Homeಮುಖಪುಟರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

ಭಗವಾನ್ ರಾಮನಿಗೆ ಪ್ರಾರ್ಥನೆ ಸಲ್ಲಿಸಲು ತಮ್ಮ ಕುಟುಂಬ ಸದಸ್ಯರೊಂದಿಗೆ ಶೀಘ್ರದಲ್ಲೇ ಅಯೋಧ್ಯೆಗೆ ಮತ್ತೊಮ್ಮೆ ಬರುವುದಾಗಿ ಅಖಿಲೇಶ್ ಯಾದವ್ ಹೇಳಿದ್ದಾರೆ.

- Advertisement -
- Advertisement -

ಶ್ರೀರಾಮಚಂದ್ರ ಸಮಾಜವಾದಿ ಪಕ್ಷಕ್ಕೆ ಸೇರಿದವರು, ನಾವು ರಾಮನ ಭಕ್ತರು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಅಜಂಘರ್​​ನಿಂದ ತೆರಳುತ್ತಿದ್ದಾಗ ಕೆಲ ಸಮಯ ಅಯೋಧ್ಯೆಯಲ್ಲಿ ವಿರಾಮ ತೆಗೆದುಕೊಳ್ಳುವಾಗ ಈ ಹೇಳಿಕೆ ನೀಡಿದ್ದಾರೆ.

ಭಗವಾನ್ ಶ್ರೀರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವರು. ನಾವು ಶ್ರೀ ರಾಮ ಮತ್ತು ಶ್ರೀ ಕೃಷ್ಣನ ಭಕ್ತರು ಮತ್ತು ಶೀಘ್ರದಲ್ಲೇ ತನ್ನ ಕುಟುಂಬ ಸದಸ್ಯರೊಂದಿಗೆ ಅಯೋಧ್ಯೆಗೆ ಭೇಟಿ ನೀಡಿ ದೇವರನ್ನು ಪೂಜಿಸುವುದಾಗಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹೇಳಿದ್ದಾರೆ.

ಭಗವಾನ್ ರಾಮನಿಗೆ ಪ್ರಾರ್ಥನೆ ಸಲ್ಲಿಸಲು ತಮ್ಮ ಕುಟುಂಬ ಸದಸ್ಯರೊಂದಿಗೆ ಶೀಘ್ರದಲ್ಲೇ ಅಯೋಧ್ಯೆಗೆ ಮತ್ತೊಮ್ಮೆ ಬರುವುದಾಗಿ ಅಖಿಲೇಶ್ ಯಾದವ್ ಹೇಳಿದ್ದಾರೆ. ಆದರೆ, ಅಯೋಧ್ಯೆಗೆ ಭೇಟಿಯ ನಿಗಧಿ ದಿನಾಂಕವನ್ನು ನಿರ್ದಿಷ್ಟಪಡಿಸಿಲ್ಲ.

ಇದನ್ನೂ ಓದಿ: ರೈತ ಹೋರಾಟಕ್ಕೆ ತೆರಳಿದ್ದ ಅಖಿಲೇಶ್ ಯಾದವ್‌ಗೆ ತಡೆ: ಮನೆಮುಂದೆಯೇ ಧರಣಿ-ಗೃಹಬಂಧನ

ಸುದ್ದಿಗಾರರೊಂದಿಗೆ ಪುಟ್ಟ ಸಂವಾದ ನಡೆಸಿ ಮಾತನಾಡಿದ ಅಖಿಲೇಶ್ ಯಾದವ್, ತಾನು ತಮ್ಮ ಸರ್ಕಾರದ ಅವಧಿಯಲ್ಲಿ ರಾಮ ದೇವಾಲಯದ ಅಭಿವೃದ್ಧಿಗಾಗಿ ಮಾಡಿದ ವಿವಿಧ ಕೆಲಸಗಳನ್ನು ತಿಳಿಸಿದ್ದಾರೆ.

ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಅವರು ಮಾಡಿದ ವಿವಿಧ ಕೆಲಸಗಳಲ್ಲಿ, ಅಯೋಧ್ಯೆಯ ಸುತ್ತಲಿನ ರಿಂಗ್ ರಸ್ತೆಯಲ್ಲಿ “ಪಾರಿಜಾತ ಮರಗಳ” ತೋಟವನ್ನು ಮಾಡಿದ್ದು, ಈ ರಸ್ತೆಯ ಉದ್ದಕ್ಕೂ ಧಾರ್ಮಿಕ ಪ್ರಾಮುಖ್ಯತೆಯೊಂದಿಗೆ ವಿವಿಧ ಜಾತಿಯ ಮರಗಳನ್ನು ನೆಟ್ಟಿದ್ದನ್ನು ನೆನಪಿಸಿಕೊಂಡಿದ್ದಾರೆ.

ಇತ್ತ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ಭಗವಾನ್ ರಾಮನಿಗೆ ನಿರ್ಮಿಸಲಾಗುತ್ತಿರುವ ದೇವಾಲಯಕ್ಕಾಗಿ ಸಾಮೂಹಿಕ ಸಂಪರ್ಕ ಮತ್ತು ಕೊಡುಗೆ ಅಭಿಯಾನವನ್ನು ನಡೆಸಲು ನಿರ್ಧರಿಸಿದೆ. ಈ ಅಭಿಯಾನವು ಅಯೋಧ್ಯೆ ಚಳವಳಿಯ ಐತಿಹಾಸಿಕ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವತ್ತ ಗಮನ ಹರಿಸಲಿದೆ ಎಂದು ರಾಮ್ ಮಂದಿರ ಟ್ರಸ್ಟ್ ಟ್ವಿಟರ್‌ನಲ್ಲಿ ಸರಣಿ ಪೋಸ್ಟ್‌ ಮಾಡಿ ತಿಳಿಸಿದೆ.

ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟ ಸುಪ್ರೀಂಕೋರ್ಟ್ ತೀರ್ಪಿನ ನಂತರ ಸರ್ಕಾರ ಈ ಟ್ರಸ್ಟ್ ಅನ್ನು ರಚಿಸಿತ್ತು. ಅಯೋಧ್ಯೆಯ ರಾಮ ದೇವಾಲಯದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ಈ ಟ್ರಸ್ಟ್  ಸ್ಥಾಪಿಸಲಾಗಿದೆ.


ಇದನ್ನೂ ಓದಿ: ಸೀತಾ ದೇವಿಗಾಗಿ ರಾಮಮಂದಿರಕ್ಕಿಂತ ದೊಡ್ಡ ಭವ್ಯ ಮಂದಿರ ನಿರ್ಮಾಣ – ಚಿರಾಗ್ ಪಾಸ್ವಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...