Homeಮುಖಪುಟನಷ್ಟದ ಜೊತೆಗೆ ಲಾಕ್‌ಡೌನ್‌ ಎಫೆಕ್ಟ್‌: TV5 ನಿಂದ 100ಕ್ಕೂ ಹೆಚ್ಚು ಪತ್ರಕರ್ತರು ಹೊರಕ್ಕೆ

ನಷ್ಟದ ಜೊತೆಗೆ ಲಾಕ್‌ಡೌನ್‌ ಎಫೆಕ್ಟ್‌: TV5 ನಿಂದ 100ಕ್ಕೂ ಹೆಚ್ಚು ಪತ್ರಕರ್ತರು ಹೊರಕ್ಕೆ

ಎರಡು ವರ್ಷದ ಹಿಂದೆ ಆರಂಭವಾಗಿದ್ದ ಸುದ್ದಿವಾಹಿನಿಗೆ ಸಿಎಓ ಅನಿಲ್‌ ಸಿಂಗ್‌, ಸಂಪಾದಕರಾದ‌ ಚೇತನ್‌ ಮತ್ತು ಡೆಸ್ಕ್‌ ಹೆಡ್‌ ಆಗಿದ್ದ ಸತೀಶ್ ರವರು‌ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ.

- Advertisement -
- Advertisement -

ಮೊದಲೇ ನಷ್ಟದಲ್ಲಿದ್ದ ಮತ್ತು ಲಾಕ್‌ಡೌನ್‌ ಎಫೆಕ್ಟ್‌ನಿಂದಾಗಿ ಬೃಹತ್‌ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕನ್ನಡದ TV5 ಚಾನೆಲ್‌ ತನ್ನ 100ಕ್ಕೂ ಹೆಚ್ಚು ಪತ್ರಕರ್ತರನ್ನು ಕೆಲಸದಿಂದ ತೆಗೆದುಹಾಕಿದೆ.

40 ಜನ ಜಿಲ್ಲಾ ವರದಿಗಾರರು ಮತ್ತು ಕ್ಯಾಮರಮನ್‌ಗಳು, ಬೆಂಗಳೂರಿನ 48 ಜನ ಸಿಬ್ಬಂದಿಗಳನ್ನು ಟಿವಿ5 ಕೆಲಸದಿಂದ ಕೈಬಿಟ್ಟಿದೆ. ಇವರಲ್ಲಿ ಬಹುತೇಕರು ಕೆಲಸಕ್ಕೆ ಸೇರಿದಾಗಿನಿಂದ ಇಲ್ಲಿಯವರೆಗೂ ವೇತನ ಬಡ್ತಿ ಸಿಕ್ಕಿರಲಿಲ್ಲ ಎಂದು ಆರೋಪಿಸಿದ್ದಾರೆ.

ಎರಡು ವರ್ಷದ ಹಿಂದೆ ಆರಂಭವಾಗಿದ್ದ TV5 ಸುದ್ದಿವಾಹಿನಿಗೆ ಸಿಎಓ ಅನಿಲ್‌ ಸಿಂಗ್‌, ಸಂಪಾದಕರಾದ‌ ಚೇತನ್‌ ಮತ್ತು ಡೆಸ್ಕ್‌ ಹೆಡ್‌ ಆಗಿದ್ದ ಸತೀಶ್ ರವರು‌ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ.

ವಾಹಿನಿಯ ಟಿಆರ್‌ಪಿ ಗಳಿಸಲು ಮತ್ತು ಲಾಭಗಳಿಸಲು ವಿಫಲವಾಗಿತ್ತು. ನಷ್ಟದಲ್ಲಿ ಇದನ್ನು ಮುಂದುವರೆಸಲು ಸಾಧ್ಯವಿಲ್ಲದೇ ಈ ಕ್ರಮ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಜಿಲ್ಲಾ ವರದಿಗಾರರು ಮತ್ತು ಕ್ಯಾಮರಮನ್‌ಗಳನ್ನೇ ಕೆಲಸದಿಂದ ತೆಗೆದಿರುವುದರಿಂದ ಚಾನೆಲ್‌ ಅನ್ನು ಮಾರಲಿದ್ದಾರೆ ಅಥವಾ ಮುಚ್ಚಲಿದ್ದಾರೆ ಎಂಬ ಗೊಂದಲಗಳು ಮೂಡಿವೆ. ಅಲ್ಲದೇ ಟಿವಿ5 ನ ವೆಬ್‌ ಎಡಿಷನ್‌ ಏಪ್ರಿಲ್‌ 20ರ ವರೆಗೆ ಮಾತ್ರ ಕೆಲಸ ನಿರ್ವಹಿಸಿದ್ದು ಅಂದಿನಿಂದ ಸ್ಥಗಿತಗೊಂಡಿದೆ.

ಟಿವಿ5 ಮಾತ್ರವಲ್ಲದೇ ಈಗಾಗಲೇ ಹಲವು ಪತ್ರಿಕೆಗಳು ಮತ್ತು ಚಾನೆಲ್‌ಗಳು ಆರ್ಥಿಕ ಸಂಕಷ್ಟದ ನೆಪವೊಡ್ಡಿ ಬಹಳಷ್ಟು ಸಿಬ್ಬಂದಿಗಳನ್ನು ತೆಗೆಯುವ ಪ್ರಕ್ರಿಯೆಗೆ ಚಾಲನೆ ನೀಡಿವೆ. ಇದು ಮುಂಬರುವ ಕರಾಳ ದಿನಗಳಿಗೆ ಉದಾಹರಣೆಯಾಗಿದೆ.


ಇದನ್ನೂ ಓದಿ: ಅರ್ನಾಬ್‌ ಗೋಸ್ವಾಮಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Officege bandu program heg hogbeku janakke yen beku yaav thara output kodbeku antha yaavobva boli maganu yochne maadillaaa.. Iddashtu dina yaav hotel alli biriyani chennagiruthe bere channel sari illaaa anthane kaala kaledru eeega nanna maathru samste kone usiralli horaaddtide

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...