Homeಕರ್ನಾಟಕವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

- Advertisement -
- Advertisement -

ಕೊರೊನಾ ಎಲ್ಲರನ್ನು ನಿರಾಶೆ ಮತ್ತು ಆತಂಕದಲ್ಲಿ ಮುಳುಗಿಸಿದೆ. ಕೊರೊನಾ ಕಾರಣಕ್ಕೆ ಹೇರಿದ ಲಾಕ್‌ಡೌನ್‌ನಿಂದ ಲಕ್ಷಾಂತರ ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಅಂತವರ ಸಾಲಿಗೆ ಹೊಸ ಸೇರ್ಪಡೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಸೇರುವ ಆತಂಕ ಎದುರಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಒಂದು ವರ್ಷದ ಅವಧಿಗೆ ವೇತನ, ಭತ್ಯೆ ರಹಿತ ವಿಶೇಷ ರಜೆ ಮಂಜೂರು ಮಾಡಿದೆ. ಕೊರೊನಾ ಕಾಲದಲ್ಲಿಯೂ ಜೀವ ಕೈಯ್ಯಲ್ಲಿ ಹಿಡಿದು ಭಯದಿಂದಲೇ ಸೇವೆ ಸಲ್ಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ನೌಕರರ ಪಾಲಿಗೆ ಇದು ಅರಗಿಸಲಾಗದ ಸಂಗತಿಯಾಗಿದೆ.

1948ರಲ್ಲಿ ಪ್ರಾರಂಭವಾದ ಕೆಎಸ್‌ಆರ್‌ಟಿಸಿ ಸಂಸ್ಥೆಯು ಪ್ರಸ್ತುತ ದೇಶದ ಐದನೇ ಅತಿದೊಡ್ಡ ಸಾರ್ವಜನಿಕ ಸಾರಿಗೆ ಸಂಸ್ಥೆಯಾಗಿದೆ. ಕರ್ನಾಟಕದ ನಾಲ್ಕೂ ವಿಭಾಗಗಳನ್ನು ಸೇರಿಸಿದರೆ 24 ಸಾವಿರಕ್ಕಿಂತಲೂ ಹೆಚ್ಚಿನ ಬಸ್ಸುಗಳು ಸಂಸ್ಥೆಗಿದ್ದು, ಒಟ್ಟು 1.2 ಲಕ್ಷಕ್ಕಿಂತಲೂ ಹೆಚ್ಚು ಉದ್ಯೋಗಿಗಳಿದ್ದಾರೆ. ದಿನವೊಂದಕ್ಕೆ ಸರಾಸರಿ 9 ಕೋಟಿ ರೂ ವ್ಯವಹಾರವನ್ನು ಸಂಸ್ಥೆಯ ಬಸ್ಸುಗಳಲ್ಲಿ ದಿನವೊಂದಕ್ಕೆ 30 ಲಕ್ಷ ಜನ ಪ್ರಯಾಣಿಸುತ್ತಿದ್ದರು ಎಂದು ಅದರ ವೆಬ್‌ಸೈಟ್‌ ತಿಳಿಸುತ್ತದೆ.

ಪ್ರಸ್ತುತ ಸಂಸ್ಥೆಯ ಈ ವೇತನರಹಿತ ರಜೆ ಪ್ರಸ್ತಾಪವು ನೌಕರರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಒಂದು ವರ್ಷದ ವರೆಗೂ ಯಾವುದೇ ಭತ್ಯೆಯಿಲ್ಲದೆ ರಜೆಯನ್ನು ಮಂಜೂರು ಮಾಡಲು ಹೊರಟಿರುವುದು ನೌಕರರಲ್ಲಿ ಆತಂಕ ಉಂಟು ಮಾಡಿದೆ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು “ಇದು ಇನ್ನೂ ಅಭಿಪ್ರಾಯ ಕೋರುವ ಹಂತದಲ್ಲಿದ್ದು, ಆದೇಶ‌ವಾಗಿಲ್ಲ. ಇದರಲ್ಲಿ ಯಾವುದೇ ಒತ್ತಡವಾಗಲಿ, ನಿರ್ಬಂಧವಾಗಲಿ ಇರುವುದಿಲ್ಲವೆಂದು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆಯೂ ಸಾರಿಗೆ ಸಂಸ್ಥೆಯಲ್ಲಿ ಐದು ವರ್ಷಗಳ ಅವಧಿಗೆ ಹೆಚ್ಚಿನ ವಿದ್ಯಾಭ್ಯಾಸ, ಆರೋಗ್ಯ ಸಮಸ್ಯೆ ಹಾಗೂ ಇತರೆ ತುರ್ತು ಪರಿಸ್ಥಿತಿಯಲ್ಲಿ ವೇತನ‌ರಹಿತ ರಜೆ ತೆಗೆದುಕೊಳ್ಳುವ ಅವಕಾಶವಿತ್ತು ಎಂದು ಅವರು ಹೇಳುತ್ತಾರೆ.

ಅಲ್ಲದೆ ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

ಆದರೆ ಕೊರೊನಾ ಸಮಯದಲ್ಲಿ ಎಲ್ಲರೂ ಆರ್ಥಿಕ ಸಮಸ್ಯೆಯಲ್ಲಿರುವಾಗ ಇರುವ ಕೆಲಸವನ್ನು ಬಿಟ್ಟು ರಜೆ ತೆಗೆದುಕೊಳ್ಳುವ ನಿರ್ಧಾರವನ್ನು ಯಾರು ಕೈಗೊಳ್ಳುತ್ತಾರೆ ಎಂಬುವುದಾಗಿದೆ. ಒಂದು ವೇಳೆ ಯಾರು ರಜೆ ಪಡೆಯಲು ನಿರ್ಧರಿಸದಿದ್ದರೆ ನಿಗಮದ ಮುಂದಿನ ನಡೆಯೇನು? ಇಷ್ಟು ದಿನ ಸಂಸ್ಥೆಗಾಗಿ ಬೆವರು ಸುರಿಸಿದ ಕಾರ್ಮಿಕರನ್ನು ಈ ಸಮಯದಲ್ಲಿ ಕೈಬಿಡಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಪ್ರಸ್ತುತ ತನ್ನ ವೆಬ್ಸೈಟ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಂತೆ ಕೆಎಸ್‌ಆರ್‌ಟಿಸಿ 180 ಕೋಟಿ ನಷ್ಟದಲ್ಲಿದೆ ಎಂದು ಹೇಳಲಾಗುತ್ತಿದ್ದರೂ ಒಂದು ಸರ್ಕಾರಿ ಸಂಸ್ಥೆಗೆ ಇದೇನು ದೊಡ್ಡ ಮೊತ್ತದ ಹಣವೇನು ಅಲ್ಲ.

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಸಂಸ್ಥೆಯು ತನ್ನ ಒಟ್ಟು ಬಸ್‌ಗಳಲ್ಲಿ ಶೇ.20 ರಷ್ಟನ್ನು ಮಾತ್ರ ಕಾರ್ಯಾಚರಣೆಗಿಳಿಸಿದೆ. ಹಾಗಾಗಿ ಎಲ್ಲಾ ಡಿಪೋಗಳಲ್ಲಿ ಬೆಳಿಗ್ಗೆ 6 ಗಂಟೆಗೆ ಸಿಬ್ಬಂದಿ ಬಂದು ಕ್ಯೂನಲ್ಲಿ ನಿಂತುಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆಯಾಗಿದ್ದು 20% ಬಸ್ಸುಗಳಲ್ಲಿನ ಸಿಬ್ಬಂದಿಗೆ ಕೆಲಸ ಸಿಗುತ್ತಿದೆ. ಉಳಿದವರು ವೇತನ ರಹಿತ ರಜೆ ಪಡೆದು ಮನೆಗೆ ತೆರಳಬೇಕಾಗಿದೆ ಎಂದು ಹೆಸರು ಹೇಳಲು ಇಚ್ಛಿಸಿದ ಸಿಬ್ಬಂದಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.

55 ವರ್ಷ ಮೇಲ್ಪಟ್ಟ ಮತ್ತು ಆರೋಗ್ಯ ಸಮಸ್ಯೆಗಳಿರುವವರನ್ನು ಈಗಾಗಲೇ ಮನೆಗೆ ಕಳಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಡಿಪೋ ಹತ್ತಿರ ಸುಳಿಯದಂತೆ ತಡೆಯಲಾಗಿದೆ. ಉಳಿದವರಲ್ಲಿಯೂ ಶೇ.80 ರಷ್ಟು ಸಿಬ್ಬಂದಿ ಕೆಲಸವಿಲ್ಲದೇ ಕಷ್ಟದಲ್ಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...