Homeಕರ್ನಾಟಕವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

- Advertisement -
- Advertisement -

ಕೊರೊನಾ ಎಲ್ಲರನ್ನು ನಿರಾಶೆ ಮತ್ತು ಆತಂಕದಲ್ಲಿ ಮುಳುಗಿಸಿದೆ. ಕೊರೊನಾ ಕಾರಣಕ್ಕೆ ಹೇರಿದ ಲಾಕ್‌ಡೌನ್‌ನಿಂದ ಲಕ್ಷಾಂತರ ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಅಂತವರ ಸಾಲಿಗೆ ಹೊಸ ಸೇರ್ಪಡೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಸೇರುವ ಆತಂಕ ಎದುರಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಒಂದು ವರ್ಷದ ಅವಧಿಗೆ ವೇತನ, ಭತ್ಯೆ ರಹಿತ ವಿಶೇಷ ರಜೆ ಮಂಜೂರು ಮಾಡಿದೆ. ಕೊರೊನಾ ಕಾಲದಲ್ಲಿಯೂ ಜೀವ ಕೈಯ್ಯಲ್ಲಿ ಹಿಡಿದು ಭಯದಿಂದಲೇ ಸೇವೆ ಸಲ್ಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ನೌಕರರ ಪಾಲಿಗೆ ಇದು ಅರಗಿಸಲಾಗದ ಸಂಗತಿಯಾಗಿದೆ.

1948ರಲ್ಲಿ ಪ್ರಾರಂಭವಾದ ಕೆಎಸ್‌ಆರ್‌ಟಿಸಿ ಸಂಸ್ಥೆಯು ಪ್ರಸ್ತುತ ದೇಶದ ಐದನೇ ಅತಿದೊಡ್ಡ ಸಾರ್ವಜನಿಕ ಸಾರಿಗೆ ಸಂಸ್ಥೆಯಾಗಿದೆ. ಕರ್ನಾಟಕದ ನಾಲ್ಕೂ ವಿಭಾಗಗಳನ್ನು ಸೇರಿಸಿದರೆ 24 ಸಾವಿರಕ್ಕಿಂತಲೂ ಹೆಚ್ಚಿನ ಬಸ್ಸುಗಳು ಸಂಸ್ಥೆಗಿದ್ದು, ಒಟ್ಟು 1.2 ಲಕ್ಷಕ್ಕಿಂತಲೂ ಹೆಚ್ಚು ಉದ್ಯೋಗಿಗಳಿದ್ದಾರೆ. ದಿನವೊಂದಕ್ಕೆ ಸರಾಸರಿ 9 ಕೋಟಿ ರೂ ವ್ಯವಹಾರವನ್ನು ಸಂಸ್ಥೆಯ ಬಸ್ಸುಗಳಲ್ಲಿ ದಿನವೊಂದಕ್ಕೆ 30 ಲಕ್ಷ ಜನ ಪ್ರಯಾಣಿಸುತ್ತಿದ್ದರು ಎಂದು ಅದರ ವೆಬ್‌ಸೈಟ್‌ ತಿಳಿಸುತ್ತದೆ.

ಪ್ರಸ್ತುತ ಸಂಸ್ಥೆಯ ಈ ವೇತನರಹಿತ ರಜೆ ಪ್ರಸ್ತಾಪವು ನೌಕರರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಒಂದು ವರ್ಷದ ವರೆಗೂ ಯಾವುದೇ ಭತ್ಯೆಯಿಲ್ಲದೆ ರಜೆಯನ್ನು ಮಂಜೂರು ಮಾಡಲು ಹೊರಟಿರುವುದು ನೌಕರರಲ್ಲಿ ಆತಂಕ ಉಂಟು ಮಾಡಿದೆ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು “ಇದು ಇನ್ನೂ ಅಭಿಪ್ರಾಯ ಕೋರುವ ಹಂತದಲ್ಲಿದ್ದು, ಆದೇಶ‌ವಾಗಿಲ್ಲ. ಇದರಲ್ಲಿ ಯಾವುದೇ ಒತ್ತಡವಾಗಲಿ, ನಿರ್ಬಂಧವಾಗಲಿ ಇರುವುದಿಲ್ಲವೆಂದು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆಯೂ ಸಾರಿಗೆ ಸಂಸ್ಥೆಯಲ್ಲಿ ಐದು ವರ್ಷಗಳ ಅವಧಿಗೆ ಹೆಚ್ಚಿನ ವಿದ್ಯಾಭ್ಯಾಸ, ಆರೋಗ್ಯ ಸಮಸ್ಯೆ ಹಾಗೂ ಇತರೆ ತುರ್ತು ಪರಿಸ್ಥಿತಿಯಲ್ಲಿ ವೇತನ‌ರಹಿತ ರಜೆ ತೆಗೆದುಕೊಳ್ಳುವ ಅವಕಾಶವಿತ್ತು ಎಂದು ಅವರು ಹೇಳುತ್ತಾರೆ.

ಅಲ್ಲದೆ ಪತ್ರದಲ್ಲಿನ ಷರತ್ತು ಮತ್ತು ‌ನಿಬಂಧನೆಗಳಲ್ಲಿ ಕೂಡ ಸಿಬ್ಬಂದಿ, ಅಧಿಕಾರಿಗಳು ಇಚ್ಛೆಯಿದ್ದಲ್ಲಿ ಮಾತ್ರ ಈ ರಜೆಯನ್ನು ತೆಗೆದುಕೊಳ್ಳಬಹುದಾಗಿದ್ದು, ವರ್ಷದ ನಂತರ ಅವರು ಕರ್ತವ್ಯಕ್ಕೆ ಹಾಜರಾಗಬಹುದು ಎಂದು ನಮೂದಿಸಲಾಗಿದೆ ಎನ್ನಲಾಗಿದೆ.

ಆದರೆ ಕೊರೊನಾ ಸಮಯದಲ್ಲಿ ಎಲ್ಲರೂ ಆರ್ಥಿಕ ಸಮಸ್ಯೆಯಲ್ಲಿರುವಾಗ ಇರುವ ಕೆಲಸವನ್ನು ಬಿಟ್ಟು ರಜೆ ತೆಗೆದುಕೊಳ್ಳುವ ನಿರ್ಧಾರವನ್ನು ಯಾರು ಕೈಗೊಳ್ಳುತ್ತಾರೆ ಎಂಬುವುದಾಗಿದೆ. ಒಂದು ವೇಳೆ ಯಾರು ರಜೆ ಪಡೆಯಲು ನಿರ್ಧರಿಸದಿದ್ದರೆ ನಿಗಮದ ಮುಂದಿನ ನಡೆಯೇನು? ಇಷ್ಟು ದಿನ ಸಂಸ್ಥೆಗಾಗಿ ಬೆವರು ಸುರಿಸಿದ ಕಾರ್ಮಿಕರನ್ನು ಈ ಸಮಯದಲ್ಲಿ ಕೈಬಿಡಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಪ್ರಸ್ತುತ ತನ್ನ ವೆಬ್ಸೈಟ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಂತೆ ಕೆಎಸ್‌ಆರ್‌ಟಿಸಿ 180 ಕೋಟಿ ನಷ್ಟದಲ್ಲಿದೆ ಎಂದು ಹೇಳಲಾಗುತ್ತಿದ್ದರೂ ಒಂದು ಸರ್ಕಾರಿ ಸಂಸ್ಥೆಗೆ ಇದೇನು ದೊಡ್ಡ ಮೊತ್ತದ ಹಣವೇನು ಅಲ್ಲ.

ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಸಂಸ್ಥೆಯು ತನ್ನ ಒಟ್ಟು ಬಸ್‌ಗಳಲ್ಲಿ ಶೇ.20 ರಷ್ಟನ್ನು ಮಾತ್ರ ಕಾರ್ಯಾಚರಣೆಗಿಳಿಸಿದೆ. ಹಾಗಾಗಿ ಎಲ್ಲಾ ಡಿಪೋಗಳಲ್ಲಿ ಬೆಳಿಗ್ಗೆ 6 ಗಂಟೆಗೆ ಸಿಬ್ಬಂದಿ ಬಂದು ಕ್ಯೂನಲ್ಲಿ ನಿಂತುಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆಯಾಗಿದ್ದು 20% ಬಸ್ಸುಗಳಲ್ಲಿನ ಸಿಬ್ಬಂದಿಗೆ ಕೆಲಸ ಸಿಗುತ್ತಿದೆ. ಉಳಿದವರು ವೇತನ ರಹಿತ ರಜೆ ಪಡೆದು ಮನೆಗೆ ತೆರಳಬೇಕಾಗಿದೆ ಎಂದು ಹೆಸರು ಹೇಳಲು ಇಚ್ಛಿಸಿದ ಸಿಬ್ಬಂದಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.

55 ವರ್ಷ ಮೇಲ್ಪಟ್ಟ ಮತ್ತು ಆರೋಗ್ಯ ಸಮಸ್ಯೆಗಳಿರುವವರನ್ನು ಈಗಾಗಲೇ ಮನೆಗೆ ಕಳಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಡಿಪೋ ಹತ್ತಿರ ಸುಳಿಯದಂತೆ ತಡೆಯಲಾಗಿದೆ. ಉಳಿದವರಲ್ಲಿಯೂ ಶೇ.80 ರಷ್ಟು ಸಿಬ್ಬಂದಿ ಕೆಲಸವಿಲ್ಲದೇ ಕಷ್ಟದಲ್ಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...