Homeಮುಖಪುಟನಿಯಂತ್ರಣಕ್ಕೆ ಬಾರದ ಕಾಡ್ಗಿಚ್ಚು : ಕಾಡು-ನಾಡು ಸುಟ್ಟು ಭಸ್ಮ ; ನಿರಾಶ್ರಿತರಾದ ಲಕ್ಷಾಂತರ ಜೀವಗಳು

ನಿಯಂತ್ರಣಕ್ಕೆ ಬಾರದ ಕಾಡ್ಗಿಚ್ಚು : ಕಾಡು-ನಾಡು ಸುಟ್ಟು ಭಸ್ಮ ; ನಿರಾಶ್ರಿತರಾದ ಲಕ್ಷಾಂತರ ಜೀವಗಳು

- Advertisement -
- Advertisement -

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ದಕ್ಷಿಣ ಭಾಗದ ನಗರವಾದ ಲಾಸ್‌ ಏಂಜಲೀಸ್‌ನಲ್ಲಿ ಉಂಟಾಗಿರುವ ಕಾಡ್ಗಿಚ್ಚು ನಾಲ್ಕು ದಿನ ಕಳೆದರೂ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದ ಕಾಡು-ನಾಡು ಸುಟ್ಟು ಭಸ್ಮವಾಗಿದ್ದು, ಹೊಸ ವರ್ಷದ ಆರಂಭ ಮಹಾ ದುರಂತಕ್ಕೆ ಸಾಕ್ಷಿಯಾಗಿದೆ.

ಕಳೆದ ಮಂಗಳವಾರದಿಂದ (ಜ.7) ಹೊತ್ತಿ ಉರಿಯುತ್ತಿರುವ ಬೆಂಕಿ, ಗಂಟೆ ಗಂಟೆಗೂ ಹೊಸ ಪ್ರದೇಶಗಳನ್ನು ಆವರಿಸಿಕೊಂಡು ಮುನ್ನುಗ್ಗುತ್ತಿದೆ. ಇದರಿಂದ ಜನರ ಮನೆ, ವ್ಯವಹಾರ ಸಂಸ್ಥೆಗಳು ಸೇರಿದಂತೆ ಸಾವಿರಾರು ಕಟ್ಟಡಗಳು ಸುಟ್ಟು ಭಸ್ಮವಾದರೆ, ವನ್ಯ ಜೀವಿಗಳು ತಮ್ಮ ನೆಲೆಯನ್ನು ಕಳೆದುಕೊಂಡಿದೆ. ಈ ಮೂಲಕ ಲಕ್ಷಾಂತರ ಜೀವಗಳು ನಿರಾಶ್ರಿತರಾಗಿದ್ದಾರೆ.

ವರದಿಗಳ ಪ್ರಕಾರ, ನಿನ್ನೆ ಜ.9, ಗುರುವಾರ) ಕಾಡ್ಗಿಚ್ಚಿಗೆ ಬಲಿಯಾದವರ ಸಂಖ್ಯೆ 5 ಆಗಿತ್ತು. ಅದು ಇಂದು (ಜ.10, ಶುಕ್ರವಾರ) 8ಕ್ಕೆ ಏರಿಕೆಯಾಗಿದೆ. ಸುಮಾರು 1 ಲಕ್ಷದಷ್ಟು ಜನರನ್ನು ಸ್ಥಳಾಂತರ ಮಾಡಿರುವ ಕ್ಯಾಲಿಫೋರ್ನಿಯಾ ರಾಜ್ಯ ಸರ್ಕಾರ, ತುರ್ತು ಪರಿಸ್ಥಿತಿ ಘೋಷಿಸಿದೆ. ವನ್ಯ ಜೀವಿಗಳ ಸಾವು-ನೋವಿನ ಕುರಿತು ಮಾಹಿತಿ ದೊರೆತಿಲ್ಲ. ಅವುಗಳ ರಕ್ಷಣಾ ಕಾರ್ಯ ನಡೆದಿರುವ ಬಗ್ಗೆಯೂ ವರದಿ ಲಭ್ಯವಾಗಿಲ್ಲ.

‘ಸಾಂತಾ ಅನಾ’ ಎಂದು ಕರೆಯಲ್ಪಡುವ ಬಲವಾದ ಒಣ ಗಾಳಿಯು ಬೆಂಕಿಯ ಕೆನ್ನಾಗಲಿಗೆಯನ್ನು ವಿಸ್ತರಣೆ ಮಾಡುತ್ತಿದೆ. ಈ ಗಾಳಿಯೇ ಬೆಂಕಿ ನಂದಿಸಲು ಅಡ್ಡಿಯಾಗಿದೆ. ಸುಮಾರು 8 ಸಾವಿರ ರಕ್ಷಣಾ ಸಿಬ್ಬಂದಿ ಅಗ್ನಿಶಾಮಕ ವಾಹನಗಳು, ಹೆಲಿಕಾಫ್ಟರ್ ಸೇರಿದಂತೆ ವಿವಿಧ ರೀತಿಯಲ್ಲಿ ನಿರಂತರ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಈ ನಡುವೆ ಕೊಂಚ ನೀರಿನ ಕೊರೆತೆಯೂ ಎದುರಾಗಿದೆ.

ಲಾಸ್‌ ಏಂಜಲೀಸ್‌ನ ಪೆಸಿಫಿಕ್‌ ಪ್ಯಾಲಿಸೈಡ್ಸ್‌, ಪ್ಯಾಸಡೀನಾದ ಈಟನ್‌ ಕೆಯಾನ್‌, ಹಾಲಿವುಡ್‌ ಹಿಲ್ಸ್‌, ಲಿಡಿಯಾ ಪ್ರದೇಶ ವ್ಯಾಪ್ತಿಯಲ್ಲಿ ಗುರುವಾರ ಕಾಡ್ಗಿಚ್ಚು ಹೊತ್ತಿಕೊಂಡಿದೆ. ಇದರ ಪರಿಣಾಮ ಹಾಲಿವುಡ್‌ ಹಿಲ್ಸ್‌ನಲ್ಲಿ ನೆಲೆಸಿರುವ ಕೋಟಿ ಕೋಟಿ ವೆಚ್ಚದ ಹಾಲಿವುಡ್‌ನ ಹಲವು ಸಿನಿ ತಾರೆಯರ ಮನೆಗಳು ಸುಟ್ಟು ಭಸ್ಮವಾಗಿವೆ. ನೂರಾರು ಸಿನಿ ತಾರೆಯರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಹಾಗೇ ಹಾಲಿವುಡ್‌ ಸಿನಿ ರಂಗದ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ ಎಂದು ವರದಿಗಳು ಹೇಳಿವೆ.

ಹಾಲಿವುಡ್ ತಾರೆಯರಾದ ನಟ ಪ್ಯಾರಿಸ್ ಹಿಲ್ಟನ್, ಆಸ್ಕರ್ ವಿಜೇತ ನಟ ಆ್ಯಂಟನಿ ಹಾಪ್ಕಿನ್ಸ್, ಮತ್ತೊಬ್ಬ ಆಸ್ಕರ್ ವಿಜೇತ ನಟ ಜೆಫ್ ಬ್ರಿಡ್ಜಸ್, ನಟ ಬಿಲ್ಲಿ ಕ್ರಿಸ್ಟಲ್, ‘ಅಮೆರಿಕನ್ ಪೈ’ ನಟ ಯುಜಿನ್ ಲೆವಿ, ‘ರೋಸಾನ್’ ಸಿನಿಮಾದ ನಟ ಜಾನ್ ಗುಡ್‌ಮನ್, ‘ಸ್ಟಾರ್ ವಾರ್ಸ್’ ಚಿತ್ರದ ನಟ ಮಾರ್ಕ್ ಹ್ಯಾಮಿಲ್, ಇತರ ನಟರಾದ ಜೆನ್ನಿಫರ್ ಗ್ರೆ, ಕ್ಯಾರಿ ಎಲ್ವೆಸ್, ಆ್ಯಡಂ ಬ್ರೋಡಿ ಸೇರಿದಂತೆ ಹಲವರ ಮನೆ ಕಟ್ಟಡಗಳು ಬೆಂಕಿಗಾಹುತಿಯಾಗಿವೆ. ಇವರೆಲ್ಲರೂ ಕಣ್ಣೀರು ಹಾಕಿದ್ದಾರೆ ಎಂದು ವರದಿಯಾಗಿದೆ.

ನಿರಂತರ ಹೊತ್ತಿ ಉರಿಯುತ್ತಿರುವ ಬೆಂಕಿಯಿಂದ ಲಾಸ್‌ ಏಂಜಲೀಸ್‌ನಲ್ಲಿ ಆಕಾಶವೇ ಕಿತ್ತಲೆ ಬಣ್ಣಕ್ಕೆ ತಿರುಗಿದೆ ಎಂದು ದುರಂತದ ಭೀಕರತೆಯನ್ನು ವರದಿಗಳು ಬಣ್ಣಿಸಿದೆ.

ಇದನ್ನೂ ಓದಿ : ಕಿರುಕುಳ ಕೊಡಬೇಡಿ ಎಂದು ಎಬಿವಿಪಿ ಕಾರ್ಯಕರ್ತರನ್ನು ಬೇಡಿದ ಉಪನ್ಯಾಸಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...