Homeಮುಖಪುಟರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

ಭಗವಾನ್ ರಾಮನಿಗೆ ಪ್ರಾರ್ಥನೆ ಸಲ್ಲಿಸಲು ತಮ್ಮ ಕುಟುಂಬ ಸದಸ್ಯರೊಂದಿಗೆ ಶೀಘ್ರದಲ್ಲೇ ಅಯೋಧ್ಯೆಗೆ ಮತ್ತೊಮ್ಮೆ ಬರುವುದಾಗಿ ಅಖಿಲೇಶ್ ಯಾದವ್ ಹೇಳಿದ್ದಾರೆ.

- Advertisement -
- Advertisement -

ಶ್ರೀರಾಮಚಂದ್ರ ಸಮಾಜವಾದಿ ಪಕ್ಷಕ್ಕೆ ಸೇರಿದವರು, ನಾವು ರಾಮನ ಭಕ್ತರು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಅಜಂಘರ್​​ನಿಂದ ತೆರಳುತ್ತಿದ್ದಾಗ ಕೆಲ ಸಮಯ ಅಯೋಧ್ಯೆಯಲ್ಲಿ ವಿರಾಮ ತೆಗೆದುಕೊಳ್ಳುವಾಗ ಈ ಹೇಳಿಕೆ ನೀಡಿದ್ದಾರೆ.

ಭಗವಾನ್ ಶ್ರೀರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವರು. ನಾವು ಶ್ರೀ ರಾಮ ಮತ್ತು ಶ್ರೀ ಕೃಷ್ಣನ ಭಕ್ತರು ಮತ್ತು ಶೀಘ್ರದಲ್ಲೇ ತನ್ನ ಕುಟುಂಬ ಸದಸ್ಯರೊಂದಿಗೆ ಅಯೋಧ್ಯೆಗೆ ಭೇಟಿ ನೀಡಿ ದೇವರನ್ನು ಪೂಜಿಸುವುದಾಗಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹೇಳಿದ್ದಾರೆ.

ಭಗವಾನ್ ರಾಮನಿಗೆ ಪ್ರಾರ್ಥನೆ ಸಲ್ಲಿಸಲು ತಮ್ಮ ಕುಟುಂಬ ಸದಸ್ಯರೊಂದಿಗೆ ಶೀಘ್ರದಲ್ಲೇ ಅಯೋಧ್ಯೆಗೆ ಮತ್ತೊಮ್ಮೆ ಬರುವುದಾಗಿ ಅಖಿಲೇಶ್ ಯಾದವ್ ಹೇಳಿದ್ದಾರೆ. ಆದರೆ, ಅಯೋಧ್ಯೆಗೆ ಭೇಟಿಯ ನಿಗಧಿ ದಿನಾಂಕವನ್ನು ನಿರ್ದಿಷ್ಟಪಡಿಸಿಲ್ಲ.

ಇದನ್ನೂ ಓದಿ: ರೈತ ಹೋರಾಟಕ್ಕೆ ತೆರಳಿದ್ದ ಅಖಿಲೇಶ್ ಯಾದವ್‌ಗೆ ತಡೆ: ಮನೆಮುಂದೆಯೇ ಧರಣಿ-ಗೃಹಬಂಧನ

ಸುದ್ದಿಗಾರರೊಂದಿಗೆ ಪುಟ್ಟ ಸಂವಾದ ನಡೆಸಿ ಮಾತನಾಡಿದ ಅಖಿಲೇಶ್ ಯಾದವ್, ತಾನು ತಮ್ಮ ಸರ್ಕಾರದ ಅವಧಿಯಲ್ಲಿ ರಾಮ ದೇವಾಲಯದ ಅಭಿವೃದ್ಧಿಗಾಗಿ ಮಾಡಿದ ವಿವಿಧ ಕೆಲಸಗಳನ್ನು ತಿಳಿಸಿದ್ದಾರೆ.

ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಅವರು ಮಾಡಿದ ವಿವಿಧ ಕೆಲಸಗಳಲ್ಲಿ, ಅಯೋಧ್ಯೆಯ ಸುತ್ತಲಿನ ರಿಂಗ್ ರಸ್ತೆಯಲ್ಲಿ “ಪಾರಿಜಾತ ಮರಗಳ” ತೋಟವನ್ನು ಮಾಡಿದ್ದು, ಈ ರಸ್ತೆಯ ಉದ್ದಕ್ಕೂ ಧಾರ್ಮಿಕ ಪ್ರಾಮುಖ್ಯತೆಯೊಂದಿಗೆ ವಿವಿಧ ಜಾತಿಯ ಮರಗಳನ್ನು ನೆಟ್ಟಿದ್ದನ್ನು ನೆನಪಿಸಿಕೊಂಡಿದ್ದಾರೆ.

ಇತ್ತ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ಭಗವಾನ್ ರಾಮನಿಗೆ ನಿರ್ಮಿಸಲಾಗುತ್ತಿರುವ ದೇವಾಲಯಕ್ಕಾಗಿ ಸಾಮೂಹಿಕ ಸಂಪರ್ಕ ಮತ್ತು ಕೊಡುಗೆ ಅಭಿಯಾನವನ್ನು ನಡೆಸಲು ನಿರ್ಧರಿಸಿದೆ. ಈ ಅಭಿಯಾನವು ಅಯೋಧ್ಯೆ ಚಳವಳಿಯ ಐತಿಹಾಸಿಕ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವತ್ತ ಗಮನ ಹರಿಸಲಿದೆ ಎಂದು ರಾಮ್ ಮಂದಿರ ಟ್ರಸ್ಟ್ ಟ್ವಿಟರ್‌ನಲ್ಲಿ ಸರಣಿ ಪೋಸ್ಟ್‌ ಮಾಡಿ ತಿಳಿಸಿದೆ.

ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟ ಸುಪ್ರೀಂಕೋರ್ಟ್ ತೀರ್ಪಿನ ನಂತರ ಸರ್ಕಾರ ಈ ಟ್ರಸ್ಟ್ ಅನ್ನು ರಚಿಸಿತ್ತು. ಅಯೋಧ್ಯೆಯ ರಾಮ ದೇವಾಲಯದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ಈ ಟ್ರಸ್ಟ್  ಸ್ಥಾಪಿಸಲಾಗಿದೆ.


ಇದನ್ನೂ ಓದಿ: ಸೀತಾ ದೇವಿಗಾಗಿ ರಾಮಮಂದಿರಕ್ಕಿಂತ ದೊಡ್ಡ ಭವ್ಯ ಮಂದಿರ ನಿರ್ಮಾಣ – ಚಿರಾಗ್ ಪಾಸ್ವಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...