Homeಕರ್ನಾಟಕಗ್ರಾಮೀಣ ಮೀಸಲಾತಿಯ ಮೋಸಗಳು!!

ಗ್ರಾಮೀಣ ಮೀಸಲಾತಿಯ ಮೋಸಗಳು!!

ಮೀಸಲು ನೀತಿಯಲ್ಲಿನ ಲೋಪ-ದೊಷ ಸರಿಪಡಿಸಿದರಷ್ಟೇ ಕನ್ನಡ ಮಾಧ್ಯಮದತ್ತ ವಿದ್ಯಾರ್ಥಿಗಳನ್ನು ಪಾಲಕರನ್ನು ಸೆಳೆಯಲು ಸಾಧ್ಯ.

- Advertisement -
- Advertisement -

ಕನ್ನಡದಲ್ಲಿ ಕಲಿತರೆ ಭವಿಷ್ಯವಿದೆ ಎಂಬ ಭರವಸೆಯೇ ಮೂಡದ ಈ ಬರಡು ಸಂದರ್ಭದಲ್ಲಿ ಸರ್ಕಾರ ಒದಗಿಸುತ್ತಿರುವ ಗ್ರಾಮೀಣ ಮೀಸಲಾತಿಯ ಹಿಂದೆ ದೊಡ್ಡ ಸಾಮಾಜಿಕ ಅನ್ಯಾಯ ಅಡಗಿದೆ. ಗ್ರಾಮೀಣ ಮೀಸಲಾತಿಯ ಪಿತಾಮಹರ ದೋಷದಿಂದಾಗಿ ಅರ್ಹ-ಅಬಲ ಗ್ರಾಮೀಣ ವಿದ್ಯಾರ್ಥಿಗಳ ಅವಕಾಶವನ್ನು ಬಲಾಢ್ಯ ನಗರವಾಸಿಗಳು ರಾಜಾರೋಷವಾಗಿ ಲಪಟಾಯಿಸುತ್ತಿದ್ದಾರೆ. ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ಖಾಸಗಿ ಇಂಗ್ಲಿಷ್ ಮೀಡಿಯಂ ವಿದ್ಯಾರ್ಥಿಗಳೊಂದಿಗಿನ ಸಂಘರ್ಷದಲ್ಲಿ ಸೋಲುತ್ತಿದ್ದಾರೆ.

ರಾಜ್ಯ ಸರ್ಕಾರ ಶೇಕಡ 5ರಷ್ಟು ಕನ್ನಡ ಮಾಧ್ಯಮ ಹಾಗೂ ಶೇಕಡ 15ರಷ್ಟು ಗ್ರಾಮೀಣ ಸಮಾನಾಂತರ ಮೀಸಲಾತಿಯ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಯಲ್ಲಿ ನಿಯಮ ಮಾಡಿ ಅದ್ಯಾವುದೋ ಕಾಲವಾಗಿದೆ. ಸದರಿ ಮೀಸಲಾತಿ ಮಾನದಂಡಗಳು ಮೀಸಲಾತಿ ಪರಿಕಲ್ಪನೆ ಹಾಗೂ ನೈಜ ಉದ್ದೇಶಕ್ಕೆ ವ್ಯತಿರಿಕ್ತವಾಗಿದೆ. ವಿರೋಧಾಭಾಸಗಳ ಈ ಮೀಸಲು ನಿಯಮ ಅರ್ಹರಿಗೆ-ದುರ್ಬಲರಿಗೆ ಅವಕಾಶದಿಂದ ವಂಚಿಸುತ್ತಿದೆ. ದುರಂತವೆಂದರೆ, ಬಲಾಢ್ಯ ಅನರ್ಹರು ಈ ಹುಚ್ಚು ನೀತಿಯ ದೌರ್ಬಲ್ಯ ಬಲಸಿಕೊಂಡು ಲಾಭ ಹೊಡೆಯುತ್ತಿದ್ದಾರೆ. ಸಮಾನತೆಯ ಆಶಯಕ್ಕೆ ಕನ್ನಡ ಮಾಧ್ಯಮ-ಗ್ರಾಮೀಣ ಮೀಸಲಾತಿ ಪದ್ಧತಿ ಆಘಾತಕಾರಿಯಾಗಿದೆ!!

ಈ ಮೀಸಲು ನಿಯಮಾವಳಿಯಲ್ಲಿ ಅಖಂಡ ಹತ್ತು ವರ್ಷ ಶಾಲೆಯಲ್ಲಿ ಕಲಿತವರಿಗಷ್ಟೇ ಗ್ರಾಮೀಣ ಮತ್ತು ಕನ್ನಡ ಮಾಧ್ಯಮ ಮೀಸಲಾತಿಯೆಂಬ ಷರತ್ತು ಹಾಕಲಾಗಿದೆ. ಇದು ಅವಾಸ್ತವಿಕವಷ್ಟೇ ಅಲ್ಲ ಅನ್ಯಾಯ ಕೂಡ. ಸರ್ಕಾರದ ನೀತಿ-ನಿಯಮ ಒಂದಕ್ಕೊಂದು ಪೂರಕವಾಗಿಲ್ಲ. ನಾನಾ ಕಾರಣಕ್ಕೆ ಶಾಲೆ ಸೇರಲಾಗದವರನ್ನು ಮತ್ತು ಶಾಲೆ ಬಿಟ್ಟವರನ್ನು ವಿದ್ಯಾಭ್ಯಾಸದೆಡೆ ಆಕರ್ಷಿಸಲಾಗುತ್ತಿದೆ. ಸರ್ಕಾರ ಅನೇಕ ರಿಯಾಯಿತಿ ಕೊಟ್ಟು ಶಿಕ್ಷಣದ ಅವಕಾಶ ಕಲ್ಪಿಸುತ್ತಿದೆ. ಶಿಕ್ಷಾಣಾರ್ಥಿಗಳ ಸಾಮರ್ಥ್ಯಕ್ಕೆ ತಕ್ಕಂತೆ ಅವರ ವಯಸ್ಸು ಪರಿಗಣಿಸಿ ಮೇಲ್ತರಗತಿಗಳಿಗೆ ಪ್ರವೇಶವೂ ಕೊಡುತ್ತಿದೆ. ದುರಂತವೆಂದರೆ, ಇಂಥ ಅಭ್ಯರ್ಥಿಗಳಿಗೆ ಕನ್ನಡ ಮಾಧ್ಯಮ ಗ್ರಾಮೀಣ ಮೀಸಲಾತಿ ದಕ್ಕುತ್ತಿಲ್ಲ! ಬಾಹ್ಯವಾಗಿ ಎಸ್‌ಎಸ್‌ಎಲ್‌ಸಿ ಮುಗಿಸಿದವರಿಗೂ ಈ ಮೀಸಲಾತಿಯಿಂದ ಲಾಭವೇನಿಲ್ಲ.

ಇಲ್ಲಿ ಘನಘೋರ ಎಡವಟ್ಟೊಂದಿದೆ ಹತ್ತು ವರ್ಷದ ಕಲಿಕಾ ಸರಣಿಯಲ್ಲಿ ಒಂದೇ ಒಂದು ವರ್ಷವೇನಾದರೂ ಪಟ್ಟಣ ಪ್ರದೇಶದಲ್ಲಿ ಕಲಿತರೆ ಗಂಡಾಂತರ ಖಂಡಿತ. ಈ ಗ್ರಾಮೀಣ ಅಭ್ಯರ್ಥಿಗಳೆಲ್ಲ ಸಾಮಾಜಿಕ ನ್ಯಾಯ ತತ್ವದಂತೆ ಮೀಸಲಾತಿ ಪರಿಕಲ್ಪನೆಯ ಸೌಲಭ್ಯಕ್ಕೆ ಅರ್ಹರು.

ಈ ಗ್ರಾಮೀಣ ಮೀಸಲಾತಿಗೆ ಹಳ್ಳಿಗಾಡಿನ ಹಿನ್ನಲೆ, ಸಂಸ್ಕೃತಿ, ಸಾಮಾಜಿಕ-ಅರ್ಥಿಕ ಸ್ಥಿತಿ-ಗತಿ ಮಾನದಂಡವಾಗಬೇಕಿತ್ತು. ಆದರೆ ಅಂದಿನಿಂದ ಆಳುವವರು ಮತ್ತವರ ಸಲಹೆಗಾರ ಪಂಡಿತ್ತೋತ್ತಮರು ಮೀಸಲು ನೀತಿ ನಿರೂಪಿಸುವಾಗ ಸರಳ, ಸಮಾಜಿಕ ನ್ಯಾಯ ತತ್ವವನ್ನೇ ಪಾಲಿಸಿಲ್ಲ. ವಿಚಿತ್ರವೆಂದರೆ, ಅಭ್ಯರ್ಥಿ ಕಲಿತ ಶಾಲಾ ಕಟ್ಟಡದ “ಭೌಗೋಳಿಕ ಅಸ್ತಿತ್ವ” ಮೀಸಲಾತಿ ಹಣೆಬರಹ ನಿರ್ಧರಿಸುತ್ತಿದೆ. ಮೀಸಲಾತಿ ಬಯಸುವವರ ಶಾಲೆ ಭೌಗೋಳಿಕವಾಗಿ ಹಳ್ಳಿಯಲ್ಲಿದೆಯೋ ಅಥವಾ ಪಟ್ಟಣದಲ್ಲಿದೆಯೆಂಬ ಆಧಾರದಲ್ಲಿ ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರ ಕೊಡಲಾಗುತ್ತಿದೆ. ಅಭ್ಯರ್ಥಿ ಬಾಳಿ-ಬದುಕಿದ ಪ್ರದೇಶಕ್ಕಿಂತಲೂ ಶಾಲೆಯ ಸ್ಥಾವರ ಸ್ಥಿತಿಗೆ ಪ್ರಾಧಾನ್ಯತೆ ಕೊಡಲಾಗಿದೆ.

ಇಂತಹ ಮೀಸಲಾತಿ ನಿರ್ಧರಿಸುವಿಕೆ ಗ್ರಾಮೀಣ ಮಕ್ಕಳ ಭವಿಷ್ಯಕ್ಕೆ ಮಾರಕವಾಗಿದೆ. ಶಾಲೆ-ಹೈಸ್ಕೂಲು ಇಲ್ಲದ ಕುಗ್ರಾಮಗಳ ಮಕ್ಕಳು ಪಟ್ಟಣದ ಹಾಸ್ಟೆಲುಗಳಲ್ಲಿ ಉಳಿದು ಪಟ್ಟಣದ ಶಾಲೆಯಲ್ಲಿ ಕಲಿತರೂ ಸಾಕು ಅವರಿಗೆಲ್ಲ ಮೀಸಲಾತಿ ಸವಲತ್ತು ಸಿಗಲಾರದು. ಆಧುನಿಕ ಸೌಕರ್ಯ, ಸಕಲ ಸೌಲಭ್ಯವಿರುವ ಖಾಸಗಿ ಶಾಲೆ ಸರ್ಕಾರಿ ದಾಖಲೆ ಪ್ರಕಾರ ಗ್ರಾಮ ಪಂಚಾಯತ್ ಪರಿಧಿಯಲ್ಲಿ ಬಂದರೆ ಅಲ್ಲಿ ಪಟ್ಟಣ ಪ್ರದೇಶದ ನಗರವಾಸಿಯೂ ತೀರಾ ಮುಂದುವರಿದ ಕುಟುಂಬದ ಅಭ್ಯರ್ಥಿ ಸಲೀಸಾಗಿ ಗ್ರಾಮೀಣ ಮೀಸಲಾತಿ ಸಿಂಧುತ್ವ ಪಡೆದುಕೊಳ್ಳುತ್ತಾನೆ. ರಾಜ್ಯದ ಹಲವು ಕಡೆಯಲ್ಲಿ ಇಂಥ ದೋಖಾ ಗ್ರಾಮೀಣ ಶಾಲೆಗಳ ಹಾವಳಿ ಜೋರಾಗಿದೆ.

ಸರ್ಕಾರದ ಯಾವ್ಯಾವುದೋ ನೀತಿ ಧೋರಣೆಯಿಂದಾಗಿ ನಗರ ಪಟ್ಟಣಗಳ ವ್ಯಾಪ್ತಿ ರಾತ್ರಿಬೆಳಗಾಗುವುದರಲ್ಲಿ ವಿಶಾಲವಾಗುವ ಕಾಲಮಾನವಿದು ಈ ನಗರ ಪಟ್ಟಣಗಳ ಉದರದಲ್ಲಿ ಹೊರಹೊಲಯದ ಹಳ್ಳಿಗಳು ಜೀರ್ಣವಾಗಿ ಗ್ರಾಮೀಣ ಮೀಸಲಾತಿ ವ್ಯಾಖ್ಯಾನದಿಂದ ಹೊರದಬ್ಬಲ್ಪಡುತ್ತಿವೆ. ಗ್ರಾಮ ಪಂಚಾಯ್ತಿಯೊಂದು ಪಟ್ಟಣ ಪಂಚಾಯ್ತಿಯಾಗಿ ಪೌರಾಡಳಿತದ ವ್ಯಾಪ್ತಿಗೆ ಬಂತೆಂದು ಇಟ್ಟುಕೊಳ್ಳಿ; ಆಗ ಅಪ್ಪಟ ಹಳ್ಳಿಗರಿಗೆ ಶಿಕ್ಷಣ, ಉದ್ಯೋಗದ ಸೌಲಭ್ಯ ದಕ್ಕದಂತೆ ಮಾಡಿ ಗ್ರಾಮೀಣ ಮೀಸಲಾತಿ ಷರತ್ತು ಸತಾಯಿಸಲು ಶುರುಮಾಡುತ್ತದೆ. ಹೊಸ ಪಟ್ಟಣ ಪಂಚಾಯ್ತಿ ಪರಿಸರದ ಶಾಲೆಯಲ್ಲಿ ಕಲಿತವರು, ಕಲಿಯುತ್ತಿರುವವರು ಗ್ರಾಮೀಣ ಮೀಸಲಾತಿಯಿಂದ ವಂಚಿತರಾಗುತ್ತಾರೆ. ಇಲ್ಲಾಗುವುದು ಜನ ಸಂಖ್ಯೆ ಹೆಚ್ಚಳದ ಬದಲಾವಣೆಯೊಂದೇ! ಸಾಮಾಜಿ, ಸಾಂಸ್ಕೃತಿಕ, ಆಧುನಿಕತೆ, ಅಭಿವೃದ್ಧಿ…- ಹೀಗೆ ಯಾವ ಕ್ಷೇತ್ರದಲ್ಲೂ ಉನ್ನತಿಯಾಗಿರುವುದಿಲ್ಲ. ಗ್ರಾಮೀಣ ಚಹರೆಯ ಊರು ಪಟ್ಟಣ ಪ್ರದೇಶವೆಂಬ ವ್ಯಾಖ್ಯಾನದಲ್ಲಿ ಸಿಕ್ಕಿಬಿದ್ದು ಅರ್ಹರಿಗೆ ಮೀಸಲಾತಿ ಸಿಗದಂತೆ ಮಾಡಿಬಿಡುತ್ತದೆ!

ಶಿಕ್ಷಣ ದಂಧೆಕೋರರಿಗೆ ಗ್ರಾಮೀಣ ಮೀಸಲಾತಿ ಆಧ್ವಾನಗಳು ವ್ಯಾವಹಾರಿಕ ತಂತ್ರಗಾರಿಕೆಯಾಗಿ ಅನುಕೂಲಕವಾಗಿದೆ. ಪಟ್ಟಣಗಳ ಸರಹದ್ದಿನಲ್ಲಿರುವ ಹಳ್ಳಿಗಳಲ್ಲಿ ಅತ್ಯಾಧುನಿಕ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆದು ಗ್ರಾಮೀಣ ಮೀಸಲಾತಿಗೆ ಪಂಗನಾಮ ಹಾಕಲಾಗುತ್ತಿದೆ. ತಮ್ಮಲ್ಲಿ ಕಲಿತರೆ ಗ್ರಾಮೀಣ ಮೀಸಲಾತಿ ಭಾಗ್ಯ ಪಡೆಯಬಹುದೆಂಬ ಪ್ರಚಾರ ಮಾಡಿ ಖಾಸಗಿ ಲಾಬಿ ಮಾಡುತ್ತಿದೆ. ಹಳ್ಳಿಗಳಲ್ಲೀಗ ಅಂತಾರಾಷ್ಟ್ರೀಯ ಸೌಲಭ್ಯ-ಸೌಕರ್ಯ ಸವಲತ್ತಿನ ರೆಸಿಡೆನ್ಸಿಯಲ್ ಶಾಲೆಗಳೆಂದು ಹೇಳಿಕೊಳ್ಳುವ ಶೈಕ್ಷಣಿಕ ಸಂಸ್ಥೆಗಳು ಸ್ಥಾಪಿತವಾಗುತ್ತಿವೆ. ಇಲ್ಲಿ ಕಲಿಯುವ ಹೈಟೆಕ್ ನಗರಗಳ ಉಳ್ಳವರು ಮತ್ತು ಸಾಮಾಜಿಕವಾಗಿ ಮುಂದುವರೆದವರ ಮಕ್ಕಳಿಗೆ ಗ್ರಾಮೀಣ ಮೀಸಲಾತಿ ಪ್ರಯೋಜನ ಸಿಗುತ್ತದೆ. ಆದರೆ ಅದೇ ನಗರದ ಕೊಳಚೆ ಏರಿಯಾದ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಕಲಿಯುವ ದುರ್ಬಲರಿಗೆ ಮೀಸಲಾತಿ ಬರೀ ಕನಸಷ್ಟೇ.

ಹೈಟೆಕ್ ರೆಸಿಡೆನ್ಸಿಯಲ್ ಶಾಲೆಗಳಲ್ಲಿ ಅಭ್ಯಾಸ ಮಾಡಿದ ಬಲಾಢ್ಯರೊಂದಿಗೆ ಸರ್ಕಾರಿ ಶಾಲೆಯಲ್ಲಿ ಕಲಿತ ‘ನತದೃಷ್ಟ’ರನ್ನು ಒಂದೇ ಮಾನದಂಡದಿಂದ ಅಳೆಯುವುದಿದೆಯಲ್ಲ, ಅದು ಬರ್ಬರ-ಘೋರ ಅನ್ಯಾಯ! ಖಾಸಗಿ ಶಾಲೆಯಲ್ಲಿ ಕಲಿತವರು ಶೈಕ್ಷಣಿಕ-ಔದ್ಯೋಗಿಕ ಪೈಪೋಟಿಯಲ್ಲಿ ಗೆಲ್ಲುತ್ತಿದ್ದಾರೆ; ಸರ್ಕಾರಿ ಶಾಲೆಯಲ್ಲಿ ಕಲಿತ ನಗರ-ಹಳ್ಳಿಗಳ ಮಕ್ಕಳೂ ಸ್ವಂತ ಪರಿಶ್ರಮ, ಪ್ರತಿಭೆಯಿಂದ ಸಾಧನೆ ಮಾಡಿರಲೂಬಹುದು. ಆದರಿಂದ ಪ್ರಮಾಣ ತೀರ ಕಮ್ಮಿ; ಈ ಹಳ್ಳಿಗರು ಜಾಗತಿಕ ಸ್ಫರ್ಧೆಯಲ್ಲಿ ಎಡವುತ್ತಿದ್ದಾರೆ. ಪ್ರತಿಭೆ ಹೊರಹೊಮ್ಮಲು ಪ್ರೋತ್ಸಾಹವಿಲ್ಲದಾಗಿದೆ. ಸರಿಯಾದ ಸೂರು, ಶಿಕ್ಷಕರಿಲ್ಲದ, ಶಿಕ್ಷಕರಿದ್ದರೂ ಕರ್ತವ್ಯ ಪ್ರಜ್ಞೆ ಇಲ್ಲದವರೇ ಹೆಚ್ಚಿರುವ ಸರ್ಕಾರಿ ಶಾಲೆಗಳ ಗೋಳು ಹೇಳತೀರದು.

ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಕನ್ನಡ ಕಲಿತರೆ ಬದುಕು ರೂಪಿಸಿಕೊಳ್ಳಲಾಗದೆಂಬ ಹತಾಶೆ ಮಡುಗಟ್ಟಿದೆ. ‘ಕನ್ನಡ ಶಾಲೆ’ಗಳೆಂದೇ ಜನಜನಿತವಾಗಿದ್ದ ನೆಚ್ಚಿನ ಸರ್ಕಾರಿ ಶಾಲೆಗಳೀಗ ಕಣ್ಮರೆಯಾಗುತ್ತಿವೆ. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನಡೆಸುವುದಿರಲಿ, ಅಸ್ತಿತ್ವ ಉಳಿಸಿಕೊಳ್ಳಲಿಕ್ಕೆ ಒದ್ದಾಡಬೇಕಾಗಿದೆ. ಖಾಸಗಿ ಶಾಲೆಗಳು ಉತ್ತಮ ಫಲಿತಾಂಶ ಕೊಡುತ್ತಿವೆ. ಉತ್ಕೃಷ್ಟತೆ ಕಾಪಾಡಿಕೊಳ್ಳದಿದ್ದರೆ ನೆಲೆ-ಬೆಲೆ ಕುಸಿಯುವ ಭಯ ಖಾಸಗಿಯವರನ್ನು ನಿರಂತರ ಎಚ್ಚರ ಸ್ಥಿತಿಯಲ್ಲಿ ಇಟ್ಟಿರುತ್ತದೆ.

ಮೀಸಲು ನೀತಿಯಲ್ಲಿನ ಲೋಪ-ದೊಷ ಸರಿಪಡಿಸಿದರಷ್ಟೇ ಕನ್ನಡ ಮಾಧ್ಯಮದತ್ತ ವಿದ್ಯಾರ್ಥಿಗಳನ್ನು ಪಾಲಕರನ್ನು ಸೆಳೆಯಲು ಸಾಧ್ಯ. ಸರ್ಕಾರಿ ಶಾಲೆಗಳಲ್ಲಿ ವಿಶ್ವಾಸಾರ್ಹತೆ, ಲವಲವಿಕೆ, ಪ್ರೋತ್ಸಾಹ ಇಲ್ಲದಿದ್ದರೆ ಎಷ್ಟೆ ಆರ್ಥಿಕ ಸಂಕಷ್ಟವಿದ್ದರೂ ಸಾಲ-ಸೂಲ ಮಾಡಿಯಾದರೂ ಖಾಸಗಿ ಶಿಕ್ಷಣಕ್ಕೆ ಹಾತೊರೆಯುತ್ತಾರೆಂಬ ವಾಸ್ತವ ಸರ್ಕಾರಿ ಪಂಡಿತರಿಗೆ ಅರ್ಥವಾಗಬೇಕಿದೆ.

ನಿರಂತರ ಹತ್ತು ಶೈಕ್ಷಣಿಕ ವರ್ಷಗಳ ಅಧ್ಯಯನ ಬದಲಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಪಾಸು ಮಾಡಿದವರಿಗೆ ಕನಿಷ್ಠ ಶೇಕಡಾ 20ರಷ್ಟು ಸಮನಾಂತರ ಮೀಸಲಾತಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒದಗಿಸಲು ಚಿಂತಿಸಬೇಕಿದೆ. ಇದರಿಂದ ಗ್ರಾಮೀಣ ಮತ್ತು ನಗರ ಎರಡೂ ಕಡೆಯ ಬಡ ಅಸಾಯಕರಿಗೆ ಅನುಕೂಲವಾಗುತ್ತದೆ. ಭೌಗೋಳಿಕ ನೆಪವೊಡ್ಡಿ ಗ್ರಾಮೀಣ ಮೀಸಲಾತಿಗೆ ಕನ್ನ ಕೊರೆಯುವವರಿಗೆ ಕಡಿವಾಣ ಬೀಳುತ್ತದೆ. ಭಾಷೆ ಮೇಲಿನ ಪ್ರೀತಿಯಿಂದ ಕನ್ನಡ ಮಾಧ್ಯಮದಲ್ಲಿ ಕಲಿಯುವ ಹೊರನಾಡ ಕನ್ನಡಿಗರಿಗೂ ಈ ಮೀಸಲು ಸೌಲಭ್ಯ ಸಿಗುವಂತಾಗಬೇಕು. ರಾಜ್ಯ ಕೋಟಾದಲ್ಲಿ ಸಾಮಾನ್ಯ ಪ್ರವೇಶಪರೀಕ್ಷೆ (ಸಿಇಟಿ) ಬರೆಯಲು ಕನಿಷ್ಠ ಏಳು ವರ್ಷ ಕರ್ನಾಟಕದಲ್ಲಿ ಕಲಿತಿರಬೇಕೆಂಬ ಹುಚ್ಚು ನಿಯಮದಿಂದಲೂ ವಿನಾಯಿತಿ ಹೊರನಾಡ ಕನ್ನಡಿಗರಿಗೆ ಕೊಡಬೇಕು. ಇದೆಲ್ಲ ಈಗಿನ ಅವಾಂತರಕಾರಿ ಕನ್ನಡ ಮಾಧ್ಯಮ ಗ್ರಾಮೀಣ ಮೀಸಲಾತಿ ಬದಲಾವಣೆಯಿಂದ ಮಾತ್ರ ಸಾಧ್ಯ!

  • ಶುದ್ದೋಧನ

ಇದನ್ನೂ ಓದಿ: ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...