Homeಅಂತರಾಷ್ಟ್ರೀಯಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

ಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

- Advertisement -
- Advertisement -

ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಸಾವನ್ನಪ್ಪಿದವರ ಸಂಖ್ಯೆ ಶನಿವಾರ 16ಕ್ಕೆ ಏರಿದೆ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಪಾಲಿಸೇಡ್ಸ್ ಅಗ್ನಿಶಾಮಕ ವಲಯದಲ್ಲಿ 5  ಮಂದಿಯ ಶವ ಪತ್ತೆಯಾಗಿದ್ದರೆ, ಮಂದಿ ಈಟನ್ ಅಗ್ನಿಶಾಮಕ ವಲಯದಿಂದ 11 ಮಂದಿಯ ಶವ ಪತ್ತೆಯಾಗಿವೆ ಎಂದು ವರದಿ ತಿಳಿಸಿದೆ.

ಪಾಲಿಸೇಡ್ಸ್ ನಲ್ಲಿ  ಬೆಂಕಿಯು ಈಶಾನ್ಯಕ್ಕೆ ಹರಡುತ್ತಲೇ ಇದೆ. ಇದು ಬ್ರೆಂಟ್‌ವುಡ್ ಮತ್ತು ಬೆಲ್ ಏರ್‌ನಂತಹ ಶ್ರೀಮಂತ ದಕ್ಷಿಣ ಕ್ಯಾಲಿಫೋರ್ನಿಯಾ ನೆರೆಹೊರೆಗಳಲ್ಲಿ ಹೊಸ ಸ್ಥಳಗಳಿಗೆ ವಿಸ್ತರಣೆಗೆ ಕಾರಣವಾಗಿದೆ.

ಲಾಸ್ ಏಂಜಲೀಸ್ ಪ್ರದೇಶದಾದ್ಯಂತ ಕಾಡ್ಗಿಚ್ಚು ಅನೇಕ ಮನೆಗಳನ್ನು ನಾಶಪಡಿಸಿದ್ದರಿಂದ ಅದನ್ನು ನಿಯಂತ್ರಿಸಲು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ತಮ್ಮ ಕಾರ್ಯವನ್ನು ಬಿರುಸಿನಿಂದ ಮುಂದುವರಿಸಿದ್ದಾರೆ. ಪ್ರಬಲವಾದ ಗಾಳಿಯು ಒಣಗಿದ ಭೂಪ್ರದೇಶಗಳಲ್ಲಿ ಬೆಂಕಿಯು ಐದು ದಿನಗಳ ನಂತರವೂ ಮುಂದುವರಿದಿದೆ.

ವ್ಯಾಪಕವಾದ ವೈಮಾನಿಕ ಅಗ್ನಿಶಾಮಕ ಪ್ರಯತ್ನಗಳ ಹೊರತಾಗಿಯೂ, ಪಾಲಿಸೇಡ್ಸ್ ನಲ್ಲಿ ಬೆಂಕಿಯು ಶನಿವಾರದಂದು ನಗರದ ಪೂರ್ವಕ್ಕೆ ವಿಸ್ತರಿಸಿದೆ. ಗೆಟ್ಟಿ ಸೆಂಟರ್ ಕಲಾ ವಸ್ತುಸಂಗ್ರಹಾಲಯಕ್ಕೆ ಬೆಂಕಿ ಅವರಿಸುವ ಭೀತಿ ಎದುರಾಗಿದೆ ಮತ್ತು ಅದು ಉತ್ತರಕ್ಕೆ ಸ್ಯಾನ್ ಫೆರ್ನಾಂಡೊ ಕಣಿವೆಯ ಕಡೆಗೆ ತನ್ನ ಕೆನ್ನಾಲಿಗೆಯನ್ನು ಚಾಚಿದೆ. ಇಲ್ಲಿ 23,600 ಎಕರೆಗಳಷ್ಟು ಬೆಂಕಿ ಆವರಿಸಿದ್ದು, ಶೇ.11ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ. ಆದರೆ ಈಟನ್ ನಲ್ಲಿ 14,000 ಎಕರೆಗಳನ್ನು ಸುಟ್ಟುಹಾಕಿದ್ದು, ಶೇ.15 ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ.

ಲಾಸ್ ಏಂಜಲೀಸ್ ಸುತ್ತಮುತ್ತಲಿನ ಆರು ಪ್ರಮುಖ ಕಾಡ್ಗಿಚ್ಚುಗಳು ಸುಮಾರು 40,000 ಎಕರೆ ಕಾಡನ್ನು ಸುಟ್ಟುಹಾಕಿವೆ. ಮನೆಗಳು ಮತ್ತು ಇತರ ವ್ಯವಹಾರದ ಕಟ್ಟಡಗಳು ಸೇರಿದಂತೆ 12,000ಕ್ಕೂ ಹೆಚ್ಚು ಕಟ್ಟಡಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ.

ಶುಷ್ಕ ಗಾಳಿ ತೀವ್ರಗೊಳ್ಳುವ ಬೆದರಿಕೆ ಇರುವುದರಿಂದ ಅಧಿಕಾರಿಗಳು ಹೆಚ್ಚಿನ ಅಪಾಯಗಳ ಬಗ್ಗೆ ಎಚ್ಚರಿಸಿದ್ದಾರೆ.

ಈ ಕಾಡ್ಗಿಚ್ಚುಗಳು ಯುಎಸ್ ಇತಿಹಾಸದಲ್ಲಿ ಅತ್ಯಂತ ದುಬಾರಿಯಾಗಬಹುದು, ಹಾನಿ ಮತ್ತು ಆರ್ಥಿಕ ನಷ್ಟಗಳು $135 ಬಿಲಿಯನ್ ಮತ್ತು $150 ಬಿಲಿಯನ್ ನಡುವೆ ಇರಬಹುದು ಎಂದು ಆರಂಭಿಕ ಅಂದಾಜು ಹೇಳಿದೆ.
ನಾಯಿಗಳು, ಕುದುರೆಗಳು ಮತ್ತು ಜಾನುವಾರುಗಳು ಸೇರಿದಂತೆ ಸ್ಥಳಾಂತರಗೊಂಡ ಪ್ರಾಣಿಗಳಿಗೆ ಅವುಗಳ ಮಾಲೀಕರೊಂದಿಗೆ ಸಹಾಯ ಮಾಡಲು ರಕ್ಷಣಾ ಸಂಸ್ಥೆಗಳು ಮುಂದಾಗಿವೆ. ಸ್ವಯಂಸೇವಕರು ಬಿರುಸಿನ ಚಟುವಟಿಕೆಯಲ್ಲಿ ತೊಡಗಿ ನಿರಾಶ್ರಿತರಾದವರಿಗೆ ಆಹಾರ ನೀಡುತ್ತಿದ್ದಾರೆ. ಪ್ರಾಣಿಗಳು ಮತ್ತು ಜನರಿಗೆ ಆಹಾರ ಮತ್ತು ಸಾಮಗ್ರಿಗಳ ದೇಣಿಗೆಗಳು ಹರಿದು ಬರುತ್ತಿವೆ.

ಸ್ಥಳೀಯ ರೇಸ್ ಟ್ರ್ಯಾಕ್‌ನಲ್ಲಿ ಮನೆಗಳನ್ನು ಕಳೆದುಗೊಂಡು ಸ್ಥಳಾಂತರಗೊಂಡ ನಿವಾಸಿಗಳಿಗೆ ಬಟ್ಟೆ, ಕಂಬಳಿ ಮತ್ತು ಗೃಹೋಪಯೋಗಿ ವಸ್ತುಗಳಂತಹ ಅಗತ್ಯ ವಸ್ತುಗಳನ್ನು ಪೂರೈಸಲು ವಿಂಗಡಿಸುತ್ತಿರುವುದು ಕಂಡುಬರುತ್ತಿದೆ ಎಂದು ವರದಿಯಾಗಿದೆ.

ಸರ್ಕಾರ ಇನ್ನೂ ಅಧಿಕೃತವಾಗಿ ಇಲ್ಲಿಯವರೆಗಿನ ಹಾನಿಯ ಅಂದಾಜು ನೀಡಿಲ್ಲವಾದರೂ, ಖಾಸಗಿ ಅಂದಾಜಿನ ಪ್ರಕಾರ ಒಟ್ಟು ಹಾನಿಯ ವೆಚ್ಚ ಹತ್ತಾರು ಶತಕೋಟಿ ಡಾಲರ್‌ಗಳನ್ನು ತಲುಪುತ್ತದೆ.

ಗೌರಿಬಿದನೂರು: ದಲಿತ ವ್ಯಕ್ತಿಯ ದೇಗುಲ ಪ್ರವೇಶಕ್ಕೆ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...