Homeಅಂತರಾಷ್ಟ್ರೀಯಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

ಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

- Advertisement -
- Advertisement -

ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಸಾವನ್ನಪ್ಪಿದವರ ಸಂಖ್ಯೆ ಶನಿವಾರ 16ಕ್ಕೆ ಏರಿದೆ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಪಾಲಿಸೇಡ್ಸ್ ಅಗ್ನಿಶಾಮಕ ವಲಯದಲ್ಲಿ 5  ಮಂದಿಯ ಶವ ಪತ್ತೆಯಾಗಿದ್ದರೆ, ಮಂದಿ ಈಟನ್ ಅಗ್ನಿಶಾಮಕ ವಲಯದಿಂದ 11 ಮಂದಿಯ ಶವ ಪತ್ತೆಯಾಗಿವೆ ಎಂದು ವರದಿ ತಿಳಿಸಿದೆ.

ಪಾಲಿಸೇಡ್ಸ್ ನಲ್ಲಿ  ಬೆಂಕಿಯು ಈಶಾನ್ಯಕ್ಕೆ ಹರಡುತ್ತಲೇ ಇದೆ. ಇದು ಬ್ರೆಂಟ್‌ವುಡ್ ಮತ್ತು ಬೆಲ್ ಏರ್‌ನಂತಹ ಶ್ರೀಮಂತ ದಕ್ಷಿಣ ಕ್ಯಾಲಿಫೋರ್ನಿಯಾ ನೆರೆಹೊರೆಗಳಲ್ಲಿ ಹೊಸ ಸ್ಥಳಗಳಿಗೆ ವಿಸ್ತರಣೆಗೆ ಕಾರಣವಾಗಿದೆ.

ಲಾಸ್ ಏಂಜಲೀಸ್ ಪ್ರದೇಶದಾದ್ಯಂತ ಕಾಡ್ಗಿಚ್ಚು ಅನೇಕ ಮನೆಗಳನ್ನು ನಾಶಪಡಿಸಿದ್ದರಿಂದ ಅದನ್ನು ನಿಯಂತ್ರಿಸಲು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ತಮ್ಮ ಕಾರ್ಯವನ್ನು ಬಿರುಸಿನಿಂದ ಮುಂದುವರಿಸಿದ್ದಾರೆ. ಪ್ರಬಲವಾದ ಗಾಳಿಯು ಒಣಗಿದ ಭೂಪ್ರದೇಶಗಳಲ್ಲಿ ಬೆಂಕಿಯು ಐದು ದಿನಗಳ ನಂತರವೂ ಮುಂದುವರಿದಿದೆ.

ವ್ಯಾಪಕವಾದ ವೈಮಾನಿಕ ಅಗ್ನಿಶಾಮಕ ಪ್ರಯತ್ನಗಳ ಹೊರತಾಗಿಯೂ, ಪಾಲಿಸೇಡ್ಸ್ ನಲ್ಲಿ ಬೆಂಕಿಯು ಶನಿವಾರದಂದು ನಗರದ ಪೂರ್ವಕ್ಕೆ ವಿಸ್ತರಿಸಿದೆ. ಗೆಟ್ಟಿ ಸೆಂಟರ್ ಕಲಾ ವಸ್ತುಸಂಗ್ರಹಾಲಯಕ್ಕೆ ಬೆಂಕಿ ಅವರಿಸುವ ಭೀತಿ ಎದುರಾಗಿದೆ ಮತ್ತು ಅದು ಉತ್ತರಕ್ಕೆ ಸ್ಯಾನ್ ಫೆರ್ನಾಂಡೊ ಕಣಿವೆಯ ಕಡೆಗೆ ತನ್ನ ಕೆನ್ನಾಲಿಗೆಯನ್ನು ಚಾಚಿದೆ. ಇಲ್ಲಿ 23,600 ಎಕರೆಗಳಷ್ಟು ಬೆಂಕಿ ಆವರಿಸಿದ್ದು, ಶೇ.11ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ. ಆದರೆ ಈಟನ್ ನಲ್ಲಿ 14,000 ಎಕರೆಗಳನ್ನು ಸುಟ್ಟುಹಾಕಿದ್ದು, ಶೇ.15 ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ.

ಲಾಸ್ ಏಂಜಲೀಸ್ ಸುತ್ತಮುತ್ತಲಿನ ಆರು ಪ್ರಮುಖ ಕಾಡ್ಗಿಚ್ಚುಗಳು ಸುಮಾರು 40,000 ಎಕರೆ ಕಾಡನ್ನು ಸುಟ್ಟುಹಾಕಿವೆ. ಮನೆಗಳು ಮತ್ತು ಇತರ ವ್ಯವಹಾರದ ಕಟ್ಟಡಗಳು ಸೇರಿದಂತೆ 12,000ಕ್ಕೂ ಹೆಚ್ಚು ಕಟ್ಟಡಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ.

ಶುಷ್ಕ ಗಾಳಿ ತೀವ್ರಗೊಳ್ಳುವ ಬೆದರಿಕೆ ಇರುವುದರಿಂದ ಅಧಿಕಾರಿಗಳು ಹೆಚ್ಚಿನ ಅಪಾಯಗಳ ಬಗ್ಗೆ ಎಚ್ಚರಿಸಿದ್ದಾರೆ.

ಈ ಕಾಡ್ಗಿಚ್ಚುಗಳು ಯುಎಸ್ ಇತಿಹಾಸದಲ್ಲಿ ಅತ್ಯಂತ ದುಬಾರಿಯಾಗಬಹುದು, ಹಾನಿ ಮತ್ತು ಆರ್ಥಿಕ ನಷ್ಟಗಳು $135 ಬಿಲಿಯನ್ ಮತ್ತು $150 ಬಿಲಿಯನ್ ನಡುವೆ ಇರಬಹುದು ಎಂದು ಆರಂಭಿಕ ಅಂದಾಜು ಹೇಳಿದೆ.
ನಾಯಿಗಳು, ಕುದುರೆಗಳು ಮತ್ತು ಜಾನುವಾರುಗಳು ಸೇರಿದಂತೆ ಸ್ಥಳಾಂತರಗೊಂಡ ಪ್ರಾಣಿಗಳಿಗೆ ಅವುಗಳ ಮಾಲೀಕರೊಂದಿಗೆ ಸಹಾಯ ಮಾಡಲು ರಕ್ಷಣಾ ಸಂಸ್ಥೆಗಳು ಮುಂದಾಗಿವೆ. ಸ್ವಯಂಸೇವಕರು ಬಿರುಸಿನ ಚಟುವಟಿಕೆಯಲ್ಲಿ ತೊಡಗಿ ನಿರಾಶ್ರಿತರಾದವರಿಗೆ ಆಹಾರ ನೀಡುತ್ತಿದ್ದಾರೆ. ಪ್ರಾಣಿಗಳು ಮತ್ತು ಜನರಿಗೆ ಆಹಾರ ಮತ್ತು ಸಾಮಗ್ರಿಗಳ ದೇಣಿಗೆಗಳು ಹರಿದು ಬರುತ್ತಿವೆ.

ಸ್ಥಳೀಯ ರೇಸ್ ಟ್ರ್ಯಾಕ್‌ನಲ್ಲಿ ಮನೆಗಳನ್ನು ಕಳೆದುಗೊಂಡು ಸ್ಥಳಾಂತರಗೊಂಡ ನಿವಾಸಿಗಳಿಗೆ ಬಟ್ಟೆ, ಕಂಬಳಿ ಮತ್ತು ಗೃಹೋಪಯೋಗಿ ವಸ್ತುಗಳಂತಹ ಅಗತ್ಯ ವಸ್ತುಗಳನ್ನು ಪೂರೈಸಲು ವಿಂಗಡಿಸುತ್ತಿರುವುದು ಕಂಡುಬರುತ್ತಿದೆ ಎಂದು ವರದಿಯಾಗಿದೆ.

ಸರ್ಕಾರ ಇನ್ನೂ ಅಧಿಕೃತವಾಗಿ ಇಲ್ಲಿಯವರೆಗಿನ ಹಾನಿಯ ಅಂದಾಜು ನೀಡಿಲ್ಲವಾದರೂ, ಖಾಸಗಿ ಅಂದಾಜಿನ ಪ್ರಕಾರ ಒಟ್ಟು ಹಾನಿಯ ವೆಚ್ಚ ಹತ್ತಾರು ಶತಕೋಟಿ ಡಾಲರ್‌ಗಳನ್ನು ತಲುಪುತ್ತದೆ.

ಗೌರಿಬಿದನೂರು: ದಲಿತ ವ್ಯಕ್ತಿಯ ದೇಗುಲ ಪ್ರವೇಶಕ್ಕೆ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...