Homeಕರ್ನಾಟಕವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

- Advertisement -
- Advertisement -

ಕೊರೊನಾ ಎಲ್ಲರನ್ನು ನಿರಾಶೆ ಮತ್ತು ಆತಂಕದಲ್ಲಿ ಮುಳುಗಿಸಿದೆ. ಕೊರೊನಾ ಕಾರಣಕ್ಕೆ ಹೇರಿದ ಲಾಕ್‌ಡೌನ್‌ನಿಂದ ಲಕ್ಷಾಂತರ ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಅಂತವರ ಸಾಲಿಗೆ ಹೊಸ ಸೇರ್ಪಡೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಸೇರುವ ಆತಂಕ ಎದುರಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಒಂದು ವರ್ಷದ ಅವಧಿಗೆ ವೇತನ, ಭತ್ಯೆ ರಹಿತ ವಿಶೇಷ ರಜೆ ಮಂಜೂರು ಮಾಡಿದೆ. ಕೊರೊನಾ ಕಾಲದಲ್ಲಿಯೂ ಜೀವ ಕೈಯ್ಯಲ್ಲಿ ಹಿಡಿದು ಭಯದಿಂದಲೇ ಸೇವೆ ಸಲ್ಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ನೌಕರರ ಪಾಲಿಗೆ ಇದು ಅರಗಿಸಲಾಗದ ಸಂಗತಿಯಾಗಿದೆ.

1948ರಲ್ಲಿ ಪ್ರಾರಂಭವಾದ ಕೆಎಸ್‌ಆರ್‌ಟಿಸಿ ಸಂಸ್ಥೆಯು ಪ್ರಸ್ತುತ ದೇಶದ ಐದನೇ ಅತಿದೊಡ್ಡ ಸಾರ್ವಜನಿಕ ಸಾರಿಗೆ ಸಂಸ್ಥೆಯಾಗಿದೆ. ಕರ್ನಾಟಕದ ನಾಲ್ಕೂ ವಿಭಾಗಗಳನ್ನು ಸೇರಿಸಿದರೆ 24 ಸಾವಿರಕ್ಕಿಂತಲೂ ಹೆಚ್ಚಿನ ಬಸ್ಸುಗಳು ಸಂಸ್ಥೆಗಿದ್ದು, ಒಟ್ಟು 1.2 ಲಕ್ಷಕ್ಕಿಂತಲೂ ಹೆಚ್ಚು ಉದ್ಯೋಗಿಗಳಿದ್ದಾರೆ. ದಿನವೊಂದಕ್ಕೆ ಸರಾಸರಿ 9 ಕೋಟಿ ರೂ ವ್ಯವಹಾರವನ್ನು ಸಂಸ್ಥೆಯ ಬಸ್ಸುಗಳಲ್ಲಿ ದಿನವೊಂದಕ್ಕೆ 30 ಲಕ್ಷ ಜನ ಪ್ರಯಾಣಿಸುತ್ತಿದ್ದರು ಎಂದು ಅದರ ವೆಬ್‌ಸೈಟ್‌ ತಿಳಿಸುತ್ತದೆ.

ಪ್ರಸ್ತುತ ಸಂಸ್ಥೆಯ ಈ ವೇತನರಹಿತ ರಜೆ ಪ್ರಸ್ತಾಪವು ನೌಕರರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಒಂದು ವರ್ಷದ ವರೆಗೂ ಯಾವುದೇ ಭತ್ಯೆಯಿಲ್ಲದೆ ರಜೆಯನ್ನು ಮಂಜೂರು ಮಾಡಲು ಹೊರಟಿರುವುದು ನೌಕರರಲ್ಲಿ ಆತಂಕ ಉಂಟು ಮಾಡಿದೆ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು “ಇದು ಇನ್ನೂ ಅಭಿಪ್ರಾಯ ಕೋರುವ ಹಂತದಲ್ಲಿದ್ದು, ಆದೇಶ‌ವಾಗಿಲ್ಲ. ಇದರಲ್ಲಿ ಯಾವುದೇ ಒತ್ತಡವಾಗಲಿ, ನಿರ್ಬಂಧವಾಗಲಿ ಇರುವುದಿಲ್ಲವೆಂದು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆಯೂ ಸಾರಿಗೆ ಸಂಸ್ಥೆಯಲ್ಲಿ ಐದು ವರ್ಷಗಳ ಅವಧಿಗೆ ಹೆಚ್ಚಿನ ವಿದ್ಯಾಭ್ಯಾಸ, ಆರೋಗ್ಯ ಸಮಸ್ಯೆ ಹಾಗೂ ಇತರೆ ತುರ್ತು ಪರಿಸ್ಥಿತಿಯಲ್ಲಿ ವೇತನ‌ರಹಿತ ರಜೆ ತೆಗೆದುಕೊಳ್ಳುವ ಅವಕಾಶವಿತ್ತು ಎಂದು ಅವರು ಹೇಳುತ್ತಾರೆ.

ಅಲ್ಲದೆ ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

ಆದರೆ ಕೊರೊನಾ ಸಮಯದಲ್ಲಿ ಎಲ್ಲರೂ ಆರ್ಥಿಕ ಸಮಸ್ಯೆಯಲ್ಲಿರುವಾಗ ಇರುವ ಕೆಲಸವನ್ನು ಬಿಟ್ಟು ರಜೆ ತೆಗೆದುಕೊಳ್ಳುವ ನಿರ್ಧಾರವನ್ನು ಯಾರು ಕೈಗೊಳ್ಳುತ್ತಾರೆ ಎಂಬುವುದಾಗಿದೆ. ಒಂದು ವೇಳೆ ಯಾರು ರಜೆ ಪಡೆಯಲು ನಿರ್ಧರಿಸದಿದ್ದರೆ ನಿಗಮದ ಮುಂದಿನ ನಡೆಯೇನು? ಇಷ್ಟು ದಿನ ಸಂಸ್ಥೆಗಾಗಿ ಬೆವರು ಸುರಿಸಿದ ಕಾರ್ಮಿಕರನ್ನು ಈ ಸಮಯದಲ್ಲಿ ಕೈಬಿಡಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಪ್ರಸ್ತುತ ತನ್ನ ವೆಬ್ಸೈಟ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಂತೆ ಕೆಎಸ್‌ಆರ್‌ಟಿಸಿ 180 ಕೋಟಿ ನಷ್ಟದಲ್ಲಿದೆ ಎಂದು ಹೇಳಲಾಗುತ್ತಿದ್ದರೂ ಒಂದು ಸರ್ಕಾರಿ ಸಂಸ್ಥೆಗೆ ಇದೇನು ದೊಡ್ಡ ಮೊತ್ತದ ಹಣವೇನು ಅಲ್ಲ.

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಸಂಸ್ಥೆಯು ತನ್ನ ಒಟ್ಟು ಬಸ್‌ಗಳಲ್ಲಿ ಶೇ.20 ರಷ್ಟನ್ನು ಮಾತ್ರ ಕಾರ್ಯಾಚರಣೆಗಿಳಿಸಿದೆ. ಹಾಗಾಗಿ ಎಲ್ಲಾ ಡಿಪೋಗಳಲ್ಲಿ ಬೆಳಿಗ್ಗೆ 6 ಗಂಟೆಗೆ ಸಿಬ್ಬಂದಿ ಬಂದು ಕ್ಯೂನಲ್ಲಿ ನಿಂತುಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆಯಾಗಿದ್ದು 20% ಬಸ್ಸುಗಳಲ್ಲಿನ ಸಿಬ್ಬಂದಿಗೆ ಕೆಲಸ ಸಿಗುತ್ತಿದೆ. ಉಳಿದವರು ವೇತನ ರಹಿತ ರಜೆ ಪಡೆದು ಮನೆಗೆ ತೆರಳಬೇಕಾಗಿದೆ ಎಂದು ಹೆಸರು ಹೇಳಲು ಇಚ್ಛಿಸಿದ ಸಿಬ್ಬಂದಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.

55 ವರ್ಷ ಮೇಲ್ಪಟ್ಟ ಮತ್ತು ಆರೋಗ್ಯ ಸಮಸ್ಯೆಗಳಿರುವವರನ್ನು ಈಗಾಗಲೇ ಮನೆಗೆ ಕಳಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಡಿಪೋ ಹತ್ತಿರ ಸುಳಿಯದಂತೆ ತಡೆಯಲಾಗಿದೆ. ಉಳಿದವರಲ್ಲಿಯೂ ಶೇ.80 ರಷ್ಟು ಸಿಬ್ಬಂದಿ ಕೆಲಸವಿಲ್ಲದೇ ಕಷ್ಟದಲ್ಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...