Homeಅಂತರಾಷ್ಟ್ರೀಯಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

ಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

- Advertisement -
- Advertisement -

ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಸಾವನ್ನಪ್ಪಿದವರ ಸಂಖ್ಯೆ ಶನಿವಾರ 16ಕ್ಕೆ ಏರಿದೆ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಪಾಲಿಸೇಡ್ಸ್ ಅಗ್ನಿಶಾಮಕ ವಲಯದಲ್ಲಿ 5  ಮಂದಿಯ ಶವ ಪತ್ತೆಯಾಗಿದ್ದರೆ, ಮಂದಿ ಈಟನ್ ಅಗ್ನಿಶಾಮಕ ವಲಯದಿಂದ 11 ಮಂದಿಯ ಶವ ಪತ್ತೆಯಾಗಿವೆ ಎಂದು ವರದಿ ತಿಳಿಸಿದೆ.

ಪಾಲಿಸೇಡ್ಸ್ ನಲ್ಲಿ  ಬೆಂಕಿಯು ಈಶಾನ್ಯಕ್ಕೆ ಹರಡುತ್ತಲೇ ಇದೆ. ಇದು ಬ್ರೆಂಟ್‌ವುಡ್ ಮತ್ತು ಬೆಲ್ ಏರ್‌ನಂತಹ ಶ್ರೀಮಂತ ದಕ್ಷಿಣ ಕ್ಯಾಲಿಫೋರ್ನಿಯಾ ನೆರೆಹೊರೆಗಳಲ್ಲಿ ಹೊಸ ಸ್ಥಳಗಳಿಗೆ ವಿಸ್ತರಣೆಗೆ ಕಾರಣವಾಗಿದೆ.

ಲಾಸ್ ಏಂಜಲೀಸ್ ಪ್ರದೇಶದಾದ್ಯಂತ ಕಾಡ್ಗಿಚ್ಚು ಅನೇಕ ಮನೆಗಳನ್ನು ನಾಶಪಡಿಸಿದ್ದರಿಂದ ಅದನ್ನು ನಿಯಂತ್ರಿಸಲು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ತಮ್ಮ ಕಾರ್ಯವನ್ನು ಬಿರುಸಿನಿಂದ ಮುಂದುವರಿಸಿದ್ದಾರೆ. ಪ್ರಬಲವಾದ ಗಾಳಿಯು ಒಣಗಿದ ಭೂಪ್ರದೇಶಗಳಲ್ಲಿ ಬೆಂಕಿಯು ಐದು ದಿನಗಳ ನಂತರವೂ ಮುಂದುವರಿದಿದೆ.

ವ್ಯಾಪಕವಾದ ವೈಮಾನಿಕ ಅಗ್ನಿಶಾಮಕ ಪ್ರಯತ್ನಗಳ ಹೊರತಾಗಿಯೂ, ಪಾಲಿಸೇಡ್ಸ್ ನಲ್ಲಿ ಬೆಂಕಿಯು ಶನಿವಾರದಂದು ನಗರದ ಪೂರ್ವಕ್ಕೆ ವಿಸ್ತರಿಸಿದೆ. ಗೆಟ್ಟಿ ಸೆಂಟರ್ ಕಲಾ ವಸ್ತುಸಂಗ್ರಹಾಲಯಕ್ಕೆ ಬೆಂಕಿ ಅವರಿಸುವ ಭೀತಿ ಎದುರಾಗಿದೆ ಮತ್ತು ಅದು ಉತ್ತರಕ್ಕೆ ಸ್ಯಾನ್ ಫೆರ್ನಾಂಡೊ ಕಣಿವೆಯ ಕಡೆಗೆ ತನ್ನ ಕೆನ್ನಾಲಿಗೆಯನ್ನು ಚಾಚಿದೆ. ಇಲ್ಲಿ 23,600 ಎಕರೆಗಳಷ್ಟು ಬೆಂಕಿ ಆವರಿಸಿದ್ದು, ಶೇ.11ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ. ಆದರೆ ಈಟನ್ ನಲ್ಲಿ 14,000 ಎಕರೆಗಳನ್ನು ಸುಟ್ಟುಹಾಕಿದ್ದು, ಶೇ.15 ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ.

ಲಾಸ್ ಏಂಜಲೀಸ್ ಸುತ್ತಮುತ್ತಲಿನ ಆರು ಪ್ರಮುಖ ಕಾಡ್ಗಿಚ್ಚುಗಳು ಸುಮಾರು 40,000 ಎಕರೆ ಕಾಡನ್ನು ಸುಟ್ಟುಹಾಕಿವೆ. ಮನೆಗಳು ಮತ್ತು ಇತರ ವ್ಯವಹಾರದ ಕಟ್ಟಡಗಳು ಸೇರಿದಂತೆ 12,000ಕ್ಕೂ ಹೆಚ್ಚು ಕಟ್ಟಡಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ.

ಶುಷ್ಕ ಗಾಳಿ ತೀವ್ರಗೊಳ್ಳುವ ಬೆದರಿಕೆ ಇರುವುದರಿಂದ ಅಧಿಕಾರಿಗಳು ಹೆಚ್ಚಿನ ಅಪಾಯಗಳ ಬಗ್ಗೆ ಎಚ್ಚರಿಸಿದ್ದಾರೆ.

ಈ ಕಾಡ್ಗಿಚ್ಚುಗಳು ಯುಎಸ್ ಇತಿಹಾಸದಲ್ಲಿ ಅತ್ಯಂತ ದುಬಾರಿಯಾಗಬಹುದು, ಹಾನಿ ಮತ್ತು ಆರ್ಥಿಕ ನಷ್ಟಗಳು $135 ಬಿಲಿಯನ್ ಮತ್ತು $150 ಬಿಲಿಯನ್ ನಡುವೆ ಇರಬಹುದು ಎಂದು ಆರಂಭಿಕ ಅಂದಾಜು ಹೇಳಿದೆ.
ನಾಯಿಗಳು, ಕುದುರೆಗಳು ಮತ್ತು ಜಾನುವಾರುಗಳು ಸೇರಿದಂತೆ ಸ್ಥಳಾಂತರಗೊಂಡ ಪ್ರಾಣಿಗಳಿಗೆ ಅವುಗಳ ಮಾಲೀಕರೊಂದಿಗೆ ಸಹಾಯ ಮಾಡಲು ರಕ್ಷಣಾ ಸಂಸ್ಥೆಗಳು ಮುಂದಾಗಿವೆ. ಸ್ವಯಂಸೇವಕರು ಬಿರುಸಿನ ಚಟುವಟಿಕೆಯಲ್ಲಿ ತೊಡಗಿ ನಿರಾಶ್ರಿತರಾದವರಿಗೆ ಆಹಾರ ನೀಡುತ್ತಿದ್ದಾರೆ. ಪ್ರಾಣಿಗಳು ಮತ್ತು ಜನರಿಗೆ ಆಹಾರ ಮತ್ತು ಸಾಮಗ್ರಿಗಳ ದೇಣಿಗೆಗಳು ಹರಿದು ಬರುತ್ತಿವೆ.

ಸ್ಥಳೀಯ ರೇಸ್ ಟ್ರ್ಯಾಕ್‌ನಲ್ಲಿ ಮನೆಗಳನ್ನು ಕಳೆದುಗೊಂಡು ಸ್ಥಳಾಂತರಗೊಂಡ ನಿವಾಸಿಗಳಿಗೆ ಬಟ್ಟೆ, ಕಂಬಳಿ ಮತ್ತು ಗೃಹೋಪಯೋಗಿ ವಸ್ತುಗಳಂತಹ ಅಗತ್ಯ ವಸ್ತುಗಳನ್ನು ಪೂರೈಸಲು ವಿಂಗಡಿಸುತ್ತಿರುವುದು ಕಂಡುಬರುತ್ತಿದೆ ಎಂದು ವರದಿಯಾಗಿದೆ.

ಸರ್ಕಾರ ಇನ್ನೂ ಅಧಿಕೃತವಾಗಿ ಇಲ್ಲಿಯವರೆಗಿನ ಹಾನಿಯ ಅಂದಾಜು ನೀಡಿಲ್ಲವಾದರೂ, ಖಾಸಗಿ ಅಂದಾಜಿನ ಪ್ರಕಾರ ಒಟ್ಟು ಹಾನಿಯ ವೆಚ್ಚ ಹತ್ತಾರು ಶತಕೋಟಿ ಡಾಲರ್‌ಗಳನ್ನು ತಲುಪುತ್ತದೆ.

ಗೌರಿಬಿದನೂರು: ದಲಿತ ವ್ಯಕ್ತಿಯ ದೇಗುಲ ಪ್ರವೇಶಕ್ಕೆ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...