Homeಮುಖಪುಟರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

ಭಗವಾನ್ ರಾಮನಿಗೆ ಪ್ರಾರ್ಥನೆ ಸಲ್ಲಿಸಲು ತಮ್ಮ ಕುಟುಂಬ ಸದಸ್ಯರೊಂದಿಗೆ ಶೀಘ್ರದಲ್ಲೇ ಅಯೋಧ್ಯೆಗೆ ಮತ್ತೊಮ್ಮೆ ಬರುವುದಾಗಿ ಅಖಿಲೇಶ್ ಯಾದವ್ ಹೇಳಿದ್ದಾರೆ.

- Advertisement -
- Advertisement -

ಶ್ರೀರಾಮಚಂದ್ರ ಸಮಾಜವಾದಿ ಪಕ್ಷಕ್ಕೆ ಸೇರಿದವರು, ನಾವು ರಾಮನ ಭಕ್ತರು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಅಜಂಘರ್​​ನಿಂದ ತೆರಳುತ್ತಿದ್ದಾಗ ಕೆಲ ಸಮಯ ಅಯೋಧ್ಯೆಯಲ್ಲಿ ವಿರಾಮ ತೆಗೆದುಕೊಳ್ಳುವಾಗ ಈ ಹೇಳಿಕೆ ನೀಡಿದ್ದಾರೆ.

ಭಗವಾನ್ ಶ್ರೀರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವರು. ನಾವು ಶ್ರೀ ರಾಮ ಮತ್ತು ಶ್ರೀ ಕೃಷ್ಣನ ಭಕ್ತರು ಮತ್ತು ಶೀಘ್ರದಲ್ಲೇ ತನ್ನ ಕುಟುಂಬ ಸದಸ್ಯರೊಂದಿಗೆ ಅಯೋಧ್ಯೆಗೆ ಭೇಟಿ ನೀಡಿ ದೇವರನ್ನು ಪೂಜಿಸುವುದಾಗಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹೇಳಿದ್ದಾರೆ.

ಭಗವಾನ್ ರಾಮನಿಗೆ ಪ್ರಾರ್ಥನೆ ಸಲ್ಲಿಸಲು ತಮ್ಮ ಕುಟುಂಬ ಸದಸ್ಯರೊಂದಿಗೆ ಶೀಘ್ರದಲ್ಲೇ ಅಯೋಧ್ಯೆಗೆ ಮತ್ತೊಮ್ಮೆ ಬರುವುದಾಗಿ ಅಖಿಲೇಶ್ ಯಾದವ್ ಹೇಳಿದ್ದಾರೆ. ಆದರೆ, ಅಯೋಧ್ಯೆಗೆ ಭೇಟಿಯ ನಿಗಧಿ ದಿನಾಂಕವನ್ನು ನಿರ್ದಿಷ್ಟಪಡಿಸಿಲ್ಲ.

ಇದನ್ನೂ ಓದಿ: ರೈತ ಹೋರಾಟಕ್ಕೆ ತೆರಳಿದ್ದ ಅಖಿಲೇಶ್ ಯಾದವ್‌ಗೆ ತಡೆ: ಮನೆಮುಂದೆಯೇ ಧರಣಿ-ಗೃಹಬಂಧನ

ಸುದ್ದಿಗಾರರೊಂದಿಗೆ ಪುಟ್ಟ ಸಂವಾದ ನಡೆಸಿ ಮಾತನಾಡಿದ ಅಖಿಲೇಶ್ ಯಾದವ್, ತಾನು ತಮ್ಮ ಸರ್ಕಾರದ ಅವಧಿಯಲ್ಲಿ ರಾಮ ದೇವಾಲಯದ ಅಭಿವೃದ್ಧಿಗಾಗಿ ಮಾಡಿದ ವಿವಿಧ ಕೆಲಸಗಳನ್ನು ತಿಳಿಸಿದ್ದಾರೆ.

ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಅವರು ಮಾಡಿದ ವಿವಿಧ ಕೆಲಸಗಳಲ್ಲಿ, ಅಯೋಧ್ಯೆಯ ಸುತ್ತಲಿನ ರಿಂಗ್ ರಸ್ತೆಯಲ್ಲಿ “ಪಾರಿಜಾತ ಮರಗಳ” ತೋಟವನ್ನು ಮಾಡಿದ್ದು, ಈ ರಸ್ತೆಯ ಉದ್ದಕ್ಕೂ ಧಾರ್ಮಿಕ ಪ್ರಾಮುಖ್ಯತೆಯೊಂದಿಗೆ ವಿವಿಧ ಜಾತಿಯ ಮರಗಳನ್ನು ನೆಟ್ಟಿದ್ದನ್ನು ನೆನಪಿಸಿಕೊಂಡಿದ್ದಾರೆ.

ಇತ್ತ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ಭಗವಾನ್ ರಾಮನಿಗೆ ನಿರ್ಮಿಸಲಾಗುತ್ತಿರುವ ದೇವಾಲಯಕ್ಕಾಗಿ ಸಾಮೂಹಿಕ ಸಂಪರ್ಕ ಮತ್ತು ಕೊಡುಗೆ ಅಭಿಯಾನವನ್ನು ನಡೆಸಲು ನಿರ್ಧರಿಸಿದೆ. ಈ ಅಭಿಯಾನವು ಅಯೋಧ್ಯೆ ಚಳವಳಿಯ ಐತಿಹಾಸಿಕ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವತ್ತ ಗಮನ ಹರಿಸಲಿದೆ ಎಂದು ರಾಮ್ ಮಂದಿರ ಟ್ರಸ್ಟ್ ಟ್ವಿಟರ್‌ನಲ್ಲಿ ಸರಣಿ ಪೋಸ್ಟ್‌ ಮಾಡಿ ತಿಳಿಸಿದೆ.

ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟ ಸುಪ್ರೀಂಕೋರ್ಟ್ ತೀರ್ಪಿನ ನಂತರ ಸರ್ಕಾರ ಈ ಟ್ರಸ್ಟ್ ಅನ್ನು ರಚಿಸಿತ್ತು. ಅಯೋಧ್ಯೆಯ ರಾಮ ದೇವಾಲಯದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ಈ ಟ್ರಸ್ಟ್  ಸ್ಥಾಪಿಸಲಾಗಿದೆ.


ಇದನ್ನೂ ಓದಿ: ಸೀತಾ ದೇವಿಗಾಗಿ ರಾಮಮಂದಿರಕ್ಕಿಂತ ದೊಡ್ಡ ಭವ್ಯ ಮಂದಿರ ನಿರ್ಮಾಣ – ಚಿರಾಗ್ ಪಾಸ್ವಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...