Homeಕರ್ನಾಟಕಟೊಮಟೊ ಟ್ರಾಲ್‌: ‘ಬೆಲೆ ಏರಿಕೆ’ ಕಂಡು ತರಹೇವಾರಿ ಮೀಮ್ಸ್‌ ಸೃಷ್ಟಿ; ನೋಡಿ ನಕ್ಕುಬಿಡಿ

ಟೊಮಟೊ ಟ್ರಾಲ್‌: ‘ಬೆಲೆ ಏರಿಕೆ’ ಕಂಡು ತರಹೇವಾರಿ ಮೀಮ್ಸ್‌ ಸೃಷ್ಟಿ; ನೋಡಿ ನಕ್ಕುಬಿಡಿ

- Advertisement -
- Advertisement -

ಒಂದು ಕೆ.ಜಿ. ಟೊಮಟೊ ಬೆಲೆ 110 ರೂಪಾಯಿ ದಾಟಿದೆ. ಕೆಲವು ಕಡೆ 130 ದಾಟಿದೆ. ಸಾಮಾನ್ಯವಾಗಿ ಯಾವುದೇ ಬೆಲೆ ಏರಿಕೆಯಾದಾಗಲೂ ಸಾಮಾಜಿಕ ಮಾಧ್ಯಮಗಳಲ್ಲಿ ‘ಟ್ರಾಲ್‌’ಗಳಾಗುತ್ತವೆ. ಈಗ ಟೊಮಟೊ ಟ್ರಾಲ್‌‌ಗೆ ಗುರಿಯಾಗಿದ್ದು, ಜನರು ತರಹೇವಾರಿ ಮೀಮ್ಸ್‌‌ ಮಾಡಿದ್ದಾರೆ.

ಟೊಮಟೊ ಬೆಲೆಯು ಪೆಟ್ರೋಲ್‌, ಡೀಸೆಲ್‌‌ ಬೆಲೆಯನ್ನು ಹಿಂದಿಕ್ಕಿದೆ ಎಂಬ ಟ್ರೋಲ್‌ನಿಂದ ಹಿಡಿದು, ನಿತ್ಯದ ಬದುಕಿನಿಂದ ಟೊಮಟೊ ದೂರವಾಗುತ್ತಿದೆ ಎಂಬುವವರೆಗೂ ಟ್ರಾಲ್‌‌ಗಳು ಹಬ್ಬಿವೆ.

ಇಂಡಿಯಾ ಟುಡೇ ವಾಹಿನಿಯು ‘ಟೊಮಟೊ ಲೋನ್‌’ ಎಂಬ ಕಾಮಿಕ್‌ ಸೃಷ್ಟಿಸಿದ್ದು, ಸಾಮಾಜಿಕ ಮಾಧ್ಯಮಗಳ ಬಳಕೆದಾರರು ವ್ಯಾಪಕವಾಗಿ ಹಂಚಿಕೊಂಡಿದ್ದಾರೆ.

ಪೆಟ್ರೋಲ್‌, ಡೀಸೆಲ್‌ಗಿಂತ ಟೊಮಟೊ ಬೆಲೆ ಹೆಚ್ಚಾಗಿದೆ ಎಂಬುದನ್ನು ಬಿಂಬಿಸುವ ಹಲವು ಮೀಮ್‌‌ಗಳು ಹರಿದಾಡಿವೆ. ಅದರಲ್ಲಿ ಕೆಲವು ಹೀಗಿವೆ:

ಈ ಹಿಂದೆ ಈರುಳ್ಳಿ ಬೆಲೆ ಏರಿಕೆಯಾದಾಗ ಅರ್ಥಸಚಿವೆ ನಿರ್ಮಲಾ ಸೀತರಾಮನ್‌ ಅವರು, ‘ನಾನು ಈರುಳ್ಳಿ ಬಳಸುವುದಿಲ್ಲ’ ಎಂದಿದ್ದನ್ನು ಈಗ ಮೀಮ್‌ಗೆ ಬಳಸಲಾಗಿದೆ. “ನಾನು ಬಳಸುವುದಿಲ್ಲ ಟೊಮಟೊ, ನನ್ನ ಊಟವನ್ನು ಆರ್ಡರ್‌ ಮಾಡಲಿಕ್ಕಿದೆ ಝೊಮೊಟೊ’ ಎಂದು ಟ್ರಾಲ್‌ ಮಾಡಲಾಗಿದೆ.

ಟೊಮಟೊ ಬೆಲೆ ಗಗನಕ್ಕೇರಿದೆ ಎಂಬುದನ್ನು, ‘ಜ್ಯುವೆಲರಿ’ಗಳಿಗೆ ಹೋಲಿಕೆ ಮಾಡಲಾಗಿದೆ. ‘ಬೆಸ್ಟ್‌ ಪ್ರಪೊಸಲ್‌ ರಿಂಗ್‌’, ‘ಅತ್ಯಂತ ಬೆಲೆಬಾಳುವ ವೆಡ್ಡಿಂಗ್ ರಿಂಗ್‌’ ಎಂದೆಲ್ಲ ಬಿಂಬಿಸಲಾಗಿದೆ.

‘ಧೂಮ್’ ಚಿತ್ರದಲ್ಲಿ ರಿತ್ವಿಕ್‌ ರೋಷನ್‌ ಡೈಮಂಡ್ ಕದಿಯುವುದನ್ನು, ಟೊಮೊಟೊ ಕದಿಯುತ್ತಿರುವಂತೆ ಮೀಮ್‌ ಮಾಡಲಾಗಿದೆ.

ಫೇಸ್‌ಬುಕ್‌ ಬಳಕೆದಾರ, ಸಿನಿಮಾ ವಿಮರ್ಶಕ ಎಲ್‌.ಎಂ.ಸಂತೋಷ್‌ಕುಮಾರ್‌‌ ಅವರು ಸರಣಿಯಾಗಿ ಹಾಸ್ಯ ಚಟಾಕಿ ಹಾರಿಸಿದ್ದಾರೆ.

“ಪ್ರತಿಷ್ಟಿತ ಬಡಾವಣೆಯಮನೆಯೊಂದರ ಮೇಲೆ ಐಟಿ ಇಲಾಖೆ ದಾಳಿ, ಅಕ್ರಮವಾಗಿಕುಂಡಗಳಲ್ಲಿ ಟೊಮೆಟೋ ಬೆಳೆದುಮಾರುತ್ತಿದ್ದವರ ಬಂಧನ….(ಈ ಥರಾನೂ ಇನ್ನು ಮುಂದೆ ಸುದ್ದಿ ಬರಬಹುದು)”

“ಇಷ್ಟು ದಿನ… ಮನೆಯಲ್ಲೇ ಕುಂಡಗಳಲ್ಲಿ ಟೊಮೆಟೋ ಬೆಳೆಯುವುದು ಹೇಗೆ? ಅಂತ ವೀಡಿಯೋ ಕಾಣಿಸ್ತಿದ್ವು. ಇನ್ನು ಮೇಲೆ.. ಕುಂಡಗಳಲ್ಲಿ ಬಿಟ್ಟಿರುವ ಟೊಮೆಟೋ ಅನ್ನುಕಳುವಾಗದಿರುವಂತೆ ನೋಡಿಕೊಳ್ಳುವುದು ಹೇಗೆ? ಅಂತಲೂ ವೀಡಿಯೋಗಳು ಬರಬಹುದು”

“ಏನು ಅಡುಗೆ ಹಬ್ಬಕ್ಕೆ? ಏನಿಲ್ಲಪ್ಪ…. ಒಬ್ಬಟ್ಟು, ಕೋಸಂಬರಿ, ಅನ್ನ, ಸಾರು, ಹಪ್ಪಳ ಇನ್ನೇನು ಸ್ಪೆಷಲ್ಲು? !ಟೊಮ್ಯಾಟೊ ಗೊಜ್ಜು!! ಟೊಮ್ಯಾಟೊ ಗೊಜ್ಜಾ?”

“ಎಲ್ಲ ಅಂಗಡಿಗಳಲ್ಲಿ ಮಾಮೂಲಿ ತಗೊತಾ ಬರ್ತಿರ್ತಾನೆ ಒಬ್ಬ ಪೊಲೀಸು….ತರಕಾರಿ ಅಂಗಡಿ ಬಂದಾಗ ಎಂದಿನಂತೆ….. “ಟೊಮೆಟೋ ಹಾಕ್ಬಿಡಮ್ಮ” ಅಂತಾನೆ. ತರಕಾರಿ ಅಂಗಡಿಯವಳು: ಸ್ವಾಮಿ….. ಬೇಕಿದ್ರೆ ದುಡ್ಡು ಕೇಳಿ… ಕೊಟ್ಬಿಡ್ತೀನಿ.. ಟೊಮೆಟೋ ಕೇಳಿ ನಮ್ಮ‌ಹೊಟ್ಟೆ ಮೇಲೆ ಹೊಡೀಬೇಡಿ!!

– ಹೀಗೆ ಸಂತೋಷ್‌ ಕುಮಾರ್‌ ಎಲ್.ಎಂ. ಜೋಕ್‌ಗಳನ್ನು ಬರೆದಿದ್ದಾರೆ.

ಮೂರು ವರ್ಷಗಳ ಹಿಂದೆ ಬೆಲೆ ಏರಿಕೆಯಾದಾಗ ಮಾಡಿದ ಮೀಮ್‌ಅನ್ನು ‘ಇತಿಹಾಸ ಮರುಕಳಿಸಿತು’ ಎಂದು ಪ್ರಶಾಂತ್‌ ಸಾಗರ ಎಂಬವರು ಹಂಚಿಕೊಂಡಿದ್ದಾರೆ.

ಲಕ್ಷ್ಮಣ್‌ ಎಂಬವರು ಹೀಗೆ ಪೋಸ್ಟ್‌ ಮಾಡಿದ್ದಾರೆ: “ಲೋ ಬ್ಯಾಚುಲರ್ಗಳಾ, ಮನೆಗೆ ಪ್ರತಿದಿನ ಎರಡೆರೆಡು ಕೇಜಿ ಟೊಮ್ಯಾಟೋ ತಗಂಡೋಗ್ರಿ, ನಮ್ಮ ಹುಡುಗನಿಗೆ ಜವಾಬ್ದಾರಿ ಬಂದೈತೆ ಅಂತಾ ತಿಳ್ಕಂಡ್ ನಿಮ್ಗೆ ಮದುವೆ ಮಾಡ್ಬೋದ್”


ಇದನ್ನೂ ಓದಿರಿ: ಗದಗ: ಜಂಟಿ ಕೃಷಿ ನಿರ್ದೇಶಕರ ಮನೆ ಮೇಲೆ ಎಸಿಬಿ ದಾಳಿ, 3.5 ಕೋಟಿ ಮೌಲ್ಯದ ಚಿನ್ನ ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...