Homeಮುಖಪುಟನಿಯಂತ್ರಣಕ್ಕೆ ಬಾರದ ಕಾಡ್ಗಿಚ್ಚು : ಕಾಡು-ನಾಡು ಸುಟ್ಟು ಭಸ್ಮ ; ನಿರಾಶ್ರಿತರಾದ ಲಕ್ಷಾಂತರ ಜೀವಗಳು

ನಿಯಂತ್ರಣಕ್ಕೆ ಬಾರದ ಕಾಡ್ಗಿಚ್ಚು : ಕಾಡು-ನಾಡು ಸುಟ್ಟು ಭಸ್ಮ ; ನಿರಾಶ್ರಿತರಾದ ಲಕ್ಷಾಂತರ ಜೀವಗಳು

- Advertisement -
- Advertisement -

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ದಕ್ಷಿಣ ಭಾಗದ ನಗರವಾದ ಲಾಸ್‌ ಏಂಜಲೀಸ್‌ನಲ್ಲಿ ಉಂಟಾಗಿರುವ ಕಾಡ್ಗಿಚ್ಚು ನಾಲ್ಕು ದಿನ ಕಳೆದರೂ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದ ಕಾಡು-ನಾಡು ಸುಟ್ಟು ಭಸ್ಮವಾಗಿದ್ದು, ಹೊಸ ವರ್ಷದ ಆರಂಭ ಮಹಾ ದುರಂತಕ್ಕೆ ಸಾಕ್ಷಿಯಾಗಿದೆ.

ಕಳೆದ ಮಂಗಳವಾರದಿಂದ (ಜ.7) ಹೊತ್ತಿ ಉರಿಯುತ್ತಿರುವ ಬೆಂಕಿ, ಗಂಟೆ ಗಂಟೆಗೂ ಹೊಸ ಪ್ರದೇಶಗಳನ್ನು ಆವರಿಸಿಕೊಂಡು ಮುನ್ನುಗ್ಗುತ್ತಿದೆ. ಇದರಿಂದ ಜನರ ಮನೆ, ವ್ಯವಹಾರ ಸಂಸ್ಥೆಗಳು ಸೇರಿದಂತೆ ಸಾವಿರಾರು ಕಟ್ಟಡಗಳು ಸುಟ್ಟು ಭಸ್ಮವಾದರೆ, ವನ್ಯ ಜೀವಿಗಳು ತಮ್ಮ ನೆಲೆಯನ್ನು ಕಳೆದುಕೊಂಡಿದೆ. ಈ ಮೂಲಕ ಲಕ್ಷಾಂತರ ಜೀವಗಳು ನಿರಾಶ್ರಿತರಾಗಿದ್ದಾರೆ.

ವರದಿಗಳ ಪ್ರಕಾರ, ನಿನ್ನೆ ಜ.9, ಗುರುವಾರ) ಕಾಡ್ಗಿಚ್ಚಿಗೆ ಬಲಿಯಾದವರ ಸಂಖ್ಯೆ 5 ಆಗಿತ್ತು. ಅದು ಇಂದು (ಜ.10, ಶುಕ್ರವಾರ) 8ಕ್ಕೆ ಏರಿಕೆಯಾಗಿದೆ. ಸುಮಾರು 1 ಲಕ್ಷದಷ್ಟು ಜನರನ್ನು ಸ್ಥಳಾಂತರ ಮಾಡಿರುವ ಕ್ಯಾಲಿಫೋರ್ನಿಯಾ ರಾಜ್ಯ ಸರ್ಕಾರ, ತುರ್ತು ಪರಿಸ್ಥಿತಿ ಘೋಷಿಸಿದೆ. ವನ್ಯ ಜೀವಿಗಳ ಸಾವು-ನೋವಿನ ಕುರಿತು ಮಾಹಿತಿ ದೊರೆತಿಲ್ಲ. ಅವುಗಳ ರಕ್ಷಣಾ ಕಾರ್ಯ ನಡೆದಿರುವ ಬಗ್ಗೆಯೂ ವರದಿ ಲಭ್ಯವಾಗಿಲ್ಲ.

‘ಸಾಂತಾ ಅನಾ’ ಎಂದು ಕರೆಯಲ್ಪಡುವ ಬಲವಾದ ಒಣ ಗಾಳಿಯು ಬೆಂಕಿಯ ಕೆನ್ನಾಗಲಿಗೆಯನ್ನು ವಿಸ್ತರಣೆ ಮಾಡುತ್ತಿದೆ. ಈ ಗಾಳಿಯೇ ಬೆಂಕಿ ನಂದಿಸಲು ಅಡ್ಡಿಯಾಗಿದೆ. ಸುಮಾರು 8 ಸಾವಿರ ರಕ್ಷಣಾ ಸಿಬ್ಬಂದಿ ಅಗ್ನಿಶಾಮಕ ವಾಹನಗಳು, ಹೆಲಿಕಾಫ್ಟರ್ ಸೇರಿದಂತೆ ವಿವಿಧ ರೀತಿಯಲ್ಲಿ ನಿರಂತರ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಈ ನಡುವೆ ಕೊಂಚ ನೀರಿನ ಕೊರೆತೆಯೂ ಎದುರಾಗಿದೆ.

ಲಾಸ್‌ ಏಂಜಲೀಸ್‌ನ ಪೆಸಿಫಿಕ್‌ ಪ್ಯಾಲಿಸೈಡ್ಸ್‌, ಪ್ಯಾಸಡೀನಾದ ಈಟನ್‌ ಕೆಯಾನ್‌, ಹಾಲಿವುಡ್‌ ಹಿಲ್ಸ್‌, ಲಿಡಿಯಾ ಪ್ರದೇಶ ವ್ಯಾಪ್ತಿಯಲ್ಲಿ ಗುರುವಾರ ಕಾಡ್ಗಿಚ್ಚು ಹೊತ್ತಿಕೊಂಡಿದೆ. ಇದರ ಪರಿಣಾಮ ಹಾಲಿವುಡ್‌ ಹಿಲ್ಸ್‌ನಲ್ಲಿ ನೆಲೆಸಿರುವ ಕೋಟಿ ಕೋಟಿ ವೆಚ್ಚದ ಹಾಲಿವುಡ್‌ನ ಹಲವು ಸಿನಿ ತಾರೆಯರ ಮನೆಗಳು ಸುಟ್ಟು ಭಸ್ಮವಾಗಿವೆ. ನೂರಾರು ಸಿನಿ ತಾರೆಯರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಹಾಗೇ ಹಾಲಿವುಡ್‌ ಸಿನಿ ರಂಗದ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ ಎಂದು ವರದಿಗಳು ಹೇಳಿವೆ.

ಹಾಲಿವುಡ್ ತಾರೆಯರಾದ ನಟ ಪ್ಯಾರಿಸ್ ಹಿಲ್ಟನ್, ಆಸ್ಕರ್ ವಿಜೇತ ನಟ ಆ್ಯಂಟನಿ ಹಾಪ್ಕಿನ್ಸ್, ಮತ್ತೊಬ್ಬ ಆಸ್ಕರ್ ವಿಜೇತ ನಟ ಜೆಫ್ ಬ್ರಿಡ್ಜಸ್, ನಟ ಬಿಲ್ಲಿ ಕ್ರಿಸ್ಟಲ್, ‘ಅಮೆರಿಕನ್ ಪೈ’ ನಟ ಯುಜಿನ್ ಲೆವಿ, ‘ರೋಸಾನ್’ ಸಿನಿಮಾದ ನಟ ಜಾನ್ ಗುಡ್‌ಮನ್, ‘ಸ್ಟಾರ್ ವಾರ್ಸ್’ ಚಿತ್ರದ ನಟ ಮಾರ್ಕ್ ಹ್ಯಾಮಿಲ್, ಇತರ ನಟರಾದ ಜೆನ್ನಿಫರ್ ಗ್ರೆ, ಕ್ಯಾರಿ ಎಲ್ವೆಸ್, ಆ್ಯಡಂ ಬ್ರೋಡಿ ಸೇರಿದಂತೆ ಹಲವರ ಮನೆ ಕಟ್ಟಡಗಳು ಬೆಂಕಿಗಾಹುತಿಯಾಗಿವೆ. ಇವರೆಲ್ಲರೂ ಕಣ್ಣೀರು ಹಾಕಿದ್ದಾರೆ ಎಂದು ವರದಿಯಾಗಿದೆ.

ನಿರಂತರ ಹೊತ್ತಿ ಉರಿಯುತ್ತಿರುವ ಬೆಂಕಿಯಿಂದ ಲಾಸ್‌ ಏಂಜಲೀಸ್‌ನಲ್ಲಿ ಆಕಾಶವೇ ಕಿತ್ತಲೆ ಬಣ್ಣಕ್ಕೆ ತಿರುಗಿದೆ ಎಂದು ದುರಂತದ ಭೀಕರತೆಯನ್ನು ವರದಿಗಳು ಬಣ್ಣಿಸಿದೆ.

ಇದನ್ನೂ ಓದಿ : ಕಿರುಕುಳ ಕೊಡಬೇಡಿ ಎಂದು ಎಬಿವಿಪಿ ಕಾರ್ಯಕರ್ತರನ್ನು ಬೇಡಿದ ಉಪನ್ಯಾಸಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...