Homeಕರ್ನಾಟಕ2021ರ ಕರ್ನಾಟಕ ರಾಜಕೀಯ ಹಿನ್ನೋಟ; ನಾಯಕತ್ವ ಬದಲಾವಣೆಯೆ ಬಿಜೆಪಿ ಸರ್ಕಾರದ ಸಾಧನೆ!

2021ರ ಕರ್ನಾಟಕ ರಾಜಕೀಯ ಹಿನ್ನೋಟ; ನಾಯಕತ್ವ ಬದಲಾವಣೆಯೆ ಬಿಜೆಪಿ ಸರ್ಕಾರದ ಸಾಧನೆ!

- Advertisement -
- Advertisement -

2020ರ ವರ್ಷವನ್ನು ಕರಾಳ ಕೊರೊನಾ ತಿಂದು ಹಾಕಿತ್ತು. 2021ರಲ್ಲಾದರೂ ನಮ್ಮ ರಾಜ್ಯ ಚೇತರಿಕೆ ಕಾಣುತ್ತದೆಯೆಂದು ಭಾವಿಸಲಾಗಿತ್ತು. ಆದರೆ ಕೊರೊನಾ ಎರಡನೇ ಅಲೆ, ಆಕ್ಸಿಜನ್ – ಆಸ್ಪತ್ರೆ ಬೆಡ್‌ಗಳಿಗಾಗಿ ಹಾಹಾಕಾರ, ಸಾಲುಸಾಲು ಸಾವುಗಳು, ಮತ್ತೊಂದು ಲಾಕ್‌ಡೌನ್, ರಾಜ್ಯದ ಆರ್ಥಿಕ ಸಂಕಷ್ಟ, ಪ್ರವಾಹದಿಂದ ಬೆಳೆಹಾನಿ, ಹೆಚ್ಚಿದ ಮತೀಯ ಗೂಂಡಾಗಿರಿಗಳು, ಮತಾಂತರ ನಿಷೇಧ ಮಸೂದೆ ಚರ್ಚೆಯಲ್ಲಿಯೇ ಈ ವರ್ಷ ಕಳೆದುಹೋಯಿತು.

2021ರಲ್ಲಾದ ಕರ್ನಾಟಕದ ಪ್ರಮುಖ ರಾಜಕೀಯ ಬೆಳವಣಿಗೆಗಳೇನು ಎಂದು ಹಿಂತಿರುಗಿ
ನೋಡಿದರೆ ಎದ್ದುಕಾಣುವುದು ಸಿ.ಡಿ ಗದ್ದಲ ಮತ್ತು ನಾಯಕತ್ವ ಬದಲಾವಣೆ. 2021ರ ರಾಜಕೀಯ
ಬೆಳವಣಿಗೆಗಳನ್ನು ಅವಲೋಕಿಸುವುದು 2022ರಲ್ಲಾದರೂ ನಮ್ಮ ರಾಜ್ಯವನ್ನು ಸುಸ್ಥಿರವಾಗಿ ಕಟ್ಟಿಕೊಳ್ಳುವುದಕ್ಕೆ ಸಹಾಯಕವಾಗುತ್ತದೆ. ಆದರೆ ಕಳೆದ ದಶಕದ ಕರ್ನಾಟಕದ ರಾಜಕಾರಣ ಅದಕ್ಕೆ ತದ್ವಿರುದ್ಧವಾಗಿದೆ. 2010 ರಿಂದ 2021ರವರೆಗಿನ 11 ವರ್ಷಗಳಲ್ಲಿ ಕರ್ನಾಟಕವು 8 ಬಾರಿ ನಾಯಕತ್ವ ಬದಲಾವಣೆಯನ್ನು, 6 ಮುಖ್ಯಮಂತ್ರಿಗಳನ್ನು ಕಂಡಿದೆ. (ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಸದಾನಂದಗೌಡ, ಸಿದ್ದರಾಮಯ್ಯ, ಎಚ್.ಡಿ ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ). ಅದರಲ್ಲಿ ಬಿ.ಎಸ್ ಯಡಿಯೂರಪ್ಪನವರೊಬ್ಬರೆ ಅತ್ಯಲ್ಪ ಕಾಲದ ಎರಡು ದಿನಗಳವರೆಗೆ ಮುಖ್ಯಮಂತ್ರಿಯಾದದ್ದೂ ಸೇರಿದಂತೆ, ಮೂರು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಸಿದ್ದರಾಮಯ್ಯನವರು ಮಾತ್ರ 5 ವರ್ಷಗಳ ಕಾಲ ಪೂರ್ಣ ಆಡಳಿತ ನಡೆಸಿದ್ದು ಬಿಟ್ಟರೆ ಉಳಿದವರೆಲ್ಲರದೂ ಚಿಲ್ಲರೆ ವರ್ಷಗಳು. 2021ರಲ್ಲಿಯೂ ಇದೇ ಆಗಿದ್ದು, ಯಡಿಯೂರಪ್ಪ ಹೋಗಿ ಬೊಮ್ಮಾಯಿ ಬಂದ್ರು ಎಂಬಲ್ಲಿಗೆ ಬಂದು ನಿಂತಿದೆ.

ರಮೇಶ್ ಜಾರಕಿಹೊಳಿ ಸಿ.ಡಿ ಗದ್ದಲ

ಯುವತಿಯೋರ್ವಳಿಗೆ ಉದ್ಯೋಗದ ಆಮಿಷ ತೋರಿಸಿ ಲೈಂಗಿಕವಾಗಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ 2021ರ ಮಾರ್ಚ್‌ನಲ್ಲಿ ನೀರಾವರಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಗುರುತರ ಆರೋಪ ಕೇಳಿಬಂತು. ಆರಂಭದಲ್ಲಿ ಸಿ.ಡಿ ನನ್ನದ್ದಲ್ಲ ಎಂದು ಕೂಗಾಡಿದ್ದ ಅವರು ನಂತರ ಸಿ.ಡಿಯಲ್ಲಿರುವುದು ನಾನೇ ಎಂದು ಒಪ್ಪಿಕೊಂಡರು. ಅದಕ್ಕೂ ಆತಂಕಕಾರಿಯೆಂಬಂತೆ ’ಹೀಗೆ ಆಗುತ್ತದೆ ಎಂದು ನನಗೆ 4 ತಿಂಗಳ ಹಿಂದೆಯೇ ಗೊತ್ತಿತ್ತು. ಸಿಡಿ ಬಿಡುಗಡೆಯಾಗುವ 26 ಗಂಟೆಗಳ ಮೊದಲು ನನಗೆ ಹೈಕಮಾಂಡ್ ಹಿತೈಷಿಗಳಿಂದ ಕರೆ ಬಂದಿತ್ತು’ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದರು. ಅದೇ ಸಂದರ್ಭದಲ್ಲಿ ರಮೇಶ ಜಾರಕಿಹೊಳಿಯೊಂದಿಗೆ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾಗಿದ್ದ 6 ಜನ ಸಚಿವರು ತಮ್ಮ ವಿರುದ್ಧ ಸಿ.ಡಿ ಬಿಡುಗಡೆ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು!

2019ರಲ್ಲಿ ಮೈತ್ರಿ ಸರ್ಕಾರ ಬೀಳಿಸಿ, ಪಕ್ಷಾಂತರ ನಡೆಸಿ ಬಿಜೆಪಿ ಪಕ್ಷ ಸರ್ಕಾರ ರಚಿಸಲು ಏನೆಲ್ಲಾ ಕುಕೃತ್ಯಗಳನ್ನು ನಡೆಸಿದೆ ಎಂಬ ಬಗ್ಗೆ ಅನುಮಾನ ಮೂಡಿಸುವಂತೆ ಸಿ.ಡಿ ಪ್ರಕರಣ ಬೆಳಕಿಗೆ ಬಂದಿತ್ತು. ತದನಂತರ ಸಿಡಿ ತಯಾರಿಸಿದ ಯುವಕರನ್ನು ಬಂಧಿಸಿ ಜೈಲಿಗಟ್ಟಲಾಯಿತೆ ವಿನಃ ಸಿ.ಡಿಯಲ್ಲಿದ್ದ ಮತ್ತು ಅತ್ಯಾಚಾರ ಆರೋಪ ಎದುರಿಸುತ್ತಿರುವ ರಮೇಶ್ ಜಾರಕಿಹೊಳಿಯವರನ್ನು ಸರ್ಕಾರ ಬಂಧಿಸಲೇ ಇಲ್ಲ. ಇದಕ್ಕಾಗಿ ರಚಿಸಿದ್ದ ಎಸ್‌ಐಟಿ ತನಿಖೆ ಕುಂಟುತ್ತಲೇ ಸಾಗುತ್ತಿದೆ ಹೊರತು ತಾರ್ಕಿಕ ಅಂತ್ಯಕ್ಕೆ ಹೋಗುತ್ತಿಲ್ಲ. ತನ್ನನ್ನು ಬಂಧಿಸಿದರೆ ಸರ್ಕಾರ ಬೀಳಿಸಬೇಕಾಗುತ್ತದೆ ಎಂದು ರಮೇಶ್ ಜಾರಕಿಹೊಳಿ ಹಾಕಿದ ಬೆದರಿಕೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಜನರ ಆಶಯಗಳನ್ನು ಬದಿಗೊತ್ತಿದ ಸರ್ಕಾರ ಕೆಲವೇ ಪ್ರಭಾವಿಗಳಿಗೆ ತಗ್ಗಿಬಗ್ಗಿ ನಡೆಯುವುದನ್ನು ಪ್ರಜಾತಂತ್ರ ಎಂದು ಕರೆಯಲಾಗುತ್ತದೆಯೆ?

ಮುಖ್ಯಮಂತ್ರಿ ಬದಲಾವಣೆಯ ಪ್ರಹಸನ

2021ರ ಜುಲೈ 26ರಂದು ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ತಮ್ಮ ಸಾಧನ ಸಮಾವೇಶದಲ್ಲಿ ಮಾತನಾಡುತ್ತ, “ಎಲ್ಲಾ ಸಂದರ್ಭದಲ್ಲೂ ಅಗ್ನಿಪರೀಕ್ಷೆ ಎದುರಾಗಿತ್ತು. ನಾನು ಅಧಿಕಾರ ವಹಿಸಿಕೊಂಡಾಗ ಕೇಂದ್ರದವರು ಎರಡು ತಿಂಗಳು ಮಂತ್ರಿಮಂಡಲ ರಚಿಸಲು ಬಿಡಲಿಲ್ಲ. ಪ್ರವಾಹ ಶುರುವಾಯಿತು, ಎಲ್ಲಾ ಕಡೆ ಹುಚ್ಚನಂತೆ ಸುತ್ತಬೇಕಾಯಿತು” ಎಂದು ಕಣ್ಣೀರು ಹಾಕಿದ್ದರು. ಆ ಮೂಲಕ ಬಿಜೆಪಿ ಹೈಕಮಾಂಡ್ ರಾಜ್ಯದ ಆಡಳಿತದಲ್ಲಿ ಸಂಪೂರ್ಣ ನಿಯಂತ್ರಣ ಸಾಧಿಸುತ್ತಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದರು. ಆ ಇಡೀ ಮುಖ್ಯಮಂತ್ರಿ ಬದಲಾವಣೆಯ ಪ್ರಹಸನ ಪ್ರಜಾತಂತ್ರವನ್ನು, ಒಕ್ಕೂಟ ವ್ಯವಸ್ಥೆಯ ಮೂಲತತ್ವವನ್ನು ಅಣಕಿಸುವಂತಿತ್ತು. ಜನರಿಗೆ ಗೊತ್ತಿರುವುದಿರಲಿ ಆಯ್ಕೆಯಾದ ಬಿಜೆಪಿ ಶಾಸಕರುಗಳಿಗೂ ಅಂದು ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ಗೊತ್ತಿರಲಿಲ್ಲ.

ಬಿಜೆಪಿ ಹೈಕಮಾಂಡ್ ಯಡಿಯೂರಪ್ಪನವರನ್ನು ತೀರಾ ಎದುರು ಹಾಕಿಕೊಳ್ಳದೆ ಅವರ ಆಪ್ತ ಎನ್ನಲಾದ ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಎಂದು ಘೋಷಿಸಿತು. ಜಿ ಹುಜೂರ್ ಎಂದು ಎಲ್ಲಾ ಬಿಜೆಪಿ ಶಾಸಕರು ಒಪ್ಪಿಕೊಂಡರು. ಅದುವರೆಗೂ ಯಡಿಯೂರಪ್ಪನವರನ್ನು ಕೆಳಗಿಳಿಸಬಾರದೆಂದು ಕೂಗಾಡಿದ್ದ ಎಲ್ಲಾ ಮಠಾಧೀಶರು ತಮ್ಮ ಜಾತಿಯವರೆ ಮುಖ್ಯಮಂತ್ರಿಯಾದುದ್ದಕ್ಕೆ ಸಂತೃಪ್ತಿಪಟ್ಟುಕೊಂಡರು. ಸ್ವಂತ ಬಲದಲ್ಲಿ ನಾಯಕನಾಗಿ ಹೊರಹೊಮ್ಮದೆ, ಶಾಸಕರ ಬೆಂಬಲವಿಲ್ಲದೇ ಹೈಕಮಾಂಡ್ ಕೃಪಾಕಟಾಕ್ಷದಿಂದ ಸಿಎಂ ಆದ ಬೊಮ್ಮಾಯಿಯವರು ಪಕ್ಷದ ಹಿರಿಯ ನಾಯಕರನ್ನು ಮೆಚ್ಚಿಸುವ ಕೆಲಸವನ್ನಷ್ಟೇ ಮಾಡಿದರು. ’ಕ್ರಿಯೆಗೆ ಪ್ರತಿಕ್ರಿಯೆ ಇರುತ್ತದೆ, ಭಾವನೆಗಳಿಗೆ ಧಕ್ಕೆಯಾದರೆ ಸುಮ್ಮನಿರಲು ಸಾಧ್ಯವೆ’ ಎಂಬ ಹೇಳಿಕೆ ನೀಡುವ ಮೂಲಕ ಮತೀಯ ಗೂಂಡಾಗಿರಿಗೆ ಬಹಿರಂಗ ಸಮ್ಮತಿ ಸೂಚಿಸಿದರು.

ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಜಿಎಸ್‌ಟಿ ಬಾಕಿ ಪೂರ್ಣ ಪ್ರಮಾಣದಲ್ಲಿ ಬರಲಿಲ್ಲ. 15ನೇ ಹಣಕಾಸು ಸಮಿತಿ ಸೂಚನೆಯಂತೆ ರಾಜ್ಯಕ್ಕೆ 5,495 ಕೋಟಿ ರೂ ಕೇಂದ್ರದಿಂದ ಬರಬೇಕಿತ್ತು. ಅದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರು ತಿರಸ್ಕರಿಸಿದರು. ರಾಜ್ಯ ನಾಯಕರು ಅದನ್ನು ಪ್ರಶ್ನಿಸಲಿಲ್ಲ. ನೆರೆ ಪರಿಹಾರ ಸಮರ್ಪಕವಾಗಿ ಬರಲಿಲ್ಲ, ಕೊನೆಗೆ ರೈತರಿಗೆ ಬೆಳೆ ಪರಿಹಾರವನ್ನೂ ಸಹ ನೀಡಲಾಗಿಲ್ಲ, ಕೋವಿಡ್‌ನಿಂದಾದ ಸಾವಿಗೀಡಾದ ಕುಟುಂಬಗಳಿಗೆ ಪರಿಹಾರ ಸಂಪೂರ್ಣವಾಗಿ ನೀಡಲಾಗಿಲ್ಲ.. ಪಟ್ಟಿ ಬೆಳೆಯುತ್ತಲೆ ಇರುತ್ತದೆ ಹೊರತು ಕರ್ನಾಟಕ ಸಮಾಧಾನ ಪಟ್ಟುವಕೊಳ್ಳುವ ಒಂದು ಕ್ರಮವೂ ಈ ಸರ್ಕಾರದಿಂದ ಜರುಗುತ್ತಿಲ್ಲ.

ದಲಿತರು, ಅಲ್ಪಸಂಖ್ಯಾತರ ಮೇಲೆ ಹೆಚ್ಚಿದ ದಮನ

ರಾಜ್ಯದಲ್ಲಿ ತೀವ್ರ ವಿರೋಧದ ನಡುವೆಯು ಬಿಜೆಪಿ ಸರ್ಕಾರ ಫೆಬ್ರವರಿ ತಿಂಗಳಿನಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ಜಾರಿಗೊಳಿಸಿತು. ಅದು ಜಾರಿಗೊಂಡ ನಾಲ್ಕು ತಿಂಗಳ ಅವಧಿಯಲ್ಲಿಯೇ 29 ಎಫ್‌ಐಆರ್ ಸೇರಿದಂತೆ ಒಟ್ಟು 58 ಪ್ರಕರಣಗಳನ್ನು ರಾಜ್ಯ ಪೊಲೀಸರು ದಾಖಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀಹೆಚ್ಚು ಪ್ರಕರಣ ದಾಖಲಾಗಿದ್ದು, ಮೈಸೂರು ಎರಡನೆ ಸ್ಥಾನದಲ್ಲಿದೆ. ಇದರಿಂದ ಜನರ ಜೀವನೋಪಾಯವನ್ನು ಅಪರಾಧೀಕರಿಸುವ ಪ್ರಕ್ರಿಯೆಗಳು ಆರಂಭವಾಗಿದ್ದು, ಗೂಂಡಾಗಿರಿಯನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ. ಇದರಿಂದ ರೈತರು, ಮಾಂಸದ ವ್ಯಾಪಾರಿಗಳು ಸೇರಿದಂತೆ ಬಡವರ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ ಎಂದು ’ಆಹಾರ ನಮ್ಮ ಹಕ್ಕು ಒಕ್ಕೂಟ’ದ ಅಧ್ಯಯನ ವರದಿ ತಿಳಿಸಿದೆ.

2021ರ ಜನವರಿಯಿಂದ ನವೆಂಬರ್‌ವರೆಗೆ ಕ್ರಿಶ್ಚಿಯನ್ನರ ಮೇಲೆ 39 ದ್ವೇಷ-ಹಲ್ಲೆ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ ಎಂದು ಪಿಯುಸಿಎಲ್ ವರದಿ ಹೇಳಿದೆ. ನವೆಂಬರ್ ಡಿಸೆಂಬರ್‌ನಲ್ಲಿಯೂ ಸಹ ಚರ್ಚ್‌ಗಳ ಮೇಲೆ, ಕ್ರಿಶ್ಚಿಯನ್ ಶಾಲೆಗಳ ಮೇಲೆ ಬಲಪಂಥೀಯ ಕಾರ್ಯಕರ್ತರಿಂದ ದಾಳಿಗಳು ನಡೆದಿವೆ. ಅವುಗಳನ್ನು ಇನ್ನೂ ಉತ್ತೇಜಿಸಲೇನೋ ಎಂಬಂತೆ ರಾಜ್ಯ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಭಾರೀ ಪ್ರಯತ್ನ ನಡೆಸಿದೆ.

ಅಲ್ಲದೆ ಅನ್ಯ ಧರ್ಮದ ಯುವಕ-ಯುವತಿಯರು ಪ್ರೀತಿಸಿದರೆ, ಜೊತೆಯಲ್ಲಿ ಓಡಾಡಿದರೆ ಅವರಿಗೆ ಹಿಂಸೆ ನೀಡುವ ಮತೀಯ ಗೂಂಡಾಗಿರಿ ಪ್ರಕರಣಗಳು ಸಹ 2021ರಲ್ಲಿ ಅತಿಯಾಗಿವೆ. ಸೆಪ್ಟಂಬರ್-ಅಕ್ಟೋಬರ್‌ನ ಕೇವಲ ಎರಡು ತಿಂಗಳಲ್ಲಿ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಸಿಎಂ ಬೊಮ್ಮಾಯಿಯವರೆ ಅವುಗಳನ್ನು ಪರೋಕ್ಷವಾಗಿ ಸಮರ್ಥಿಸಿದ ಮೇಲೆ ಆರೋಪಿಗಳನ್ನು ಮಟ್ಟ ಹಾಕುವುದು ಅಥವಾ ಶಿಕ್ಷೆ ನೀಡುವುದು ಹೇಗೆ ಸಾಧ್ಯವಾಗಬೇಕು? ಇನ್ನು ಇದೇ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು, ದೇವಸ್ಥಾನ ಪ್ರವೇಶ ತಡೆ ಪ್ರಕರಣಗಳು ಸಹ ಹೆಚ್ಚಾಗಿವೆ. ಸಿಎಂ ತಮ್ಮ ಸ್ಥಾನ ಉಳಿಸಿಕೊಳ್ಳುವುದಕ್ಕಾಗಿ ಹೆಣಗಾಡುತ್ತಿರುವಾಗ ಇವೆಲ್ಲವು ಅವರಿಗೆ ಲೆಕ್ಕಕ್ಕಿಲ್ಲದ್ದಾಗಿವೆ.

2021ರ ವಿವಿಧ ಚುನಾವಣೆಗಳು ಮತ್ತು ಫಲಿತಾಂಶ

ಈ ವರ್ಷ ನಾಲ್ಕು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಿತು. ಬಸವ ಕಲ್ಯಾಣ ಮತ್ತು ಸಿಂದಗಿಯಲ್ಲಿ ಬಿಜೆಪಿ ಜಯಗಳಿಸಿದರೆ, ಮಸ್ಕಿ ಮತ್ತು ಹಾನಗಲ್‌ನಲ್ಲಿ ಕಾಂಗ್ರೆಸ್ ವಿಜಯಿಯಾಯಿತು. ಜೆಡಿಎಸ್ ಎಲ್ಲಿಯೂ ಠೇವಣಿ ಉಳಿಸಿಕೊಳ್ಳಲಿಲ್ಲ. ಹಾಲಿ ಸಿಎಂ ಬೊಮ್ಮಾಯಿಯವರ ತವರು ಕ್ಷೇತ್ರ ಹಾನಗಲ್‌ನಲ್ಲಿಯೇ ಬಿಜೆಪಿಗೆ ಮುಖಭಂಗವಾಗಿದ್ದು ಗಮನಾರ್ಹವಾದುದಾಗಿದೆ. ಇನ್ನು ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಯಲ್ಲಿಯೂ ಸಹ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರು ತಿಣುಕಾಡಿ ಕೂದಲೆಳೆ ಅಂತರದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಗೆದ್ದರು.

ಇನ್ನು ವಿಧಾನಪರಿಷತ್ ಚುನಾವಣೆಗೆ ಬಂದರೆ ಆಡಳಿತಾರೂಢ ಬಿಜೆಪಿ 11, ಪ್ರತಿಪಕ್ಷ ಕಾಂಗ್ರೆಸ್ 11, ಜೆಡಿಎಸ್ 02, ಪಕ್ಷೇತರ 01 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಆಡಳಿತ ಪಕ್ಷದಲ್ಲಿದ್ದರೂ ಬಿಜೆಪಿ ಕೇವಲ 11 ಸ್ಥಾನ ಗೆದ್ದಿದ್ದು ದೊಡ್ಡ ಮುಖಭಂಗ ಎಂದು ವಿಶ್ಲೇಷಿಸಲಾಗುತ್ತಿದೆ. ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟವೇ ಈ ಫಲಿತಾಂಶಕ್ಕೆ ಕಾರಣ ಎನ್ನಲಾಗುತ್ತಿದೆ. ಇನ್ನೊಂದೆಡೆ ಪ್ರತಿಪಕ್ಷ ಕಾಂಗ್ರೆಸ್ ತನ್ನ ವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ.

ಪ್ರತಿಪಕ್ಷಗಳ ಜವಾಬ್ದಾರಿ

ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿ ಸರ್ಕಾರದ ಪ್ರತಿ ನಡೆಯನ್ನು ವಿರೋಧಿಸುತ್ತಲೆ ಬಂದಿದೆ. ಮುಂದಿನ ವಿಧಾನಸಭಾ ಚುನಾವಣೆ ಇನ್ನು ಒಂದುಕಾಲು ವರ್ಷದಲ್ಲಿ ಬರುವ ಕಾರಣದಿಂದಲೂ ಇರಬಹುದು, ಕಾಂಗ್ರೆಸ ತುಸು ಚುರುಕಾಗಿರುವಂತೆ ತೋರುತ್ತಿದೆ. ರಾಜ್ಯದಲ್ಲಿ ಜಾರಿಗೊಂಡ ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿಷೇಧ ಕಾಯ್ದೆಯ ವಿರುದ್ಧ ದೊಡ್ಡ ದನಿಯೆತ್ತಿದೆ. ಈ ಕುರಿತು ವಿಧಾನಸಭಾ ಅಧಿವೇಶನಗಳಲ್ಲಿ ಭಾರೀ ಚರ್ಚೆ ನಡೆಸಿದೆ. ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನೊಂದೆಡೆ ಜೆಡಿಎಸ್ ಪಕ್ಷದ ಮುಖಂಡರಾದ ಎಚ್.ಡಿ ಕುಮಾರಸ್ವಾಮಿಯವರು ಆಡಳಿತ ಪಕ್ಷ ಬಿಜೆಪಿಯ ನಡೆಗಳನ್ನು ವಿಮರ್ಶಿಸುವ ಬದಲು ಕಾಂಗ್ರೆಸ್ ವಿರುದ್ದ ಕಿಡಿಕಾರುವುದರಲ್ಲಿಯೇ ತಮ್ಮ ಶಕ್ತಿ ವ್ಯಯ ಮಾಡಿಕೊಳ್ಳುತ್ತಿದ್ದಾರೆ. ಅದು ಆಡಳಿತ ಪಕ್ಷ ಬಿಜೆಪಿಗೆ ವರವಾಗಿ ಪರಿಣಮಿಸಿದೆ.

2022 ಮುಂದೇನು?

2022ರ ಆರಂಭದಲ್ಲಿಯೇ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಇಳಿಸಿ ನಾಯಕತ್ವ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎಂಬ ಸುದ್ದಿಗೆ ರೆಕ್ಕೆಪುಕ್ಕಗಳು ಮೂಡಿವೆ. ಇದು ಅಸ್ಥಿರ ಆಡಳಿತದ ಮುಂದುವರಿದ ಭಾಗವಾಗಿರುತ್ತದೆಯೇ ಹೊರತು ಮತ್ತೇನು ಅಲ್ಲ. ಹಾಗಾಗಿ ರಾಜ್ಯದ ಅಭಿವೃದ್ದಿ, ದಕ್ಷ ಆಡಳಿತವನ್ನು ಕನ್ನಡಿಗರು ನಿರೀಕ್ಷಿಸುವುದು ದೂರದ ಮಾತಾಯಿತು. ಈ ಸರ್ಕಾರ ಹೈಕಮಾಂಡ್ ಆಳ್ವಿಕೆಯಲ್ಲಿದೆಯೆ ಹೊರತು ಜನರಿಗೆ ಉತ್ತರದಾಯಿತ್ವವಾಗಿಲ್ಲ ಎಂಬುದು ಸತ್ಯ. ಹಾಗಾಗಿ ಇದು 2023ರ ರಾಜ್ಯ ವಿಧಾನಸಭೆ ಚುನಾವಣೆಯ ಮೇಲೆ ಪ್ರಭಾವ ಬೀರುವುದು ಖಚಿತವೆನ್ನುವುದು ರಾಜಕೀಯ ಪಡಸಾಲೆಗಳಲ್ಲಿ ಬಹುಚರ್ಚಿತ ವಿಷಯವಾಗಿದೆ.

  • ಮುತ್ತುರಾಜು

ಇದನ್ನೂ ಓದಿ: ಮುಖ್ಯಮಂತ್ರಿ ಬದಲಾವಣೆ ಚರ್ಚೆ; ಬಿಜೆಪಿಯ ರಾಜಕೀಯ ಲೆಕ್ಕಾಚಾರಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...