Homeಮುಖಪುಟಹಿನ್ನೋಟ 2020: ಕೊರೊನಾ ನಿಯಂತ್ರಣದ ನಡುವೆಯೂ ಪ್ರತಿಭಟಿಸಿದ ಜಗತ್ತು

ಹಿನ್ನೋಟ 2020: ಕೊರೊನಾ ನಿಯಂತ್ರಣದ ನಡುವೆಯೂ ಪ್ರತಿಭಟಿಸಿದ ಜಗತ್ತು

- Advertisement -
- Advertisement -

2020 ಇನ್ನೇನು ಮುಗಿಯಲಿದೆ. ಜಗತ್ತಿಗೆ ಇದು ಐತಿಹಾಸಿಕ ಸಂಗತಿಯಾಗಿ ಉಳಿದುಕೊಳ್ಳಲಿದೆ. ಅನ್ಯಾಯಯುತ ಕಾಯ್ದೆಗಳ ವಿರುದ್ಧದ ಪ್ರತಿಭಟನೆಗಳು ನಮ್ಮ ರಾಜಕೀಯ ಕಲ್ಪನೆಯನ್ನು ಪ್ರಭಾವಿಸುತ್ತಿರುವ ಈ ಸಂದರ್ಭದಲ್ಲಿ ನಾವು ಭಾರತೀಯರು ಪೂರ್ತಿ ಒಂದು ಸುತ್ತು ಹಾಕಿ ಅಲ್ಲಿಗೇ ಬಂದು ನಿಂತಿದ್ದೇವೆ. ಈ ಹೋರಾಟಗಳಲ್ಲಿ ನಾವು ಏಕಾಂಗಿಯಲ್ಲ. ವಿವಿಧ ಹೋರಾಟಗಳಲ್ಲಿ ನಿರತವಾಗಿರುವ ಜಾಗತಿಕ ಸಮುದಾಯದ ಭಾಗವಾಗಿದ್ದೇವೆ ನಾವು.

ಅರಬ್ ಹೋರಾಟದಿಂದ (ಅರಬ್ ವಸಂತದಿಂದ) 2019ರವರೆಗೆ ಜಗತ್ತು ಹೊಸ ತಲೆಮಾರಿನ ಅನೇಕ ಹೋರಾಟಗಳಿಗೆ ಸಾಕ್ಷಿಯಾಗಿತ್ತು. ಬದಲಾವಣೆಗೆ ಆಗ್ರಹಿಸುವ ಮತ್ತು ಪ್ರಭುತ್ವಕ್ಕೆ ಪ್ರತಿಕ್ರಿಯಿಸುವ ಈ ಹೋರಾಟಗಳು ಸ್ವಯಂಪ್ರೇರಿತವಾಗಿದ್ದು, ನಾಯಕರಹಿತ ಆದರೆ ಸಾಮೂಹಿಕ ನಾಯಕತ್ವದ ಗುಣಲಕ್ಷಣಗಳನ್ನು ಹೊಂದಿರುವುದು ಇವುಗಳ ಸಾಮಾನ್ಯ ಲಕ್ಷಣವಾಗಿದೆ. ಸಂಪತ್ತಿನ ಅಸಮಾನತೆ, ಕಲ್ಯಾಣ ಕಾರ್ಯಕ್ರಮಗಳ ಹಿಂತೆಗೆತ, ಪ್ರಭುತ್ವದ ಭ್ರಷ್ಟಾಚಾರ, ಪ್ರಜಾತಾಂತ್ರಿಕ ಹೊಣೆಗಾರಿಕೆಯ ಕೊರತೆ ಈ ಹೋರಾಟ-ಪ್ರತಿಭಟನೆಗಳ ಕೇಂದ್ರ ವಿಷಯಗಳಾಗಿದ್ದು, ನಡೆದದ್ದೇ ಮಾರ್ಗ ಎಂಬುದಕ್ಕೆ ತಡೆಯಾಗಿದೆ. ಸಾಕಷ್ಟು ವೈವಿಧ್ಯಮಯವಾದ ಒಂದು ಹೊಸ ಬಗೆಯ ರಾಜಕೀಯ ಪ್ರಜ್ಞೆಯು ಜಾಗೃತಗೊಳ್ಳುತ್ತಿರುವುದನ್ನು ಈ ಪ್ರತಿಭಟನೆಗಳು ಪ್ರತಿನಿಧಿಸುತ್ತವೆ. ಇವುಗಳಲ್ಲಿ ಕೆಲವು ಪ್ರತಿಗಾಮಿಯಾಗಿದ್ದರೆ, ಹೆಚ್ಚು ಪ್ರಗತಿಶೀಲವಾಗಿದ್ದವು. ಕೆಲವು ಪ್ರತಿಭಟನೆಗಳು ಕಾಯ್ದೆಗಳ ರದ್ದತಿಗಾಗಿ ಆಗ್ರಹಿಸಿದ್ದರೆ, ಇನ್ನು ಕೆಲವು ದೇಶದ ಸಂವಿಧಾನವನ್ನು ಕಿತ್ತು ಹಾಕುವುದಕ್ಕಾಗಿ-ಬದಲಿಸುವುದಕ್ಕಾಗಿ ನಡೆದವು. ಇನ್ನು ಕೆಲವು, ದೇಶ ಸಾಗುತ್ತಿರುವ ದಿಕ್ಕಿನ ವಿರುದ್ಧದ ನಿರಾಶೆಯ ಅಭಿವ್ಯಕ್ತಿಯಾಗಿದ್ದವು.

2020ರಲ್ಲಿ ಕೋವಿಡ್ ಸಾಂಕ್ರಾಮಿಕದ ಕಾರಣಕ್ಕೆ ಈ ಹೋರಾಟಗಳು ಹೊಸ ಸವಾಲುಗಳನ್ನು ಎದುರಿಸಿದವು. ಸಾರ್ವಜನಿಕ ಸಭೆಗಳ ನಿಷೇಧವು, ಪ್ರತಿಭಟನೆಗಳನ್ನು ತಡೆಯಲು ಪ್ರಭುತ್ವಕ್ಕೆ ಪರವಾನಗಿ ನೀಡಿದಂತಾಗಿತ್ತು. ಸಾಂಕ್ರಾಮಿಕದ ಮೊದಲ ಅಲೆಯ ಸಂದರ್ಭದಲ್ಲಿ, ಜಗತ್ತಿನಾದ್ಯಂತ ಚಳವಳಿಗಳು ಆನ್‌ಲೈನ್ ಸಭೆ, ಟ್ವಿಟರ್ ಕ್ಯಾಂಪೇನ್ ಮತ್ತು ವೆಬಿನಾರ್‌ಗಳಂತಹ ಆನ್‌ಲೈನ್ ಸ್ವರೂಪಕ್ಕೆ ಬದಲಿಸಿಕೊಂಡು ಮುಂದುವರೆದವು.

ನಿಕರಾಗುವಾ ಮತ್ತು ಲೆಬನಾನ್‌ನಂತಹ ದೇಶಗಳಲ್ಲಿ, ಕಲ್ಯಾಣ ಕಾರ್ಯಕ್ರಮಗಳ ಕೊರತೆಯು ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿತು. ನೈಜೀರಿಯಾ, ಅಮೆರಿಕ ಮತ್ತು ಕೊಲಂಬಿಯಾದಂತಹ ದೇಶಗಳಲ್ಲಿ, ಸಾಂಕ್ರಾಮಿಕದ ಸಂದರ್ಭದಲ್ಲೂ ಅನಿಯಂತ್ರಿತ ಪೊಲೀಸ್ ಬಲಪ್ರಯೋಗ ಪ್ರತಿಭಟನೆಗಳ ಕೇಂದ್ರ ವಸ್ತುವಾಗಿತ್ತು. ಸುಡಾನ್, ಚಿಲಿ ಮತ್ತು ಅಲ್ಜಿರಿಯಾದಂತಹ ದೇಶಗಳಲ್ಲಿ ಸಂವಿಧಾನ ಬದಲಾವಣೆಯ ವಿಷಯವಾಗಿ ಪ್ರತಿಭಟನೆಗಳು ನಡೆದವು. ಬೊಲಿವಿಯಾ, ಕಿರ್ಗಿಸ್ತಾನ್ ಮತ್ತು ಪೆರುನಂತಹ ದೇಶಗಳಲ್ಲಿ ಚುನಾವಣಾ ಪ್ರಕ್ರಿಯೆಯನ್ನು ತಿರುಚುವುದರ ವಿರುದ್ಧ ಪ್ರತಿಭಟನೆಗಳು ನಡೆದವು. ನೈಜಿರಿಯಾ, ಭಾರತ ಮತ್ತು ಫ್ರಾನ್ಸ್‌ನಂತಹ ದೇಶಗಳಲ್ಲಿ ಸಾಂಕ್ರಾಮಿಕದ ಸಂದರ್ಭದಲ್ಲಿ ಜನವಿರೋಧಿ ಕಾನೂನುಗಳಿಗೆ ಅಂಗೀಕಾರ ಮಾಡಿದ್ದರ ವಿರುದ್ಧ ಚಳವಳಿಗಳು ನಡೆಯುತ್ತಿವೆ.

ಬಹುಪಾಲು ಸಾಮೂಹಿಕ ಪ್ರತಿಭಟನೆಗಳು ಪ್ರಭುತ್ವಕ್ಕೆ ನೀಡಿದ ಪ್ರತಿಕ್ರಿಯೆಯಾಗಿದ್ದವು. ಕೆಲವು ಪ್ರತಿಗಾಮಿಯಾಗಿದ್ದವು, ಕೆಲವು ಪ್ರಗತಿಶೀಲವಾಗಿದ್ದವು, ಆದರೆ ಎಲ್ಲವೂ ಪ್ರಭುತ್ವದೊಂದಿಗಿನ ಅಸಮಾಧಾನದ ಅಭಿವ್ಯಕ್ತಿಯೇ ಆಗಿದ್ದವು. ಉಗ್ರ ರಾಷ್ಟ್ರೀಯವಾದದ ಬೆಳವಣಿಗೆಯ ಜೊತೆಜೊತೆಗೇ ಪ್ರಭುತ್ವದ ಮೇಲಿನ ಅಸಮಾಧಾನವು ಹೊರಹೊಮ್ಮಿತು. ಮೂಲದಲ್ಲಿ ಜನರು ಮತ್ತು ಪ್ರಭುತ್ವದ ನಡುವೆ ಸಾಮಾಜಿಕ ಒಪ್ಪಂದವನ್ನು ಪ್ರತಿನಿಧಿಸುವ ರಾಷ್ಟ್ರೀಯತೆಯು ಜಗತ್ತಿನ ಜನತೆಯನ್ನು ನಿರಾಶೆಗೊಳಿಸುತ್ತಿದೆ. ಪರ್ಯಾಯದ ಸಾಧ್ಯತೆ ಗೋಚರಿಸದ ಕಾರಣ ಜನರು ಈ ಬಗೆಯ ಪ್ರತಿಭಟನೆಗಳಲ್ಲಿ ತೊಡಗಿದ್ದಾರೆ. ಪ್ರಭುತ್ವವು ಜನರನ್ನು ವಿಫಲಗೊಳಿಸುತ್ತಿದೆ ಎಂದು ಹೇಳುತ್ತಿರುವ ಜನರು, ತಮ್ಮ ದೇಶದ ಜೊತೆಗಿನ ಸಾಮಾಜಿಕ ಒಪ್ಪಂದದ ಮಾದರಿಗಳನ್ನು ಪ್ರಶ್ನಿಸುತ್ತಿದ್ದಾರೆ. ರಾಷ್ಟ್ರ-ಪ್ರಭುತ್ವವು ತಮ್ಮ ಸಾಮಾಜಿಕ ವ್ಯವಸ್ಥೆಯನ್ನು ಒತ್ತಾಯಪೂರ್ವಕವಾಗಿ ಜಾರಿಗೊಳಿಸಬೇಕೆಂದು ಪ್ರತಿಗಾಮಿಗಳು ಒತ್ತಾಯಿಸಿದರೆ, ಪ್ರಗತಿಪರರು ಪ್ರಭುತ್ವದಿಂದ ಹೊಣೆಗಾರಿಕೆ ಮತ್ತು ಉತ್ತರದಾಯಿತ್ವಕ್ಕಾಗಿ ಆಗ್ರಹಿಸುತ್ತಿದ್ದಾರೆ. ಬಹುಪಾಲು ದೇಶಗಳಲ್ಲಿ ಇವುಗಳ ನಡುವಿನ ಗೆರೆ ಮಸುಕಾಗಿದೆ.

ಇದೇ ಸಂದರ್ಭದಲ್ಲಿ, 2020ರಲ್ಲಿನ ಪ್ರತಿಭಟನೆಗಳ ಕುರಿತ ಪ್ರಶ್ನೆಗಳು ನಮ್ಮನ್ನು ಕಾಡತೊಡಗುತ್ತವೆ. ಪ್ರತಿಭಟನೆಗಳು ಕೆಲವೊಮ್ಮೆ ಪ್ರತಿಗಾಮಿಯಾಗಿರಬಹುದು ಆದರೆ ಬಹುತೇಕ ಕಡೆಗಳಲ್ಲಿ ಜನಪರವಾದ ಪ್ರತಿಭಟನೆಗಳೇ ನಡೆದಿರುವುದು ಮುಖ್ಯವಾಗಿದೆ. ಅಮೆರಿಕದಲ್ಲಿ ಜನಾಂಗೀಯ ಹಿಂಸೆಯ ವಿರುದ್ಧ ಸಾಮೂಹಿಕ ಪ್ರತಿಭಟನೆಗಳು ನಡೆದವು. ಸಾಂಕ್ರಾಮಿಕದ ಸಂದರ್ಭದಲ್ಲಿ ಬಡವರ ಸುರಕ್ಷತೆಗಾಗಿ ಆರೋಗ್ಯ ಮತ್ತು ಕಲ್ಯಾಣ ಕಾರ್ಯಕ್ರಮಗಳ ಜಾರಿಗೆ ಒತ್ತಾಯಿಸಿಯೂ ಪ್ರತಿಭಟನೆಗಳು ನಡೆದವು. ಬೊಲಿವಿಯದಂತಹ ದೇಶಗಳಲ್ಲಿ ಆಡಳಿತವನ್ನು ಕಿತ್ತೆಸೆದಿದ್ದನ್ನು ನಾವು ನೋಡಿದ್ದೇವೆ. ಪ್ರತಿಭಟನೆಗಳು, ಅದರಲ್ಲೂ ಮುಖ್ಯವಾಗಿ, ಭ್ರಷ್ಟಾಚಾರದ ವಿರುದ್ಧ ವೃತ್ತಿಪರ ಮಧ್ಯಮವರ್ಗಗಳು ನಡೆಸುತ್ತಿರುವ ಪ್ರತಿಭಟನೆಗಳು ಸಂಶಯಾಸ್ಪದವಾಗಿವೆ. ಅವು ಸಾಮಾನ್ಯವಾಗಿ ಬಡವರು ಮತ್ತು ಅಂಚಿಗೆ ತಳ್ಳಲ್ಪಟ್ಟ ದುರ್ಬಲ ಸಮುದಾಯಗಳ ವಿರೋಧಿಯಾಗಿವೆ. ಇನ್ನು ವಿವಿಧ ದೇಶಗಳಲ್ಲಿ ಅಲ್ಲಿನ ಗಣ್ಯರ ಮತ್ತು ಸಿರಿವಂತರ ಹಿತಾಸಕ್ತಿಗಳನ್ನು ಕಾಪಾಡಲು ಪ್ರತಿಭಟನೆಗಳ ಕವರೇಜ್ ಮಾಡಲಾಗುತ್ತಿದೆ. ವಿವಿಧ ದೇಶಗಳ ತುಳಿತಕ್ಕೊಳಗಾದ ಜನರು ಒಂದು ಸಮಾನ ಹೋರಾಟವನ್ನು ಕಾಣಲು ಇದು ಸಾಕಷ್ಟು ಅವಕಾಶವನ್ನು ನೀಡಲಾರದು. ಆದರೆ ಇದು ಈ ಪ್ರತಿಭಟನೆಗಳ ಸಾರ್ಥಕತೆಯ ಬಗ್ಗೆ ನಾವು ಸಂಶಯಿಸಲು ಕಾರಣವಾಗಬಾರದು. ಪ್ರಗತಿಶೀಲ ಹೋರಾಟಗಳ ಮೂಲಕ ಪ್ರತಿಗಾಮಿ ಪ್ರತಿಭಟನೆಗಳನ್ನು ಯಶಸ್ವಿಯಾಗಿ ಎದುರಿಸಬಹುದು.

2021ಕ್ಕೆ ಕಾಲಿಡುತ್ತಿದ್ದರೂ ಇನ್ನೂ ಸಾಂಕ್ರಾಮಿಕ ಪಿಡುಗು ತೊಲಗಿಲ್ಲ. ಕೋವಿಡ್‌ನ ಹೊಸ ಸ್ವರೂಪ ಮತ್ತು ಹೊಸ ಅಲೆಗಳ ಬಗ್ಗೆ ಆತಂಕಗಳಿವೆ. ಜಗತ್ತಿನಾದ್ಯಂತ ಪ್ರತಿಭಟನೆಗಳು ಈ ಅಪಾಯಕ್ಕೆ ಹೊಂದಿಕೊಳ್ಳುವ ಸಾಹಸ ಮಾಡುತ್ತಿವೆ. ಸೂಕ್ತ ಮುನ್ನೆಚ್ಚರಿಕೆ ಕ್ರಮಗಳಿದ್ದರೆ, ಪ್ರತಿಭಟನೆಗಳು ಸಾಂಕ್ರಾಮಿಕ ಹರಡುವಿಕೆಗೆ ಕಾರಣವಾಗುವುದಿಲ್ಲ ಎಂದು ಅಮೆರಿಕದಲ್ಲಿ ಅಧ್ಯಯನವೊಂದು ದೃಢೀಕರಿಸಿದೆ. ಹೀಗಿದ್ದೂ, ಸಾರ್ವಜನಿಕ ಸಭೆಗಳನ್ನು ತಡೆಯಲು ಪ್ರಭುತ್ವವು ಈಗಲೂ ಒಂದು ನೈತಿಕ ನ್ಯಾಯಸಮ್ಮತತೆಯನ್ನು ಹೊಂದಿದೆ ಎಂಬಂತೆ ನಡೆದುಕೊಳ್ಳುತ್ತಿದೆ.

2021ರ ಆಗಮನವನ್ನು ನಿರೀಕ್ಷಿಸುತ್ತಿರುವಂತೆಯೇ, ಹೊಸ ಪ್ರಜಾತಾಂತ್ರಿಕ ಪ್ರಕ್ರಿಯೆಯ ಬಹುಮುಖ್ಯ ಭಾಗವಾಗಿ ಪ್ರತಿಭಟನೆಗಳು ಇನ್ನಷ್ಟು ಹೆಚ್ಚಲಿವೆ. ನಾವು ಮುಂದಕ್ಕೆ ಚಲಿಸಿದಂತೆ, ಯಾರಿಗಾಗಿ ಪ್ರತಿಭಟನೆಗಳು, ಪ್ರತಿಭಟನೆ ಮಾಡಲು ಯಾರಿಗೆ ಸಮ್ಮತಿಸಬೇಕು, ಯಾವುದಕ್ಕಾಗಿ ಪ್ರತಿಭಟಿಸಲು ನಮಗೆ ಅನುಮತಿಯಿದೆ- ಇಂತಹ ಪ್ರಶ್ನೆ ಗಳನ್ನು ಕೇಳಲು ಆರಂಭಿಸಬಹುದು. ಆದರೆ, ಪ್ರಭುತ್ವದ ಅಧಿಕಾರದ ಮೇಲೆ ನಿಗಾ ಇಡಲು, ಪ್ರತಿರೋಧ ತೋರಲು ಈ ಪ್ರತಿಭಟನೆಗಳು ಬಹುಮುಖ್ಯ ಎಂಬುದನ್ನು ಇನ್ನು ಮುಂದೆ ಪ್ರಶ್ನಿಸಲಾಗದು.

ಅನುವಾದ: ಮಲ್ಲನಗೌಡರ್

ಕಿಶೋರ್ ಗೋವಿಂದ

ಬೆಂಗಳೂರಿನಲ್ಲಿ ನೆಲೆಸಿರುವ ಕಿಶೋರ್ ಅವರು ಗಣಿತಶಾಸ್ತ್ರಜ್ಞರು. ಜಾಗತಿಕ ರಾಜಕೀಯ ಆಗುಹೋಗುಗಳನ್ನು ನಿಕಟವಾಗಿ ಗಮನಿಸುವ ಅವರು ಪತ್ರಿಕೆಗಳಿಗೆ ಲೇಖನಗಳನ್ನು ಬರೆದಿದ್ದಾರೆ.


ಇದನ್ನೂ ಓದಿ: ಕಂಗಾನಾ ಮುಂಬೈಗೆ ಮರಳಿದ್ದಾರೆಂದು ಎನ್‌‌ಸಿಬಿಗೆ ನೆನಪಿಸಿದ ಕಾಂಗ್ರೆಸ್- ಕಾರಣವೇನು ಗೊತ್ತೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...