Homeಮುಖಪುಟನಷ್ಟದ ಜೊತೆಗೆ ಲಾಕ್‌ಡೌನ್‌ ಎಫೆಕ್ಟ್‌: TV5 ನಿಂದ 100ಕ್ಕೂ ಹೆಚ್ಚು ಪತ್ರಕರ್ತರು ಹೊರಕ್ಕೆ

ನಷ್ಟದ ಜೊತೆಗೆ ಲಾಕ್‌ಡೌನ್‌ ಎಫೆಕ್ಟ್‌: TV5 ನಿಂದ 100ಕ್ಕೂ ಹೆಚ್ಚು ಪತ್ರಕರ್ತರು ಹೊರಕ್ಕೆ

ಎರಡು ವರ್ಷದ ಹಿಂದೆ ಆರಂಭವಾಗಿದ್ದ ಸುದ್ದಿವಾಹಿನಿಗೆ ಸಿಎಓ ಅನಿಲ್‌ ಸಿಂಗ್‌, ಸಂಪಾದಕರಾದ‌ ಚೇತನ್‌ ಮತ್ತು ಡೆಸ್ಕ್‌ ಹೆಡ್‌ ಆಗಿದ್ದ ಸತೀಶ್ ರವರು‌ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ.

- Advertisement -
- Advertisement -

ಮೊದಲೇ ನಷ್ಟದಲ್ಲಿದ್ದ ಮತ್ತು ಲಾಕ್‌ಡೌನ್‌ ಎಫೆಕ್ಟ್‌ನಿಂದಾಗಿ ಬೃಹತ್‌ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕನ್ನಡದ TV5 ಚಾನೆಲ್‌ ತನ್ನ 100ಕ್ಕೂ ಹೆಚ್ಚು ಪತ್ರಕರ್ತರನ್ನು ಕೆಲಸದಿಂದ ತೆಗೆದುಹಾಕಿದೆ.

40 ಜನ ಜಿಲ್ಲಾ ವರದಿಗಾರರು ಮತ್ತು ಕ್ಯಾಮರಮನ್‌ಗಳು, ಬೆಂಗಳೂರಿನ 48 ಜನ ಸಿಬ್ಬಂದಿಗಳನ್ನು ಟಿವಿ5 ಕೆಲಸದಿಂದ ಕೈಬಿಟ್ಟಿದೆ. ಇವರಲ್ಲಿ ಬಹುತೇಕರು ಕೆಲಸಕ್ಕೆ ಸೇರಿದಾಗಿನಿಂದ ಇಲ್ಲಿಯವರೆಗೂ ವೇತನ ಬಡ್ತಿ ಸಿಕ್ಕಿರಲಿಲ್ಲ ಎಂದು ಆರೋಪಿಸಿದ್ದಾರೆ.

ಎರಡು ವರ್ಷದ ಹಿಂದೆ ಆರಂಭವಾಗಿದ್ದ TV5 ಸುದ್ದಿವಾಹಿನಿಗೆ ಸಿಎಓ ಅನಿಲ್‌ ಸಿಂಗ್‌, ಸಂಪಾದಕರಾದ‌ ಚೇತನ್‌ ಮತ್ತು ಡೆಸ್ಕ್‌ ಹೆಡ್‌ ಆಗಿದ್ದ ಸತೀಶ್ ರವರು‌ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ.

ವಾಹಿನಿಯ ಟಿಆರ್‌ಪಿ ಗಳಿಸಲು ಮತ್ತು ಲಾಭಗಳಿಸಲು ವಿಫಲವಾಗಿತ್ತು. ನಷ್ಟದಲ್ಲಿ ಇದನ್ನು ಮುಂದುವರೆಸಲು ಸಾಧ್ಯವಿಲ್ಲದೇ ಈ ಕ್ರಮ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಜಿಲ್ಲಾ ವರದಿಗಾರರು ಮತ್ತು ಕ್ಯಾಮರಮನ್‌ಗಳನ್ನೇ ಕೆಲಸದಿಂದ ತೆಗೆದಿರುವುದರಿಂದ ಚಾನೆಲ್‌ ಅನ್ನು ಮಾರಲಿದ್ದಾರೆ ಅಥವಾ ಮುಚ್ಚಲಿದ್ದಾರೆ ಎಂಬ ಗೊಂದಲಗಳು ಮೂಡಿವೆ. ಅಲ್ಲದೇ ಟಿವಿ5 ನ ವೆಬ್‌ ಎಡಿಷನ್‌ ಏಪ್ರಿಲ್‌ 20ರ ವರೆಗೆ ಮಾತ್ರ ಕೆಲಸ ನಿರ್ವಹಿಸಿದ್ದು ಅಂದಿನಿಂದ ಸ್ಥಗಿತಗೊಂಡಿದೆ.

ಟಿವಿ5 ಮಾತ್ರವಲ್ಲದೇ ಈಗಾಗಲೇ ಹಲವು ಪತ್ರಿಕೆಗಳು ಮತ್ತು ಚಾನೆಲ್‌ಗಳು ಆರ್ಥಿಕ ಸಂಕಷ್ಟದ ನೆಪವೊಡ್ಡಿ ಬಹಳಷ್ಟು ಸಿಬ್ಬಂದಿಗಳನ್ನು ತೆಗೆಯುವ ಪ್ರಕ್ರಿಯೆಗೆ ಚಾಲನೆ ನೀಡಿವೆ. ಇದು ಮುಂಬರುವ ಕರಾಳ ದಿನಗಳಿಗೆ ಉದಾಹರಣೆಯಾಗಿದೆ.


ಇದನ್ನೂ ಓದಿ: ಅರ್ನಾಬ್‌ ಗೋಸ್ವಾಮಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Officege bandu program heg hogbeku janakke yen beku yaav thara output kodbeku antha yaavobva boli maganu yochne maadillaaa.. Iddashtu dina yaav hotel alli biriyani chennagiruthe bere channel sari illaaa anthane kaala kaledru eeega nanna maathru samste kone usiralli horaaddtide

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...