Homeಮುಖಪುಟ‘ಭಗವಾನ್ ರಾಮನು ಮಾಂಸಾಹಾರಿ..’; ವಿವಾದ ಹುಟ್ಟುಹಾಕಿದ ಎನ್‌ಸಿಪಿ ನಾಯಕ ಅವ್ಹಾದ್ ಹೇಳಿಕೆ

‘ಭಗವಾನ್ ರಾಮನು ಮಾಂಸಾಹಾರಿ..’; ವಿವಾದ ಹುಟ್ಟುಹಾಕಿದ ಎನ್‌ಸಿಪಿ ನಾಯಕ ಅವ್ಹಾದ್ ಹೇಳಿಕೆ

- Advertisement -
- Advertisement -

ಇದೆ ತಿಂಗಳ 22ರಂದು ಅಯೋಧ್ಯೆಯಲ್ಲಿ ಬೃಹತ್ ರಾಮ ಮಂದಿರದ ಉದ್ಘಾಟನೆಗೆ ಬರದ ಸಿದ್ಧತೆ ನಡೆಯುತ್ತಿದೆ. ಸಮಾರಂಭದಲ್ಲಿ ಯಾರ್ಯಾರು ಭಾಗವಹಿಸುತ್ತಾರೆ ಎಂಬ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಜಿತೇಂದ್ರ ಅವ್ಹಾದ್ ಅವರು ‘ಭಗವಾನ್ ರಾಮನು ಮಾಂಸಾಹಾರಿ’ ಎಂದು ನೀಡಿರುವ ಹೇಳಿಕೆ ವಿವಾದವನ್ನು ಹುಟ್ಟುಹಾಕಿದ್ದಾರೆ.

ಎನ್‌ಸಿಪಿಯ ಶರದ್ ಪವಾರ್ ಬಣಕ್ಕೆ ಸೇರಿದ ಅವ್ಹಾದ್ ಅವರು ಬುಧವಾರ ಮಹಾರಾಷ್ಟ್ರದ ಶ್ರೀದಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಹೇಳಿಕೆ ನೀಡಿದ್ದಾರೆ.

‘ರಾಮ ಬಹುಜನರಾದ ನಮಗೆ ಸೇರಿದವರು, ಅವರು ಪ್ರಾಣಿಗಳನ್ನು ಬೇಟೆಯಾಡಿ ತಿನ್ನುತ್ತಿದ್ದರು, ಅವರು ಬಹುಜನರು, ಅವರು (ಬಿಜೆಪಿ ಮತ್ತು ಸಂಘಪರಿವಾರ) ಭಗವಾನ್ ರಾಮನ ಉದಾಹರಣೆಯನ್ನು ನೀಡುವ ಮೂಲಕ ಎಲ್ಲರನ್ನು ಸಸ್ಯಾಹಾರಿಯನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಭಗವಾನ್ ರಾಮನು ಸಸ್ಯಾಹಾರಿ ಅಲ್ಲ, ಮಾಂಸಾಹಾರಿ. 14 ವರ್ಷಗಳಿಂದ ಕಾಡಿನಲ್ಲಿ ಉಳಿದುಕೊಂಡ ವ್ಯಕ್ತಿ ಸಸ್ಯಾಹಾರವನ್ನು ಹುಡುಕಲು ಅವನು ಎಲ್ಲಿಗೆ ಹೋಗುತ್ತಾನೆ’ ಎಂದು ಅವರು ಪ್ರಶ್ನಿಸಿದರು.

ಈ ತಿಂಗಳ ಅಂತ್ಯದಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯುವ ಹೊಸ ರಾಮ ಮಂದಿರದ ಮಹಾಮಸ್ತಕಾಭಿಷೇಕದ ಮುನ್ನ ಅವ್ಹಾದ್ ನೀಡಿರು ಹೇಳಿಕೆ ಭಾರೀ ವಿವಾದವನ್ನು ಹುಟ್ಟುಹಾಕಿದೆ. ಅವರು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದು, ಕ್ರಮ ತೆಗೆದುಕೊಳ್ಳಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ.

ಎನ್‌ಸಿಪಿಯ ಅಜಿತ್ ಪವಾರ್ ಬಣದ ಬೆಂಬಲಿಗರ ದೊಡ್ಡ ಗುಂಪು ಬುಧವಾರ ರಾತ್ರಿ ಅವ್ಹಾದ್ ಅವರ ಮುಂಬೈ ಮನೆಯ ಹೊರಗೆ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರು ಇಂದು ಬೆಳಿಗ್ಗೆ ಅವ್ಹಾದ್ ಅವರ ಪೋಸ್ಟರ್‌ ಹಿಡಿದು ಬಂದು, ಪದೇ ಪದೇ ಚಪ್ಪಲಿಯಿಂದ ಹೊಡೆದರು.

ಮುಂಜಾಗ್ರತಾ ಕ್ರಮವಾಗಿ ಅವ್ಹಾದ್ ಅವರ ಮನೆ ಮುಂದೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಿಜೆಪಿ ಶಾಸಕ ರಾಮ್ ಕದಂ ನೇತೃತ್ವದಲ್ಲಿ ಪ್ರತಿಭಟನಾಕಾರರು ಸಮೀಪದ ಪೊಲೀಸ್ ಠಾಣೆಗೆ ಮೆರವಣಿಗೆ ನಡೆಸಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಎನ್‌ಸಿಪಿ ಶಾಸಕರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೇಳಿದರು.

‘ರಾಮನ ಎಲ್ಲ ಭಕ್ತರು ಜಿತೇಂದ್ರ ಅವ್ಹಾದ್ ವಿರುದ್ಧ ಪೊಲೀಸ್ ಕೇಸ್ ದಾಖಲಿಸುತ್ತಾರೆ’ ಎಂದು ಕದಮ್ ಹೇಳಿದರು. ‘ಬಾಳಾಸಾಹೇಬರು ಬದುಕಿದ್ದರೆ ಇಂದಿನ ಸಾಮ್ನಾ ಪತ್ರಿಕೆಯು ರಾಮನನ್ನು ಮಾಂಸಾಹಾರಿ ಎಂದು ಕರೆದವರ ಬಗ್ಗೆ ಕಟುವಾಗಿ ಮಾತನಾಡುತ್ತಿತ್ತು’ ಎಂದು ಶಿವಸೇನೆಯ ಮುಖವಾಣಿಯನ್ನು ಉಲ್ಲೇಖಿಸಿ ಕದಂ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಆದರೆ ಇಂದಿನ ವಾಸ್ತವ ಏನು? ಭಗವಾನ್ ರಾಮನ ಬಗ್ಗೆ ಯಾರು ಬೇಕಾದರೂ ಟೀಕಿಸಬಹುದು; ಯಾರಾದರೂ ಹಿಂದೂಗಳನ್ನು ಗೇಲಿ ಮಾಡಬಹುದು; ಅವರು ಹೆದರುವುದಿಲ್ಲ. ಅವರು ಮಂಜುಗಡ್ಡೆಯಷ್ಟು ತಣ್ಣಗಿದ್ದಾರೆ. ಆದರೆ, ಚುನಾವಣೆಗಳು ಬಂದರೆ ಅವರು ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ’ ಎಂದು ಬಿಜೆಪಿ ಶಾಸಕ ಟೀಕಿಸಿದ್ದಾರೆ.

ಅವ್ಹಾದ್ ಅವರು ಶ್ರೀರಾಮನ ಬಗ್ಗೆ ಮಾತ್ರ ಮಾತನಾಡಿಲ್ಲ. ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರಿಂದ ಮಾತ್ರ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತು ಎಂದು ಹೇಳುವ ಮೂಲಕ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

‘ಯಾರು ಏನೇ ಹೇಳಲಿ, ನಮಗೆ ಸ್ವಾತಂತ್ರ್ಯ ಸಿಕ್ಕಿದ್ದು ಗಾಂಧಿ ಮತ್ತು ನೆಹರೂ ಅವರಿಂದ ಎಂಬುದು ಸತ್ಯ. ಗಾಂಧೀಜಿ ಅವರನ್ನು 1947 ರಲ್ಲಿ ಹತ್ಯೆ ಮಾಡಲಾಗಿಲ್ಲ. ಆದರೆ ಅವರ ಮೇಲೆ ಮೊದಲ ದಾಳಿ 1935 ರಲ್ಲಿ ನಡೆಯಿತು, ಎರಡನೆಯದು 1938 ರಲ್ಲಿ ಮತ್ತು ಮೂರನೆಯದು 1942 ರಲ್ಲಿ’ ಎಂದು ಹೇಳಿದರು.

‘ಗಾಂಧಿ ಮೇಲೆ ಅವರು ಅನೇಕ ಬಾರಿ ದಾಳಿ ಮಾಡಿದರು . ಏಕೆಂದರೆ, ಗಾಂಧೀಜಿ ಒಬ್ಬ ವ್ಯಾಪಾರಿ ಮತ್ತು ಒಬಿಸಿ (ಇತರ ಹಿಂದುಳಿದ ವರ್ಗಗಳು) ಆಗಿದ್ದರು. ಇಷ್ಟು ದೊಡ್ಡ ಸ್ವಾತಂತ್ರ್ಯ ಚಳುವಳಿಯ ನಾಯಕ ಒಬಿಸಿ ಎಂಬುದು ಅವರಿಗೆ ( ಆರ್ಎಸ್ಎಸ್) ಸ್ವೀಕಾರಾರ್ಹವಲ್ಲ’ ಎಂದರು.

ಇದನ್ನೂ ಓದಿ; ಖರ್ಗೆ ನೇತೃತ್ವದಲ್ಲಿ ‘ಕೈ’ ಹಿಡಿದ ಶರ್ಮಿಳಾ: ಕಾಂಗ್ರೆಸ್ ಜತೆಗೆ ವೈಎಸ್ಆರ್ ತೆಲಂಗಾಣ ಪಕ್ಷ ವಿಲೀನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Sri Lanka people openly say that they had no king by name Ravana or Vibhishana, And calling their forefathers as Rakshas-Asura is a grave insult to their Buddhist Country.
    They say Ravana is an imaginary character created by Indians to insult their great country.

    So if Ravana, the Main character of Ramayana is imaginary then entire Ramayana is imaginary. 👍

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...