Homeಮುಖಪುಟಲಾಸ್ ಏಂಜಲೀಸ್‌ ಕಾಡ್ಗಿಚ್ಚು | ಐವರು ಸಾವು, 1 ಲಕ್ಷದಷ್ಟು ಜನರ ಸ್ಥಳಾಂತರ; ಹಾಲಿವುಡ್ ನಟರ...

ಲಾಸ್ ಏಂಜಲೀಸ್‌ ಕಾಡ್ಗಿಚ್ಚು | ಐವರು ಸಾವು, 1 ಲಕ್ಷದಷ್ಟು ಜನರ ಸ್ಥಳಾಂತರ; ಹಾಲಿವುಡ್ ನಟರ ಕಟ್ಟಡಗಳು ಬೆಂಕಿಗಾಹುತಿ

- Advertisement -
- Advertisement -

ಯುಎಸ್‌ನ (ಅಮೆರಿಕ) ಕ್ಯಾಲಿಫೋರ್ನಿಯಾ ರಾಜ್ಯದ ಲಾಸ್‌ ಏಂಜಲೀಸ್‌ ನಗರದ ಪೆಸಿಫಿಕ್‌ ಪ್ಯಾಲಿಸೈಡ್ಸ್‌ ಹಾಗೂ ಪ್ಯಾಸಡೀನಾದ ಈಟನ್‌ ಕೆಯಾನ್‌ ಪ್ರದೇಶಗಳಲ್ಲಿ ಉಂಟಾಗಿರುವ ಭೀಕರ ಕಾಡ್ಗಿಚ್ಚಿಗೆ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ದುರಂತದಲ್ಲಿ 1, 500ಕ್ಕೂ ಹೆಚ್ಚು ಕಟ್ಟಡಗಳು ಬೆಂಕಿಗಾಹುತಿಯಾಗಿವೆ. ಅರಣ್ಯ ಸಮೀಪದ 70 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಕ್ಯಾಲಿಪೋರ್ನಿಯಾ ರಾಜ್ಯ ಸರ್ಕಾರ ತುರ್ತು ಪರಿಸ್ಥಿತಿ ಘೋಷಿಸಿದ್ದು, 1,30,000 ಅಧಿಕ ಜನರನ್ನು ಸ್ಥಳಾಂತರಿಸಲು ಮುಂದಾಗಿದೆ ಎಂದು ವರದಿಯಾಗಿದೆ.

ಕಾಡ್ಗಿಚ್ಚು ದುರಂತ ಹಿನ್ನೆಲೆ ಯುಎಸ್‌ ಅಧ್ಯಕ್ಷ ಜೋ ಬೈಡೆನ್‌ ಅವರು ತಮ್ಮ ಇಟಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಘಟನೆಯ ಕುರಿತು ಮಾತನಾಡಿರುವ ಅವರು, ಕಾಡ್ಗಿಚ್ಚು ತಡೆಯುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಬೈಡನ್ ಅವರು ಜನವರಿ 9ರಿಂದ 12ರವರೆಗೆ ಇಟಲಿಯಲ್ಲಿ ಪೋಪ್‌ ಫ್ರಾನ್ಸಿಸ್‌ ಅವರನ್ನು ಭೇಟಿ ಮಾಡುವ ಕಾರ್ಯಕ್ರಮವಿತ್ತು.

ವರದಿಗಳ ಪ್ರಕಾರ, ಕಳೆದ ಮಂಗಳವಾರ (ಜ.7) ಕಾಡ್ಗಿಚ್ಚು ಶುರುವಾಗಿದೆ. ಲಾಸ್‌ ಏಂಜಲೀಸ್‌ನ ಪೆಸಿಫಿಕ್‌ ಪ್ಯಾಲಿಸೈಡ್ಸ್‌ನ ಹಾಲಿವುಡ್‌ ಕಲಾವಿದರ ಮನೆಗಳಿರುವ ಪ್ರತಿಷ್ಠಿತ ಹಾಲಿವುಡ್‌ ಹಿಲ್ಸ್‌ಗೆ ಬೆಂಕಿ ವ್ಯಾಪಿಸಿ ಅಪಾರ ನಷ್ಟ ಉಂಟು ಮಾಡಿದೆ. ಪ್ರಮುಖ ಕಲಾವಿದರ ಕಟ್ಟಡಗಳು ಭಸ್ಮವಾಗಿದೆ.

‘ಸನ್‌ಸೆಟ್ ಫೈರ್’ ಎಂದು ಕರೆಯಲ್ಪಡುವ ಬೆಂಕಿ ಜ್ವಾಲೆಯು ಹಾಲಿವುಡ್ ಹಿಲ್ಸ್‌ ಅನ್ನು ಆವರಿಸಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 112 ಕಿಲೋ ಮೀಟರ್‌ ವೇಗದಲ್ಲಿ ಬೀಸುತ್ತಿರುವ ʻಸಾಂಟಾ ಅನಾʼ ಚಂಡಮಾರುತದಿಂದ ಪರಿಸ್ಥಿತಿ ಹದಗೆಡುತ್ತಲೇ ಇದೆ. ರನ್ಯಾನ್ ಕ್ಯಾನ್ಯನ್ ಮತ್ತು ವಾಟಲ್ಸ್ ಪಾರ್ಕ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.

ಬೆಂಕಿ ನಂದಿಸಲು ಸುಮಾರು 7,500 ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರರು ಕೆಲಸ ಮಾಡುತ್ತಿದ್ದಾರೆ. ಅಗ್ನಿಶಾಮಕ ವಾಹನಗಳು, ಹೆಲಿಕಾಫ್ಟರ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ, ಈ ಕಾರ್ಯಾಚರಣೆಗೆ ನೀರಿನ ಕೊರತೆ ಉಂಟಾಗಿದೆ ಎಂದು ವರದಿಯಾಗಿದೆ.

‘ಕಾಡ್ಗಿಚ್ಚಿನ ಬಗ್ಗೆ ಮೊದಲೇ ಎಚ್ಚರಿಕೆ ವಹಿಸಿದ್ದ ಕಾರಣ, ಮುಂಚಿತವಾಗಿ 1 ಮಿಲಿಯನ್‌ ಗ್ಯಾಲನ್‌ನ (3.8 ಮಿಲಿಯನ್‌ ಲೀಟರ್‌ನ) ಮೂರು ನೀರಿನ ಟ್ಯಾಂಕ್‌ಗಳನ್ನು ತುಂಬಿಸಿಡಲಾಗಿತ್ತು. ಆದರೆ, ಈ ಸಂಗ್ರಹವೂ ಖಾಲಿಯಾಗುತ್ತಿದೆ. ಪೆಸಿಫಿಕ್‌ ಪ್ಯಾಲಿಸೈಡ್ಸ್‌ ಪ್ರದೇಶಕ್ಕೆ ಸಾಮಾನ್ಯವಾಗಿ ಪೂರೈಸುವ ಮೂರು ಪಟ್ಟು ಹೆಚ್ಚು ನೀರನ್ನು ಬೆಂಕಿ ನಿಯಂತ್ರಿಸಲು ಬಳಸಲಾಗುತ್ತಿದೆ.

ಮಂಗಳವಾರದಿಂದ 2 ಸಾವಿರದಿಂದ 4 ಸಾವಿರ ಗ್ಯಾಲನ್‌ ನೀರಿನ ಪ್ರಮಾಣದ 18 ನೀರಿನ ಟ್ಯಾಂಕರ್‌ಗಳು ಕಾರ್ಯನಿರ್ವಹಿಸುತ್ತಿವೆ. ಹೀಗಾಗಿ ನೀರಿನ ಕೊರತೆ ಎದುರಾಗಿದೆ’ ಎಂದು ಲಾಸ್‌ ಏಂಜಲೀಸ್‌ನ ಜಲ ವಿಭಾಗ ಹೇಳಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ  : ತಾಲಿಬಾನ್ ಸಚಿವರನ್ನು ಭೇಟಿಯಾದ ಭಾರತದ ವಿದೇಶಾಂಗ ಕಾರ್ಯದರ್ಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...