿಣ ಭಾರತದಿಂದ ಈ ಗ್ರಹಣ ಗೋಚರಿಸುವುದಿಲ್ಲ. ಈ ಗ್ರಹಣದ ವಿಶೇಷ ಎಂದರೆ ಇದು ಮುಂದಿನ ಸುಮಾರು ಐದು ಶತಮಾನಗಳಲ್ಲಿ ನಡೆಯಬಹುದಾದ ಭಾಗಶಃ ಚಂದ್ರಗ್ರಹಣಗಳಲ್ಲಿಯೇ ಅತ್ಯಂತ ದೀರ್ಘವಾದದ್ದು. ಈ ಕಾರಣದಿಂದು ಈ ಭಾಗಶಃ ಚಂದ್ರ ಗ್ರಹಣ ಹೆಚ್ಚು ಸುದ್ದಿಯಲ್ಲಿದೆ. ಭಾಗಶಃ ಏಕೆಂದರೆ, ಚಂದ್ರ ಗ್ರಹಣದ ಸಮಯದಲ್ಲಿ ಭೂಮಿಯ ನೆರಳು ಚಂದ್ರನ ಶೇ.97 ಭಾಗದಲ್ಲಿ ಬೀಳುತ್ತಿರುತ್ತದೆ. ಶೇ. 100 ಭಾಗದಲ್ಲಿ ಬಿದ್ದಿದ್ದರೆ ಅದು ಪೂರ್ಣಚಂದ್ರ ಗ್ರಹಣವಾಗುತ್ತಿತ್ತು.

1451ರಿಂದ 2650ರವರೆಗೆ ಗೋಚರಿಸಿರುವ/ಗೋಚರಿಸಲಿರುವ ದೀರ್ಘವಾದ ಭಾಗಶಃ ಚಂದ್ರ ಗ್ರಹಣಗಳನ್ನು, ಅವುಗಳ ಅವಧಿಗೆ ಅನುಸಾರವಾಗಿ ಇಲ್ಲಿ ಪಟ್ಟಿ ಮಾಡಲಾಗಿದೆ.

1. 19.11.2021- 6 ಗಂಟೆ 2 ನಿಮಿಷ
2. 30.11.2039- 6 ಗಂಟೆ 0 ನಿಮಿಷ
3. 11.12.2057- 5 ಗಂಟೆ 59 ನಿಮಿಷ
4. 22.12.2075- 5 ಗಂಟೆ 58 ನಿಮಿಷ
5. 9.10.2489- 6 ಗಂಟೆ 0 ನಿಮಿಷ

ಮೇಲಿನ ಪಟ್ಟಿಗಳಲ್ಲಿ ನವೆಂಬರ್ 2021ರ ಭಾಗಶಃ ಚಂದ್ರ ಗ್ರಹಣ ಐದು ಶತಮಾನಗಳಲ್ಲಿಯೇ ದೀರ್ಘವಾದದ್ದು ಎಂಬುವುದು ತಿಳಿಯುತ್ತದೆ. ಈ ಹಿಂದೆ ಅಂದರೆ 2003ರ ನವೆಂಬರ್ ೯ರಂದು ನಡೆದ ಚಂದ್ರ ಗ್ರಹಣದ ಅವಧಿ 6 ಗಂಟೆ 3 ನಿಮಿಷಗಳಷ್ಟಿತ್ತು. ಆದರೆ, ಅದು ಭಾಗಶಃ ಚಂದ್ರ ಗ್ರಹಣವಾಗಿರದೆ, ಪೂರ್ಣ ಚಂದ್ರ ಗ್ರಹಣವಾಗಿತ್ತು.
ಈ ಕಾರಣಗಳಿಂದ ನವೆಂಬರ್ 19, 2021ರ ಭಾಗಶಃ ಚಂದ್ರ ಗ್ರಹಣ 15ನೇ ಶತಮಾನದಿಂದಲೂ ನಡೆದಿರುವ ಬಾಗಶಃ ಚಂದ್ರ ಗ್ರಹಣದಲ್ಲಿಯೇ ಅತ್ಯಂತ ದೀರ್ಘವಾದದ್ದು. ಇಂತಹದೇ ದೀರ್ಘವಾದ ಭಾಗಶಃ ಚಂದ್ರ ಗ್ರಹಣ ಮತ್ತೊಮ್ಮೆ ನಡೆಯವುದು ಫೆಬ್ರವರಿ 8, 2669ರಲ್ಲಿ!


ಇದನ್ನೂ ಓದಿ: ಬೆಳ್ಳಿಚುಕ್ಕಿ; ವಿಶ್ವದ ಪ್ರಥಮ ಬೆಳಕು – CMBR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....