Homeಕರ್ನಾಟಕವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

- Advertisement -
- Advertisement -

ಕೊರೊನಾ ಎಲ್ಲರನ್ನು ನಿರಾಶೆ ಮತ್ತು ಆತಂಕದಲ್ಲಿ ಮುಳುಗಿಸಿದೆ. ಕೊರೊನಾ ಕಾರಣಕ್ಕೆ ಹೇರಿದ ಲಾಕ್‌ಡೌನ್‌ನಿಂದ ಲಕ್ಷಾಂತರ ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಅಂತವರ ಸಾಲಿಗೆ ಹೊಸ ಸೇರ್ಪಡೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಸೇರುವ ಆತಂಕ ಎದುರಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಒಂದು ವರ್ಷದ ಅವಧಿಗೆ ವೇತನ, ಭತ್ಯೆ ರಹಿತ ವಿಶೇಷ ರಜೆ ಮಂಜೂರು ಮಾಡಿದೆ. ಕೊರೊನಾ ಕಾಲದಲ್ಲಿಯೂ ಜೀವ ಕೈಯ್ಯಲ್ಲಿ ಹಿಡಿದು ಭಯದಿಂದಲೇ ಸೇವೆ ಸಲ್ಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ನೌಕರರ ಪಾಲಿಗೆ ಇದು ಅರಗಿಸಲಾಗದ ಸಂಗತಿಯಾಗಿದೆ.

1948ರಲ್ಲಿ ಪ್ರಾರಂಭವಾದ ಕೆಎಸ್‌ಆರ್‌ಟಿಸಿ ಸಂಸ್ಥೆಯು ಪ್ರಸ್ತುತ ದೇಶದ ಐದನೇ ಅತಿದೊಡ್ಡ ಸಾರ್ವಜನಿಕ ಸಾರಿಗೆ ಸಂಸ್ಥೆಯಾಗಿದೆ. ಕರ್ನಾಟಕದ ನಾಲ್ಕೂ ವಿಭಾಗಗಳನ್ನು ಸೇರಿಸಿದರೆ 24 ಸಾವಿರಕ್ಕಿಂತಲೂ ಹೆಚ್ಚಿನ ಬಸ್ಸುಗಳು ಸಂಸ್ಥೆಗಿದ್ದು, ಒಟ್ಟು 1.2 ಲಕ್ಷಕ್ಕಿಂತಲೂ ಹೆಚ್ಚು ಉದ್ಯೋಗಿಗಳಿದ್ದಾರೆ. ದಿನವೊಂದಕ್ಕೆ ಸರಾಸರಿ 9 ಕೋಟಿ ರೂ ವ್ಯವಹಾರವನ್ನು ಸಂಸ್ಥೆಯ ಬಸ್ಸುಗಳಲ್ಲಿ ದಿನವೊಂದಕ್ಕೆ 30 ಲಕ್ಷ ಜನ ಪ್ರಯಾಣಿಸುತ್ತಿದ್ದರು ಎಂದು ಅದರ ವೆಬ್‌ಸೈಟ್‌ ತಿಳಿಸುತ್ತದೆ.

ಪ್ರಸ್ತುತ ಸಂಸ್ಥೆಯ ಈ ವೇತನರಹಿತ ರಜೆ ಪ್ರಸ್ತಾಪವು ನೌಕರರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಒಂದು ವರ್ಷದ ವರೆಗೂ ಯಾವುದೇ ಭತ್ಯೆಯಿಲ್ಲದೆ ರಜೆಯನ್ನು ಮಂಜೂರು ಮಾಡಲು ಹೊರಟಿರುವುದು ನೌಕರರಲ್ಲಿ ಆತಂಕ ಉಂಟು ಮಾಡಿದೆ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು “ಇದು ಇನ್ನೂ ಅಭಿಪ್ರಾಯ ಕೋರುವ ಹಂತದಲ್ಲಿದ್ದು, ಆದೇಶ‌ವಾಗಿಲ್ಲ. ಇದರಲ್ಲಿ ಯಾವುದೇ ಒತ್ತಡವಾಗಲಿ, ನಿರ್ಬಂಧವಾಗಲಿ ಇರುವುದಿಲ್ಲವೆಂದು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆಯೂ ಸಾರಿಗೆ ಸಂಸ್ಥೆಯಲ್ಲಿ ಐದು ವರ್ಷಗಳ ಅವಧಿಗೆ ಹೆಚ್ಚಿನ ವಿದ್ಯಾಭ್ಯಾಸ, ಆರೋಗ್ಯ ಸಮಸ್ಯೆ ಹಾಗೂ ಇತರೆ ತುರ್ತು ಪರಿಸ್ಥಿತಿಯಲ್ಲಿ ವೇತನ‌ರಹಿತ ರಜೆ ತೆಗೆದುಕೊಳ್ಳುವ ಅವಕಾಶವಿತ್ತು ಎಂದು ಅವರು ಹೇಳುತ್ತಾರೆ.

ಅಲ್ಲದೆ ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

ಆದರೆ ಕೊರೊನಾ ಸಮಯದಲ್ಲಿ ಎಲ್ಲರೂ ಆರ್ಥಿಕ ಸಮಸ್ಯೆಯಲ್ಲಿರುವಾಗ ಇರುವ ಕೆಲಸವನ್ನು ಬಿಟ್ಟು ರಜೆ ತೆಗೆದುಕೊಳ್ಳುವ ನಿರ್ಧಾರವನ್ನು ಯಾರು ಕೈಗೊಳ್ಳುತ್ತಾರೆ ಎಂಬುವುದಾಗಿದೆ. ಒಂದು ವೇಳೆ ಯಾರು ರಜೆ ಪಡೆಯಲು ನಿರ್ಧರಿಸದಿದ್ದರೆ ನಿಗಮದ ಮುಂದಿನ ನಡೆಯೇನು? ಇಷ್ಟು ದಿನ ಸಂಸ್ಥೆಗಾಗಿ ಬೆವರು ಸುರಿಸಿದ ಕಾರ್ಮಿಕರನ್ನು ಈ ಸಮಯದಲ್ಲಿ ಕೈಬಿಡಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಪ್ರಸ್ತುತ ತನ್ನ ವೆಬ್ಸೈಟ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಂತೆ ಕೆಎಸ್‌ಆರ್‌ಟಿಸಿ 180 ಕೋಟಿ ನಷ್ಟದಲ್ಲಿದೆ ಎಂದು ಹೇಳಲಾಗುತ್ತಿದ್ದರೂ ಒಂದು ಸರ್ಕಾರಿ ಸಂಸ್ಥೆಗೆ ಇದೇನು ದೊಡ್ಡ ಮೊತ್ತದ ಹಣವೇನು ಅಲ್ಲ.

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಸಂಸ್ಥೆಯು ತನ್ನ ಒಟ್ಟು ಬಸ್‌ಗಳಲ್ಲಿ ಶೇ.20 ರಷ್ಟನ್ನು ಮಾತ್ರ ಕಾರ್ಯಾಚರಣೆಗಿಳಿಸಿದೆ. ಹಾಗಾಗಿ ಎಲ್ಲಾ ಡಿಪೋಗಳಲ್ಲಿ ಬೆಳಿಗ್ಗೆ 6 ಗಂಟೆಗೆ ಸಿಬ್ಬಂದಿ ಬಂದು ಕ್ಯೂನಲ್ಲಿ ನಿಂತುಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆಯಾಗಿದ್ದು 20% ಬಸ್ಸುಗಳಲ್ಲಿನ ಸಿಬ್ಬಂದಿಗೆ ಕೆಲಸ ಸಿಗುತ್ತಿದೆ. ಉಳಿದವರು ವೇತನ ರಹಿತ ರಜೆ ಪಡೆದು ಮನೆಗೆ ತೆರಳಬೇಕಾಗಿದೆ ಎಂದು ಹೆಸರು ಹೇಳಲು ಇಚ್ಛಿಸಿದ ಸಿಬ್ಬಂದಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.

55 ವರ್ಷ ಮೇಲ್ಪಟ್ಟ ಮತ್ತು ಆರೋಗ್ಯ ಸಮಸ್ಯೆಗಳಿರುವವರನ್ನು ಈಗಾಗಲೇ ಮನೆಗೆ ಕಳಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಡಿಪೋ ಹತ್ತಿರ ಸುಳಿಯದಂತೆ ತಡೆಯಲಾಗಿದೆ. ಉಳಿದವರಲ್ಲಿಯೂ ಶೇ.80 ರಷ್ಟು ಸಿಬ್ಬಂದಿ ಕೆಲಸವಿಲ್ಲದೇ ಕಷ್ಟದಲ್ಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....