Homeಮುಖಪುಟಹಿನ್ನೋಟ 2020: ಕೊರೊನಾ ನಿಯಂತ್ರಣದ ನಡುವೆಯೂ ಪ್ರತಿಭಟಿಸಿದ ಜಗತ್ತು

ಹಿನ್ನೋಟ 2020: ಕೊರೊನಾ ನಿಯಂತ್ರಣದ ನಡುವೆಯೂ ಪ್ರತಿಭಟಿಸಿದ ಜಗತ್ತು

- Advertisement -
- Advertisement -

2020 ಇನ್ನೇನು ಮುಗಿಯಲಿದೆ. ಜಗತ್ತಿಗೆ ಇದು ಐತಿಹಾಸಿಕ ಸಂಗತಿಯಾಗಿ ಉಳಿದುಕೊಳ್ಳಲಿದೆ. ಅನ್ಯಾಯಯುತ ಕಾಯ್ದೆಗಳ ವಿರುದ್ಧದ ಪ್ರತಿಭಟನೆಗಳು ನಮ್ಮ ರಾಜಕೀಯ ಕಲ್ಪನೆಯನ್ನು ಪ್ರಭಾವಿಸುತ್ತಿರುವ ಈ ಸಂದರ್ಭದಲ್ಲಿ ನಾವು ಭಾರತೀಯರು ಪೂರ್ತಿ ಒಂದು ಸುತ್ತು ಹಾಕಿ ಅಲ್ಲಿಗೇ ಬಂದು ನಿಂತಿದ್ದೇವೆ. ಈ ಹೋರಾಟಗಳಲ್ಲಿ ನಾವು ಏಕಾಂಗಿಯಲ್ಲ. ವಿವಿಧ ಹೋರಾಟಗಳಲ್ಲಿ ನಿರತವಾಗಿರುವ ಜಾಗತಿಕ ಸಮುದಾಯದ ಭಾಗವಾಗಿದ್ದೇವೆ ನಾವು.

ಅರಬ್ ಹೋರಾಟದಿಂದ (ಅರಬ್ ವಸಂತದಿಂದ) 2019ರವರೆಗೆ ಜಗತ್ತು ಹೊಸ ತಲೆಮಾರಿನ ಅನೇಕ ಹೋರಾಟಗಳಿಗೆ ಸಾಕ್ಷಿಯಾಗಿತ್ತು. ಬದಲಾವಣೆಗೆ ಆಗ್ರಹಿಸುವ ಮತ್ತು ಪ್ರಭುತ್ವಕ್ಕೆ ಪ್ರತಿಕ್ರಿಯಿಸುವ ಈ ಹೋರಾಟಗಳು ಸ್ವಯಂಪ್ರೇರಿತವಾಗಿದ್ದು, ನಾಯಕರಹಿತ ಆದರೆ ಸಾಮೂಹಿಕ ನಾಯಕತ್ವದ ಗುಣಲಕ್ಷಣಗಳನ್ನು ಹೊಂದಿರುವುದು ಇವುಗಳ ಸಾಮಾನ್ಯ ಲಕ್ಷಣವಾಗಿದೆ. ಸಂಪತ್ತಿನ ಅಸಮಾನತೆ, ಕಲ್ಯಾಣ ಕಾರ್ಯಕ್ರಮಗಳ ಹಿಂತೆಗೆತ, ಪ್ರಭುತ್ವದ ಭ್ರಷ್ಟಾಚಾರ, ಪ್ರಜಾತಾಂತ್ರಿಕ ಹೊಣೆಗಾರಿಕೆಯ ಕೊರತೆ ಈ ಹೋರಾಟ-ಪ್ರತಿಭಟನೆಗಳ ಕೇಂದ್ರ ವಿಷಯಗಳಾಗಿದ್ದು, ನಡೆದದ್ದೇ ಮಾರ್ಗ ಎಂಬುದಕ್ಕೆ ತಡೆಯಾಗಿದೆ. ಸಾಕಷ್ಟು ವೈವಿಧ್ಯಮಯವಾದ ಒಂದು ಹೊಸ ಬಗೆಯ ರಾಜಕೀಯ ಪ್ರಜ್ಞೆಯು ಜಾಗೃತಗೊಳ್ಳುತ್ತಿರುವುದನ್ನು ಈ ಪ್ರತಿಭಟನೆಗಳು ಪ್ರತಿನಿಧಿಸುತ್ತವೆ. ಇವುಗಳಲ್ಲಿ ಕೆಲವು ಪ್ರತಿಗಾಮಿಯಾಗಿದ್ದರೆ, ಹೆಚ್ಚು ಪ್ರಗತಿಶೀಲವಾಗಿದ್ದವು. ಕೆಲವು ಪ್ರತಿಭಟನೆಗಳು ಕಾಯ್ದೆಗಳ ರದ್ದತಿಗಾಗಿ ಆಗ್ರಹಿಸಿದ್ದರೆ, ಇನ್ನು ಕೆಲವು ದೇಶದ ಸಂವಿಧಾನವನ್ನು ಕಿತ್ತು ಹಾಕುವುದಕ್ಕಾಗಿ-ಬದಲಿಸುವುದಕ್ಕಾಗಿ ನಡೆದವು. ಇನ್ನು ಕೆಲವು, ದೇಶ ಸಾಗುತ್ತಿರುವ ದಿಕ್ಕಿನ ವಿರುದ್ಧದ ನಿರಾಶೆಯ ಅಭಿವ್ಯಕ್ತಿಯಾಗಿದ್ದವು.

2020ರಲ್ಲಿ ಕೋವಿಡ್ ಸಾಂಕ್ರಾಮಿಕದ ಕಾರಣಕ್ಕೆ ಈ ಹೋರಾಟಗಳು ಹೊಸ ಸವಾಲುಗಳನ್ನು ಎದುರಿಸಿದವು. ಸಾರ್ವಜನಿಕ ಸಭೆಗಳ ನಿಷೇಧವು, ಪ್ರತಿಭಟನೆಗಳನ್ನು ತಡೆಯಲು ಪ್ರಭುತ್ವಕ್ಕೆ ಪರವಾನಗಿ ನೀಡಿದಂತಾಗಿತ್ತು. ಸಾಂಕ್ರಾಮಿಕದ ಮೊದಲ ಅಲೆಯ ಸಂದರ್ಭದಲ್ಲಿ, ಜಗತ್ತಿನಾದ್ಯಂತ ಚಳವಳಿಗಳು ಆನ್‌ಲೈನ್ ಸಭೆ, ಟ್ವಿಟರ್ ಕ್ಯಾಂಪೇನ್ ಮತ್ತು ವೆಬಿನಾರ್‌ಗಳಂತಹ ಆನ್‌ಲೈನ್ ಸ್ವರೂಪಕ್ಕೆ ಬದಲಿಸಿಕೊಂಡು ಮುಂದುವರೆದವು.

ನಿಕರಾಗುವಾ ಮತ್ತು ಲೆಬನಾನ್‌ನಂತಹ ದೇಶಗಳಲ್ಲಿ, ಕಲ್ಯಾಣ ಕಾರ್ಯಕ್ರಮಗಳ ಕೊರತೆಯು ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿತು. ನೈಜೀರಿಯಾ, ಅಮೆರಿಕ ಮತ್ತು ಕೊಲಂಬಿಯಾದಂತಹ ದೇಶಗಳಲ್ಲಿ, ಸಾಂಕ್ರಾಮಿಕದ ಸಂದರ್ಭದಲ್ಲೂ ಅನಿಯಂತ್ರಿತ ಪೊಲೀಸ್ ಬಲಪ್ರಯೋಗ ಪ್ರತಿಭಟನೆಗಳ ಕೇಂದ್ರ ವಸ್ತುವಾಗಿತ್ತು. ಸುಡಾನ್, ಚಿಲಿ ಮತ್ತು ಅಲ್ಜಿರಿಯಾದಂತಹ ದೇಶಗಳಲ್ಲಿ ಸಂವಿಧಾನ ಬದಲಾವಣೆಯ ವಿಷಯವಾಗಿ ಪ್ರತಿಭಟನೆಗಳು ನಡೆದವು. ಬೊಲಿವಿಯಾ, ಕಿರ್ಗಿಸ್ತಾನ್ ಮತ್ತು ಪೆರುನಂತಹ ದೇಶಗಳಲ್ಲಿ ಚುನಾವಣಾ ಪ್ರಕ್ರಿಯೆಯನ್ನು ತಿರುಚುವುದರ ವಿರುದ್ಧ ಪ್ರತಿಭಟನೆಗಳು ನಡೆದವು. ನೈಜಿರಿಯಾ, ಭಾರತ ಮತ್ತು ಫ್ರಾನ್ಸ್‌ನಂತಹ ದೇಶಗಳಲ್ಲಿ ಸಾಂಕ್ರಾಮಿಕದ ಸಂದರ್ಭದಲ್ಲಿ ಜನವಿರೋಧಿ ಕಾನೂನುಗಳಿಗೆ ಅಂಗೀಕಾರ ಮಾಡಿದ್ದರ ವಿರುದ್ಧ ಚಳವಳಿಗಳು ನಡೆಯುತ್ತಿವೆ.

ಬಹುಪಾಲು ಸಾಮೂಹಿಕ ಪ್ರತಿಭಟನೆಗಳು ಪ್ರಭುತ್ವಕ್ಕೆ ನೀಡಿದ ಪ್ರತಿಕ್ರಿಯೆಯಾಗಿದ್ದವು. ಕೆಲವು ಪ್ರತಿಗಾಮಿಯಾಗಿದ್ದವು, ಕೆಲವು ಪ್ರಗತಿಶೀಲವಾಗಿದ್ದವು, ಆದರೆ ಎಲ್ಲವೂ ಪ್ರಭುತ್ವದೊಂದಿಗಿನ ಅಸಮಾಧಾನದ ಅಭಿವ್ಯಕ್ತಿಯೇ ಆಗಿದ್ದವು. ಉಗ್ರ ರಾಷ್ಟ್ರೀಯವಾದದ ಬೆಳವಣಿಗೆಯ ಜೊತೆಜೊತೆಗೇ ಪ್ರಭುತ್ವದ ಮೇಲಿನ ಅಸಮಾಧಾನವು ಹೊರಹೊಮ್ಮಿತು. ಮೂಲದಲ್ಲಿ ಜನರು ಮತ್ತು ಪ್ರಭುತ್ವದ ನಡುವೆ ಸಾಮಾಜಿಕ ಒಪ್ಪಂದವನ್ನು ಪ್ರತಿನಿಧಿಸುವ ರಾಷ್ಟ್ರೀಯತೆಯು ಜಗತ್ತಿನ ಜನತೆಯನ್ನು ನಿರಾಶೆಗೊಳಿಸುತ್ತಿದೆ. ಪರ್ಯಾಯದ ಸಾಧ್ಯತೆ ಗೋಚರಿಸದ ಕಾರಣ ಜನರು ಈ ಬಗೆಯ ಪ್ರತಿಭಟನೆಗಳಲ್ಲಿ ತೊಡಗಿದ್ದಾರೆ. ಪ್ರಭುತ್ವವು ಜನರನ್ನು ವಿಫಲಗೊಳಿಸುತ್ತಿದೆ ಎಂದು ಹೇಳುತ್ತಿರುವ ಜನರು, ತಮ್ಮ ದೇಶದ ಜೊತೆಗಿನ ಸಾಮಾಜಿಕ ಒಪ್ಪಂದದ ಮಾದರಿಗಳನ್ನು ಪ್ರಶ್ನಿಸುತ್ತಿದ್ದಾರೆ. ರಾಷ್ಟ್ರ-ಪ್ರಭುತ್ವವು ತಮ್ಮ ಸಾಮಾಜಿಕ ವ್ಯವಸ್ಥೆಯನ್ನು ಒತ್ತಾಯಪೂರ್ವಕವಾಗಿ ಜಾರಿಗೊಳಿಸಬೇಕೆಂದು ಪ್ರತಿಗಾಮಿಗಳು ಒತ್ತಾಯಿಸಿದರೆ, ಪ್ರಗತಿಪರರು ಪ್ರಭುತ್ವದಿಂದ ಹೊಣೆಗಾರಿಕೆ ಮತ್ತು ಉತ್ತರದಾಯಿತ್ವಕ್ಕಾಗಿ ಆಗ್ರಹಿಸುತ್ತಿದ್ದಾರೆ. ಬಹುಪಾಲು ದೇಶಗಳಲ್ಲಿ ಇವುಗಳ ನಡುವಿನ ಗೆರೆ ಮಸುಕಾಗಿದೆ.

ಇದೇ ಸಂದರ್ಭದಲ್ಲಿ, 2020ರಲ್ಲಿನ ಪ್ರತಿಭಟನೆಗಳ ಕುರಿತ ಪ್ರಶ್ನೆಗಳು ನಮ್ಮನ್ನು ಕಾಡತೊಡಗುತ್ತವೆ. ಪ್ರತಿಭಟನೆಗಳು ಕೆಲವೊಮ್ಮೆ ಪ್ರತಿಗಾಮಿಯಾಗಿರಬಹುದು ಆದರೆ ಬಹುತೇಕ ಕಡೆಗಳಲ್ಲಿ ಜನಪರವಾದ ಪ್ರತಿಭಟನೆಗಳೇ ನಡೆದಿರುವುದು ಮುಖ್ಯವಾಗಿದೆ. ಅಮೆರಿಕದಲ್ಲಿ ಜನಾಂಗೀಯ ಹಿಂಸೆಯ ವಿರುದ್ಧ ಸಾಮೂಹಿಕ ಪ್ರತಿಭಟನೆಗಳು ನಡೆದವು. ಸಾಂಕ್ರಾಮಿಕದ ಸಂದರ್ಭದಲ್ಲಿ ಬಡವರ ಸುರಕ್ಷತೆಗಾಗಿ ಆರೋಗ್ಯ ಮತ್ತು ಕಲ್ಯಾಣ ಕಾರ್ಯಕ್ರಮಗಳ ಜಾರಿಗೆ ಒತ್ತಾಯಿಸಿಯೂ ಪ್ರತಿಭಟನೆಗಳು ನಡೆದವು. ಬೊಲಿವಿಯದಂತಹ ದೇಶಗಳಲ್ಲಿ ಆಡಳಿತವನ್ನು ಕಿತ್ತೆಸೆದಿದ್ದನ್ನು ನಾವು ನೋಡಿದ್ದೇವೆ. ಪ್ರತಿಭಟನೆಗಳು, ಅದರಲ್ಲೂ ಮುಖ್ಯವಾಗಿ, ಭ್ರಷ್ಟಾಚಾರದ ವಿರುದ್ಧ ವೃತ್ತಿಪರ ಮಧ್ಯಮವರ್ಗಗಳು ನಡೆಸುತ್ತಿರುವ ಪ್ರತಿಭಟನೆಗಳು ಸಂಶಯಾಸ್ಪದವಾಗಿವೆ. ಅವು ಸಾಮಾನ್ಯವಾಗಿ ಬಡವರು ಮತ್ತು ಅಂಚಿಗೆ ತಳ್ಳಲ್ಪಟ್ಟ ದುರ್ಬಲ ಸಮುದಾಯಗಳ ವಿರೋಧಿಯಾಗಿವೆ. ಇನ್ನು ವಿವಿಧ ದೇಶಗಳಲ್ಲಿ ಅಲ್ಲಿನ ಗಣ್ಯರ ಮತ್ತು ಸಿರಿವಂತರ ಹಿತಾಸಕ್ತಿಗಳನ್ನು ಕಾಪಾಡಲು ಪ್ರತಿಭಟನೆಗಳ ಕವರೇಜ್ ಮಾಡಲಾಗುತ್ತಿದೆ. ವಿವಿಧ ದೇಶಗಳ ತುಳಿತಕ್ಕೊಳಗಾದ ಜನರು ಒಂದು ಸಮಾನ ಹೋರಾಟವನ್ನು ಕಾಣಲು ಇದು ಸಾಕಷ್ಟು ಅವಕಾಶವನ್ನು ನೀಡಲಾರದು. ಆದರೆ ಇದು ಈ ಪ್ರತಿಭಟನೆಗಳ ಸಾರ್ಥಕತೆಯ ಬಗ್ಗೆ ನಾವು ಸಂಶಯಿಸಲು ಕಾರಣವಾಗಬಾರದು. ಪ್ರಗತಿಶೀಲ ಹೋರಾಟಗಳ ಮೂಲಕ ಪ್ರತಿಗಾಮಿ ಪ್ರತಿಭಟನೆಗಳನ್ನು ಯಶಸ್ವಿಯಾಗಿ ಎದುರಿಸಬಹುದು.

2021ಕ್ಕೆ ಕಾಲಿಡುತ್ತಿದ್ದರೂ ಇನ್ನೂ ಸಾಂಕ್ರಾಮಿಕ ಪಿಡುಗು ತೊಲಗಿಲ್ಲ. ಕೋವಿಡ್‌ನ ಹೊಸ ಸ್ವರೂಪ ಮತ್ತು ಹೊಸ ಅಲೆಗಳ ಬಗ್ಗೆ ಆತಂಕಗಳಿವೆ. ಜಗತ್ತಿನಾದ್ಯಂತ ಪ್ರತಿಭಟನೆಗಳು ಈ ಅಪಾಯಕ್ಕೆ ಹೊಂದಿಕೊಳ್ಳುವ ಸಾಹಸ ಮಾಡುತ್ತಿವೆ. ಸೂಕ್ತ ಮುನ್ನೆಚ್ಚರಿಕೆ ಕ್ರಮಗಳಿದ್ದರೆ, ಪ್ರತಿಭಟನೆಗಳು ಸಾಂಕ್ರಾಮಿಕ ಹರಡುವಿಕೆಗೆ ಕಾರಣವಾಗುವುದಿಲ್ಲ ಎಂದು ಅಮೆರಿಕದಲ್ಲಿ ಅಧ್ಯಯನವೊಂದು ದೃಢೀಕರಿಸಿದೆ. ಹೀಗಿದ್ದೂ, ಸಾರ್ವಜನಿಕ ಸಭೆಗಳನ್ನು ತಡೆಯಲು ಪ್ರಭುತ್ವವು ಈಗಲೂ ಒಂದು ನೈತಿಕ ನ್ಯಾಯಸಮ್ಮತತೆಯನ್ನು ಹೊಂದಿದೆ ಎಂಬಂತೆ ನಡೆದುಕೊಳ್ಳುತ್ತಿದೆ.

2021ರ ಆಗಮನವನ್ನು ನಿರೀಕ್ಷಿಸುತ್ತಿರುವಂತೆಯೇ, ಹೊಸ ಪ್ರಜಾತಾಂತ್ರಿಕ ಪ್ರಕ್ರಿಯೆಯ ಬಹುಮುಖ್ಯ ಭಾಗವಾಗಿ ಪ್ರತಿಭಟನೆಗಳು ಇನ್ನಷ್ಟು ಹೆಚ್ಚಲಿವೆ. ನಾವು ಮುಂದಕ್ಕೆ ಚಲಿಸಿದಂತೆ, ಯಾರಿಗಾಗಿ ಪ್ರತಿಭಟನೆಗಳು, ಪ್ರತಿಭಟನೆ ಮಾಡಲು ಯಾರಿಗೆ ಸಮ್ಮತಿಸಬೇಕು, ಯಾವುದಕ್ಕಾಗಿ ಪ್ರತಿಭಟಿಸಲು ನಮಗೆ ಅನುಮತಿಯಿದೆ- ಇಂತಹ ಪ್ರಶ್ನೆ ಗಳನ್ನು ಕೇಳಲು ಆರಂಭಿಸಬಹುದು. ಆದರೆ, ಪ್ರಭುತ್ವದ ಅಧಿಕಾರದ ಮೇಲೆ ನಿಗಾ ಇಡಲು, ಪ್ರತಿರೋಧ ತೋರಲು ಈ ಪ್ರತಿಭಟನೆಗಳು ಬಹುಮುಖ್ಯ ಎಂಬುದನ್ನು ಇನ್ನು ಮುಂದೆ ಪ್ರಶ್ನಿಸಲಾಗದು.

ಅನುವಾದ: ಮಲ್ಲನಗೌಡರ್

ಕಿಶೋರ್ ಗೋವಿಂದ

ಬೆಂಗಳೂರಿನಲ್ಲಿ ನೆಲೆಸಿರುವ ಕಿಶೋರ್ ಅವರು ಗಣಿತಶಾಸ್ತ್ರಜ್ಞರು. ಜಾಗತಿಕ ರಾಜಕೀಯ ಆಗುಹೋಗುಗಳನ್ನು ನಿಕಟವಾಗಿ ಗಮನಿಸುವ ಅವರು ಪತ್ರಿಕೆಗಳಿಗೆ ಲೇಖನಗಳನ್ನು ಬರೆದಿದ್ದಾರೆ.


ಇದನ್ನೂ ಓದಿ: ಕಂಗಾನಾ ಮುಂಬೈಗೆ ಮರಳಿದ್ದಾರೆಂದು ಎನ್‌‌ಸಿಬಿಗೆ ನೆನಪಿಸಿದ ಕಾಂಗ್ರೆಸ್- ಕಾರಣವೇನು ಗೊತ್ತೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...