Homeಮುಖಪುಟನಿಯಂತ್ರಣಕ್ಕೆ ಬಾರದ ಕಾಡ್ಗಿಚ್ಚು : ಕಾಡು-ನಾಡು ಸುಟ್ಟು ಭಸ್ಮ ; ನಿರಾಶ್ರಿತರಾದ ಲಕ್ಷಾಂತರ ಜೀವಗಳು

ನಿಯಂತ್ರಣಕ್ಕೆ ಬಾರದ ಕಾಡ್ಗಿಚ್ಚು : ಕಾಡು-ನಾಡು ಸುಟ್ಟು ಭಸ್ಮ ; ನಿರಾಶ್ರಿತರಾದ ಲಕ್ಷಾಂತರ ಜೀವಗಳು

- Advertisement -
- Advertisement -

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ದಕ್ಷಿಣ ಭಾಗದ ನಗರವಾದ ಲಾಸ್‌ ಏಂಜಲೀಸ್‌ನಲ್ಲಿ ಉಂಟಾಗಿರುವ ಕಾಡ್ಗಿಚ್ಚು ನಾಲ್ಕು ದಿನ ಕಳೆದರೂ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದ ಕಾಡು-ನಾಡು ಸುಟ್ಟು ಭಸ್ಮವಾಗಿದ್ದು, ಹೊಸ ವರ್ಷದ ಆರಂಭ ಮಹಾ ದುರಂತಕ್ಕೆ ಸಾಕ್ಷಿಯಾಗಿದೆ.

ಕಳೆದ ಮಂಗಳವಾರದಿಂದ (ಜ.7) ಹೊತ್ತಿ ಉರಿಯುತ್ತಿರುವ ಬೆಂಕಿ, ಗಂಟೆ ಗಂಟೆಗೂ ಹೊಸ ಪ್ರದೇಶಗಳನ್ನು ಆವರಿಸಿಕೊಂಡು ಮುನ್ನುಗ್ಗುತ್ತಿದೆ. ಇದರಿಂದ ಜನರ ಮನೆ, ವ್ಯವಹಾರ ಸಂಸ್ಥೆಗಳು ಸೇರಿದಂತೆ ಸಾವಿರಾರು ಕಟ್ಟಡಗಳು ಸುಟ್ಟು ಭಸ್ಮವಾದರೆ, ವನ್ಯ ಜೀವಿಗಳು ತಮ್ಮ ನೆಲೆಯನ್ನು ಕಳೆದುಕೊಂಡಿದೆ. ಈ ಮೂಲಕ ಲಕ್ಷಾಂತರ ಜೀವಗಳು ನಿರಾಶ್ರಿತರಾಗಿದ್ದಾರೆ.

ವರದಿಗಳ ಪ್ರಕಾರ, ನಿನ್ನೆ ಜ.9, ಗುರುವಾರ) ಕಾಡ್ಗಿಚ್ಚಿಗೆ ಬಲಿಯಾದವರ ಸಂಖ್ಯೆ 5 ಆಗಿತ್ತು. ಅದು ಇಂದು (ಜ.10, ಶುಕ್ರವಾರ) 8ಕ್ಕೆ ಏರಿಕೆಯಾಗಿದೆ. ಸುಮಾರು 1 ಲಕ್ಷದಷ್ಟು ಜನರನ್ನು ಸ್ಥಳಾಂತರ ಮಾಡಿರುವ ಕ್ಯಾಲಿಫೋರ್ನಿಯಾ ರಾಜ್ಯ ಸರ್ಕಾರ, ತುರ್ತು ಪರಿಸ್ಥಿತಿ ಘೋಷಿಸಿದೆ. ವನ್ಯ ಜೀವಿಗಳ ಸಾವು-ನೋವಿನ ಕುರಿತು ಮಾಹಿತಿ ದೊರೆತಿಲ್ಲ. ಅವುಗಳ ರಕ್ಷಣಾ ಕಾರ್ಯ ನಡೆದಿರುವ ಬಗ್ಗೆಯೂ ವರದಿ ಲಭ್ಯವಾಗಿಲ್ಲ.

‘ಸಾಂತಾ ಅನಾ’ ಎಂದು ಕರೆಯಲ್ಪಡುವ ಬಲವಾದ ಒಣ ಗಾಳಿಯು ಬೆಂಕಿಯ ಕೆನ್ನಾಗಲಿಗೆಯನ್ನು ವಿಸ್ತರಣೆ ಮಾಡುತ್ತಿದೆ. ಈ ಗಾಳಿಯೇ ಬೆಂಕಿ ನಂದಿಸಲು ಅಡ್ಡಿಯಾಗಿದೆ. ಸುಮಾರು 8 ಸಾವಿರ ರಕ್ಷಣಾ ಸಿಬ್ಬಂದಿ ಅಗ್ನಿಶಾಮಕ ವಾಹನಗಳು, ಹೆಲಿಕಾಫ್ಟರ್ ಸೇರಿದಂತೆ ವಿವಿಧ ರೀತಿಯಲ್ಲಿ ನಿರಂತರ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಈ ನಡುವೆ ಕೊಂಚ ನೀರಿನ ಕೊರೆತೆಯೂ ಎದುರಾಗಿದೆ.

ಲಾಸ್‌ ಏಂಜಲೀಸ್‌ನ ಪೆಸಿಫಿಕ್‌ ಪ್ಯಾಲಿಸೈಡ್ಸ್‌, ಪ್ಯಾಸಡೀನಾದ ಈಟನ್‌ ಕೆಯಾನ್‌, ಹಾಲಿವುಡ್‌ ಹಿಲ್ಸ್‌, ಲಿಡಿಯಾ ಪ್ರದೇಶ ವ್ಯಾಪ್ತಿಯಲ್ಲಿ ಗುರುವಾರ ಕಾಡ್ಗಿಚ್ಚು ಹೊತ್ತಿಕೊಂಡಿದೆ. ಇದರ ಪರಿಣಾಮ ಹಾಲಿವುಡ್‌ ಹಿಲ್ಸ್‌ನಲ್ಲಿ ನೆಲೆಸಿರುವ ಕೋಟಿ ಕೋಟಿ ವೆಚ್ಚದ ಹಾಲಿವುಡ್‌ನ ಹಲವು ಸಿನಿ ತಾರೆಯರ ಮನೆಗಳು ಸುಟ್ಟು ಭಸ್ಮವಾಗಿವೆ. ನೂರಾರು ಸಿನಿ ತಾರೆಯರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಹಾಗೇ ಹಾಲಿವುಡ್‌ ಸಿನಿ ರಂಗದ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ ಎಂದು ವರದಿಗಳು ಹೇಳಿವೆ.

ಹಾಲಿವುಡ್ ತಾರೆಯರಾದ ನಟ ಪ್ಯಾರಿಸ್ ಹಿಲ್ಟನ್, ಆಸ್ಕರ್ ವಿಜೇತ ನಟ ಆ್ಯಂಟನಿ ಹಾಪ್ಕಿನ್ಸ್, ಮತ್ತೊಬ್ಬ ಆಸ್ಕರ್ ವಿಜೇತ ನಟ ಜೆಫ್ ಬ್ರಿಡ್ಜಸ್, ನಟ ಬಿಲ್ಲಿ ಕ್ರಿಸ್ಟಲ್, ‘ಅಮೆರಿಕನ್ ಪೈ’ ನಟ ಯುಜಿನ್ ಲೆವಿ, ‘ರೋಸಾನ್’ ಸಿನಿಮಾದ ನಟ ಜಾನ್ ಗುಡ್‌ಮನ್, ‘ಸ್ಟಾರ್ ವಾರ್ಸ್’ ಚಿತ್ರದ ನಟ ಮಾರ್ಕ್ ಹ್ಯಾಮಿಲ್, ಇತರ ನಟರಾದ ಜೆನ್ನಿಫರ್ ಗ್ರೆ, ಕ್ಯಾರಿ ಎಲ್ವೆಸ್, ಆ್ಯಡಂ ಬ್ರೋಡಿ ಸೇರಿದಂತೆ ಹಲವರ ಮನೆ ಕಟ್ಟಡಗಳು ಬೆಂಕಿಗಾಹುತಿಯಾಗಿವೆ. ಇವರೆಲ್ಲರೂ ಕಣ್ಣೀರು ಹಾಕಿದ್ದಾರೆ ಎಂದು ವರದಿಯಾಗಿದೆ.

ನಿರಂತರ ಹೊತ್ತಿ ಉರಿಯುತ್ತಿರುವ ಬೆಂಕಿಯಿಂದ ಲಾಸ್‌ ಏಂಜಲೀಸ್‌ನಲ್ಲಿ ಆಕಾಶವೇ ಕಿತ್ತಲೆ ಬಣ್ಣಕ್ಕೆ ತಿರುಗಿದೆ ಎಂದು ದುರಂತದ ಭೀಕರತೆಯನ್ನು ವರದಿಗಳು ಬಣ್ಣಿಸಿದೆ.

ಇದನ್ನೂ ಓದಿ : ಕಿರುಕುಳ ಕೊಡಬೇಡಿ ಎಂದು ಎಬಿವಿಪಿ ಕಾರ್ಯಕರ್ತರನ್ನು ಬೇಡಿದ ಉಪನ್ಯಾಸಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...