Homeಅಂತರಾಷ್ಟ್ರೀಯಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

ಲಾಸ್ ಏಂಜಲೀಸ್ ಕಾಡ್ಗಿಚ್ಚು: 16 ಸಾವು, 12,000 ಕಟ್ಟಡಗಳು ನಾಶ

- Advertisement -
- Advertisement -

ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಸಾವನ್ನಪ್ಪಿದವರ ಸಂಖ್ಯೆ ಶನಿವಾರ 16ಕ್ಕೆ ಏರಿದೆ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಪಾಲಿಸೇಡ್ಸ್ ಅಗ್ನಿಶಾಮಕ ವಲಯದಲ್ಲಿ 5  ಮಂದಿಯ ಶವ ಪತ್ತೆಯಾಗಿದ್ದರೆ, ಮಂದಿ ಈಟನ್ ಅಗ್ನಿಶಾಮಕ ವಲಯದಿಂದ 11 ಮಂದಿಯ ಶವ ಪತ್ತೆಯಾಗಿವೆ ಎಂದು ವರದಿ ತಿಳಿಸಿದೆ.

ಪಾಲಿಸೇಡ್ಸ್ ನಲ್ಲಿ  ಬೆಂಕಿಯು ಈಶಾನ್ಯಕ್ಕೆ ಹರಡುತ್ತಲೇ ಇದೆ. ಇದು ಬ್ರೆಂಟ್‌ವುಡ್ ಮತ್ತು ಬೆಲ್ ಏರ್‌ನಂತಹ ಶ್ರೀಮಂತ ದಕ್ಷಿಣ ಕ್ಯಾಲಿಫೋರ್ನಿಯಾ ನೆರೆಹೊರೆಗಳಲ್ಲಿ ಹೊಸ ಸ್ಥಳಗಳಿಗೆ ವಿಸ್ತರಣೆಗೆ ಕಾರಣವಾಗಿದೆ.

ಲಾಸ್ ಏಂಜಲೀಸ್ ಪ್ರದೇಶದಾದ್ಯಂತ ಕಾಡ್ಗಿಚ್ಚು ಅನೇಕ ಮನೆಗಳನ್ನು ನಾಶಪಡಿಸಿದ್ದರಿಂದ ಅದನ್ನು ನಿಯಂತ್ರಿಸಲು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ತಮ್ಮ ಕಾರ್ಯವನ್ನು ಬಿರುಸಿನಿಂದ ಮುಂದುವರಿಸಿದ್ದಾರೆ. ಪ್ರಬಲವಾದ ಗಾಳಿಯು ಒಣಗಿದ ಭೂಪ್ರದೇಶಗಳಲ್ಲಿ ಬೆಂಕಿಯು ಐದು ದಿನಗಳ ನಂತರವೂ ಮುಂದುವರಿದಿದೆ.

ವ್ಯಾಪಕವಾದ ವೈಮಾನಿಕ ಅಗ್ನಿಶಾಮಕ ಪ್ರಯತ್ನಗಳ ಹೊರತಾಗಿಯೂ, ಪಾಲಿಸೇಡ್ಸ್ ನಲ್ಲಿ ಬೆಂಕಿಯು ಶನಿವಾರದಂದು ನಗರದ ಪೂರ್ವಕ್ಕೆ ವಿಸ್ತರಿಸಿದೆ. ಗೆಟ್ಟಿ ಸೆಂಟರ್ ಕಲಾ ವಸ್ತುಸಂಗ್ರಹಾಲಯಕ್ಕೆ ಬೆಂಕಿ ಅವರಿಸುವ ಭೀತಿ ಎದುರಾಗಿದೆ ಮತ್ತು ಅದು ಉತ್ತರಕ್ಕೆ ಸ್ಯಾನ್ ಫೆರ್ನಾಂಡೊ ಕಣಿವೆಯ ಕಡೆಗೆ ತನ್ನ ಕೆನ್ನಾಲಿಗೆಯನ್ನು ಚಾಚಿದೆ. ಇಲ್ಲಿ 23,600 ಎಕರೆಗಳಷ್ಟು ಬೆಂಕಿ ಆವರಿಸಿದ್ದು, ಶೇ.11ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ. ಆದರೆ ಈಟನ್ ನಲ್ಲಿ 14,000 ಎಕರೆಗಳನ್ನು ಸುಟ್ಟುಹಾಕಿದ್ದು, ಶೇ.15 ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ.

ಲಾಸ್ ಏಂಜಲೀಸ್ ಸುತ್ತಮುತ್ತಲಿನ ಆರು ಪ್ರಮುಖ ಕಾಡ್ಗಿಚ್ಚುಗಳು ಸುಮಾರು 40,000 ಎಕರೆ ಕಾಡನ್ನು ಸುಟ್ಟುಹಾಕಿವೆ. ಮನೆಗಳು ಮತ್ತು ಇತರ ವ್ಯವಹಾರದ ಕಟ್ಟಡಗಳು ಸೇರಿದಂತೆ 12,000ಕ್ಕೂ ಹೆಚ್ಚು ಕಟ್ಟಡಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ.

ಶುಷ್ಕ ಗಾಳಿ ತೀವ್ರಗೊಳ್ಳುವ ಬೆದರಿಕೆ ಇರುವುದರಿಂದ ಅಧಿಕಾರಿಗಳು ಹೆಚ್ಚಿನ ಅಪಾಯಗಳ ಬಗ್ಗೆ ಎಚ್ಚರಿಸಿದ್ದಾರೆ.

ಈ ಕಾಡ್ಗಿಚ್ಚುಗಳು ಯುಎಸ್ ಇತಿಹಾಸದಲ್ಲಿ ಅತ್ಯಂತ ದುಬಾರಿಯಾಗಬಹುದು, ಹಾನಿ ಮತ್ತು ಆರ್ಥಿಕ ನಷ್ಟಗಳು $135 ಬಿಲಿಯನ್ ಮತ್ತು $150 ಬಿಲಿಯನ್ ನಡುವೆ ಇರಬಹುದು ಎಂದು ಆರಂಭಿಕ ಅಂದಾಜು ಹೇಳಿದೆ.
ನಾಯಿಗಳು, ಕುದುರೆಗಳು ಮತ್ತು ಜಾನುವಾರುಗಳು ಸೇರಿದಂತೆ ಸ್ಥಳಾಂತರಗೊಂಡ ಪ್ರಾಣಿಗಳಿಗೆ ಅವುಗಳ ಮಾಲೀಕರೊಂದಿಗೆ ಸಹಾಯ ಮಾಡಲು ರಕ್ಷಣಾ ಸಂಸ್ಥೆಗಳು ಮುಂದಾಗಿವೆ. ಸ್ವಯಂಸೇವಕರು ಬಿರುಸಿನ ಚಟುವಟಿಕೆಯಲ್ಲಿ ತೊಡಗಿ ನಿರಾಶ್ರಿತರಾದವರಿಗೆ ಆಹಾರ ನೀಡುತ್ತಿದ್ದಾರೆ. ಪ್ರಾಣಿಗಳು ಮತ್ತು ಜನರಿಗೆ ಆಹಾರ ಮತ್ತು ಸಾಮಗ್ರಿಗಳ ದೇಣಿಗೆಗಳು ಹರಿದು ಬರುತ್ತಿವೆ.

ಸ್ಥಳೀಯ ರೇಸ್ ಟ್ರ್ಯಾಕ್‌ನಲ್ಲಿ ಮನೆಗಳನ್ನು ಕಳೆದುಗೊಂಡು ಸ್ಥಳಾಂತರಗೊಂಡ ನಿವಾಸಿಗಳಿಗೆ ಬಟ್ಟೆ, ಕಂಬಳಿ ಮತ್ತು ಗೃಹೋಪಯೋಗಿ ವಸ್ತುಗಳಂತಹ ಅಗತ್ಯ ವಸ್ತುಗಳನ್ನು ಪೂರೈಸಲು ವಿಂಗಡಿಸುತ್ತಿರುವುದು ಕಂಡುಬರುತ್ತಿದೆ ಎಂದು ವರದಿಯಾಗಿದೆ.

ಸರ್ಕಾರ ಇನ್ನೂ ಅಧಿಕೃತವಾಗಿ ಇಲ್ಲಿಯವರೆಗಿನ ಹಾನಿಯ ಅಂದಾಜು ನೀಡಿಲ್ಲವಾದರೂ, ಖಾಸಗಿ ಅಂದಾಜಿನ ಪ್ರಕಾರ ಒಟ್ಟು ಹಾನಿಯ ವೆಚ್ಚ ಹತ್ತಾರು ಶತಕೋಟಿ ಡಾಲರ್‌ಗಳನ್ನು ತಲುಪುತ್ತದೆ.

ಗೌರಿಬಿದನೂರು: ದಲಿತ ವ್ಯಕ್ತಿಯ ದೇಗುಲ ಪ್ರವೇಶಕ್ಕೆ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...