Homeಕರ್ನಾಟಕಟೊಮಟೊ ಟ್ರಾಲ್‌: ‘ಬೆಲೆ ಏರಿಕೆ’ ಕಂಡು ತರಹೇವಾರಿ ಮೀಮ್ಸ್‌ ಸೃಷ್ಟಿ; ನೋಡಿ ನಕ್ಕುಬಿಡಿ

ಟೊಮಟೊ ಟ್ರಾಲ್‌: ‘ಬೆಲೆ ಏರಿಕೆ’ ಕಂಡು ತರಹೇವಾರಿ ಮೀಮ್ಸ್‌ ಸೃಷ್ಟಿ; ನೋಡಿ ನಕ್ಕುಬಿಡಿ

- Advertisement -
- Advertisement -

ಒಂದು ಕೆ.ಜಿ. ಟೊಮಟೊ ಬೆಲೆ 110 ರೂಪಾಯಿ ದಾಟಿದೆ. ಕೆಲವು ಕಡೆ 130 ದಾಟಿದೆ. ಸಾಮಾನ್ಯವಾಗಿ ಯಾವುದೇ ಬೆಲೆ ಏರಿಕೆಯಾದಾಗಲೂ ಸಾಮಾಜಿಕ ಮಾಧ್ಯಮಗಳಲ್ಲಿ ‘ಟ್ರಾಲ್‌’ಗಳಾಗುತ್ತವೆ. ಈಗ ಟೊಮಟೊ ಟ್ರಾಲ್‌‌ಗೆ ಗುರಿಯಾಗಿದ್ದು, ಜನರು ತರಹೇವಾರಿ ಮೀಮ್ಸ್‌‌ ಮಾಡಿದ್ದಾರೆ.

ಟೊಮಟೊ ಬೆಲೆಯು ಪೆಟ್ರೋಲ್‌, ಡೀಸೆಲ್‌‌ ಬೆಲೆಯನ್ನು ಹಿಂದಿಕ್ಕಿದೆ ಎಂಬ ಟ್ರೋಲ್‌ನಿಂದ ಹಿಡಿದು, ನಿತ್ಯದ ಬದುಕಿನಿಂದ ಟೊಮಟೊ ದೂರವಾಗುತ್ತಿದೆ ಎಂಬುವವರೆಗೂ ಟ್ರಾಲ್‌‌ಗಳು ಹಬ್ಬಿವೆ.

ಇಂಡಿಯಾ ಟುಡೇ ವಾಹಿನಿಯು ‘ಟೊಮಟೊ ಲೋನ್‌’ ಎಂಬ ಕಾಮಿಕ್‌ ಸೃಷ್ಟಿಸಿದ್ದು, ಸಾಮಾಜಿಕ ಮಾಧ್ಯಮಗಳ ಬಳಕೆದಾರರು ವ್ಯಾಪಕವಾಗಿ ಹಂಚಿಕೊಂಡಿದ್ದಾರೆ.

ಪೆಟ್ರೋಲ್‌, ಡೀಸೆಲ್‌ಗಿಂತ ಟೊಮಟೊ ಬೆಲೆ ಹೆಚ್ಚಾಗಿದೆ ಎಂಬುದನ್ನು ಬಿಂಬಿಸುವ ಹಲವು ಮೀಮ್‌‌ಗಳು ಹರಿದಾಡಿವೆ. ಅದರಲ್ಲಿ ಕೆಲವು ಹೀಗಿವೆ:

ಈ ಹಿಂದೆ ಈರುಳ್ಳಿ ಬೆಲೆ ಏರಿಕೆಯಾದಾಗ ಅರ್ಥಸಚಿವೆ ನಿರ್ಮಲಾ ಸೀತರಾಮನ್‌ ಅವರು, ‘ನಾನು ಈರುಳ್ಳಿ ಬಳಸುವುದಿಲ್ಲ’ ಎಂದಿದ್ದನ್ನು ಈಗ ಮೀಮ್‌ಗೆ ಬಳಸಲಾಗಿದೆ. “ನಾನು ಬಳಸುವುದಿಲ್ಲ ಟೊಮಟೊ, ನನ್ನ ಊಟವನ್ನು ಆರ್ಡರ್‌ ಮಾಡಲಿಕ್ಕಿದೆ ಝೊಮೊಟೊ’ ಎಂದು ಟ್ರಾಲ್‌ ಮಾಡಲಾಗಿದೆ.

ಟೊಮಟೊ ಬೆಲೆ ಗಗನಕ್ಕೇರಿದೆ ಎಂಬುದನ್ನು, ‘ಜ್ಯುವೆಲರಿ’ಗಳಿಗೆ ಹೋಲಿಕೆ ಮಾಡಲಾಗಿದೆ. ‘ಬೆಸ್ಟ್‌ ಪ್ರಪೊಸಲ್‌ ರಿಂಗ್‌’, ‘ಅತ್ಯಂತ ಬೆಲೆಬಾಳುವ ವೆಡ್ಡಿಂಗ್ ರಿಂಗ್‌’ ಎಂದೆಲ್ಲ ಬಿಂಬಿಸಲಾಗಿದೆ.

‘ಧೂಮ್’ ಚಿತ್ರದಲ್ಲಿ ರಿತ್ವಿಕ್‌ ರೋಷನ್‌ ಡೈಮಂಡ್ ಕದಿಯುವುದನ್ನು, ಟೊಮೊಟೊ ಕದಿಯುತ್ತಿರುವಂತೆ ಮೀಮ್‌ ಮಾಡಲಾಗಿದೆ.

ಫೇಸ್‌ಬುಕ್‌ ಬಳಕೆದಾರ, ಸಿನಿಮಾ ವಿಮರ್ಶಕ ಎಲ್‌.ಎಂ.ಸಂತೋಷ್‌ಕುಮಾರ್‌‌ ಅವರು ಸರಣಿಯಾಗಿ ಹಾಸ್ಯ ಚಟಾಕಿ ಹಾರಿಸಿದ್ದಾರೆ.

“ಪ್ರತಿಷ್ಟಿತ ಬಡಾವಣೆಯಮನೆಯೊಂದರ ಮೇಲೆ ಐಟಿ ಇಲಾಖೆ ದಾಳಿ, ಅಕ್ರಮವಾಗಿಕುಂಡಗಳಲ್ಲಿ ಟೊಮೆಟೋ ಬೆಳೆದುಮಾರುತ್ತಿದ್ದವರ ಬಂಧನ….(ಈ ಥರಾನೂ ಇನ್ನು ಮುಂದೆ ಸುದ್ದಿ ಬರಬಹುದು)”

“ಇಷ್ಟು ದಿನ… ಮನೆಯಲ್ಲೇ ಕುಂಡಗಳಲ್ಲಿ ಟೊಮೆಟೋ ಬೆಳೆಯುವುದು ಹೇಗೆ? ಅಂತ ವೀಡಿಯೋ ಕಾಣಿಸ್ತಿದ್ವು. ಇನ್ನು ಮೇಲೆ.. ಕುಂಡಗಳಲ್ಲಿ ಬಿಟ್ಟಿರುವ ಟೊಮೆಟೋ ಅನ್ನುಕಳುವಾಗದಿರುವಂತೆ ನೋಡಿಕೊಳ್ಳುವುದು ಹೇಗೆ? ಅಂತಲೂ ವೀಡಿಯೋಗಳು ಬರಬಹುದು”

“ಏನು ಅಡುಗೆ ಹಬ್ಬಕ್ಕೆ? ಏನಿಲ್ಲಪ್ಪ…. ಒಬ್ಬಟ್ಟು, ಕೋಸಂಬರಿ, ಅನ್ನ, ಸಾರು, ಹಪ್ಪಳ ಇನ್ನೇನು ಸ್ಪೆಷಲ್ಲು? !ಟೊಮ್ಯಾಟೊ ಗೊಜ್ಜು!! ಟೊಮ್ಯಾಟೊ ಗೊಜ್ಜಾ?”

“ಎಲ್ಲ ಅಂಗಡಿಗಳಲ್ಲಿ ಮಾಮೂಲಿ ತಗೊತಾ ಬರ್ತಿರ್ತಾನೆ ಒಬ್ಬ ಪೊಲೀಸು….ತರಕಾರಿ ಅಂಗಡಿ ಬಂದಾಗ ಎಂದಿನಂತೆ….. “ಟೊಮೆಟೋ ಹಾಕ್ಬಿಡಮ್ಮ” ಅಂತಾನೆ. ತರಕಾರಿ ಅಂಗಡಿಯವಳು: ಸ್ವಾಮಿ….. ಬೇಕಿದ್ರೆ ದುಡ್ಡು ಕೇಳಿ… ಕೊಟ್ಬಿಡ್ತೀನಿ.. ಟೊಮೆಟೋ ಕೇಳಿ ನಮ್ಮ‌ಹೊಟ್ಟೆ ಮೇಲೆ ಹೊಡೀಬೇಡಿ!!

– ಹೀಗೆ ಸಂತೋಷ್‌ ಕುಮಾರ್‌ ಎಲ್.ಎಂ. ಜೋಕ್‌ಗಳನ್ನು ಬರೆದಿದ್ದಾರೆ.

ಮೂರು ವರ್ಷಗಳ ಹಿಂದೆ ಬೆಲೆ ಏರಿಕೆಯಾದಾಗ ಮಾಡಿದ ಮೀಮ್‌ಅನ್ನು ‘ಇತಿಹಾಸ ಮರುಕಳಿಸಿತು’ ಎಂದು ಪ್ರಶಾಂತ್‌ ಸಾಗರ ಎಂಬವರು ಹಂಚಿಕೊಂಡಿದ್ದಾರೆ.

ಲಕ್ಷ್ಮಣ್‌ ಎಂಬವರು ಹೀಗೆ ಪೋಸ್ಟ್‌ ಮಾಡಿದ್ದಾರೆ: “ಲೋ ಬ್ಯಾಚುಲರ್ಗಳಾ, ಮನೆಗೆ ಪ್ರತಿದಿನ ಎರಡೆರೆಡು ಕೇಜಿ ಟೊಮ್ಯಾಟೋ ತಗಂಡೋಗ್ರಿ, ನಮ್ಮ ಹುಡುಗನಿಗೆ ಜವಾಬ್ದಾರಿ ಬಂದೈತೆ ಅಂತಾ ತಿಳ್ಕಂಡ್ ನಿಮ್ಗೆ ಮದುವೆ ಮಾಡ್ಬೋದ್”


ಇದನ್ನೂ ಓದಿರಿ: ಗದಗ: ಜಂಟಿ ಕೃಷಿ ನಿರ್ದೇಶಕರ ಮನೆ ಮೇಲೆ ಎಸಿಬಿ ದಾಳಿ, 3.5 ಕೋಟಿ ಮೌಲ್ಯದ ಚಿನ್ನ ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....