Homeಅಂತರಾಷ್ಟ್ರೀಯಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

ಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

- Advertisement -
- Advertisement -

ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಸಾವನ್ನಪ್ಪಿದವರ ಸಂಖ್ಯೆ ಶನಿವಾರ 16ಕ್ಕೆ ಏರಿದೆ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಪಾಲಿಸೇಡ್ಸ್ ಅಗ್ನಿಶಾಮಕ ವಲಯದಲ್ಲಿ 5  ಮಂದಿಯ ಶವ ಪತ್ತೆಯಾಗಿದ್ದರೆ, ಮಂದಿ ಈಟನ್ ಅಗ್ನಿಶಾಮಕ ವಲಯದಿಂದ 11 ಮಂದಿಯ ಶವ ಪತ್ತೆಯಾಗಿವೆ ಎಂದು ವರದಿ ತಿಳಿಸಿದೆ.

ಪಾಲಿಸೇಡ್ಸ್ ನಲ್ಲಿ  ಬೆಂಕಿಯು ಈಶಾನ್ಯಕ್ಕೆ ಹರಡುತ್ತಲೇ ಇದೆ. ಇದು ಬ್ರೆಂಟ್‌ವುಡ್ ಮತ್ತು ಬೆಲ್ ಏರ್‌ನಂತಹ ಶ್ರೀಮಂತ ದಕ್ಷಿಣ ಕ್ಯಾಲಿಫೋರ್ನಿಯಾ ನೆರೆಹೊರೆಗಳಲ್ಲಿ ಹೊಸ ಸ್ಥಳಗಳಿಗೆ ವಿಸ್ತರಣೆಗೆ ಕಾರಣವಾಗಿದೆ.

ಲಾಸ್ ಏಂಜಲೀಸ್ ಪ್ರದೇಶದಾದ್ಯಂತ ಕಾಡ್ಗಿಚ್ಚು ಅನೇಕ ಮನೆಗಳನ್ನು ನಾಶಪಡಿಸಿದ್ದರಿಂದ ಅದನ್ನು ನಿಯಂತ್ರಿಸಲು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ತಮ್ಮ ಕಾರ್ಯವನ್ನು ಬಿರುಸಿನಿಂದ ಮುಂದುವರಿಸಿದ್ದಾರೆ. ಪ್ರಬಲವಾದ ಗಾಳಿಯು ಒಣಗಿದ ಭೂಪ್ರದೇಶಗಳಲ್ಲಿ ಬೆಂಕಿಯು ಐದು ದಿನಗಳ ನಂತರವೂ ಮುಂದುವರಿದಿದೆ.

ವ್ಯಾಪಕವಾದ ವೈಮಾನಿಕ ಅಗ್ನಿಶಾಮಕ ಪ್ರಯತ್ನಗಳ ಹೊರತಾಗಿಯೂ, ಪಾಲಿಸೇಡ್ಸ್ ನಲ್ಲಿ ಬೆಂಕಿಯು ಶನಿವಾರದಂದು ನಗರದ ಪೂರ್ವಕ್ಕೆ ವಿಸ್ತರಿಸಿದೆ. ಗೆಟ್ಟಿ ಸೆಂಟರ್ ಕಲಾ ವಸ್ತುಸಂಗ್ರಹಾಲಯಕ್ಕೆ ಬೆಂಕಿ ಅವರಿಸುವ ಭೀತಿ ಎದುರಾಗಿದೆ ಮತ್ತು ಅದು ಉತ್ತರಕ್ಕೆ ಸ್ಯಾನ್ ಫೆರ್ನಾಂಡೊ ಕಣಿವೆಯ ಕಡೆಗೆ ತನ್ನ ಕೆನ್ನಾಲಿಗೆಯನ್ನು ಚಾಚಿದೆ. ಇಲ್ಲಿ 23,600 ಎಕರೆಗಳಷ್ಟು ಬೆಂಕಿ ಆವರಿಸಿದ್ದು, ಶೇ.11ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ. ಆದರೆ ಈಟನ್ ನಲ್ಲಿ 14,000 ಎಕರೆಗಳನ್ನು ಸುಟ್ಟುಹಾಕಿದ್ದು, ಶೇ.15 ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ.

ಲಾಸ್ ಏಂಜಲೀಸ್ ಸುತ್ತಮುತ್ತಲಿನ ಆರು ಪ್ರಮುಖ ಕಾಡ್ಗಿಚ್ಚುಗಳು ಸುಮಾರು 40,000 ಎಕರೆ ಕಾಡನ್ನು ಸುಟ್ಟುಹಾಕಿವೆ. ಮನೆಗಳು ಮತ್ತು ಇತರ ವ್ಯವಹಾರದ ಕಟ್ಟಡಗಳು ಸೇರಿದಂತೆ 12,000ಕ್ಕೂ ಹೆಚ್ಚು ಕಟ್ಟಡಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ.

ಶುಷ್ಕ ಗಾಳಿ ತೀವ್ರಗೊಳ್ಳುವ ಬೆದರಿಕೆ ಇರುವುದರಿಂದ ಅಧಿಕಾರಿಗಳು ಹೆಚ್ಚಿನ ಅಪಾಯಗಳ ಬಗ್ಗೆ ಎಚ್ಚರಿಸಿದ್ದಾರೆ.

ಈ ಕಾಡ್ಗಿಚ್ಚುಗಳು ಯುಎಸ್ ಇತಿಹಾಸದಲ್ಲಿ ಅತ್ಯಂತ ದುಬಾರಿಯಾಗಬಹುದು, ಹಾನಿ ಮತ್ತು ಆರ್ಥಿಕ ನಷ್ಟಗಳು $135 ಬಿಲಿಯನ್ ಮತ್ತು $150 ಬಿಲಿಯನ್ ನಡುವೆ ಇರಬಹುದು ಎಂದು ಆರಂಭಿಕ ಅಂದಾಜು ಹೇಳಿದೆ.
ನಾಯಿಗಳು, ಕುದುರೆಗಳು ಮತ್ತು ಜಾನುವಾರುಗಳು ಸೇರಿದಂತೆ ಸ್ಥಳಾಂತರಗೊಂಡ ಪ್ರಾಣಿಗಳಿಗೆ ಅವುಗಳ ಮಾಲೀಕರೊಂದಿಗೆ ಸಹಾಯ ಮಾಡಲು ರಕ್ಷಣಾ ಸಂಸ್ಥೆಗಳು ಮುಂದಾಗಿವೆ. ಸ್ವಯಂಸೇವಕರು ಬಿರುಸಿನ ಚಟುವಟಿಕೆಯಲ್ಲಿ ತೊಡಗಿ ನಿರಾಶ್ರಿತರಾದವರಿಗೆ ಆಹಾರ ನೀಡುತ್ತಿದ್ದಾರೆ. ಪ್ರಾಣಿಗಳು ಮತ್ತು ಜನರಿಗೆ ಆಹಾರ ಮತ್ತು ಸಾಮಗ್ರಿಗಳ ದೇಣಿಗೆಗಳು ಹರಿದು ಬರುತ್ತಿವೆ.

ಸ್ಥಳೀಯ ರೇಸ್ ಟ್ರ್ಯಾಕ್‌ನಲ್ಲಿ ಮನೆಗಳನ್ನು ಕಳೆದುಗೊಂಡು ಸ್ಥಳಾಂತರಗೊಂಡ ನಿವಾಸಿಗಳಿಗೆ ಬಟ್ಟೆ, ಕಂಬಳಿ ಮತ್ತು ಗೃಹೋಪಯೋಗಿ ವಸ್ತುಗಳಂತಹ ಅಗತ್ಯ ವಸ್ತುಗಳನ್ನು ಪೂರೈಸಲು ವಿಂಗಡಿಸುತ್ತಿರುವುದು ಕಂಡುಬರುತ್ತಿದೆ ಎಂದು ವರದಿಯಾಗಿದೆ.

ಸರ್ಕಾರ ಇನ್ನೂ ಅಧಿಕೃತವಾಗಿ ಇಲ್ಲಿಯವರೆಗಿನ ಹಾನಿಯ ಅಂದಾಜು ನೀಡಿಲ್ಲವಾದರೂ, ಖಾಸಗಿ ಅಂದಾಜಿನ ಪ್ರಕಾರ ಒಟ್ಟು ಹಾನಿಯ ವೆಚ್ಚ ಹತ್ತಾರು ಶತಕೋಟಿ ಡಾಲರ್‌ಗಳನ್ನು ತಲುಪುತ್ತದೆ.

ಗೌರಿಬಿದನೂರು: ದಲಿತ ವ್ಯಕ್ತಿಯ ದೇಗುಲ ಪ್ರವೇಶಕ್ಕೆ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...