Homeಮುಖಪುಟನಷ್ಟದ ಜೊತೆಗೆ ಲಾಕ್‌ಡೌನ್‌ ಎಫೆಕ್ಟ್‌: TV5 ನಿಂದ 100ಕ್ಕೂ ಹೆಚ್ಚು ಪತ್ರಕರ್ತರು ಹೊರಕ್ಕೆ

ನಷ್ಟದ ಜೊತೆಗೆ ಲಾಕ್‌ಡೌನ್‌ ಎಫೆಕ್ಟ್‌: TV5 ನಿಂದ 100ಕ್ಕೂ ಹೆಚ್ಚು ಪತ್ರಕರ್ತರು ಹೊರಕ್ಕೆ

ಎರಡು ವರ್ಷದ ಹಿಂದೆ ಆರಂಭವಾಗಿದ್ದ ಸುದ್ದಿವಾಹಿನಿಗೆ ಸಿಎಓ ಅನಿಲ್‌ ಸಿಂಗ್‌, ಸಂಪಾದಕರಾದ‌ ಚೇತನ್‌ ಮತ್ತು ಡೆಸ್ಕ್‌ ಹೆಡ್‌ ಆಗಿದ್ದ ಸತೀಶ್ ರವರು‌ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ.

- Advertisement -
- Advertisement -

ಮೊದಲೇ ನಷ್ಟದಲ್ಲಿದ್ದ ಮತ್ತು ಲಾಕ್‌ಡೌನ್‌ ಎಫೆಕ್ಟ್‌ನಿಂದಾಗಿ ಬೃಹತ್‌ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕನ್ನಡದ TV5 ಚಾನೆಲ್‌ ತನ್ನ 100ಕ್ಕೂ ಹೆಚ್ಚು ಪತ್ರಕರ್ತರನ್ನು ಕೆಲಸದಿಂದ ತೆಗೆದುಹಾಕಿದೆ.

40 ಜನ ಜಿಲ್ಲಾ ವರದಿಗಾರರು ಮತ್ತು ಕ್ಯಾಮರಮನ್‌ಗಳು, ಬೆಂಗಳೂರಿನ 48 ಜನ ಸಿಬ್ಬಂದಿಗಳನ್ನು ಟಿವಿ5 ಕೆಲಸದಿಂದ ಕೈಬಿಟ್ಟಿದೆ. ಇವರಲ್ಲಿ ಬಹುತೇಕರು ಕೆಲಸಕ್ಕೆ ಸೇರಿದಾಗಿನಿಂದ ಇಲ್ಲಿಯವರೆಗೂ ವೇತನ ಬಡ್ತಿ ಸಿಕ್ಕಿರಲಿಲ್ಲ ಎಂದು ಆರೋಪಿಸಿದ್ದಾರೆ.

ಎರಡು ವರ್ಷದ ಹಿಂದೆ ಆರಂಭವಾಗಿದ್ದ TV5 ಸುದ್ದಿವಾಹಿನಿಗೆ ಸಿಎಓ ಅನಿಲ್‌ ಸಿಂಗ್‌, ಸಂಪಾದಕರಾದ‌ ಚೇತನ್‌ ಮತ್ತು ಡೆಸ್ಕ್‌ ಹೆಡ್‌ ಆಗಿದ್ದ ಸತೀಶ್ ರವರು‌ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ.

ವಾಹಿನಿಯ ಟಿಆರ್‌ಪಿ ಗಳಿಸಲು ಮತ್ತು ಲಾಭಗಳಿಸಲು ವಿಫಲವಾಗಿತ್ತು. ನಷ್ಟದಲ್ಲಿ ಇದನ್ನು ಮುಂದುವರೆಸಲು ಸಾಧ್ಯವಿಲ್ಲದೇ ಈ ಕ್ರಮ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಜಿಲ್ಲಾ ವರದಿಗಾರರು ಮತ್ತು ಕ್ಯಾಮರಮನ್‌ಗಳನ್ನೇ ಕೆಲಸದಿಂದ ತೆಗೆದಿರುವುದರಿಂದ ಚಾನೆಲ್‌ ಅನ್ನು ಮಾರಲಿದ್ದಾರೆ ಅಥವಾ ಮುಚ್ಚಲಿದ್ದಾರೆ ಎಂಬ ಗೊಂದಲಗಳು ಮೂಡಿವೆ. ಅಲ್ಲದೇ ಟಿವಿ5 ನ ವೆಬ್‌ ಎಡಿಷನ್‌ ಏಪ್ರಿಲ್‌ 20ರ ವರೆಗೆ ಮಾತ್ರ ಕೆಲಸ ನಿರ್ವಹಿಸಿದ್ದು ಅಂದಿನಿಂದ ಸ್ಥಗಿತಗೊಂಡಿದೆ.

ಟಿವಿ5 ಮಾತ್ರವಲ್ಲದೇ ಈಗಾಗಲೇ ಹಲವು ಪತ್ರಿಕೆಗಳು ಮತ್ತು ಚಾನೆಲ್‌ಗಳು ಆರ್ಥಿಕ ಸಂಕಷ್ಟದ ನೆಪವೊಡ್ಡಿ ಬಹಳಷ್ಟು ಸಿಬ್ಬಂದಿಗಳನ್ನು ತೆಗೆಯುವ ಪ್ರಕ್ರಿಯೆಗೆ ಚಾಲನೆ ನೀಡಿವೆ. ಇದು ಮುಂಬರುವ ಕರಾಳ ದಿನಗಳಿಗೆ ಉದಾಹರಣೆಯಾಗಿದೆ.


ಇದನ್ನೂ ಓದಿ: ಅರ್ನಾಬ್‌ ಗೋಸ್ವಾಮಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Officege bandu program heg hogbeku janakke yen beku yaav thara output kodbeku antha yaavobva boli maganu yochne maadillaaa.. Iddashtu dina yaav hotel alli biriyani chennagiruthe bere channel sari illaaa anthane kaala kaledru eeega nanna maathru samste kone usiralli horaaddtide

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...