Homeಮುಖಪುಟಕೈತಪ್ಪಿದ ಟಿಕೆಟ್‌: ಬಿಜೆಪಿಗೆ ರಾಜೀನಾಮೆ ನೀಡುವತ್ತ ಉತ್ತರಾಖಂಡದ ಹಲವು ಶಾಸಕರು!

ಕೈತಪ್ಪಿದ ಟಿಕೆಟ್‌: ಬಿಜೆಪಿಗೆ ರಾಜೀನಾಮೆ ನೀಡುವತ್ತ ಉತ್ತರಾಖಂಡದ ಹಲವು ಶಾಸಕರು!

- Advertisement -
- Advertisement -

ಮುಂಬರುವ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಪ್ರಬಲ ನಾಯಕರಿಗೆ ಟಿಕೆಟ್‌ ನಿರಾಕರಣೆ ಮಾಡಿರುವುದು ಪಕ್ಷದ ಪಾಳಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಹಲವು ಬಿಜೆಪಿ ನಾಯಕರು  ಇತರ ಪಕ್ಷಗಳಿಗೆ ಪಕ್ಷಾಂತರವಾಗಲು ಅಥವಾ ಸ್ವತಂತ್ರವಾಗಿ ಚುನಾವಣಾ ಅಖಾಡಕ್ಕೆ ಪ್ರವೇಶಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಿಜೆಪಿಯು ಇತ್ತೀಚೆಗೆ ಪ್ರಕಟಿಸಿದ ತನ್ನ 59 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ವಪಕ್ಷೀಯರಿಗಿಂತ, ಕಾಂಗ್ರೆಸ್‌ನಿಂದ ಪಕ್ಷಾಂತರವಾದ ಅಭ್ಯರ್ಥಿಗಳಿಗೆ ಆದ್ಯತೆ ನೀಡಿದೆ. ಇದು ಬಿಜೆಪಿ ನಾಯಕರಿಗೆ ಅಘಾತ ಉಂಟುಮಾಡಿದ್ದು, ಹಲವರು ಬೇಸರಗೊಂಡಿದ್ದಾರೆ. ಈ ಬಗ್ಗೆ ನಾಯಕರು ಬಹಿರಂಗವಾಗಿಯೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ: ಬಿಜೆಪಿ ಸರ್ಕಾರದ ಸಂಪುಟ ಸಚಿವ ಕಾಂಗ್ರೆಸ್‌‌‌ಗೆ ಸೇರ್ಪಡೆ

ಅಸಮಾಧಾನ ವ್ಯಕ್ತಪಡಿಸಿದವರಲ್ಲಿ ಪ್ರಮುಖರೆಂದರೆ ಥರಾಲಿ ಕ್ಷೇತ್ರದ ಶಾಸಕಿಯಾಗಿರುವ ಮುನ್ನಿ ದೇವಿ ಶಾ ಮತ್ತು ದ್ವಾರಹತ್ ಶಾಸಕ ಮಹೇಶ್ ನೇಗಿಯವರಾಗಿದ್ದಾರೆ.

ಪಕ್ಷದ ಕೇಂದ್ರ ನಾಯಕತ್ವವು ನನಗೆ ಏಕೆ ಟಿಕೆಟ್ ನಿರಾಕರಿಸಿದೆ ಎಂಬುದನ್ನು ವಿವರಿಸಬೇಕು. ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರ ಬಳಿಗೆ ಕೊಂಡೊಯ್ಯುವುದರ ಜೊತೆಗೆ ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ ಎಂದು ಮುನ್ನಿ ದೇವಿ ಶಾ ಹೇಳಿದ್ದಾರೆ.

“ಪಕ್ಷವು ಸಮರ್ಪಿತ ಕಾರ್ಯಕರ್ತನನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಿದರೆ ತನಗೆ ಅಷ್ಟು ನೋವಾಗುತ್ತಿರಲಿಲ್ಲ, ಆದರೆ ಅದು ಕಾಂಗ್ರೆಸ್ ಹಿನ್ನೆಲೆಯ ವ್ಯಕ್ತಿಗೆ ಆದ್ಯತೆ ನೀಡುತ್ತಿದೆ. ಇದು ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಕುಸಿಯುವಂತೆ ಮಾಡುತ್ತದೆ” ಎಂದು ಮುನ್ನಿ ದೇವಿ ಹೇಳಿದ್ದಾರೆ.

ಕ್ಷೇತ್ರದ ಶಾಸಕರಾಗಿದ್ದ ಮಗನ್‌ ಲಾಲ್ ಶಾ ಅವರ ಮರಣದ ನಂತರ 2018 ರಲ್ಲಿ ನಡೆದ ಉಪಚುನಾವಣೆಯಲ್ಲಿ ಅವರ ಪತ್ನಿಯಾಗಿದ್ದ ಮುನ್ನಿ ದೇವಿ ಶಾ ಈ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.

ಇದನ್ನೂ ಓದಿ:ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ತಾನೀಗ ತನ್ನ ಬೆಂಬಲಿಗರಿಂದ ಒತ್ತಡಕ್ಕೆ ಒಳಗಾಗಿದ್ದು, ಬಿಜೆಪಿಯು ಕಾಂಗ್ರೆಸ್ ಪಕ್ಷಾಂತರಿ ಭೋಪಾಲ್ ರಾಮ್ ತಮ್ತಾ ಅವರನ್ನು ಕಣಕ್ಕಿಳಿಸಿದ ಕ್ಷೇತ್ರದಿಂದಲೇ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಪಿತೂರಿಯಿಂದಾಗಿ ತನಗೆ ಟಿಕೆಟ್ ನಿರಾಕರಿಸಲಾಗಿದೆ ದ್ವಾರಹತ್‌ ಶಾಕಸ ಮಹೇಶ್‌ ನೇಗಿ ಹೇಳಿದ್ದಾರೆ. ಎಲ್ಲಾ ಕ್ಷೇತ್ರ ಸಮೀಕ್ಷೆಗಳಲ್ಲಿ ತನ್ನ ಹೆಸರು ಅಗ್ರಸ್ಥಾನದಲ್ಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ನರೇಂದ್ರ ನಗರ ಕ್ಷೇತ್ರ ಬಿಜೆಪಿಯು ಮತ್ತೊಮ್ಮೆ ಸಂಪುಟ ಸಚಿವ ಸುಬೋಧ್ ಉನಿಯಾಲ್ ಅವರನ್ನು ಕಣಕ್ಕಿಳಿಸಿದೆ. ಇದರ ವಿರುದ್ದ ಬಂಡಾಯವೆದ್ದಿರುವ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಓಂ ಗೋಪಾಲ್ ರಾವತ್ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

“ಸಂಘಟನೆಯನ್ನು ಬಲಪಡಿಸಲು ತಳಮಟ್ಟದಲ್ಲಿ ಶ್ರಮಿಸುವ ಪಕ್ಷದ ಸಮರ್ಪಿತ ಕಾರ್ಯಕರ್ತರನ್ನು ಬಿಜೆಪಿ ಕಾಳಜಿ ವಹಿಸುವುದಿಲ್ಲ. ಅದಕ್ಕೆ ಯಾವುದೇ ತತ್ವಗಳು ಅಥವಾ ಮೌಲ್ಯಗಳಿಲ್ಲ. ಅದಕ್ಕೆ ಬೇಕಾಗಿರುವುದು ಅಧಿಕಾರ” ಎಂದು ರಾವತ್ ಪಕ್ಷದ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ .

ಬಿಜೆಪಿಯಿಂದ ಧನೌಲ್ತಿಯಿಂದ ಕಣಕ್ಕಿಳಿದಿರುವ ಪ್ರೀತಮ್ ಸಿಂಗ್ ಪನ್ವಾರ್ ವಿರುದ್ಧ ಮಾಜಿ ಶಾಸಕ ಮಹಾವೀರ ರಂಗಡ್ ಕೂಡ ಅತೃಪ್ತರಾಗಿದ್ದಾರೆ.ಅವರು ಶುಕ್ರವಾರದಂದು ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಪಡೆದು ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ಘನ್ಸಾಲಿಯಿಂದ ಸ್ಪರ್ಧಿಸಿರುವ ದರ್ಶನ್ ಲಾಲ್ ಕೂಡ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ.

ಕರ್ಣಪ್ರಯಾಗದಿಂದ ಟಿಕೆಟ್‌ಗಾಗಿ ದೀರ್ಘಕಾಲ ಪ್ರಯತ್ನಿಸುತ್ತಿದ್ದ ಟಿಕಾ ಮೈಖುರಿ, ಪಕ್ಷವು ಅನಿಲ್ ನೌಟಿಯಾಲ್ ಅವರನ್ನು ಕ್ಷೇತ್ರದಿಂದ ಕಣಕ್ಕೆ ಇಳಿಸಿದಾಗಿನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿಯುವುದಾಗಿ ಬೆದರಿಕೆ ಹಾಕಿದ್ದಾರೆ.

ಕಳೆದ ವರ್ಷಾಂತ್ಯದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಸ್ವತಂತ್ರ ಹಾಲಿ ಶಾಸಕ ರಾಮ್ ಸಿಂಗ್ ಕೈರಾ ಅವರನ್ನು ಪಕ್ಷವು ಕ್ಷೇತ್ರದಿಂದ ಕಣಕ್ಕಿಳಿಸಿದ್ದರಿಂದ ಭೀಮತಾಲ್‌ನಲ್ಲಿ ಮನೋಜ್ ಶಾ ಅವರು ಪಕ್ಷ ತೊರೆಯುವುದಾಗಿ ಬೆದರಿಕೆ ಹಾಕಿದ್ದಾರೆ. 2002ರಿಂದ ಟಿಕೆಟ್‌ಗಾಗಿ ರೇಸ್‌ನಲ್ಲಿದ್ದೇನೆ, ನನಗೆ ಟಿಕೆಟ್ ನಿರಾಕರಿಸಿರುವುದು ಅನ್ಯಾಯ, ನಾನು ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಆದರೆ ಈ ಎಲ್ಲಾ ಬಂಡಾಯವು ಒಂದೆರೆಡು ದಿನಗಳಲ್ಲಿ ಶಮನವಾಗಲಿ ಎಂದು ಬಿಜೆಪಿ ಹೇಳಿದೆ. “ಒಂದು ಕ್ಷೇತ್ರದಿಂದ ಟಿಕೆಟ್‌ಗಾಗಿ ಅನೇಕ ಸ್ಪರ್ಧಿಗಳು ಇರುತ್ತದೆ. ಆದರೆ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಒಬ್ಬರಿಗೆ ಮಾತ್ರ ಟಿಕೆಟ್‌ ನೀಡುತ್ತೇವೆ. ಕೇಂದ್ರ ನಾಯಕತ್ವದ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು” ಎಂದು ಬಿಜೆಪಿ ಅಧ್ಯಕ್ಷ ಮದನ್ ಕೌಶಿಕ್ ಹೇಳಿದ್ದಾರೆ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಇದು ಅವರ ಆರಂಭಿಕ ಪ್ರತಿಕ್ರಿಯೆಯಷ್ಟೆ, ಅವರು ಅರ್ಥಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದರೆ.

ಇದನ್ನೂ ಓದಿ:ಗೋವಾ ಚುನಾವಣೆ: ಟಿಎಂಸಿ, ಆಪ್ ಜೊತೆ ಮೈತ್ರಿಯತ್ತ ಕಾಂಗ್ರೆಸ್ ಚಿತ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...