Homeಅಂತರಾಷ್ಟ್ರೀಯಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

ಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

- Advertisement -
- Advertisement -

ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಸಾವನ್ನಪ್ಪಿದವರ ಸಂಖ್ಯೆ ಶನಿವಾರ 16ಕ್ಕೆ ಏರಿದೆ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಪಾಲಿಸೇಡ್ಸ್ ಅಗ್ನಿಶಾಮಕ ವಲಯದಲ್ಲಿ 5  ಮಂದಿಯ ಶವ ಪತ್ತೆಯಾಗಿದ್ದರೆ, ಮಂದಿ ಈಟನ್ ಅಗ್ನಿಶಾಮಕ ವಲಯದಿಂದ 11 ಮಂದಿಯ ಶವ ಪತ್ತೆಯಾಗಿವೆ ಎಂದು ವರದಿ ತಿಳಿಸಿದೆ.

ಪಾಲಿಸೇಡ್ಸ್ ನಲ್ಲಿ  ಬೆಂಕಿಯು ಈಶಾನ್ಯಕ್ಕೆ ಹರಡುತ್ತಲೇ ಇದೆ. ಇದು ಬ್ರೆಂಟ್‌ವುಡ್ ಮತ್ತು ಬೆಲ್ ಏರ್‌ನಂತಹ ಶ್ರೀಮಂತ ದಕ್ಷಿಣ ಕ್ಯಾಲಿಫೋರ್ನಿಯಾ ನೆರೆಹೊರೆಗಳಲ್ಲಿ ಹೊಸ ಸ್ಥಳಗಳಿಗೆ ವಿಸ್ತರಣೆಗೆ ಕಾರಣವಾಗಿದೆ.

ಲಾಸ್ ಏಂಜಲೀಸ್ ಪ್ರದೇಶದಾದ್ಯಂತ ಕಾಡ್ಗಿಚ್ಚು ಅನೇಕ ಮನೆಗಳನ್ನು ನಾಶಪಡಿಸಿದ್ದರಿಂದ ಅದನ್ನು ನಿಯಂತ್ರಿಸಲು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ತಮ್ಮ ಕಾರ್ಯವನ್ನು ಬಿರುಸಿನಿಂದ ಮುಂದುವರಿಸಿದ್ದಾರೆ. ಪ್ರಬಲವಾದ ಗಾಳಿಯು ಒಣಗಿದ ಭೂಪ್ರದೇಶಗಳಲ್ಲಿ ಬೆಂಕಿಯು ಐದು ದಿನಗಳ ನಂತರವೂ ಮುಂದುವರಿದಿದೆ.

ವ್ಯಾಪಕವಾದ ವೈಮಾನಿಕ ಅಗ್ನಿಶಾಮಕ ಪ್ರಯತ್ನಗಳ ಹೊರತಾಗಿಯೂ, ಪಾಲಿಸೇಡ್ಸ್ ನಲ್ಲಿ ಬೆಂಕಿಯು ಶನಿವಾರದಂದು ನಗರದ ಪೂರ್ವಕ್ಕೆ ವಿಸ್ತರಿಸಿದೆ. ಗೆಟ್ಟಿ ಸೆಂಟರ್ ಕಲಾ ವಸ್ತುಸಂಗ್ರಹಾಲಯಕ್ಕೆ ಬೆಂಕಿ ಅವರಿಸುವ ಭೀತಿ ಎದುರಾಗಿದೆ ಮತ್ತು ಅದು ಉತ್ತರಕ್ಕೆ ಸ್ಯಾನ್ ಫೆರ್ನಾಂಡೊ ಕಣಿವೆಯ ಕಡೆಗೆ ತನ್ನ ಕೆನ್ನಾಲಿಗೆಯನ್ನು ಚಾಚಿದೆ. ಇಲ್ಲಿ 23,600 ಎಕರೆಗಳಷ್ಟು ಬೆಂಕಿ ಆವರಿಸಿದ್ದು, ಶೇ.11ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ. ಆದರೆ ಈಟನ್ ನಲ್ಲಿ 14,000 ಎಕರೆಗಳನ್ನು ಸುಟ್ಟುಹಾಕಿದ್ದು, ಶೇ.15 ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ.

ಲಾಸ್ ಏಂಜಲೀಸ್ ಸುತ್ತಮುತ್ತಲಿನ ಆರು ಪ್ರಮುಖ ಕಾಡ್ಗಿಚ್ಚುಗಳು ಸುಮಾರು 40,000 ಎಕರೆ ಕಾಡನ್ನು ಸುಟ್ಟುಹಾಕಿವೆ. ಮನೆಗಳು ಮತ್ತು ಇತರ ವ್ಯವಹಾರದ ಕಟ್ಟಡಗಳು ಸೇರಿದಂತೆ 12,000ಕ್ಕೂ ಹೆಚ್ಚು ಕಟ್ಟಡಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ.

ಶುಷ್ಕ ಗಾಳಿ ತೀವ್ರಗೊಳ್ಳುವ ಬೆದರಿಕೆ ಇರುವುದರಿಂದ ಅಧಿಕಾರಿಗಳು ಹೆಚ್ಚಿನ ಅಪಾಯಗಳ ಬಗ್ಗೆ ಎಚ್ಚರಿಸಿದ್ದಾರೆ.

ಈ ಕಾಡ್ಗಿಚ್ಚುಗಳು ಯುಎಸ್ ಇತಿಹಾಸದಲ್ಲಿ ಅತ್ಯಂತ ದುಬಾರಿಯಾಗಬಹುದು, ಹಾನಿ ಮತ್ತು ಆರ್ಥಿಕ ನಷ್ಟಗಳು $135 ಬಿಲಿಯನ್ ಮತ್ತು $150 ಬಿಲಿಯನ್ ನಡುವೆ ಇರಬಹುದು ಎಂದು ಆರಂಭಿಕ ಅಂದಾಜು ಹೇಳಿದೆ.
ನಾಯಿಗಳು, ಕುದುರೆಗಳು ಮತ್ತು ಜಾನುವಾರುಗಳು ಸೇರಿದಂತೆ ಸ್ಥಳಾಂತರಗೊಂಡ ಪ್ರಾಣಿಗಳಿಗೆ ಅವುಗಳ ಮಾಲೀಕರೊಂದಿಗೆ ಸಹಾಯ ಮಾಡಲು ರಕ್ಷಣಾ ಸಂಸ್ಥೆಗಳು ಮುಂದಾಗಿವೆ. ಸ್ವಯಂಸೇವಕರು ಬಿರುಸಿನ ಚಟುವಟಿಕೆಯಲ್ಲಿ ತೊಡಗಿ ನಿರಾಶ್ರಿತರಾದವರಿಗೆ ಆಹಾರ ನೀಡುತ್ತಿದ್ದಾರೆ. ಪ್ರಾಣಿಗಳು ಮತ್ತು ಜನರಿಗೆ ಆಹಾರ ಮತ್ತು ಸಾಮಗ್ರಿಗಳ ದೇಣಿಗೆಗಳು ಹರಿದು ಬರುತ್ತಿವೆ.

ಸ್ಥಳೀಯ ರೇಸ್ ಟ್ರ್ಯಾಕ್‌ನಲ್ಲಿ ಮನೆಗಳನ್ನು ಕಳೆದುಗೊಂಡು ಸ್ಥಳಾಂತರಗೊಂಡ ನಿವಾಸಿಗಳಿಗೆ ಬಟ್ಟೆ, ಕಂಬಳಿ ಮತ್ತು ಗೃಹೋಪಯೋಗಿ ವಸ್ತುಗಳಂತಹ ಅಗತ್ಯ ವಸ್ತುಗಳನ್ನು ಪೂರೈಸಲು ವಿಂಗಡಿಸುತ್ತಿರುವುದು ಕಂಡುಬರುತ್ತಿದೆ ಎಂದು ವರದಿಯಾಗಿದೆ.

ಸರ್ಕಾರ ಇನ್ನೂ ಅಧಿಕೃತವಾಗಿ ಇಲ್ಲಿಯವರೆಗಿನ ಹಾನಿಯ ಅಂದಾಜು ನೀಡಿಲ್ಲವಾದರೂ, ಖಾಸಗಿ ಅಂದಾಜಿನ ಪ್ರಕಾರ ಒಟ್ಟು ಹಾನಿಯ ವೆಚ್ಚ ಹತ್ತಾರು ಶತಕೋಟಿ ಡಾಲರ್‌ಗಳನ್ನು ತಲುಪುತ್ತದೆ.

ಗೌರಿಬಿದನೂರು: ದಲಿತ ವ್ಯಕ್ತಿಯ ದೇಗುಲ ಪ್ರವೇಶಕ್ಕೆ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...