Homeಮುಖಪುಟಲಾಸ್ ಏಂಜಲೀಸ್‌ ಕಾಡ್ಗಿಚ್ಚು | ಐವರು ಸಾವು, 1 ಲಕ್ಷದಷ್ಟು ಜನರ ಸ್ಥಳಾಂತರ; ಹಾಲಿವುಡ್ ನಟರ...

ಲಾಸ್ ಏಂಜಲೀಸ್‌ ಕಾಡ್ಗಿಚ್ಚು | ಐವರು ಸಾವು, 1 ಲಕ್ಷದಷ್ಟು ಜನರ ಸ್ಥಳಾಂತರ; ಹಾಲಿವುಡ್ ನಟರ ಕಟ್ಟಡಗಳು ಬೆಂಕಿಗಾಹುತಿ

- Advertisement -
- Advertisement -

ಯುಎಸ್‌ನ (ಅಮೆರಿಕ) ಕ್ಯಾಲಿಫೋರ್ನಿಯಾ ರಾಜ್ಯದ ಲಾಸ್‌ ಏಂಜಲೀಸ್‌ ನಗರದ ಪೆಸಿಫಿಕ್‌ ಪ್ಯಾಲಿಸೈಡ್ಸ್‌ ಹಾಗೂ ಪ್ಯಾಸಡೀನಾದ ಈಟನ್‌ ಕೆಯಾನ್‌ ಪ್ರದೇಶಗಳಲ್ಲಿ ಉಂಟಾಗಿರುವ ಭೀಕರ ಕಾಡ್ಗಿಚ್ಚಿಗೆ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ದುರಂತದಲ್ಲಿ 1, 500ಕ್ಕೂ ಹೆಚ್ಚು ಕಟ್ಟಡಗಳು ಬೆಂಕಿಗಾಹುತಿಯಾಗಿವೆ. ಅರಣ್ಯ ಸಮೀಪದ 70 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಕ್ಯಾಲಿಪೋರ್ನಿಯಾ ರಾಜ್ಯ ಸರ್ಕಾರ ತುರ್ತು ಪರಿಸ್ಥಿತಿ ಘೋಷಿಸಿದ್ದು, 1,30,000 ಅಧಿಕ ಜನರನ್ನು ಸ್ಥಳಾಂತರಿಸಲು ಮುಂದಾಗಿದೆ ಎಂದು ವರದಿಯಾಗಿದೆ.

ಕಾಡ್ಗಿಚ್ಚು ದುರಂತ ಹಿನ್ನೆಲೆ ಯುಎಸ್‌ ಅಧ್ಯಕ್ಷ ಜೋ ಬೈಡೆನ್‌ ಅವರು ತಮ್ಮ ಇಟಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಘಟನೆಯ ಕುರಿತು ಮಾತನಾಡಿರುವ ಅವರು, ಕಾಡ್ಗಿಚ್ಚು ತಡೆಯುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಬೈಡನ್ ಅವರು ಜನವರಿ 9ರಿಂದ 12ರವರೆಗೆ ಇಟಲಿಯಲ್ಲಿ ಪೋಪ್‌ ಫ್ರಾನ್ಸಿಸ್‌ ಅವರನ್ನು ಭೇಟಿ ಮಾಡುವ ಕಾರ್ಯಕ್ರಮವಿತ್ತು.

ವರದಿಗಳ ಪ್ರಕಾರ, ಕಳೆದ ಮಂಗಳವಾರ (ಜ.7) ಕಾಡ್ಗಿಚ್ಚು ಶುರುವಾಗಿದೆ. ಲಾಸ್‌ ಏಂಜಲೀಸ್‌ನ ಪೆಸಿಫಿಕ್‌ ಪ್ಯಾಲಿಸೈಡ್ಸ್‌ನ ಹಾಲಿವುಡ್‌ ಕಲಾವಿದರ ಮನೆಗಳಿರುವ ಪ್ರತಿಷ್ಠಿತ ಹಾಲಿವುಡ್‌ ಹಿಲ್ಸ್‌ಗೆ ಬೆಂಕಿ ವ್ಯಾಪಿಸಿ ಅಪಾರ ನಷ್ಟ ಉಂಟು ಮಾಡಿದೆ. ಪ್ರಮುಖ ಕಲಾವಿದರ ಕಟ್ಟಡಗಳು ಭಸ್ಮವಾಗಿದೆ.

‘ಸನ್‌ಸೆಟ್ ಫೈರ್’ ಎಂದು ಕರೆಯಲ್ಪಡುವ ಬೆಂಕಿ ಜ್ವಾಲೆಯು ಹಾಲಿವುಡ್ ಹಿಲ್ಸ್‌ ಅನ್ನು ಆವರಿಸಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 112 ಕಿಲೋ ಮೀಟರ್‌ ವೇಗದಲ್ಲಿ ಬೀಸುತ್ತಿರುವ ʻಸಾಂಟಾ ಅನಾʼ ಚಂಡಮಾರುತದಿಂದ ಪರಿಸ್ಥಿತಿ ಹದಗೆಡುತ್ತಲೇ ಇದೆ. ರನ್ಯಾನ್ ಕ್ಯಾನ್ಯನ್ ಮತ್ತು ವಾಟಲ್ಸ್ ಪಾರ್ಕ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.

ಬೆಂಕಿ ನಂದಿಸಲು ಸುಮಾರು 7,500 ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರರು ಕೆಲಸ ಮಾಡುತ್ತಿದ್ದಾರೆ. ಅಗ್ನಿಶಾಮಕ ವಾಹನಗಳು, ಹೆಲಿಕಾಫ್ಟರ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ, ಈ ಕಾರ್ಯಾಚರಣೆಗೆ ನೀರಿನ ಕೊರತೆ ಉಂಟಾಗಿದೆ ಎಂದು ವರದಿಯಾಗಿದೆ.

‘ಕಾಡ್ಗಿಚ್ಚಿನ ಬಗ್ಗೆ ಮೊದಲೇ ಎಚ್ಚರಿಕೆ ವಹಿಸಿದ್ದ ಕಾರಣ, ಮುಂಚಿತವಾಗಿ 1 ಮಿಲಿಯನ್‌ ಗ್ಯಾಲನ್‌ನ (3.8 ಮಿಲಿಯನ್‌ ಲೀಟರ್‌ನ) ಮೂರು ನೀರಿನ ಟ್ಯಾಂಕ್‌ಗಳನ್ನು ತುಂಬಿಸಿಡಲಾಗಿತ್ತು. ಆದರೆ, ಈ ಸಂಗ್ರಹವೂ ಖಾಲಿಯಾಗುತ್ತಿದೆ. ಪೆಸಿಫಿಕ್‌ ಪ್ಯಾಲಿಸೈಡ್ಸ್‌ ಪ್ರದೇಶಕ್ಕೆ ಸಾಮಾನ್ಯವಾಗಿ ಪೂರೈಸುವ ಮೂರು ಪಟ್ಟು ಹೆಚ್ಚು ನೀರನ್ನು ಬೆಂಕಿ ನಿಯಂತ್ರಿಸಲು ಬಳಸಲಾಗುತ್ತಿದೆ.

ಮಂಗಳವಾರದಿಂದ 2 ಸಾವಿರದಿಂದ 4 ಸಾವಿರ ಗ್ಯಾಲನ್‌ ನೀರಿನ ಪ್ರಮಾಣದ 18 ನೀರಿನ ಟ್ಯಾಂಕರ್‌ಗಳು ಕಾರ್ಯನಿರ್ವಹಿಸುತ್ತಿವೆ. ಹೀಗಾಗಿ ನೀರಿನ ಕೊರತೆ ಎದುರಾಗಿದೆ’ ಎಂದು ಲಾಸ್‌ ಏಂಜಲೀಸ್‌ನ ಜಲ ವಿಭಾಗ ಹೇಳಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ  : ತಾಲಿಬಾನ್ ಸಚಿವರನ್ನು ಭೇಟಿಯಾದ ಭಾರತದ ವಿದೇಶಾಂಗ ಕಾರ್ಯದರ್ಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...