Homeಕರ್ನಾಟಕಗ್ರಾಮೀಣ ಮೀಸಲಾತಿಯ ಮೋಸಗಳು!!

ಗ್ರಾಮೀಣ ಮೀಸಲಾತಿಯ ಮೋಸಗಳು!!

ಮೀಸಲು ನೀತಿಯಲ್ಲಿನ ಲೋಪ-ದೊಷ ಸರಿಪಡಿಸಿದರಷ್ಟೇ ಕನ್ನಡ ಮಾಧ್ಯಮದತ್ತ ವಿದ್ಯಾರ್ಥಿಗಳನ್ನು ಪಾಲಕರನ್ನು ಸೆಳೆಯಲು ಸಾಧ್ಯ.

- Advertisement -
- Advertisement -

ಕನ್ನಡದಲ್ಲಿ ಕಲಿತರೆ ಭವಿಷ್ಯವಿದೆ ಎಂಬ ಭರವಸೆಯೇ ಮೂಡದ ಈ ಬರಡು ಸಂದರ್ಭದಲ್ಲಿ ಸರ್ಕಾರ ಒದಗಿಸುತ್ತಿರುವ ಗ್ರಾಮೀಣ ಮೀಸಲಾತಿಯ ಹಿಂದೆ ದೊಡ್ಡ ಸಾಮಾಜಿಕ ಅನ್ಯಾಯ ಅಡಗಿದೆ. ಗ್ರಾಮೀಣ ಮೀಸಲಾತಿಯ ಪಿತಾಮಹರ ದೋಷದಿಂದಾಗಿ ಅರ್ಹ-ಅಬಲ ಗ್ರಾಮೀಣ ವಿದ್ಯಾರ್ಥಿಗಳ ಅವಕಾಶವನ್ನು ಬಲಾಢ್ಯ ನಗರವಾಸಿಗಳು ರಾಜಾರೋಷವಾಗಿ ಲಪಟಾಯಿಸುತ್ತಿದ್ದಾರೆ. ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ಖಾಸಗಿ ಇಂಗ್ಲಿಷ್ ಮೀಡಿಯಂ ವಿದ್ಯಾರ್ಥಿಗಳೊಂದಿಗಿನ ಸಂಘರ್ಷದಲ್ಲಿ ಸೋಲುತ್ತಿದ್ದಾರೆ.

ರಾಜ್ಯ ಸರ್ಕಾರ ಶೇಕಡ 5ರಷ್ಟು ಕನ್ನಡ ಮಾಧ್ಯಮ ಹಾಗೂ ಶೇಕಡ 15ರಷ್ಟು ಗ್ರಾಮೀಣ ಸಮಾನಾಂತರ ಮೀಸಲಾತಿಯ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಯಲ್ಲಿ ನಿಯಮ ಮಾಡಿ ಅದ್ಯಾವುದೋ ಕಾಲವಾಗಿದೆ. ಸದರಿ ಮೀಸಲಾತಿ ಮಾನದಂಡಗಳು ಮೀಸಲಾತಿ ಪರಿಕಲ್ಪನೆ ಹಾಗೂ ನೈಜ ಉದ್ದೇಶಕ್ಕೆ ವ್ಯತಿರಿಕ್ತವಾಗಿದೆ. ವಿರೋಧಾಭಾಸಗಳ ಈ ಮೀಸಲು ನಿಯಮ ಅರ್ಹರಿಗೆ-ದುರ್ಬಲರಿಗೆ ಅವಕಾಶದಿಂದ ವಂಚಿಸುತ್ತಿದೆ. ದುರಂತವೆಂದರೆ, ಬಲಾಢ್ಯ ಅನರ್ಹರು ಈ ಹುಚ್ಚು ನೀತಿಯ ದೌರ್ಬಲ್ಯ ಬಲಸಿಕೊಂಡು ಲಾಭ ಹೊಡೆಯುತ್ತಿದ್ದಾರೆ. ಸಮಾನತೆಯ ಆಶಯಕ್ಕೆ ಕನ್ನಡ ಮಾಧ್ಯಮ-ಗ್ರಾಮೀಣ ಮೀಸಲಾತಿ ಪದ್ಧತಿ ಆಘಾತಕಾರಿಯಾಗಿದೆ!!

ಈ ಮೀಸಲು ನಿಯಮಾವಳಿಯಲ್ಲಿ ಅಖಂಡ ಹತ್ತು ವರ್ಷ ಶಾಲೆಯಲ್ಲಿ ಕಲಿತವರಿಗಷ್ಟೇ ಗ್ರಾಮೀಣ ಮತ್ತು ಕನ್ನಡ ಮಾಧ್ಯಮ ಮೀಸಲಾತಿಯೆಂಬ ಷರತ್ತು ಹಾಕಲಾಗಿದೆ. ಇದು ಅವಾಸ್ತವಿಕವಷ್ಟೇ ಅಲ್ಲ ಅನ್ಯಾಯ ಕೂಡ. ಸರ್ಕಾರದ ನೀತಿ-ನಿಯಮ ಒಂದಕ್ಕೊಂದು ಪೂರಕವಾಗಿಲ್ಲ. ನಾನಾ ಕಾರಣಕ್ಕೆ ಶಾಲೆ ಸೇರಲಾಗದವರನ್ನು ಮತ್ತು ಶಾಲೆ ಬಿಟ್ಟವರನ್ನು ವಿದ್ಯಾಭ್ಯಾಸದೆಡೆ ಆಕರ್ಷಿಸಲಾಗುತ್ತಿದೆ. ಸರ್ಕಾರ ಅನೇಕ ರಿಯಾಯಿತಿ ಕೊಟ್ಟು ಶಿಕ್ಷಣದ ಅವಕಾಶ ಕಲ್ಪಿಸುತ್ತಿದೆ. ಶಿಕ್ಷಾಣಾರ್ಥಿಗಳ ಸಾಮರ್ಥ್ಯಕ್ಕೆ ತಕ್ಕಂತೆ ಅವರ ವಯಸ್ಸು ಪರಿಗಣಿಸಿ ಮೇಲ್ತರಗತಿಗಳಿಗೆ ಪ್ರವೇಶವೂ ಕೊಡುತ್ತಿದೆ. ದುರಂತವೆಂದರೆ, ಇಂಥ ಅಭ್ಯರ್ಥಿಗಳಿಗೆ ಕನ್ನಡ ಮಾಧ್ಯಮ ಗ್ರಾಮೀಣ ಮೀಸಲಾತಿ ದಕ್ಕುತ್ತಿಲ್ಲ! ಬಾಹ್ಯವಾಗಿ ಎಸ್‌ಎಸ್‌ಎಲ್‌ಸಿ ಮುಗಿಸಿದವರಿಗೂ ಈ ಮೀಸಲಾತಿಯಿಂದ ಲಾಭವೇನಿಲ್ಲ.

ಇಲ್ಲಿ ಘನಘೋರ ಎಡವಟ್ಟೊಂದಿದೆ ಹತ್ತು ವರ್ಷದ ಕಲಿಕಾ ಸರಣಿಯಲ್ಲಿ ಒಂದೇ ಒಂದು ವರ್ಷವೇನಾದರೂ ಪಟ್ಟಣ ಪ್ರದೇಶದಲ್ಲಿ ಕಲಿತರೆ ಗಂಡಾಂತರ ಖಂಡಿತ. ಈ ಗ್ರಾಮೀಣ ಅಭ್ಯರ್ಥಿಗಳೆಲ್ಲ ಸಾಮಾಜಿಕ ನ್ಯಾಯ ತತ್ವದಂತೆ ಮೀಸಲಾತಿ ಪರಿಕಲ್ಪನೆಯ ಸೌಲಭ್ಯಕ್ಕೆ ಅರ್ಹರು.

ಈ ಗ್ರಾಮೀಣ ಮೀಸಲಾತಿಗೆ ಹಳ್ಳಿಗಾಡಿನ ಹಿನ್ನಲೆ, ಸಂಸ್ಕೃತಿ, ಸಾಮಾಜಿಕ-ಅರ್ಥಿಕ ಸ್ಥಿತಿ-ಗತಿ ಮಾನದಂಡವಾಗಬೇಕಿತ್ತು. ಆದರೆ ಅಂದಿನಿಂದ ಆಳುವವರು ಮತ್ತವರ ಸಲಹೆಗಾರ ಪಂಡಿತ್ತೋತ್ತಮರು ಮೀಸಲು ನೀತಿ ನಿರೂಪಿಸುವಾಗ ಸರಳ, ಸಮಾಜಿಕ ನ್ಯಾಯ ತತ್ವವನ್ನೇ ಪಾಲಿಸಿಲ್ಲ. ವಿಚಿತ್ರವೆಂದರೆ, ಅಭ್ಯರ್ಥಿ ಕಲಿತ ಶಾಲಾ ಕಟ್ಟಡದ “ಭೌಗೋಳಿಕ ಅಸ್ತಿತ್ವ” ಮೀಸಲಾತಿ ಹಣೆಬರಹ ನಿರ್ಧರಿಸುತ್ತಿದೆ. ಮೀಸಲಾತಿ ಬಯಸುವವರ ಶಾಲೆ ಭೌಗೋಳಿಕವಾಗಿ ಹಳ್ಳಿಯಲ್ಲಿದೆಯೋ ಅಥವಾ ಪಟ್ಟಣದಲ್ಲಿದೆಯೆಂಬ ಆಧಾರದಲ್ಲಿ ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರ ಕೊಡಲಾಗುತ್ತಿದೆ. ಅಭ್ಯರ್ಥಿ ಬಾಳಿ-ಬದುಕಿದ ಪ್ರದೇಶಕ್ಕಿಂತಲೂ ಶಾಲೆಯ ಸ್ಥಾವರ ಸ್ಥಿತಿಗೆ ಪ್ರಾಧಾನ್ಯತೆ ಕೊಡಲಾಗಿದೆ.

ಇಂತಹ ಮೀಸಲಾತಿ ನಿರ್ಧರಿಸುವಿಕೆ ಗ್ರಾಮೀಣ ಮಕ್ಕಳ ಭವಿಷ್ಯಕ್ಕೆ ಮಾರಕವಾಗಿದೆ. ಶಾಲೆ-ಹೈಸ್ಕೂಲು ಇಲ್ಲದ ಕುಗ್ರಾಮಗಳ ಮಕ್ಕಳು ಪಟ್ಟಣದ ಹಾಸ್ಟೆಲುಗಳಲ್ಲಿ ಉಳಿದು ಪಟ್ಟಣದ ಶಾಲೆಯಲ್ಲಿ ಕಲಿತರೂ ಸಾಕು ಅವರಿಗೆಲ್ಲ ಮೀಸಲಾತಿ ಸವಲತ್ತು ಸಿಗಲಾರದು. ಆಧುನಿಕ ಸೌಕರ್ಯ, ಸಕಲ ಸೌಲಭ್ಯವಿರುವ ಖಾಸಗಿ ಶಾಲೆ ಸರ್ಕಾರಿ ದಾಖಲೆ ಪ್ರಕಾರ ಗ್ರಾಮ ಪಂಚಾಯತ್ ಪರಿಧಿಯಲ್ಲಿ ಬಂದರೆ ಅಲ್ಲಿ ಪಟ್ಟಣ ಪ್ರದೇಶದ ನಗರವಾಸಿಯೂ ತೀರಾ ಮುಂದುವರಿದ ಕುಟುಂಬದ ಅಭ್ಯರ್ಥಿ ಸಲೀಸಾಗಿ ಗ್ರಾಮೀಣ ಮೀಸಲಾತಿ ಸಿಂಧುತ್ವ ಪಡೆದುಕೊಳ್ಳುತ್ತಾನೆ. ರಾಜ್ಯದ ಹಲವು ಕಡೆಯಲ್ಲಿ ಇಂಥ ದೋಖಾ ಗ್ರಾಮೀಣ ಶಾಲೆಗಳ ಹಾವಳಿ ಜೋರಾಗಿದೆ.

ಸರ್ಕಾರದ ಯಾವ್ಯಾವುದೋ ನೀತಿ ಧೋರಣೆಯಿಂದಾಗಿ ನಗರ ಪಟ್ಟಣಗಳ ವ್ಯಾಪ್ತಿ ರಾತ್ರಿಬೆಳಗಾಗುವುದರಲ್ಲಿ ವಿಶಾಲವಾಗುವ ಕಾಲಮಾನವಿದು ಈ ನಗರ ಪಟ್ಟಣಗಳ ಉದರದಲ್ಲಿ ಹೊರಹೊಲಯದ ಹಳ್ಳಿಗಳು ಜೀರ್ಣವಾಗಿ ಗ್ರಾಮೀಣ ಮೀಸಲಾತಿ ವ್ಯಾಖ್ಯಾನದಿಂದ ಹೊರದಬ್ಬಲ್ಪಡುತ್ತಿವೆ. ಗ್ರಾಮ ಪಂಚಾಯ್ತಿಯೊಂದು ಪಟ್ಟಣ ಪಂಚಾಯ್ತಿಯಾಗಿ ಪೌರಾಡಳಿತದ ವ್ಯಾಪ್ತಿಗೆ ಬಂತೆಂದು ಇಟ್ಟುಕೊಳ್ಳಿ; ಆಗ ಅಪ್ಪಟ ಹಳ್ಳಿಗರಿಗೆ ಶಿಕ್ಷಣ, ಉದ್ಯೋಗದ ಸೌಲಭ್ಯ ದಕ್ಕದಂತೆ ಮಾಡಿ ಗ್ರಾಮೀಣ ಮೀಸಲಾತಿ ಷರತ್ತು ಸತಾಯಿಸಲು ಶುರುಮಾಡುತ್ತದೆ. ಹೊಸ ಪಟ್ಟಣ ಪಂಚಾಯ್ತಿ ಪರಿಸರದ ಶಾಲೆಯಲ್ಲಿ ಕಲಿತವರು, ಕಲಿಯುತ್ತಿರುವವರು ಗ್ರಾಮೀಣ ಮೀಸಲಾತಿಯಿಂದ ವಂಚಿತರಾಗುತ್ತಾರೆ. ಇಲ್ಲಾಗುವುದು ಜನ ಸಂಖ್ಯೆ ಹೆಚ್ಚಳದ ಬದಲಾವಣೆಯೊಂದೇ! ಸಾಮಾಜಿ, ಸಾಂಸ್ಕೃತಿಕ, ಆಧುನಿಕತೆ, ಅಭಿವೃದ್ಧಿ…- ಹೀಗೆ ಯಾವ ಕ್ಷೇತ್ರದಲ್ಲೂ ಉನ್ನತಿಯಾಗಿರುವುದಿಲ್ಲ. ಗ್ರಾಮೀಣ ಚಹರೆಯ ಊರು ಪಟ್ಟಣ ಪ್ರದೇಶವೆಂಬ ವ್ಯಾಖ್ಯಾನದಲ್ಲಿ ಸಿಕ್ಕಿಬಿದ್ದು ಅರ್ಹರಿಗೆ ಮೀಸಲಾತಿ ಸಿಗದಂತೆ ಮಾಡಿಬಿಡುತ್ತದೆ!

ಶಿಕ್ಷಣ ದಂಧೆಕೋರರಿಗೆ ಗ್ರಾಮೀಣ ಮೀಸಲಾತಿ ಆಧ್ವಾನಗಳು ವ್ಯಾವಹಾರಿಕ ತಂತ್ರಗಾರಿಕೆಯಾಗಿ ಅನುಕೂಲಕವಾಗಿದೆ. ಪಟ್ಟಣಗಳ ಸರಹದ್ದಿನಲ್ಲಿರುವ ಹಳ್ಳಿಗಳಲ್ಲಿ ಅತ್ಯಾಧುನಿಕ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆದು ಗ್ರಾಮೀಣ ಮೀಸಲಾತಿಗೆ ಪಂಗನಾಮ ಹಾಕಲಾಗುತ್ತಿದೆ. ತಮ್ಮಲ್ಲಿ ಕಲಿತರೆ ಗ್ರಾಮೀಣ ಮೀಸಲಾತಿ ಭಾಗ್ಯ ಪಡೆಯಬಹುದೆಂಬ ಪ್ರಚಾರ ಮಾಡಿ ಖಾಸಗಿ ಲಾಬಿ ಮಾಡುತ್ತಿದೆ. ಹಳ್ಳಿಗಳಲ್ಲೀಗ ಅಂತಾರಾಷ್ಟ್ರೀಯ ಸೌಲಭ್ಯ-ಸೌಕರ್ಯ ಸವಲತ್ತಿನ ರೆಸಿಡೆನ್ಸಿಯಲ್ ಶಾಲೆಗಳೆಂದು ಹೇಳಿಕೊಳ್ಳುವ ಶೈಕ್ಷಣಿಕ ಸಂಸ್ಥೆಗಳು ಸ್ಥಾಪಿತವಾಗುತ್ತಿವೆ. ಇಲ್ಲಿ ಕಲಿಯುವ ಹೈಟೆಕ್ ನಗರಗಳ ಉಳ್ಳವರು ಮತ್ತು ಸಾಮಾಜಿಕವಾಗಿ ಮುಂದುವರೆದವರ ಮಕ್ಕಳಿಗೆ ಗ್ರಾಮೀಣ ಮೀಸಲಾತಿ ಪ್ರಯೋಜನ ಸಿಗುತ್ತದೆ. ಆದರೆ ಅದೇ ನಗರದ ಕೊಳಚೆ ಏರಿಯಾದ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಕಲಿಯುವ ದುರ್ಬಲರಿಗೆ ಮೀಸಲಾತಿ ಬರೀ ಕನಸಷ್ಟೇ.

ಹೈಟೆಕ್ ರೆಸಿಡೆನ್ಸಿಯಲ್ ಶಾಲೆಗಳಲ್ಲಿ ಅಭ್ಯಾಸ ಮಾಡಿದ ಬಲಾಢ್ಯರೊಂದಿಗೆ ಸರ್ಕಾರಿ ಶಾಲೆಯಲ್ಲಿ ಕಲಿತ ‘ನತದೃಷ್ಟ’ರನ್ನು ಒಂದೇ ಮಾನದಂಡದಿಂದ ಅಳೆಯುವುದಿದೆಯಲ್ಲ, ಅದು ಬರ್ಬರ-ಘೋರ ಅನ್ಯಾಯ! ಖಾಸಗಿ ಶಾಲೆಯಲ್ಲಿ ಕಲಿತವರು ಶೈಕ್ಷಣಿಕ-ಔದ್ಯೋಗಿಕ ಪೈಪೋಟಿಯಲ್ಲಿ ಗೆಲ್ಲುತ್ತಿದ್ದಾರೆ; ಸರ್ಕಾರಿ ಶಾಲೆಯಲ್ಲಿ ಕಲಿತ ನಗರ-ಹಳ್ಳಿಗಳ ಮಕ್ಕಳೂ ಸ್ವಂತ ಪರಿಶ್ರಮ, ಪ್ರತಿಭೆಯಿಂದ ಸಾಧನೆ ಮಾಡಿರಲೂಬಹುದು. ಆದರಿಂದ ಪ್ರಮಾಣ ತೀರ ಕಮ್ಮಿ; ಈ ಹಳ್ಳಿಗರು ಜಾಗತಿಕ ಸ್ಫರ್ಧೆಯಲ್ಲಿ ಎಡವುತ್ತಿದ್ದಾರೆ. ಪ್ರತಿಭೆ ಹೊರಹೊಮ್ಮಲು ಪ್ರೋತ್ಸಾಹವಿಲ್ಲದಾಗಿದೆ. ಸರಿಯಾದ ಸೂರು, ಶಿಕ್ಷಕರಿಲ್ಲದ, ಶಿಕ್ಷಕರಿದ್ದರೂ ಕರ್ತವ್ಯ ಪ್ರಜ್ಞೆ ಇಲ್ಲದವರೇ ಹೆಚ್ಚಿರುವ ಸರ್ಕಾರಿ ಶಾಲೆಗಳ ಗೋಳು ಹೇಳತೀರದು.

ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಕನ್ನಡ ಕಲಿತರೆ ಬದುಕು ರೂಪಿಸಿಕೊಳ್ಳಲಾಗದೆಂಬ ಹತಾಶೆ ಮಡುಗಟ್ಟಿದೆ. ‘ಕನ್ನಡ ಶಾಲೆ’ಗಳೆಂದೇ ಜನಜನಿತವಾಗಿದ್ದ ನೆಚ್ಚಿನ ಸರ್ಕಾರಿ ಶಾಲೆಗಳೀಗ ಕಣ್ಮರೆಯಾಗುತ್ತಿವೆ. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನಡೆಸುವುದಿರಲಿ, ಅಸ್ತಿತ್ವ ಉಳಿಸಿಕೊಳ್ಳಲಿಕ್ಕೆ ಒದ್ದಾಡಬೇಕಾಗಿದೆ. ಖಾಸಗಿ ಶಾಲೆಗಳು ಉತ್ತಮ ಫಲಿತಾಂಶ ಕೊಡುತ್ತಿವೆ. ಉತ್ಕೃಷ್ಟತೆ ಕಾಪಾಡಿಕೊಳ್ಳದಿದ್ದರೆ ನೆಲೆ-ಬೆಲೆ ಕುಸಿಯುವ ಭಯ ಖಾಸಗಿಯವರನ್ನು ನಿರಂತರ ಎಚ್ಚರ ಸ್ಥಿತಿಯಲ್ಲಿ ಇಟ್ಟಿರುತ್ತದೆ.

ಮೀಸಲು ನೀತಿಯಲ್ಲಿನ ಲೋಪ-ದೊಷ ಸರಿಪಡಿಸಿದರಷ್ಟೇ ಕನ್ನಡ ಮಾಧ್ಯಮದತ್ತ ವಿದ್ಯಾರ್ಥಿಗಳನ್ನು ಪಾಲಕರನ್ನು ಸೆಳೆಯಲು ಸಾಧ್ಯ. ಸರ್ಕಾರಿ ಶಾಲೆಗಳಲ್ಲಿ ವಿಶ್ವಾಸಾರ್ಹತೆ, ಲವಲವಿಕೆ, ಪ್ರೋತ್ಸಾಹ ಇಲ್ಲದಿದ್ದರೆ ಎಷ್ಟೆ ಆರ್ಥಿಕ ಸಂಕಷ್ಟವಿದ್ದರೂ ಸಾಲ-ಸೂಲ ಮಾಡಿಯಾದರೂ ಖಾಸಗಿ ಶಿಕ್ಷಣಕ್ಕೆ ಹಾತೊರೆಯುತ್ತಾರೆಂಬ ವಾಸ್ತವ ಸರ್ಕಾರಿ ಪಂಡಿತರಿಗೆ ಅರ್ಥವಾಗಬೇಕಿದೆ.

ನಿರಂತರ ಹತ್ತು ಶೈಕ್ಷಣಿಕ ವರ್ಷಗಳ ಅಧ್ಯಯನ ಬದಲಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಪಾಸು ಮಾಡಿದವರಿಗೆ ಕನಿಷ್ಠ ಶೇಕಡಾ 20ರಷ್ಟು ಸಮನಾಂತರ ಮೀಸಲಾತಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒದಗಿಸಲು ಚಿಂತಿಸಬೇಕಿದೆ. ಇದರಿಂದ ಗ್ರಾಮೀಣ ಮತ್ತು ನಗರ ಎರಡೂ ಕಡೆಯ ಬಡ ಅಸಾಯಕರಿಗೆ ಅನುಕೂಲವಾಗುತ್ತದೆ. ಭೌಗೋಳಿಕ ನೆಪವೊಡ್ಡಿ ಗ್ರಾಮೀಣ ಮೀಸಲಾತಿಗೆ ಕನ್ನ ಕೊರೆಯುವವರಿಗೆ ಕಡಿವಾಣ ಬೀಳುತ್ತದೆ. ಭಾಷೆ ಮೇಲಿನ ಪ್ರೀತಿಯಿಂದ ಕನ್ನಡ ಮಾಧ್ಯಮದಲ್ಲಿ ಕಲಿಯುವ ಹೊರನಾಡ ಕನ್ನಡಿಗರಿಗೂ ಈ ಮೀಸಲು ಸೌಲಭ್ಯ ಸಿಗುವಂತಾಗಬೇಕು. ರಾಜ್ಯ ಕೋಟಾದಲ್ಲಿ ಸಾಮಾನ್ಯ ಪ್ರವೇಶಪರೀಕ್ಷೆ (ಸಿಇಟಿ) ಬರೆಯಲು ಕನಿಷ್ಠ ಏಳು ವರ್ಷ ಕರ್ನಾಟಕದಲ್ಲಿ ಕಲಿತಿರಬೇಕೆಂಬ ಹುಚ್ಚು ನಿಯಮದಿಂದಲೂ ವಿನಾಯಿತಿ ಹೊರನಾಡ ಕನ್ನಡಿಗರಿಗೆ ಕೊಡಬೇಕು. ಇದೆಲ್ಲ ಈಗಿನ ಅವಾಂತರಕಾರಿ ಕನ್ನಡ ಮಾಧ್ಯಮ ಗ್ರಾಮೀಣ ಮೀಸಲಾತಿ ಬದಲಾವಣೆಯಿಂದ ಮಾತ್ರ ಸಾಧ್ಯ!

  • ಶುದ್ದೋಧನ

ಇದನ್ನೂ ಓದಿ: ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...