Homeಮುಖಪುಟನಿಯಂತ್ರಣಕ್ಕೆ ಬಾರದ ಕಾಡ್ಗಿಚ್ಚು : ಕಾಡು-ನಾಡು ಸುಟ್ಟು ಭಸ್ಮ ; ನಿರಾಶ್ರಿತರಾದ ಲಕ್ಷಾಂತರ ಜೀವಗಳು

ನಿಯಂತ್ರಣಕ್ಕೆ ಬಾರದ ಕಾಡ್ಗಿಚ್ಚು : ಕಾಡು-ನಾಡು ಸುಟ್ಟು ಭಸ್ಮ ; ನಿರಾಶ್ರಿತರಾದ ಲಕ್ಷಾಂತರ ಜೀವಗಳು

- Advertisement -
- Advertisement -

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ದಕ್ಷಿಣ ಭಾಗದ ನಗರವಾದ ಲಾಸ್‌ ಏಂಜಲೀಸ್‌ನಲ್ಲಿ ಉಂಟಾಗಿರುವ ಕಾಡ್ಗಿಚ್ಚು ನಾಲ್ಕು ದಿನ ಕಳೆದರೂ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದ ಕಾಡು-ನಾಡು ಸುಟ್ಟು ಭಸ್ಮವಾಗಿದ್ದು, ಹೊಸ ವರ್ಷದ ಆರಂಭ ಮಹಾ ದುರಂತಕ್ಕೆ ಸಾಕ್ಷಿಯಾಗಿದೆ.

ಕಳೆದ ಮಂಗಳವಾರದಿಂದ (ಜ.7) ಹೊತ್ತಿ ಉರಿಯುತ್ತಿರುವ ಬೆಂಕಿ, ಗಂಟೆ ಗಂಟೆಗೂ ಹೊಸ ಪ್ರದೇಶಗಳನ್ನು ಆವರಿಸಿಕೊಂಡು ಮುನ್ನುಗ್ಗುತ್ತಿದೆ. ಇದರಿಂದ ಜನರ ಮನೆ, ವ್ಯವಹಾರ ಸಂಸ್ಥೆಗಳು ಸೇರಿದಂತೆ ಸಾವಿರಾರು ಕಟ್ಟಡಗಳು ಸುಟ್ಟು ಭಸ್ಮವಾದರೆ, ವನ್ಯ ಜೀವಿಗಳು ತಮ್ಮ ನೆಲೆಯನ್ನು ಕಳೆದುಕೊಂಡಿದೆ. ಈ ಮೂಲಕ ಲಕ್ಷಾಂತರ ಜೀವಗಳು ನಿರಾಶ್ರಿತರಾಗಿದ್ದಾರೆ.

ವರದಿಗಳ ಪ್ರಕಾರ, ನಿನ್ನೆ ಜ.9, ಗುರುವಾರ) ಕಾಡ್ಗಿಚ್ಚಿಗೆ ಬಲಿಯಾದವರ ಸಂಖ್ಯೆ 5 ಆಗಿತ್ತು. ಅದು ಇಂದು (ಜ.10, ಶುಕ್ರವಾರ) 8ಕ್ಕೆ ಏರಿಕೆಯಾಗಿದೆ. ಸುಮಾರು 1 ಲಕ್ಷದಷ್ಟು ಜನರನ್ನು ಸ್ಥಳಾಂತರ ಮಾಡಿರುವ ಕ್ಯಾಲಿಫೋರ್ನಿಯಾ ರಾಜ್ಯ ಸರ್ಕಾರ, ತುರ್ತು ಪರಿಸ್ಥಿತಿ ಘೋಷಿಸಿದೆ. ವನ್ಯ ಜೀವಿಗಳ ಸಾವು-ನೋವಿನ ಕುರಿತು ಮಾಹಿತಿ ದೊರೆತಿಲ್ಲ. ಅವುಗಳ ರಕ್ಷಣಾ ಕಾರ್ಯ ನಡೆದಿರುವ ಬಗ್ಗೆಯೂ ವರದಿ ಲಭ್ಯವಾಗಿಲ್ಲ.

‘ಸಾಂತಾ ಅನಾ’ ಎಂದು ಕರೆಯಲ್ಪಡುವ ಬಲವಾದ ಒಣ ಗಾಳಿಯು ಬೆಂಕಿಯ ಕೆನ್ನಾಗಲಿಗೆಯನ್ನು ವಿಸ್ತರಣೆ ಮಾಡುತ್ತಿದೆ. ಈ ಗಾಳಿಯೇ ಬೆಂಕಿ ನಂದಿಸಲು ಅಡ್ಡಿಯಾಗಿದೆ. ಸುಮಾರು 8 ಸಾವಿರ ರಕ್ಷಣಾ ಸಿಬ್ಬಂದಿ ಅಗ್ನಿಶಾಮಕ ವಾಹನಗಳು, ಹೆಲಿಕಾಫ್ಟರ್ ಸೇರಿದಂತೆ ವಿವಿಧ ರೀತಿಯಲ್ಲಿ ನಿರಂತರ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಈ ನಡುವೆ ಕೊಂಚ ನೀರಿನ ಕೊರೆತೆಯೂ ಎದುರಾಗಿದೆ.

ಲಾಸ್‌ ಏಂಜಲೀಸ್‌ನ ಪೆಸಿಫಿಕ್‌ ಪ್ಯಾಲಿಸೈಡ್ಸ್‌, ಪ್ಯಾಸಡೀನಾದ ಈಟನ್‌ ಕೆಯಾನ್‌, ಹಾಲಿವುಡ್‌ ಹಿಲ್ಸ್‌, ಲಿಡಿಯಾ ಪ್ರದೇಶ ವ್ಯಾಪ್ತಿಯಲ್ಲಿ ಗುರುವಾರ ಕಾಡ್ಗಿಚ್ಚು ಹೊತ್ತಿಕೊಂಡಿದೆ. ಇದರ ಪರಿಣಾಮ ಹಾಲಿವುಡ್‌ ಹಿಲ್ಸ್‌ನಲ್ಲಿ ನೆಲೆಸಿರುವ ಕೋಟಿ ಕೋಟಿ ವೆಚ್ಚದ ಹಾಲಿವುಡ್‌ನ ಹಲವು ಸಿನಿ ತಾರೆಯರ ಮನೆಗಳು ಸುಟ್ಟು ಭಸ್ಮವಾಗಿವೆ. ನೂರಾರು ಸಿನಿ ತಾರೆಯರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಹಾಗೇ ಹಾಲಿವುಡ್‌ ಸಿನಿ ರಂಗದ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ ಎಂದು ವರದಿಗಳು ಹೇಳಿವೆ.

ಹಾಲಿವುಡ್ ತಾರೆಯರಾದ ನಟ ಪ್ಯಾರಿಸ್ ಹಿಲ್ಟನ್, ಆಸ್ಕರ್ ವಿಜೇತ ನಟ ಆ್ಯಂಟನಿ ಹಾಪ್ಕಿನ್ಸ್, ಮತ್ತೊಬ್ಬ ಆಸ್ಕರ್ ವಿಜೇತ ನಟ ಜೆಫ್ ಬ್ರಿಡ್ಜಸ್, ನಟ ಬಿಲ್ಲಿ ಕ್ರಿಸ್ಟಲ್, ‘ಅಮೆರಿಕನ್ ಪೈ’ ನಟ ಯುಜಿನ್ ಲೆವಿ, ‘ರೋಸಾನ್’ ಸಿನಿಮಾದ ನಟ ಜಾನ್ ಗುಡ್‌ಮನ್, ‘ಸ್ಟಾರ್ ವಾರ್ಸ್’ ಚಿತ್ರದ ನಟ ಮಾರ್ಕ್ ಹ್ಯಾಮಿಲ್, ಇತರ ನಟರಾದ ಜೆನ್ನಿಫರ್ ಗ್ರೆ, ಕ್ಯಾರಿ ಎಲ್ವೆಸ್, ಆ್ಯಡಂ ಬ್ರೋಡಿ ಸೇರಿದಂತೆ ಹಲವರ ಮನೆ ಕಟ್ಟಡಗಳು ಬೆಂಕಿಗಾಹುತಿಯಾಗಿವೆ. ಇವರೆಲ್ಲರೂ ಕಣ್ಣೀರು ಹಾಕಿದ್ದಾರೆ ಎಂದು ವರದಿಯಾಗಿದೆ.

ನಿರಂತರ ಹೊತ್ತಿ ಉರಿಯುತ್ತಿರುವ ಬೆಂಕಿಯಿಂದ ಲಾಸ್‌ ಏಂಜಲೀಸ್‌ನಲ್ಲಿ ಆಕಾಶವೇ ಕಿತ್ತಲೆ ಬಣ್ಣಕ್ಕೆ ತಿರುಗಿದೆ ಎಂದು ದುರಂತದ ಭೀಕರತೆಯನ್ನು ವರದಿಗಳು ಬಣ್ಣಿಸಿದೆ.

ಇದನ್ನೂ ಓದಿ : ಕಿರುಕುಳ ಕೊಡಬೇಡಿ ಎಂದು ಎಬಿವಿಪಿ ಕಾರ್ಯಕರ್ತರನ್ನು ಬೇಡಿದ ಉಪನ್ಯಾಸಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...