Homeಮುಖಪುಟಕೈತಪ್ಪಿದ ಟಿಕೆಟ್‌: ಬಿಜೆಪಿಗೆ ರಾಜೀನಾಮೆ ನೀಡುವತ್ತ ಉತ್ತರಾಖಂಡದ ಹಲವು ಶಾಸಕರು!

ಕೈತಪ್ಪಿದ ಟಿಕೆಟ್‌: ಬಿಜೆಪಿಗೆ ರಾಜೀನಾಮೆ ನೀಡುವತ್ತ ಉತ್ತರಾಖಂಡದ ಹಲವು ಶಾಸಕರು!

- Advertisement -
- Advertisement -

ಮುಂಬರುವ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಪ್ರಬಲ ನಾಯಕರಿಗೆ ಟಿಕೆಟ್‌ ನಿರಾಕರಣೆ ಮಾಡಿರುವುದು ಪಕ್ಷದ ಪಾಳಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಹಲವು ಬಿಜೆಪಿ ನಾಯಕರು  ಇತರ ಪಕ್ಷಗಳಿಗೆ ಪಕ್ಷಾಂತರವಾಗಲು ಅಥವಾ ಸ್ವತಂತ್ರವಾಗಿ ಚುನಾವಣಾ ಅಖಾಡಕ್ಕೆ ಪ್ರವೇಶಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಿಜೆಪಿಯು ಇತ್ತೀಚೆಗೆ ಪ್ರಕಟಿಸಿದ ತನ್ನ 59 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ವಪಕ್ಷೀಯರಿಗಿಂತ, ಕಾಂಗ್ರೆಸ್‌ನಿಂದ ಪಕ್ಷಾಂತರವಾದ ಅಭ್ಯರ್ಥಿಗಳಿಗೆ ಆದ್ಯತೆ ನೀಡಿದೆ. ಇದು ಬಿಜೆಪಿ ನಾಯಕರಿಗೆ ಅಘಾತ ಉಂಟುಮಾಡಿದ್ದು, ಹಲವರು ಬೇಸರಗೊಂಡಿದ್ದಾರೆ. ಈ ಬಗ್ಗೆ ನಾಯಕರು ಬಹಿರಂಗವಾಗಿಯೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ: ಬಿಜೆಪಿ ಸರ್ಕಾರದ ಸಂಪುಟ ಸಚಿವ ಕಾಂಗ್ರೆಸ್‌‌‌ಗೆ ಸೇರ್ಪಡೆ

ಅಸಮಾಧಾನ ವ್ಯಕ್ತಪಡಿಸಿದವರಲ್ಲಿ ಪ್ರಮುಖರೆಂದರೆ ಥರಾಲಿ ಕ್ಷೇತ್ರದ ಶಾಸಕಿಯಾಗಿರುವ ಮುನ್ನಿ ದೇವಿ ಶಾ ಮತ್ತು ದ್ವಾರಹತ್ ಶಾಸಕ ಮಹೇಶ್ ನೇಗಿಯವರಾಗಿದ್ದಾರೆ.

ಪಕ್ಷದ ಕೇಂದ್ರ ನಾಯಕತ್ವವು ನನಗೆ ಏಕೆ ಟಿಕೆಟ್ ನಿರಾಕರಿಸಿದೆ ಎಂಬುದನ್ನು ವಿವರಿಸಬೇಕು. ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರ ಬಳಿಗೆ ಕೊಂಡೊಯ್ಯುವುದರ ಜೊತೆಗೆ ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ ಎಂದು ಮುನ್ನಿ ದೇವಿ ಶಾ ಹೇಳಿದ್ದಾರೆ.

“ಪಕ್ಷವು ಸಮರ್ಪಿತ ಕಾರ್ಯಕರ್ತನನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಿದರೆ ತನಗೆ ಅಷ್ಟು ನೋವಾಗುತ್ತಿರಲಿಲ್ಲ, ಆದರೆ ಅದು ಕಾಂಗ್ರೆಸ್ ಹಿನ್ನೆಲೆಯ ವ್ಯಕ್ತಿಗೆ ಆದ್ಯತೆ ನೀಡುತ್ತಿದೆ. ಇದು ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಕುಸಿಯುವಂತೆ ಮಾಡುತ್ತದೆ” ಎಂದು ಮುನ್ನಿ ದೇವಿ ಹೇಳಿದ್ದಾರೆ.

ಕ್ಷೇತ್ರದ ಶಾಸಕರಾಗಿದ್ದ ಮಗನ್‌ ಲಾಲ್ ಶಾ ಅವರ ಮರಣದ ನಂತರ 2018 ರಲ್ಲಿ ನಡೆದ ಉಪಚುನಾವಣೆಯಲ್ಲಿ ಅವರ ಪತ್ನಿಯಾಗಿದ್ದ ಮುನ್ನಿ ದೇವಿ ಶಾ ಈ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.

ಇದನ್ನೂ ಓದಿ:ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ತಾನೀಗ ತನ್ನ ಬೆಂಬಲಿಗರಿಂದ ಒತ್ತಡಕ್ಕೆ ಒಳಗಾಗಿದ್ದು, ಬಿಜೆಪಿಯು ಕಾಂಗ್ರೆಸ್ ಪಕ್ಷಾಂತರಿ ಭೋಪಾಲ್ ರಾಮ್ ತಮ್ತಾ ಅವರನ್ನು ಕಣಕ್ಕಿಳಿಸಿದ ಕ್ಷೇತ್ರದಿಂದಲೇ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಪಿತೂರಿಯಿಂದಾಗಿ ತನಗೆ ಟಿಕೆಟ್ ನಿರಾಕರಿಸಲಾಗಿದೆ ದ್ವಾರಹತ್‌ ಶಾಕಸ ಮಹೇಶ್‌ ನೇಗಿ ಹೇಳಿದ್ದಾರೆ. ಎಲ್ಲಾ ಕ್ಷೇತ್ರ ಸಮೀಕ್ಷೆಗಳಲ್ಲಿ ತನ್ನ ಹೆಸರು ಅಗ್ರಸ್ಥಾನದಲ್ಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ನರೇಂದ್ರ ನಗರ ಕ್ಷೇತ್ರ ಬಿಜೆಪಿಯು ಮತ್ತೊಮ್ಮೆ ಸಂಪುಟ ಸಚಿವ ಸುಬೋಧ್ ಉನಿಯಾಲ್ ಅವರನ್ನು ಕಣಕ್ಕಿಳಿಸಿದೆ. ಇದರ ವಿರುದ್ದ ಬಂಡಾಯವೆದ್ದಿರುವ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಓಂ ಗೋಪಾಲ್ ರಾವತ್ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

“ಸಂಘಟನೆಯನ್ನು ಬಲಪಡಿಸಲು ತಳಮಟ್ಟದಲ್ಲಿ ಶ್ರಮಿಸುವ ಪಕ್ಷದ ಸಮರ್ಪಿತ ಕಾರ್ಯಕರ್ತರನ್ನು ಬಿಜೆಪಿ ಕಾಳಜಿ ವಹಿಸುವುದಿಲ್ಲ. ಅದಕ್ಕೆ ಯಾವುದೇ ತತ್ವಗಳು ಅಥವಾ ಮೌಲ್ಯಗಳಿಲ್ಲ. ಅದಕ್ಕೆ ಬೇಕಾಗಿರುವುದು ಅಧಿಕಾರ” ಎಂದು ರಾವತ್ ಪಕ್ಷದ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ .

ಬಿಜೆಪಿಯಿಂದ ಧನೌಲ್ತಿಯಿಂದ ಕಣಕ್ಕಿಳಿದಿರುವ ಪ್ರೀತಮ್ ಸಿಂಗ್ ಪನ್ವಾರ್ ವಿರುದ್ಧ ಮಾಜಿ ಶಾಸಕ ಮಹಾವೀರ ರಂಗಡ್ ಕೂಡ ಅತೃಪ್ತರಾಗಿದ್ದಾರೆ.ಅವರು ಶುಕ್ರವಾರದಂದು ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಪಡೆದು ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ಘನ್ಸಾಲಿಯಿಂದ ಸ್ಪರ್ಧಿಸಿರುವ ದರ್ಶನ್ ಲಾಲ್ ಕೂಡ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ.

ಕರ್ಣಪ್ರಯಾಗದಿಂದ ಟಿಕೆಟ್‌ಗಾಗಿ ದೀರ್ಘಕಾಲ ಪ್ರಯತ್ನಿಸುತ್ತಿದ್ದ ಟಿಕಾ ಮೈಖುರಿ, ಪಕ್ಷವು ಅನಿಲ್ ನೌಟಿಯಾಲ್ ಅವರನ್ನು ಕ್ಷೇತ್ರದಿಂದ ಕಣಕ್ಕೆ ಇಳಿಸಿದಾಗಿನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿಯುವುದಾಗಿ ಬೆದರಿಕೆ ಹಾಕಿದ್ದಾರೆ.

ಕಳೆದ ವರ್ಷಾಂತ್ಯದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಸ್ವತಂತ್ರ ಹಾಲಿ ಶಾಸಕ ರಾಮ್ ಸಿಂಗ್ ಕೈರಾ ಅವರನ್ನು ಪಕ್ಷವು ಕ್ಷೇತ್ರದಿಂದ ಕಣಕ್ಕಿಳಿಸಿದ್ದರಿಂದ ಭೀಮತಾಲ್‌ನಲ್ಲಿ ಮನೋಜ್ ಶಾ ಅವರು ಪಕ್ಷ ತೊರೆಯುವುದಾಗಿ ಬೆದರಿಕೆ ಹಾಕಿದ್ದಾರೆ. 2002ರಿಂದ ಟಿಕೆಟ್‌ಗಾಗಿ ರೇಸ್‌ನಲ್ಲಿದ್ದೇನೆ, ನನಗೆ ಟಿಕೆಟ್ ನಿರಾಕರಿಸಿರುವುದು ಅನ್ಯಾಯ, ನಾನು ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಆದರೆ ಈ ಎಲ್ಲಾ ಬಂಡಾಯವು ಒಂದೆರೆಡು ದಿನಗಳಲ್ಲಿ ಶಮನವಾಗಲಿ ಎಂದು ಬಿಜೆಪಿ ಹೇಳಿದೆ. “ಒಂದು ಕ್ಷೇತ್ರದಿಂದ ಟಿಕೆಟ್‌ಗಾಗಿ ಅನೇಕ ಸ್ಪರ್ಧಿಗಳು ಇರುತ್ತದೆ. ಆದರೆ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಒಬ್ಬರಿಗೆ ಮಾತ್ರ ಟಿಕೆಟ್‌ ನೀಡುತ್ತೇವೆ. ಕೇಂದ್ರ ನಾಯಕತ್ವದ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು” ಎಂದು ಬಿಜೆಪಿ ಅಧ್ಯಕ್ಷ ಮದನ್ ಕೌಶಿಕ್ ಹೇಳಿದ್ದಾರೆ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಇದು ಅವರ ಆರಂಭಿಕ ಪ್ರತಿಕ್ರಿಯೆಯಷ್ಟೆ, ಅವರು ಅರ್ಥಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದರೆ.

ಇದನ್ನೂ ಓದಿ:ಗೋವಾ ಚುನಾವಣೆ: ಟಿಎಂಸಿ, ಆಪ್ ಜೊತೆ ಮೈತ್ರಿಯತ್ತ ಕಾಂಗ್ರೆಸ್ ಚಿತ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...