Homeಮುಖಪುಟನಿಯಂತ್ರಣಕ್ಕೆ ಬಾರದ ಕಾಡ್ಗಿಚ್ಚು : ಕಾಡು-ನಾಡು ಸುಟ್ಟು ಭಸ್ಮ ; ನಿರಾಶ್ರಿತರಾದ ಲಕ್ಷಾಂತರ ಜೀವಗಳು

ನಿಯಂತ್ರಣಕ್ಕೆ ಬಾರದ ಕಾಡ್ಗಿಚ್ಚು : ಕಾಡು-ನಾಡು ಸುಟ್ಟು ಭಸ್ಮ ; ನಿರಾಶ್ರಿತರಾದ ಲಕ್ಷಾಂತರ ಜೀವಗಳು

- Advertisement -
- Advertisement -

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ದಕ್ಷಿಣ ಭಾಗದ ನಗರವಾದ ಲಾಸ್‌ ಏಂಜಲೀಸ್‌ನಲ್ಲಿ ಉಂಟಾಗಿರುವ ಕಾಡ್ಗಿಚ್ಚು ನಾಲ್ಕು ದಿನ ಕಳೆದರೂ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದ ಕಾಡು-ನಾಡು ಸುಟ್ಟು ಭಸ್ಮವಾಗಿದ್ದು, ಹೊಸ ವರ್ಷದ ಆರಂಭ ಮಹಾ ದುರಂತಕ್ಕೆ ಸಾಕ್ಷಿಯಾಗಿದೆ.

ಕಳೆದ ಮಂಗಳವಾರದಿಂದ (ಜ.7) ಹೊತ್ತಿ ಉರಿಯುತ್ತಿರುವ ಬೆಂಕಿ, ಗಂಟೆ ಗಂಟೆಗೂ ಹೊಸ ಪ್ರದೇಶಗಳನ್ನು ಆವರಿಸಿಕೊಂಡು ಮುನ್ನುಗ್ಗುತ್ತಿದೆ. ಇದರಿಂದ ಜನರ ಮನೆ, ವ್ಯವಹಾರ ಸಂಸ್ಥೆಗಳು ಸೇರಿದಂತೆ ಸಾವಿರಾರು ಕಟ್ಟಡಗಳು ಸುಟ್ಟು ಭಸ್ಮವಾದರೆ, ವನ್ಯ ಜೀವಿಗಳು ತಮ್ಮ ನೆಲೆಯನ್ನು ಕಳೆದುಕೊಂಡಿದೆ. ಈ ಮೂಲಕ ಲಕ್ಷಾಂತರ ಜೀವಗಳು ನಿರಾಶ್ರಿತರಾಗಿದ್ದಾರೆ.

ವರದಿಗಳ ಪ್ರಕಾರ, ನಿನ್ನೆ ಜ.9, ಗುರುವಾರ) ಕಾಡ್ಗಿಚ್ಚಿಗೆ ಬಲಿಯಾದವರ ಸಂಖ್ಯೆ 5 ಆಗಿತ್ತು. ಅದು ಇಂದು (ಜ.10, ಶುಕ್ರವಾರ) 8ಕ್ಕೆ ಏರಿಕೆಯಾಗಿದೆ. ಸುಮಾರು 1 ಲಕ್ಷದಷ್ಟು ಜನರನ್ನು ಸ್ಥಳಾಂತರ ಮಾಡಿರುವ ಕ್ಯಾಲಿಫೋರ್ನಿಯಾ ರಾಜ್ಯ ಸರ್ಕಾರ, ತುರ್ತು ಪರಿಸ್ಥಿತಿ ಘೋಷಿಸಿದೆ. ವನ್ಯ ಜೀವಿಗಳ ಸಾವು-ನೋವಿನ ಕುರಿತು ಮಾಹಿತಿ ದೊರೆತಿಲ್ಲ. ಅವುಗಳ ರಕ್ಷಣಾ ಕಾರ್ಯ ನಡೆದಿರುವ ಬಗ್ಗೆಯೂ ವರದಿ ಲಭ್ಯವಾಗಿಲ್ಲ.

‘ಸಾಂತಾ ಅನಾ’ ಎಂದು ಕರೆಯಲ್ಪಡುವ ಬಲವಾದ ಒಣ ಗಾಳಿಯು ಬೆಂಕಿಯ ಕೆನ್ನಾಗಲಿಗೆಯನ್ನು ವಿಸ್ತರಣೆ ಮಾಡುತ್ತಿದೆ. ಈ ಗಾಳಿಯೇ ಬೆಂಕಿ ನಂದಿಸಲು ಅಡ್ಡಿಯಾಗಿದೆ. ಸುಮಾರು 8 ಸಾವಿರ ರಕ್ಷಣಾ ಸಿಬ್ಬಂದಿ ಅಗ್ನಿಶಾಮಕ ವಾಹನಗಳು, ಹೆಲಿಕಾಫ್ಟರ್ ಸೇರಿದಂತೆ ವಿವಿಧ ರೀತಿಯಲ್ಲಿ ನಿರಂತರ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಈ ನಡುವೆ ಕೊಂಚ ನೀರಿನ ಕೊರೆತೆಯೂ ಎದುರಾಗಿದೆ.

ಲಾಸ್‌ ಏಂಜಲೀಸ್‌ನ ಪೆಸಿಫಿಕ್‌ ಪ್ಯಾಲಿಸೈಡ್ಸ್‌, ಪ್ಯಾಸಡೀನಾದ ಈಟನ್‌ ಕೆಯಾನ್‌, ಹಾಲಿವುಡ್‌ ಹಿಲ್ಸ್‌, ಲಿಡಿಯಾ ಪ್ರದೇಶ ವ್ಯಾಪ್ತಿಯಲ್ಲಿ ಗುರುವಾರ ಕಾಡ್ಗಿಚ್ಚು ಹೊತ್ತಿಕೊಂಡಿದೆ. ಇದರ ಪರಿಣಾಮ ಹಾಲಿವುಡ್‌ ಹಿಲ್ಸ್‌ನಲ್ಲಿ ನೆಲೆಸಿರುವ ಕೋಟಿ ಕೋಟಿ ವೆಚ್ಚದ ಹಾಲಿವುಡ್‌ನ ಹಲವು ಸಿನಿ ತಾರೆಯರ ಮನೆಗಳು ಸುಟ್ಟು ಭಸ್ಮವಾಗಿವೆ. ನೂರಾರು ಸಿನಿ ತಾರೆಯರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಹಾಗೇ ಹಾಲಿವುಡ್‌ ಸಿನಿ ರಂಗದ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ ಎಂದು ವರದಿಗಳು ಹೇಳಿವೆ.

ಹಾಲಿವುಡ್ ತಾರೆಯರಾದ ನಟ ಪ್ಯಾರಿಸ್ ಹಿಲ್ಟನ್, ಆಸ್ಕರ್ ವಿಜೇತ ನಟ ಆ್ಯಂಟನಿ ಹಾಪ್ಕಿನ್ಸ್, ಮತ್ತೊಬ್ಬ ಆಸ್ಕರ್ ವಿಜೇತ ನಟ ಜೆಫ್ ಬ್ರಿಡ್ಜಸ್, ನಟ ಬಿಲ್ಲಿ ಕ್ರಿಸ್ಟಲ್, ‘ಅಮೆರಿಕನ್ ಪೈ’ ನಟ ಯುಜಿನ್ ಲೆವಿ, ‘ರೋಸಾನ್’ ಸಿನಿಮಾದ ನಟ ಜಾನ್ ಗುಡ್‌ಮನ್, ‘ಸ್ಟಾರ್ ವಾರ್ಸ್’ ಚಿತ್ರದ ನಟ ಮಾರ್ಕ್ ಹ್ಯಾಮಿಲ್, ಇತರ ನಟರಾದ ಜೆನ್ನಿಫರ್ ಗ್ರೆ, ಕ್ಯಾರಿ ಎಲ್ವೆಸ್, ಆ್ಯಡಂ ಬ್ರೋಡಿ ಸೇರಿದಂತೆ ಹಲವರ ಮನೆ ಕಟ್ಟಡಗಳು ಬೆಂಕಿಗಾಹುತಿಯಾಗಿವೆ. ಇವರೆಲ್ಲರೂ ಕಣ್ಣೀರು ಹಾಕಿದ್ದಾರೆ ಎಂದು ವರದಿಯಾಗಿದೆ.

ನಿರಂತರ ಹೊತ್ತಿ ಉರಿಯುತ್ತಿರುವ ಬೆಂಕಿಯಿಂದ ಲಾಸ್‌ ಏಂಜಲೀಸ್‌ನಲ್ಲಿ ಆಕಾಶವೇ ಕಿತ್ತಲೆ ಬಣ್ಣಕ್ಕೆ ತಿರುಗಿದೆ ಎಂದು ದುರಂತದ ಭೀಕರತೆಯನ್ನು ವರದಿಗಳು ಬಣ್ಣಿಸಿದೆ.

ಇದನ್ನೂ ಓದಿ : ಕಿರುಕುಳ ಕೊಡಬೇಡಿ ಎಂದು ಎಬಿವಿಪಿ ಕಾರ್ಯಕರ್ತರನ್ನು ಬೇಡಿದ ಉಪನ್ಯಾಸಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...